Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ. https://kannadanewsnow.com/kannada/truck-car-and-two-wheeler-chain-accident-one-dead-three-in-serious-condition/ https://kannadanewsnow.com/kannada/eat-badami-every-day-enjoy-these-health-benefits/
ಪ್ರತಿದಿನ ಬಾದಾಮಿಯನ್ನು ನಿಮ್ಮ ಆಹಾರದ ಜೊತೆಗೆ ತಿನ್ನೋದಕ್ಕೆ ಶುರು ಮಾಡಿದ್ರೇ, ಅನೇಕ ಆರೋಗ್ಯ ಪ್ರಯೋಜನಗಳಿದ್ದಾವೆ. ಅವುಗಳ ಬಗ್ಗೆ ಮುಂದೆ ಓದಿ. ಮೆದುಳಿಗೆ ಒಳ್ಳೆಯದು ಬಾದಾಮಿಯಲ್ಲಿ ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬುಗಳು ಇರುತ್ತವೆ. ಇದು ಸ್ಮರಣಶಕ್ತಿ ಮತ್ತು ಗಮನವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಕೆಲವು ಬಾದಾಮಿಗಳನ್ನು ತಿನ್ನುವುದು ಮೆದುಳಿನ ಕಾರ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ನೀವು ವಯಸ್ಸಾದಂತೆ. ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ ಬಾದಾಮಿಯಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಯಮಿತ ಸೇವನೆಯು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಹೃದಯವನ್ನು ಬಲಪಡಿಸುತ್ತದೆ. ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಬಾದಾಮಿ ಫೈಬರ್ ಮತ್ತು ಪ್ರೋಟೀನ್ನಿಂದ ತುಂಬಿರುತ್ತದೆ, ಇದು ನಿಮಗೆ ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಅವುಗಳನ್ನು ತಿಂಡಿಯಾಗಿ ತಿನ್ನುವುದು ಹಸಿವನ್ನು ನಿಯಂತ್ರಿಸಲು ಮತ್ತು ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ.…
ಚಾಮರಾಜನಗರ: ಜಿಲ್ಲೆಯಲ್ಲಿ ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿ, ಕಾರು, ದ್ವಿಚಕ್ರವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದಂತ 10 ವರ್ಷದ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿವಿಎಸ್ ಎಕ್ಸ್ ಎಲ್ ನಲ್ಲಿ ನಾಲ್ವರು ಅಪ್ರಾಪ್ತ ಸಹೋದರರು ತೆರಳುತ್ತಿದ್ದರು. ನಿಯಂತ್ರಣ ತಪ್ಪಿ ಲಾರಿಗೆ ಟಿವಿಎಸ್ ಎಕ್ ಎಲ್ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಹೋದರರಾದ ಆದಾನ್ ಪಾಷ, ಫೈಸಲ್, ರಿಯಾಜ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. https://kannadanewsnow.com/kannada/dharmasthala-case-court-orders-to-remand-mask-man-chinnayya-to-judicial-custody/ https://kannadanewsnow.com/kannada/the-chief-secretary-of-the-state-government-shalini-rajanish-met-with-the-imf-team-to-discuss-financial-stability/
ಬೆಂಗಳೂರು: ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡವು ಸ್ಥೂಲ ಆರ್ಥಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವುದರೊಂದಿಗೆ ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಸರ್ಕಾರಿ ಅಧಿಕಾರಿಗಳಿಗೆ ನೀತಿ ಸಲಹೆಗಳನ್ನು ನೀಡುತ್ತದೆ. ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಣಕಾಸಿನ ಸುಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮತ್ತು ಮಾನವ ಬಂಡವಾಳವನ್ನು ಬಲಪಡಿಸುವುದರೊಂದಿಗೆ, ಹವಾಮಾನ ಕೇಂದ್ರಿತ ನೀತಿಗಳನ್ನು ಮುಂದುವರಿಸುವ ಕುರಿತು ರಚನಾತ್ಮಕ ಸವಾಲುಗಳನ್ನು ಗುರಿಯಾಗಿರಿಸಿಕೊಂಡು ರಾಜ್ಯ ಮಟ್ಟದ ಉಪಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಸಹ ಹಾಜರಿದ್ದರು. ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡದಲ್ಲಿ ಸಹಾಯಕ ನಿರ್ದೇಶಕ ಮತ್ತು ಮಿಷನ್ ಮುಖ್ಯಸ್ಥರಾದ…
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಹೀಗಾಗಿ ಅವರನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ವರದಹಳ್ಳಿಯ ಶ್ರೀಧರ ಸ್ವಾಮಿಗಳು ಅಪಾರಮಹಿಮೆಯುಳ್ಳ ಅವತಾರ ಪುರುಷರು. ವರದ ಹಳ್ಳಿಯು ಇವರು ತಪಸ್ಸು ಮಾಡಿದ ಪುಣ್ಯಭೂಮಿ. ಪ್ರತಿನಿತ್ಯ ಸಾವಿರಾರು ಭಕ್ತರು ವರದಹಳ್ಳಿಗೆ ಭೇಟಿಕೊಟ್ಟು ಗುರುಗಳ ಆಶೀರ್ವಾದ ಪಡೆಯುತ್ತಾರೆ. ಹಿಂದೂ ಧರ್ಮದ ಪ್ರವರ್ತಕರು ಆಗಿದ್ದು, ಶ್ರೀರಾಮನ ಭಕ್ತರು ಹಾಗೂ ಸಮರ್ಥ ರಾಮದಾಸರ ಶಿಷ್ಯರು ಆಗಿದ್ದರು. ಶ್ರೀಧರ ಸ್ವಾಮಿಗಳನ್ನು ದತ್ತಾತ್ರೇಯ ಅವತಾರವೆಂದು ಹೇಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಇತ್ಯಾದಿ ಯುಜಿಸಿಇಟಿ ಕೋರ್ಸ್ಗಳ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದ್ದು, ಕಾಷನ್ ಡೆಪಾಸಿಟ್ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ಅದಲು/ಬದಲು ಮಾಡಿಕೊಳ್ಳಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಸಮಯದ ಅಭಾವ ಇರುವ ಕಾರಣ, ನಿಗದಿತ ಕಾಲ ಮಿತಿಯಲ್ಲೇ ಎಲ್ಲ ಪೋಷಕರು/ವಿದ್ಯಾರ್ಥಿಗಳು ಮುಂಗಡ ಹಣ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ದಾಖಲಿಸುವ/ಅದಲು-ಬದಲು ಮಾಡುವ ಕೆಲಸವನ್ನು ಮಾಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸಲಹೆ ನೀಡಿದ್ದಾರೆ. ಸೀಟ್ ಮ್ಯಾಟ್ರಿಕ್ಸ್ಗೆ ಹೊಸದಾಗಿ ಸೇರ್ಪಡೆಯಾದ ಬೆಳಗಾವಿಯ ಜೆಎನ್ಎಂಸಿ ಕಾಲೇಜಿನ 12 ವೈದ್ಯಕೀಯ ಸೀಟು ಹಾಗೂ ಮೈಸೂರಿನ ಫರೂಕಿಯ ದಂತ ವೈದ್ಯಕೀಯ ಕಾಲೇಜಿನ 40 ಸೀಟು ಹಾಗೂ ಬಿಜಿಎಸ್ ಗ್ಲೋಬಲ್ ದಂತ ವೈದ್ಯಕೀಯ ಕಾಲೇಜಿನ 50 ಸೀಟುಗಳನ್ನು ಆಸಕ್ತರು ತಮ್ಮ ಇಚ್ಛೆ/ಆಯ್ಕೆಗಳ ಪಟ್ಟಿಗೆ ಹೊಸದಾಗಿ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದಲ್ಲದೆ, ಹಾಲಿ ಇರುವ…
ಬೆಂಗಳೂರು: ಸೀಟ್ ಬೆಲ್ಟ್ ಧರಿಸದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಸಂಚಾರ ನಿಮಯ ಉಲ್ಲಂಘನೆಯ ಪ್ರಕರಣದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿನ ಮೇಲೆಯೂ ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ಗಳಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಕೇಸ್ ಗಳ ದಂಡವನ್ನು ಅವರು ಶೇ.50ರ ರಿಯಾಯಿತಿಯಲ್ಲಿ ಪಾವತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೆಎ 03, ಎಂವೈ 4545 ಕಾರನ್ನು ತಮ್ಮ ಸಂಚಾರಕ್ಕೆ ಬಳಸುತ್ತಿದ್ದಾರೆ. ಹೀಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಳಸುವಂತ ಕಾರಿನ ಮೇಲೆ ಸೀಟ್ ಬೆಲ್ಟ್ ಹಾಕಿರದೇ ಇರೋದು, ಓವರ್ ಸ್ಪೀಡ್, ಟ್ರಾಫಿಕ್ ಸಿಗ್ನಲ್ ಜಂಪಿಂಗ್, ಜೀಬ್ರಾ ಕ್ರಾಸಿಂಗ್ ಮಾಡಿದ್ದಕ್ಕೆ 10 ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ಶೇ.50ರಷ್ಟು ರಿಯಾಯಿತಿಯಂತೆ ರೂ.3250 ದಂಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾವತಿಸಿದ್ದಾರೆ. 2020ರಿಂದಲೂ ದಂಡ ಪಾವತಿಸದೇ ಬಾಕಿಯನ್ನು ಬಿವೈ ವಿಜಯೇಂದ್ರ ಉಳಿಸಿಕೊಂಡಿದ್ದರು. ಈ ದಂಡವನ್ನು ಪಾವತಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಿನ್ನಲೆಯಲ್ಲಿ ಇದೀಗ ಬಿವೈ ವಿಜಯೇಂದ್ರ…
ಬೆಂಗಳೂರು: ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವು ಧರ್ಮಸ್ಥಳ ವಿರುದ್ಧದ ಪಿತೂರಿ, ಷಡ್ಯಂತ್ರದ ಹಿಂದೆ ಇದೆ ಎಂಬುದಾಗಿ ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಇಂತಹ ಆರೋಪದ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಇಂದು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಗೆ ವಕೀಲರ ಮೂಲಕ ಖುದ್ಧು ಸಂಸದ ಸಸಿಕಾಂತ್ ಸೆಂಥಿಲ್ ಹಾಜರಾಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 11ಕ್ಕೆ ವಿಚಾರಣೆ ನಿಗದಿ ಪಡಿಸಿದೆ. https://kannadanewsnow.com/kannada/letter-from-mla-gopalakrishna-belur-to-cm-siddaramaiah-to-make-sagara-taluk-a-new-district/ https://kannadanewsnow.com/kannada/an-infant-born-to-actress-bhavana-ramanna-has-passed-away/
ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ದಿನಾಂಕ 16-08-2025ರಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕೆಳದಿ ಸಂಸ್ಥಾತನವು ಕ್ರಿ.ಶ. 1499 ರಿಂದ 1763 ವರೆಗೆ ಸುಮಾರು 265 ವರ್ಷಗಳ ಕಾಲ ಕಳದಿ ಅರಸರಾದ ಕೆಳದಿ ಶಿವಪ್ಪನಾಯಕ ಹಾಗೂ ರಾಣಿ ಚನ್ನಮ್ಮ ಮುಂತಾದ ಮಹಾರಾಜರು ಆಡಳಿತ ನಡೆಸಿದ ಐತಿಹಾಸಿಕ ಪಟ್ಟಣವಾಗಿರುತ್ತದೆ. ಸಾಗರ ನಗರವು ಅತೀವೇಗವಾಗಿ ಬೆಳೆಯುತ್ತಿರುವ ಮಲೆನಾಡಿನ ಒಂದು ಸುಂದರ ನಗರ. ಸರ್ವೋತ್ತೋಮುಖ ಅಭಿವೃದ್ಧಿಯ ಜೊತೆಗೆ “ಉಳುವವನ ಹೊಲದೊಡೆಯ”ದಂತಹ ಕ್ರಾಂತಿಕಾರಕ ಕಾಗೋಡು ಸತ್ಯಗ್ರಹ ಮೂಲಕ ರೈತರಿಗೆ ಭೂಮಿ ಕೊಟ್ಟಂತಹ ನಗರವಾಗಿದೆ. ರಾಜ್ಯಕ್ಕೆ ವಿದ್ಯುತ್ ನ್ನು ನೀಡುತ್ತಿರುವ ಲಿಂಗನಮಕ್ಕಿ…













