Author: kannadanewsnow09

ಕಲಬುರ್ಗಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರ್ಗಿ ನಗರದ ಬಿದ್ದಾಪುರ್ ಕಾಲೋನಿ ರೈಲ್ವೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ರೈಲಿಗೆ ತಲೆ ಕೊಟ್ಟು SSLC ವಿದ್ಯಾರ್ಥಿ ವೀರೇಶ ಸ್ವಾಮಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯಿಂದ ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ವೀರೇಶ್ ಸ್ವಾಮಿ ಮನೆ ಬಿಟ್ಟಿದ್ದ. ಬಳಿಕ ವಾಂತಿ ಬರುತ್ತಿದೆ ಎಂದು ಹೇಳಿ ಟ್ಯೂಷನ್ ಕ್ಲಾಸ್ನಿಂದ ವೀರೇಶ್ ಸ್ವಾಮಿ ಹೊರಗಡೆ ಬಂದಿದ್ದಾನೆ. ಆದರೆ ಟ್ಯೂಷನ್ ನಿಂದ ಹೊರಬಂದವನು ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿ ವೀರೇಶ್ ಸ್ವಾಮಿ ಆತ್ಮಹತ್ಯೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ. ಈ ಕುರಿತಂತೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bjp-releases-first-list-of-campaigners-for-jharkhand-assembly-elections/ https://kannadanewsnow.com/kannada/chennai-three-students-hospitalised-after-gas-leak-at-school/

Read More

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಯಕರ ಹೆಸರುಗಳಿವೆ. https://twitter.com/ANI/status/1849775434029990198 https://kannadanewsnow.com/kannada/chennai-three-students-hospitalised-after-gas-leak-at-school/ https://kannadanewsnow.com/kannada/bbmp-chief-commissioner-instructs-officials-to-remove-encroached-building/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯದ ತಹಶಿಲ್ದಾರ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಮೊದಲಿಗೆ ಇಂದಿನಿಂದ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ಬೃಹತ್ ನೀರುಗಾಲುವೆಗಳ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ. ಮೊದಲಿಗೆ ವಲಯವಾರು ಸಂಬಂಧಪಟ್ಟ ತಹಶಿಲ್ದಾರ್ ರವರು ಬಂದಿರುವ ಎಲ್ಲಾ ಪ್ರಸ್ತಾವನೆಯನ್ನು ಪರಿಮರ್ಶಿಸಿ ಒತ್ತುವರಿಯಾಗಿರುವ ಬಗ್ಗೆ ಆದೇಶಿಸಲಾದ ಸ್ಥಳವನ್ನು ನವೆಂಬರ್ 15ರೊಳಗೆ ತೆರವುಗೊಳಿಸಲು ಎಲ್ಲಾ ವಲಯ ಆಯುಕ್ತರಿಗೆ ನಿರ್ದೇಶಿಸಿದರು. ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡದಿದ್ದರೆ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಮುಂದುವರೆದು ಕೆರೆ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ ತಕ್ಷಣವೇ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ…

Read More

ಚೆನ್ನೈ: ನಗರದ ಶಾಲೆಯೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ, ಶಾಲೆಯಲ್ಲಿನ ಮೂವರು ವಿದ್ಯಾರ್ಥಿಗಳು ದಿಢೀರ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಂಕಿತ ಅನಿಲ ಸೋರಿಕೆಯಿಂದಾಗಿ ಚೆನ್ನೈ ಶಾಲೆಯಲ್ಲಿ ಹಠಾತ್ ಭೀತಿಯ ಪರಿಸ್ಥಿತಿ ಭುಗಿಲೆದ್ದಿದೆ. ಮೂಲಗಳ ಪ್ರಕಾರ, ವಿದ್ಯಾರ್ಥಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದೆ. ಚೆನ್ನೈನ ತಿರುವೊಟ್ಟಿಯೂರ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ತುರ್ತಾಗಿ ಸ್ಥಳಾಂತರಿಸಬೇಕಾಯಿತು ಮತ್ತು ಮೂವರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/first-look-of-vande-bharat-sleeper-trains-interiors-luxury-design-released/ https://kannadanewsnow.com/kannada/will-fulfill-my-fathers-dream-of-development-bharat-bommai/

Read More

ಹಾವೇರಿ:  ನಮ್ಮ ಪಕ್ಷದ ನಾಯಕರ ಆಸೆಯಂತೆ ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಶಿಗ್ಗಾವಿಯಲ್ಲಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದರು. ಇಷ್ಟು ದೊಡ್ಡ ಸಂಖ್ಯೆಯಲ್ಕಿ ಬಂದಿದ್ದೀರಿ ನಿಮ್ಮ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ನಮ್ಮ ತಂದೆಯವರು ಬಹಳಷ್ಟು ಅಭಿವೃದ್ಧಿ ಮಾಡಿದ್ದಾರೆ.‌ ಕೆರೆ ತುಂಬಿಸಿದ್ದಾರೆ‌, ಆಸ್ಪತ್ರೆ ತಂದಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ನಮ್ಮ ನಾಯಕರ ಮಾರ್ಗದರ್ಶನದಲ್ಲಿ ದೀನ ದಲಿತರು, ಎಸ್ಸಿ ಎಸ್ಟಿ, ರೈತರು, ಮಹಿಳೆಯರು, ಯುವಕರ ಪರವಾಗಿ ಕೆಲಸ ಮಾಡುತ್ತೇನೆ. ನಿಮ್ಮ ತಮ್ಮನಾಗಿ ನಿಮ್ಮೆಲ್ಲರ ರಕ್ಷಣೆ ಮಾಡುತ್ತೇನೆ‌. ಇಷ್ಟೆಲ್ಲ ದೊಡ್ಡ ಸಂಖ್ಯೆಯಲ್ಲಿ ಆಗಮಿರುವುದಕ್ಕೆ ನಿಮಗೆ ಕೋಟಿ ಕೋಟಿ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು. https://kannadanewsnow.com/kannada/first-look-of-vande-bharat-sleeper-trains-interiors-luxury-design-released/ https://kannadanewsnow.com/kannada/good-news-for-small-entrepreneurs-in-the-country-pm-mudra-yojana-loan-limit-raised-to-rs-20-lakh/

Read More

ತಮಿಳುನಾಡು: ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ವಂದೇ ಭಾರತ್ ರೈಲಿನ ಬಹು ನಿರೀಕ್ಷಿತ ಸ್ಲೀಪರ್ ಆವೃತ್ತಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಹೊಸದಾಗಿ ಬಿಡುಗಡೆಯಾದ ಚಿತ್ರಗಳಲ್ಲಿ, ನಾವು ರೈಲಿನ ಒಳಾಂಗಣ, ಐಷಾರಾಮಿ ವಿನ್ಯಾಸ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹೊಸ ಸೇರ್ಪಡೆಯು ವಂದೇ ಭಾರತ್ ಪೋರ್ಟ್ಫೋಲಿಯೊವನ್ನು ವಿಸ್ತರಿಸುತ್ತದೆ, ಇದರಲ್ಲಿ ಚೇರ್ ಕಾರ್ ರೂಪಾಂತರಗಳು ಮತ್ತು ಮೆಟ್ರೋ ರೈಲುಗಳು ಸೇರಿವೆ. ರಾತ್ರಿಯ ಪ್ರಯಾಣಕ್ಕಾಗಿ ವಿನ್ಯಾಸಗೊಳಿಸಲಾದ ವಂದೇ ಭಾರತ್ ಸ್ಲೀಪರ್ 800 ಕಿ.ಮೀ ನಿಂದ 1,200 ಕಿ.ಮೀ ನಡುವಿನ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಪ್ರಯಾಣಿಕರ ಆರಾಮ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ವಂದೇ ಭಾರತ್ ಸ್ಲೀಪರ್ ರೈಲು ಅನೇಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ರೈಲು ಸಂಪೂರ್ಣವಾಗಿ ಹವಾನಿಯಂತ್ರಿತವಾಗಿದ್ದು, 820 ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಲು 16 ಬೋಗಿಗಳನ್ನು ಒಳಗೊಂಡಿದೆ. ಗಂಟೆಗೆ 160 ಕಿಲೋಮೀಟರ್ ಗರಿಷ್ಠ ವೇಗದೊಂದಿಗೆ, ಹೊಸ ರೈಲು ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. https://twitter.com/IndianTechGuide/status/1849299784172974341 ಐಸಿಎಫ್ ನ ಜನರಲ್ ಮ್ಯಾನೇಜರ್ ಯು ಸುಬ್ಬರಾವ್…

Read More

ನವದೆಹಲಿ: ಸಣ್ಣ ಉದ್ಯಮಗಳಿಗೆ ಬೆಂಬಲವನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವು ಪ್ರಧಾನ ಮಂತ್ರಿ ಮುದ್ರಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಿದೆ. ಇದು ದೇಶಾದ್ಯಂತದ ಸೂಕ್ಷ್ಮ ಮತ್ತು ಸಣ್ಣ ವ್ಯವಹಾರಗಳಿಗೆ ಅಗತ್ಯವಾದ ಧನಸಹಾಯವನ್ನು ನೀಡುವ ಮಾರ್ಗವಾಗಿ ಹಣವಿಲ್ಲದವರಿಗೆ ಧನಸಹಾಯ ನೀಡಲು ಪ್ರಯತ್ನಿಸುವ ಕಾರ್ಯಕ್ರಮದ ವರ್ಧನೆಯಾಗಿದೆ. ಹಣಕಾಸು ಸಚಿವಾಲಯ ಗುರುವಾರ ಅಧಿಕೃತ ಅಧಿಸೂಚನೆಯ ಮೂಲಕ ಈ ಬದಲಾವಣೆಯನ್ನು ಪ್ರಕಟಿಸಿದೆ. ಜುಲೈ 23, 2024 ರಂದು 2024-25 ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ಸಾಲದ ಮಿತಿಯನ್ನು ಪರಿಚಯಿಸಿದರು. ಸ್ಥಳೀಯ ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಗೆ ಸಣ್ಣ ಉದ್ಯಮಗಳಿಗೆ ಬೆಂಬಲ ಅತ್ಯಗತ್ಯವಾಗಿರುವ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಉದ್ಯಮಿಗಳಿಗೆ ಸಾಲ ಪ್ರವೇಶವನ್ನು ವಿಸ್ತರಿಸುವ ಸರ್ಕಾರದ ಗಮನವನ್ನು ಹಣಕಾಸು ಸಚಿವಾಲಯ ಪುನರುಚ್ಚರಿಸಿತು. ಈ ಬದಲಾವಣೆಯನ್ನು ಉದ್ಯಮಶೀಲ ಪರಿಸರ ವ್ಯವಸ್ಥೆಯನ್ನು ಪೋಷಿಸಲು, ಉದ್ಯೋಗ…

Read More

ನವದೆಹಲಿ: ಇಂಡಿಗೊ, ವಿಸ್ತಾರಾ, ಸ್ಪೈಸ್ ಜೆಟ್ ನ 7 ವಿಮಾನಗಳು ಮತ್ತು ಏರ್ ಇಂಡಿಯಾದ 6 ವಿಮಾನಗಳು ಸೇರಿದಂತೆ ಸುಮಾರು 27 ವಿಮಾನಗಳಿಗೆ ಶುಕ್ರವಾರ ಹೊಸ ಬಾಂಬ್ ಬೆದರಿಕೆ ಬಂದಿದೆ. ಕಳೆದ 11 ದಿನಗಳಲ್ಲಿ, ಭಾರತೀಯ ವಾಹಕಗಳು ನಿರ್ವಹಿಸುವ ಸುಮಾರು 300 ಎಲ್ಲಾ ವಿಮಾನಗಳನ್ನು ಇಂತಹ ಬೆದರಿಕೆಗಳೊಂದಿಗೆ ಗುರಿಯಾಗಿಸಲಾಗಿದೆ. ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನಗಳ ಹಾರಾಟಕ್ಕೆ ಸಮಸ್ಯೆ ಕೂಡ ಉಂಟಾಗಿದೆ. https://kannadanewsnow.com/kannada/life-insurance-cut-by-at-least-6-25-of-average-salary-for-state-government-employees/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಿಮಾ ನಿಯಮಾವಳಿಯಂತೆ ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಿಂದ ಜೀವ ವಿಮೆಗೆ ಕಡ್ಡಾಯವಾಗಿ ವೇತನವನ್ನು ಕಡಿತಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಖಜಾನೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕಿರುತ್ತದೆ. ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 6 (ii) ರನ್ವಯ 50 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಜೀವ ವಿಮಾ…

Read More

ಬೆಂಗಳೂರು: “ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಕೇಳಿದಾಗ, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು. https://kannadanewsnow.com/kannada/karnataka-govt-is-going-to-make-pakistan-pakistan-tejasvi-surya/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/

Read More