Author: kannadanewsnow09

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರಾದ ಬೈರತಿ ಸುರೇಶರವರು ಕೋಲಾರ ಹಾಲು ಒಕ್ಕೂಟ ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಗಾಗಿ ಕೋಲಾರ ಜಿಲ್ಲಾ ಒಕ್ಕೂಟ ಈ ತೀರ್ಮಾನ ತೆಗೆದುಕೊಂಡಿದ್ದು, ಇದೆ ಮಾರ್ಚ್‌ 20 ರಿಂದ 2 ರೂಪಾಯಿ ಪ್ರೋತ್ಸಾಹ ಧನವನ್ನು ನೀಡುತ್ತೇವೆ ಎಂದು ತಿಳಿಸಿದರು. ಪ್ರಸ್ತುತ 6.64 ಲಕ್ಷ ಲೀಟರ್‌ ಹಾಲನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಿಂದ ಶೇಖರಣೆಯಾಗುತ್ತಿದ್ದು, 2025-26ನೇ ಸಾಲಿಗೆ 7.50 ಲಕ್ಷ ಲೀಟರ್‌ ಹಾಲು ಶೇಖರಣೆ ಗುರಿಯನ್ನು ಒಕ್ಕೂಟವು ಹೊಂದಿದೆ. ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಗೂ ಹಾಲು ಉತ್ಪಾದನ ವೆಚ್ಚ ಅಧಿಕವಾಗಿರುವುದನ್ನು…

Read More

ಅಹಮದಾಬಾದ್: ಮಾರ್ಚ್ 17 ರಂದು ಅಹಮದಾಬಾದ್‌ನ ಪಾಲ್ಡಿ ಫ್ಲಾಟ್‌ನಲ್ಲಿ ನಡೆದ ದಾಳಿಯಲ್ಲಿ ಡಿಆರ್‌ಐ ಮತ್ತು ಗುಜರಾತ್ ಎಟಿಎಸ್ 80 ಕೋಟಿ ರೂ. ಮೌಲ್ಯದ 87.92 ಕೆಜಿ ಕಳ್ಳಸಾಗಣೆ ಮಾಡಿದ ಚಿನ್ನದ ಗಟ್ಟಿಗಳನ್ನು ಪತ್ತೆಹಚ್ಚಿದ್ದು, ಅವುಗಳಲ್ಲಿ ಹಲವು ವಿದೇಶಿ ಗುರುತುಗಳನ್ನು ಹೊಂದಿವೆ. ವಜ್ರ-ಖಚಿತ ಪಾಟೆಕ್ ಫಿಲಿಪ್, ಜಾಕೋಬ್ & ಕಂಪನಿಯ ಫ್ರಾಂಕ್ ಮುಲ್ಲರ್ ಸೇರಿದಂತೆ 11 ಐಷಾರಾಮಿ ಕೈಗಡಿಯಾರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ 19.66 ಕೆಜಿ ವಜ್ರ ಮತ್ತು ರತ್ನ-ಖಚಿತ ಆಭರಣಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆಭರಣಗಳ ಮೌಲ್ಯಮಾಪನ ಇನ್ನೂ ನಡೆಯುತ್ತಿದೆ. 1.37 ಕೋಟಿ ರೂ. ನಗದು ಸಹ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಕಳ್ಳಸಾಗಣೆ ಜಾಲಗಳಿಗೆ ಗಂಭೀರ ಹೊಡೆತ ನೀಡಿದ್ದು, ಆರ್ಥಿಕ ಅಪರಾಧಗಳನ್ನು ಎದುರಿಸಲು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಡಿಆರ್‌ಐನ ಧ್ಯೇಯವನ್ನು ಬಲಪಡಿಸಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಅಮೆಜಾನ್‌ನಲ್ಲಿ ಸಾಗಿಸಲಾದ ಹಣವನ್ನು ತೂಕ ಮಾಡಲು ಅಧಿಕಾರಿಗಳು ತಕ್ಕಡಿಗಳನ್ನು ತರಬೇಕಾಯಿತು. ನಗದು ಎಣಿಕೆ ಪ್ರಕ್ರಿಯೆಯು ತಡರಾತ್ರಿಯವರೆಗೂ ಮುಂದುವರೆಯಿತು. ಫ್ಲಾಟ್ ಅನ್ನು ಬಾಡಿಗೆಗೆ ಪಡೆದ ಮಹೇಂದ್ರ ಶಾ…

Read More

ಬೆಂಗಳೂರು: ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಅಂತಹ ಕೆಲವು ಶಾಲೆಗಳ ಪಟ್ಟಿಯನ್ನು ಒದಗಿಸಿದೆ. ಇಲಾಖಾಧಿಕಾರಿಗಳು ತನಿಖೆ ಮಾಡಿದರೆ ಸತ್ಯ ತಿಳಿಯುತ್ತದೆ ಎಂದು ಹೇಳಿದ್ದಾರೆ. ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕನ್ನಡ ಭಾಷೆಯ ಬಗ್ಗೆ ಇಲಾಖೆ ತೋರುವ ಅಗೌರವವಷ್ಟೇ ಅಲ್ಲ ನೆಲದ ಕಾನೂನಿನ ಉಲ್ಲಂಘನೆಯೂ ಆಗಿರುತ್ತದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ. ಶಿಕ್ಷಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ 2020ರಲ್ಲಿ ರಚನೆಯಾಗಿರುವ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ. https://kannadanewsnow.com/kannada/i-have-never-invaded-in-my-life-hd-kumaraswamy/ https://kannadanewsnow.com/kannada/law-and-order-situation-in-the-state-will-deteriorate-and-goonda-raj-will-be-created-r-ashoka/

Read More

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾತನಾಡಿದಂತ ಅವರು, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು. ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ…

Read More

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್‌ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ ಎಂದರು. ಸ್ವಾತಿ ಲವ್‌ ಜಿಹಾದ್‌ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಲವ್‌ ಜಿಹಾದ್‌ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಲವ್‌ ಜಿಹಾದ್‌ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು…

Read More

ಇಸ್ರೇಲ್: ಕದನ ವಿರಾಮದ ನಂತರ ತನ್ನ ಅತ್ಯಂತ ತೀವ್ರವಾದ ದಾಳಿಗಳನ್ನು ಪ್ರಾರಂಭಿಸಿದ್ದರಿಂದ ಎಲ್ಲಾ ಒತ್ತೆಯಾಳುಗಳು ಮರಳುವವರೆಗೂ ಗಾಝಾದಲ್ಲಿ ಹೋರಾಟವನ್ನು ಮುಂದುವರಿಸುವುದಾಗಿ ಇಸ್ರೇಲ್ ಮಂಗಳವಾರ ಪ್ರತಿಜ್ಞೆ ಮಾಡಿದೆ. ಹಮಾಸ್ ಆಡಳಿತದ ಪ್ರದೇಶದ ಆರೋಗ್ಯ ಸಚಿವಾಲಯವು 330ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಕದನ ವಿರಾಮವನ್ನು ವಿಸ್ತರಿಸುವ ಬಿಕ್ಕಟ್ಟಿನ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ಯುದ್ಧವನ್ನು ಪುನರಾರಂಭಿಸಲು” ನಿರ್ಧರಿಸಿದ್ದಾರೆ ಎಂದು ಹಮಾಸ್ ಆರೋಪಿಸಿದೆ.  ಯುದ್ಧಕ್ಕೆ ಮರಳುವುದು ಗಾಝಾದಲ್ಲಿ ಇನ್ನೂ ಜೀವಂತವಾಗಿರುವ ಒತ್ತೆಯಾಳುಗಳಿಗೆ “ಮರಣದಂಡನೆ” ಆಗಬಹುದು ಎಂದು ಎಚ್ಚರಿಸಿದೆ. ದಾಳಿಯ ಅಲೆಯನ್ನು ಪ್ರಾರಂಭಿಸುವ ಮೊದಲು ಇಸ್ರೇಲ್ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವನ್ನು ಸಂಪರ್ಕಿಸಿದೆ ಎಂದು ಶ್ವೇತಭವನ ದೃಢಪಡಿಸಿದೆ. ಇದು ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳನ್ನು ಕೊಂದಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಪದೇ ಪದೇ ನಿರಾಕರಿಸಿದ ನಂತರ ಮತ್ತು ಯುಎಸ್ ಅಧ್ಯಕ್ಷೀಯ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಮಧ್ಯಸ್ಥಗಾರರಿಂದ ಸ್ವೀಕರಿಸಿದ ಎಲ್ಲಾ ಪ್ರಸ್ತಾಪಗಳನ್ನು…

Read More

ಬೆಂಗಳೂರು: ಈ ತಿಂಗಳಿನಿಂದಲೇ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ನೀಡಲಾಗುತ್ತಿದ್ದಂತ ಹಣದ ಬದಲಾಗಿ ಅಕ್ಕಿ ಕೊಡೋದಾಗಿ ಸರ್ಕಾರ ಹೇಳಿತ್ತು. ಆದರೇ ಈ ತಿಂಗಳು ಇಲ್ಲ. ಏಪ್ರಿಲ್ ನಿಂದ ಕೊಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳುವ ಮೂಲಕ, ಶಾಕ್ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ ಬಳಿ ಅಕ್ಕಿ ಇದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ಸಿದ್ಧವಿದೆ. ಆದರೇ ಈ ತಿಂಗಳ ಬದಲಾಗಿ ಏಪ್ರಿಲ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದರು. ಕಳೆದ ತಿಂಗಳಿನಿಂದ ನಮ್ಮ ಬಳಿ ಅಕ್ಕಿ ಇದೆ. ನಾವು ನಿರ್ಣಯ ಮಾಡಿದಂತೆ ಹೆಚ್ಚುವರಿ ಅಕ್ಕಿಗೆ ಅಕ್ಕಿ ಕೊರತೆಯ ಕಾರಣ ಹಣ ನೀಡಲಾಗಿತ್ತು. ಈಗ ಅಕ್ಕಿ ನಮ್ಮ ಬಳಿಯಿದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡೋದಕ್ಕೆ ಸಿದ್ಧವಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ ನಿಂದ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದರು. https://kannadanewsnow.com/kannada/anganwadi-ration-found-in-cowshed/ https://kannadanewsnow.com/kannada/legal-battle-against-state-govts-conspiracy-hd-kumaraswamy/

Read More

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು. ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಅನ್ನು ದನದ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದನ್ನು ತಹಶೀಲ್ದಾರ್ ನೇತೃತ್ವದ ತಂಡವು ಪತ್ತೆಹಚ್ಚಿದೆ. ಆ ನಂತ್ರ ಮಕ್ಕಳಿಗೆ ಕೊಡುವ ರೇಷನ್ ಅಕ್ರಮವಾಗಿ ಸಂಗ್ರಹಿಸಿದ್ದನ್ನು ಕಂಡು ಶಾಕ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆ.ಜಿ ಹಳ್ಳಿಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಸಂಗ್ರಹಿಸಿರುವಂತ ವಿಷಯ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ಸಹದೇವ ರುದ್ರಪ್ಪ ಎನ್ನುವವರ ದನದ ಕೊಟ್ಟಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ 1 ಲಕ್ಷದ 52 ಸಾವಿರ ಮೌಲ್ಯದ 35 ಹಾಲಿನ ಪುಡಿಯ ಚೀಲಗಳು ಪತ್ತೆಯಾಗಿವೆ. ಅಲ್ಲದೇ 97 ಪ್ಯಾಕೇಟ್ ಪೌಷ್ಠಿಕ ಆಹಾರವೂ ಪತ್ತೆಯಾಗಿದೆ. ಈ ಸಂಬಂಧ ಸಹದೇವ ರುದ್ರಪ್ಪ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ‘ಯಶವಂತಪುರ ಮಾರುಕಟ್ಟೆ’ಯಿಂದ ನಾಲ್ಕು ಉತ್ಪನ್ನಗಳ ವಹಿವಾಟು ‘ದಾಸನಪುರಕ್ಕೆ ಶಿಫ್ಟ್’ ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು…

Read More

ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು. ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ…

Read More