Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಎಂಬುವರೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವಂತ ಅಧಿಕಾರಿಯಾಗಿದ್ದಾರೆ. ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ಲಂಚದ ಹಣ ಕೇಳು ಸಂಬಂಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದ ಅಧಿಕಾರಿಗಳು, ಸಿಬ್ಬಂದಿಗಳ ತಂಡ ದಾಳಿ ನಡೆಸಿ ಹಿಡಿದಿದೆ. ಇದೀಗ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಕೃಷ್ಣಮೂರ್ತಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/actress-ranya-rao-admitted-to-buying-gold-using-hawala-money-dri-tells-court/ https://kannadanewsnow.com/kannada/big-news-important-step-taken-by-the-state-government-to-prevent-illegality-from-now-on-ai-technology-will-be-used-in-kea-recruitment-exams/
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಣ್ಯ ರಾವ್ ಅವರು ಚಿನ್ನ ಖರೀದಿಸಲು ಹವಾಲಾ ಮಾರ್ಗಗಳ ಮೂಲಕ ಹಣವನ್ನು ವರ್ಗಾಯಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಅಂತ ನ್ಯಾಯಾಲಯಕ್ಕೆ ಡಿಆರ್ ಐ ಮಾಹಿತಿ ನೀಡಿದೆ. ಇಂದು ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ವಕೀಲ ಮಧು ರಾವ್ ಅವರು ವಾದವನ್ನು ಮಂಡಿಸಿದರು. ಅವರು ಅನಧಿಕೃತ ವಿಧಾನಗಳ ಮೂಲಕ ಹಣಕಾಸು ವಹಿವಾಟು ನಡೆಸುತ್ತಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಾದಿಸಿದರು. ಈ ವಿಷಯದ ಬಗ್ಗೆ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಲು ಅಧಿಕಾರಿಗಳು ಸೆಕ್ಷನ್ 108ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ. ವಿಚಾರಣೆಗಳು ನ್ಯಾಯಾಂಗ ತನಿಖೆಯ ಭಾಗವಾಗಿದೆ ಮತ್ತು ಪೊಲೀಸ್ ವಿಚಾರಣೆಯಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತನಿಖೆಯು ಹಣಕಾಸಿನ ಅಕ್ರಮಗಳ ವ್ಯಾಪ್ತಿಯನ್ನು ಮತ್ತು ಕಾನೂನಿನ ಯಾವುದೇ ಸಂಭಾವ್ಯ ಉಲ್ಲಂಘನೆಗಳನ್ನು ನಿರ್ಧರಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. ಈ ವಾದವನ್ನು ಆಲಿಸಿದಂತ ನ್ಯಾಯಾಲಯವು ನಟಿ…
ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಡಿಎನ್ಎ ಮುಂದುವರೆದ ಭಾಗವಾಗಿ ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಸವಾಲು ಹಾಕಿದರು. ಮತೀಯ ಆಧಾರಿತ ಶೇ 4 ಮೀಸಲಾತಿಯೇ ಸಂವಿಧಾನಕ್ಕೆ ವಿರುದ್ಧವಾದುದು. ಆ ನಿಲುವನ್ನು ಯಾವಾಗ ಇವರ ಸಚಿವಸಂಪುಟ ಅನುಮೋದಿಸಿತೋ, ಕಾಂಗ್ರೆಸ್ಸಿಗೆ ಬಹುಮತ…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ಮಾರ್ಗದಲ್ಲಿ ಹೊಸದಾಗಿ ಮೆಟ್ರೋ ಫೀಡರ್ ಬಿಎಂಟಿಸಿ ಸಾರಿಗೆ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ.24.03.2025 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ ಎಂಎಫ್-44 ಕೋಣನಕುಂಟೆ ಕ್ರಾಸ್ ಮೆಟ್ರೋ ಸ್ಟೇಷನ್ ನಾಯಂಡಹಳ್ಳಿ ಜಂಕ್ಷನ್ ವಸಂತಪುರ, ಉತ್ತರಹಳ್ಳಿ, ಇಟ್ಟಮಡು, ಪಿ.ಇ.ಎಸ್ ಕಾಲೇಜು, 4 ಬಸ್ಸುಗಳು ಮಾರ್ಗ ಸಂಖ್ಯೆ ಎಂಎಫ್-44 ಬಿಡುವ ವೇಳೆ ಕೋಣನಕುಂಟೆ ಮೆಟ್ರೋ ನಿಲ್ದಾಣ ನಾಯಂಡಹಳ್ಳಿ ಜಂಕ್ಷನ್ 06:00, 06:15, 07:20, 07:35, 08:00, 08:45, 09:00, 09:25, 09:45, 10:35, 10:50, 11:15, 11:35, 12:35, 12:55, 13:55, 14:15, 14:40, 15:10, 15:45, 15:55,…
ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು ಮಂಡಿಸಿದ ಬಳಿಕ ಧ್ವನಿಮತದಿಂದ ಅಂಗೀಕಾರವನ್ನು ಪಡೆಯಿತು. ಈ ಮೂಲಕ ಲೋಕಸಭೆಯಲ್ಲಿ ಹಣಕಾಸು ಮಸೂದೆ ಅಂಗೀಕಾರ ದೊರೆತಿದೆ. ಮಂಗಳವಾರ ಲೋಕಸಭೆಯು 2025 ರ ಹಣಕಾಸು ಮಸೂದೆಯ ಚರ್ಚೆಯನ್ನು ಪುನರಾರಂಭಿಸಲಾಯಿತು. ಒಂದು ದಿನ ಮುಂಚಿತವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26 ರ ಹಣಕಾಸು ವರ್ಷದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದರು. ಪ್ರಮುಖ ಬಜೆಟ್ ಪ್ರಸ್ತಾವನೆಗಳಿಗೆ ಅನುಮೋದನೆ ಕೋರಿದರು. ಹಣಕಾಸು ಮಸೂದೆ ಕಾನೂನಾಗಲು ಮತ್ತು ಬಜೆಟ್ ಪ್ರಸ್ತಾವನೆಗಳನ್ನು ಜಾರಿಗೆ ತರಲು, ಅದನ್ನು ಸಂಸತ್ತಿನ ಎರಡೂ ಸದನಗಳು ಅನುಮೋದಿಸಬೇಕು. ಪ್ರಮುಖ ತಿದ್ದುಪಡಿಗಳಲ್ಲಿ, ಗೂಗಲ್ ಮತ್ತು ಮೆಟಾದಂತಹ ಕಂಪನಿಗಳು ನೀಡುವ ಆನ್ಲೈನ್ ಜಾಹೀರಾತು ಸೇವೆಗಳ ಮೇಲಿನ 6% ಸಮಾನತೆಯ ತೆರಿಗೆಯನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲು ಭಾರತ ಯೋಜಿಸಿದೆ. ಇದನ್ನು ಸಾಮಾನ್ಯವಾಗಿ ಗೂಗಲ್ ತೆರಿಗೆ ಎಂದು ಕರೆಯಲಾಗುತ್ತದೆ. ಏಪ್ರಿಲ್ 2 ರಿಂದ ಅಮೇರಿಕನ್ ಟೆಕ್ ಸಂಸ್ಥೆಗಳ ಮೇಲೆ ಡಿಜಿಟಲ್ ತೆರಿಗೆ ವಿಧಿಸುವ ರಾಷ್ಟ್ರಗಳ ಮೇಲೆ ಪ್ರತೀಕಾರದ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ…
ನವದೆಹಲಿ: ಸೋನು ಸೂದ್ ಅವರ ಪತ್ನಿ ಸೋನಾಲಿ ಸೂದ್ ಸೋಮವಾರ ರಾತ್ರಿ (ಮಾರ್ಚ್ 24) ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ ಸಿಲುಕಿದ್ದರು. ಮೂಲಗಳ ಪ್ರಕಾರ, ಸೋನಾಲಿ ತನ್ನ ಸಹೋದರಿ ಮತ್ತು ಸೋದರಳಿಯನೊಂದಿಗೆ ಪ್ರಯಾಣಿಸುತ್ತಿದ್ದರು, ನಂತರ ಕಾರನ್ನು ಚಲಾಯಿಸುತ್ತಿದ್ದರು. ವಾಹನವು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಹಾನಿಯಾಗಿದೆ. ಸೋನಾಲಿ ಮತ್ತು ಅವರ ಸೋದರಳಿಯ ಇಬ್ಬರೂ ಗಾಯಗೊಂಡಿದ್ದು, ಪ್ರಸ್ತುತ ನಾಗ್ಪುರದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನವು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಗಮನಾರ್ಹ ಹಾನಿಯಾಗಿದೆ. ಘಟನೆಯ ವಿವರ ಘಟನೆಯ ಚಿತ್ರಗಳು ಕಾರು ಅಪಘಾತದಲ್ಲಿ ತೀವ್ರವಾಗಿ ಹಾನಿಗೊಳಗಾಗಿದೆ ಎಂದು ಸೂಚಿಸುತ್ತವೆ. ಸೋನಾಲಿ ಸೂದ್ ಮತ್ತು ಅವರ ಸೋದರಳಿಯ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ಪ್ರಸ್ತುತ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು 48 ರಿಂದ 72 ಗಂಟೆಗಳ ಕಾಲ ನಿಗಾದಲ್ಲಿ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಪಘಾತದ ಬಗ್ಗೆ ಸೋನು ಸೂದ್ಗೆ ಮಾಹಿತಿ ನೀಡಿದ ತಕ್ಷಣ, ಅವರು ತಮ್ಮ ಪತ್ನಿಯೊಂದಿಗೆ ಇರಲು…
ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ಇಂದು ಸಂಜೆ 4.30ಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಇಂದು ಸಂಜೆ 4.30ಕ್ಕೆ ಭೇಟಿಯಾಗುವಂತೆ ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಇಂದು ಸಂಜೆ 4.30ಕ್ಕೆ ಸದಾಶಿವನಗರದಲ್ಲಿರುವಂತ ಗೃಹ ಸಚಿವರ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಚರ್ಚಿಸಿ, ದೂರು ನೀಡುತ್ತೇನೆ. ಆ ಬಳಿಕ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ನೀಡುವುದಾಗಿ ಹೇಳಿದರು. ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ನನಗೆ ಯಾವುದೇ ರೀತಿಯ ಒತ್ತಡ ಇಲ್ಲ. ಒತ್ತಡ ಹೇರುವ ಪ್ರಯತ್ನವೂ ಆಗಿಲ್ಲ. ನನ್ನ ತಪ್ಪಿದೆ ಅನ್ನಿಸುತ್ತೆ ಎಂದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೆ. ಹೀಗಾಗಿ ಗೃಹ ಸಚಿವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇಂದು ಸಂಜೆ ಭೇಟಿಯಾಗಿ ದೂರು ನೀಡುವುದಾಗಿ…
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಆ ಬಗ್ಗೆ ಅಂದೇ ತಿಳಿಸಿದ್ದಂತ ಬಸವರಾಜ ಹೊರಟ್ಟಿ ಅವರು ನನ್ನ ಪಿಎ ವೈರಲ್ ಮಾಡಿದ್ದಾರೆ. ಸಹಿ ಮಾಡಿದಂತ ಪತ್ರ ನನ್ನ ಡ್ರಾನಲ್ಲೇ ಇದೆ ಎಂದಿದ್ದರು. ಇದೀಗ ರಾಜೀನಾಮೆ ನೀಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೊತೆಗೆ ಗವರ್ನರ್, ಸಚಿವರು, ಶಾಸಕರು ಇದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚಿಸೋಣ. ಅಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಅಂತ ಘೋಷಿಸಿದರು. ಅಂದಹಾಗೇ ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವಂತ ರಾಜೀನಾಮೆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ರಾಜೀನಾಮೆ ಪತ್ರದಲ್ಲಿ ಸಹಿ ಇರಲಿಲ್ಲ.…
ಹುಬ್ಬಳ್ಳಿ: ವಿಧಾನಸಭೆಯಲ್ಲಿ 18 ಶಾಸಕರ ಅಮಾನತು ಕ್ರಮದಿಂದ ಬೇಸರಗೊಂಡಿದ್ದಂತ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡುವಂತ ನಿರ್ಧಾರಕ್ಕೆ ಬಂದಿದ್ದರು. ಆದರೇ ಈಗ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುತ್ತಿರುವಂತ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನ್ನ ಜೊತೆಗೆ ಗವರ್ನರ್, ಸಚಿವರು, ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚೆ ಮಾಡಿ ನಿರ್ಧಾರಿಸೋಣ ಅಂತ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ವಿಚಾರವನ್ನು ಇಲ್ಲಿಗೆ ಕೈಬಿಟ್ಟುಬಿಡಿ ಎಂದರು. ಅಂದಹಾಗೇ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡುತ್ತಿರುವಂತ ಪತ್ರ ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಅವರ ಸಹಿ ಇರದಂತ ರಾಜೀನಾಮೆ ಪತ್ರ ಹರಿದಾಡಿತ್ತು. ಈಗ ಅವರು ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. https://kannadanewsnow.com/kannada/big-news-important-step-taken-by-the-state-government-to-prevent-illegality-from-now-on-ai-technology-will-be-used-in-kea-recruitment-exams/ https://kannadanewsnow.com/kannada/shivamogga-taluk-panchayat-invites-applications-under-beneficiary-oriented-programme/
ಶಿವಮೊಗ್ಗ : 2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸು ಹಾಗೂ ಸೈಲೇಜ್ ಬ್ಯಾಗ್ಗಳನ್ನು ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಲು ಕರೆಯುವ ಯಂತ್ರ 2 ಫಲಾನುಭವಿಗಳಿಗೆ ತಲಾ 1 ರಂತೆ, ರಬ್ಬರ್ ನೆಲಹಾಸು 11 ಫಲಾನುಭವಿಗಳಿಗೆ ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ 45 ಫಲಾನುಭವಿಗಳಿಗೆ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದಾರೆ. ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಏ.17 ರೊಳಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಕಚೇರಿ, ಎಪಿಎಂಸಿ ಆವರಣ ಶಿವಮೊಗ್ಗ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ…













