Author: kannadanewsnow09

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಔನ್ನತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಮ್ಮೆಲ್ಲರ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ ಡಾ. ಕೆ.ಕಸ್ತೂರಿ ರಂಗನ್ ಅವರ ಅಗಲಿಕೆ ನಿಜಕ್ಕೂ ದುಃಖ ತಂದಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಸಂತಾಪ ವ್ಯಕ್ತಪಡಿಸಿದ್ದಾರೆ. ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿಯಾಗಿ, ಇಸ್ರೋ ಮುಖ್ಯಸ್ಥರಾಗಿ, ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಅವರು ನೀಡಿರುವ ಕೊಡುಗೆ ಅನನ್ಯ, ಅವಿಸ್ಮರಣೀಯ. ನಮ್ಮ ಬಾಹ್ಯಾಕಾಶ ಸಾಧನೆಯ ಹಿಂದಿನ ಧೀ ಶಕ್ತಿಯಂತಿದ್ದ ಕಸ್ತೂರಿ ರಂಗನ್ ಕ್ರಿಯಾಶೀಲ, ದೂರದೃಷ್ಟಿಯ ವಿಜ್ಞಾನಿಯಾಗಿದ್ದವರು. ಅವರ ಅಗಲಿಕೆಯಿಂದ ಬಾಹ್ಯಾಕಾಶ ಕ್ಷೇತ್ರಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಭಗವಂತ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ. ಅವರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/pahalgam-terror-attack-nse-announces-ex-gratia-of-rs-4-lakh-each-to-kin-of-deceased/ https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/

Read More

ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತರಾಗಿದ್ದಾರೆ. ಅವರ ಕುಟುಂಬಸ್ಥರಿಗೆ ಆರ್ಥಿಕ ಚೇತನ ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಷೇರು ವಿನಿಯಮ ಕೇಂದ್ರವು ಬೆಂಬಲಕ್ಕೆ ನಿಂತಿದೆ. ಮೃತ ಕುಟುಂಬಸ್ಥರಿಗೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕ್ರೂರ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ಬೆಂಬಲಿಸಲು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ಒಟ್ಟು 1 ಕೋಟಿ ರೂ.ಗಳನ್ನು (ಅಂದರೆ ಪ್ರತಿ ಕುಟುಂಬಕ್ಕೆ ಸುಮಾರು 4 ಲಕ್ಷ ರೂ.) ನೀಡುವುದಾಗಿ ವಾಗ್ದಾನ ಮಾಡಿದೆ. https://twitter.com/ANI/status/1915704009832202314 ಅಂದಹಾಗೇ ಈಗಾಗಲೇ ಜಮ್ಮು-ಕಾಶ್ಮೀರ ಸರ್ಕಾರವು ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 10 ಲಕ್ಷ ನೀಡುವುದಾಗಿ ಘೋಷಿಸಿತ್ತು. ಇತ್ತ ಕರ್ನಾಟಕ ಸರ್ಕಾರವು ಮೃತ ಇಬ್ಬರು ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಿತ್ತು. https://kannadanewsnow.com/kannada/neet-now-mandatory-for-physiotherapy-courses-dr-sharan-prakash-patil/ https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/

Read More

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಫಿಸಿಯೋಥೆರಪಿಯ ಅಂತಾರಾಷ್ಟ್ರೀಯ ಸಮ್ಮೇಳನವಾದ ಕರ್ನಾಟಕ ಫಿಸಿಯೋಕಾನ್ -25 ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಭಾಷಣ ಮಾಡಿದರು. ಫಿಸಿಯೋಥೆರಪಿ ಕೋರ್ಸ್‌ಗಳ ಪ್ರವೇಶವನ್ನು ನೀಟ್ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರದ ಬೆಂಬಲವಿದೆ. ಶೈಕ್ಷಣಿಕ ಗುಣಮಟ್ಟ ಮತ್ತು ವೃತ್ತಿಪರ ಮಾನದಂಡಗಳನ್ನು ಹೆಚ್ಚಿಸುವ ನೀಟ್ ಅಡಿಯಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳ ಏಕೀಕರಣವನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದರು. ಗಣನೀಯ ಸೇವೆ ನೀಡುತ್ತಿರುವ ಭೌತ ಚಿಕಿತ್ಸಕರು ಹೆರಿಗೆಯಿಂದ ವೃದ್ಧರ ಆರೈಕೆಯವರೆಗೆ, ಆರೋಗ್ಯ ರಕ್ಷಣೆಯಲ್ಲಿ ಭೌತಚಿಕಿತ್ಸಕರು ಪ್ರಮುಖ ಪಾತ್ರ ವಹಿಸುತ್ತಾರೆ. ಭೌತಚಿಕಿತ್ಸಕರು ನರ ಮತ್ತು ಮೂಳೆಚಿಕಿತ್ಸೆ ಪುನರ್‌ ಆರೈಕೆ,…

Read More

ಕಲಬುರ್ಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ ಯುವಕನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನರೋಣದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ನರೋಣ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ 26 ವರ್,ದ ಚನ್ನವೀರ ಹೀರಾ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/ https://kannadanewsnow.com/kannada/minister-madhu-bangarappa-condoles-the-death-of-former-minister-begane-ramayya/

Read More

ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಪ್ರಾಥಮಿಕ ಅಫಿಡವಿಟ್ ಸಲ್ಲಿಸಿದ್ದು, ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದೆ. ಕೇಂದ್ರವು ಕಾಯ್ದೆಯ ಯಾವುದೇ ನಿಬಂಧನೆಗಳ ಮೇಲೆ ತಡೆಯಾಜ್ಞೆಯನ್ನು ವಿರೋಧಿಸುತ್ತದೆ, ಸಾಂವಿಧಾನಿಕ ನ್ಯಾಯಾಲಯಗಳು ಶಾಸನಬದ್ಧ ನಿಬಂಧನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ತಡೆಹಿಡಿಯುವುದಿಲ್ಲ ಮತ್ತು ಅಂತಿಮವಾಗಿ ಈ ವಿಷಯವನ್ನು ನಿರ್ಧರಿಸುತ್ತವೆ ಎಂಬುದು ಕಾನೂನಿನಲ್ಲಿ ಇತ್ಯರ್ಥಪಡಿಸಿದ ನಿಲುವು ಎಂದು ಹೇಳುತ್ತದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೇಂದ್ರವು ಸುಪ್ರೀಂ ಕೋರ್ಟ್ ಅನ್ನು ಕೋರಿತು. ಅದರ ಸಾಂವಿಧಾನಿಕತೆಯ ಊಹೆ ಇರುವುದರಿಂದ ಕಾನೂನಿನ ಮೇಲೆ ಅಡೆತಡೆ ಇರಲು ಸಾಧ್ಯವಿಲ್ಲ ಎಂದು ಹೇಳಿದೆ. 1,332 ಪುಟಗಳ ಪ್ರಾಥಮಿಕ ಪ್ರತಿ ಅಫಿಡವಿಟ್‌ನಲ್ಲಿ, ಸರ್ಕಾರವು ವಿವಾದಾತ್ಮಕ ಕಾನೂನನ್ನು ಸಮರ್ಥಿಸಿಕೊಂಡಿದ್ದು, 2013 ರ ನಂತರ “ಆಘಾತಕಾರಿಯಾಗಿ” 20 ಲಕ್ಷ ಹೆಕ್ಟೇರ್‌ಗೂ ಹೆಚ್ಚು (ನಿಖರವಾಗಿ 20,92,072.536) ವಕ್ಫ್ ಭೂಮಿ ಹೆಚ್ಚುವರಿಯಾಗಿದೆ ಎಂದು ಹೇಳಿದೆ. https://twitter.com/ANI/status/1915696393752371365 ಮೊಘಲ್ ಯುಗ, ಸ್ವಾತಂತ್ರ್ಯ ಪೂರ್ವ…

Read More

ಮಂಡ್ಯ: “ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ” ನಡೆಸುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ, ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. “ನಮ್ಮ ಸಂಸ್ಕೃತಿ, ಧಾರ್ಮಿಕ ಆಚರಣೆ ಸೇರಿಸಿ ಕಾರ್ಯಕ್ರಮ ರೂಪಿಸಲು ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದ ಸಮಿತಿಗೆ ಸಲಹೆ ನೀಡಿದ್ದೇನೆ. ಈ ಸಮಿತಿ ಮುಂದಿನ 8-10 ದಿನಗಳಲ್ಲಿ ಕಾರ್ಯಕ್ರಮದ ನೀಲನಕ್ಷೆ ಸಿದ್ಧಪಡಿಸಲಿದೆ” ಎಂದು ತಿಳಿಸಿದರು. “ಕೊಡಗಿನಿಂದ ಹಿಡಿದು, ದಕ್ಷಿಣ ಕನ್ನಡ, ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಚಾಮರಾಜನಗರ ಭಾಗದ ಜನರು ಈ ತಾಯಿಗೆ ನಮಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಕಾವೇರಿ ನೀರು ಬಳಸುವ ತಮಿಳುನಾಡಿನ ಜನರೂ ಕೂಡ ಬಂದು ಕಾವೇರಿ ತಾಯಿಗೆ ಪೂಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ…

Read More

ನವದೆಹಲಿ: ಷೇರು ಹೂಡಿಕೆದಾರರಿಗೆ ಬಿಗ್ ಶಾಕ್ ಎನ್ನುವಂತೆ ನಿಫ್ಟಿ 24,000, ಸೆನ್ಸೆಕ್ಸ್ 670 ಅಂಕ ಕುಸಿತಗೊಂಡಿದೆ. ಇದರ ನಡುವೆಯೂ ಐಟಿ ಷೇರುಗಳು ಉತ್ತಮವಾಗಿವೆ ಸ್ಥಿರತೆಯೊಂದಿಗೆ ಸಾಗಿದ್ದಾವೆ ಎಂಬುದಾಗಿ ತಿಳಿದು ಬಂದಿದೆ. ಸೆನ್ಸೆಕ್ಸ್ 589 ಅಂಕ ಕುಸಿತ ನಿಫ್ಟಿ 24,000 ಮಟ್ಟವನ್ನು ಕಾಯ್ದುಕೊಂಡಿದೆ. ಅದಾನಿ ಪೋರ್ಟ್ಸ್ ಶೇ.4ರಷ್ಟು ಕುಸಿತಗೊಂಡು ಭಾರೀ ನಷ್ಟವನ್ನೇ ಉಂಟು ಮಾಡಿದೆ. ಏಪ್ರಿಲ್ 25 ರಂದು ಸತತ ಎರಡನೇ ವಹಿವಾಟಿನಲ್ಲಿ ನಿಫ್ಟಿ 24,000 ಕ್ಕೆ ಇಳಿದ ಭಾರತೀಯ ಷೇರು ಸೂಚ್ಯಂಕಗಳು ಕುಸಿತ ಕಂಡವು. ಮುಕ್ತಾಯದ ವೇಳೆಗೆ, ಸೆನ್ಸೆಕ್ಸ್ 588.90 ಅಂಕಗಳು ಅಥವಾ 0.74 ಪ್ರತಿಶತದಷ್ಟು ಕುಸಿದು 79,212.53 ಕ್ಕೆ ತಲುಪಿತು, ಮತ್ತು ನಿಫ್ಟಿ 207.35 ಅಂಕಗಳು ಅಥವಾ 0.86 ಪ್ರತಿಶತದಷ್ಟು ಕುಸಿದು 24,039.35 ಕ್ಕೆ ತಲುಪಿತು. ಸುಮಾರು 682 ಷೇರುಗಳು ಮುನ್ನಡೆ ಸಾಧಿಸಿದವು, 3138 ಷೇರುಗಳು ಕುಸಿದವು ಮತ್ತು 115 ಷೇರುಗಳು ಬದಲಾಗಲಿಲ್ಲ. ಐಟಿ ಹೊರತುಪಡಿಸಿ, ಇತರ ಎಲ್ಲಾ ಸೂಚ್ಯಂಕಗಳು ಮಾಧ್ಯಮ, ಲೋಹ, ಪಿಎಸ್‌ಯು, ಟೆಲಿಕಾಂ, ವಿದ್ಯುತ್, ತೈಲ ಮತ್ತು…

Read More

ವಿಜಯಪುರ: ಜಿಲ್ಲೆಯಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪುತ್ರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಇಂದು ನಡೆದಿದೆ. ವಿಜಯಪುರದಲ್ಲಿ ಮಾಜಿ ಕಾರ್ಪೊರೇಟರ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಲೆಗೆ ಗುಂಡು ಹಾರಿಸಿಕೊಂಡು ಅಶನಾಮ್ ಪ್ರಕಾಶ್(22) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದಂತ ಅಶನಾಮ್ ಪ್ರಕಾಶ್ ವಿಜಯಪುರದ ಮಾಜಿ ಕಾರ್ಪೊರೇಟರ್ ಪ್ರಕಾಶ್ ಮಿರ್ಜಿ ಅವರ ಪುತ್ರರಾಗಿದ್ದಾರೆ. ವಿಜಯಪುರ ನಗರದ ಶಿಕಾರಿಖಾನೆ ಏರಿಯಾದ ಮನೆಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/hc-stays-bescom-prepaid-meter-charges/ https://kannadanewsnow.com/kannada/minister-madhu-bangarappa-condoles-the-death-of-former-minister-begane-ramayya/

Read More

ಬೆಂಗಳೂರು: ಬೆಸ್ಕಾಂ ಪ್ರೀಪೇಯ್ಡ್ ಮೀಟರ್ ಶುಲ್ಕಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಬೆಸ್ಕಾಂ ಗ್ರಾಹಕರಿಗೆ ಬಿಗ್ ರಿಲೀಫ್ ನೀಡಿದೆ. ಬೆಸ್ಕಾಂನಿಂದ ಸ್ಮಾರ್ಟ್ ಪ್ರೀಪೇಯ್ಡ್ ಮೀಟರ್ ಕಡ್ಡಾಯ ವಿಚಾರವಾಗಿ ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎಂಬುವರಿಂದ ರಿಟ್ ಅರ್ಜಿ ಸಲ್ಲಿಸಿದ್ದರು. 2000 ರೂಪಾಯಿ ಇದ್ದ ಮೀಟರ್ ಈಗ 8910 ರೂ ಕೊಡಬೇಕಾಗಿದೆ. ಬೇರೆ ರಾಜ್ಯಗಳಲ್ಲಿ 900 ರೂ ಗಳಿಗೆ ಪ್ರೀಪೆಯ್ಡ್ ಮೀಟರ್ ನೀಡಲಾಗುತ್ತಿದೆ. ಕೆಇಆರ್ ಸಿ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲವೆಂದಿತ್ತು. ಆದರೇ ಬೆಸ್ಕಾಂ ಸುತ್ತೋಲೆ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದಿದೆ ಎಂಬುದಾಗಿ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಈ ವೇಳೆ ದುಬಾರಿ ಪ್ರೀಪೆಯ್ಡ್ ವಿದ್ಯುತ್ ಮೀಟರ್ ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ನಿಮ್ಮಿಂದ ಯಾರು ಫ್ರೀ ವಿದ್ಯುತ್ ಕೇಳಿದ್ದರು ಎಂಬುದಾಗಿ ಹೈಕೋರ್ಟ್ ಪ್ರಶ್ನೆ ಮಾಡಿತು. ಬಡವರಿಂದ ಇಷ್ಟು ಹಣ ಕಿತ್ತರೆ ಎಲ್ಲಿಗೆ ಹೋಗಬೇಕು ಎಂಬುದಾಗಿ ಪ್ರಶ್ನಿಸಿತು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೇ ಬಡವರೇನು ಮಾಡಬೇಕು. ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ ಬೆಸ್ಕಾಂ ಪ್ರೀಪೇಯ್ಡ್…

Read More

ನವದೆಹಲಿ: ಎರಡು ದಿನಗಳ ಹಿಂದೆ ಪಾಕಿಸ್ತಾನ ಗಡಿಯನ್ನು ಅಕಸ್ಮಾತ್ ಪ್ರವೇಶಿಸಿದ್ದಂತ ಭಾರತೀಯ ಯೋಧ ಪಿ.ಕೆ ಸಾಹು ಅನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದರು. ಅವರನ್ನು ಬಿಡುಗಡೆಗೆ ಪಾಕಿಸ್ತಾನ ನಕಾರ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಗಡಿ ರೇಖೆ ದಾಟಿ ಪಾಕ್ ನೊಳಗೆ ಪ್ರವೇಶವನ್ನು ಭಾರತೀಯ ಯೋಧ ಪಿ.ಕೆ ಸಾಹು ಮಾಡಿದ್ದರು. ಈ ವೇಳೆ ಪಾಕ್ ಯೋಧರು ಅವರನ್ನು ವಶಕ್ಕೆ ಪೆಡದಿದ್ದರು. ಪಾಕ್ ಪ್ರದೇಶದ ಹೊಲದಲ್ಲಿ ಕೆಲಸ ಮಾಡ್ತಿದ್ದಂತ ರೈತರೊಂದಿಗೆ ಗೊತ್ತಿಲ್ಲದೇ ಬಿಎಸ್ಎಫ್ ಯೋಧ ಸಾಹು ಪಾಕ್ ನೊಳಗೆ ಪ್ರವೇಶಿಸಿದ್ದರು. ಅವರನ್ನು ಬಂಧಿಸಿದ್ದಂತ ಪಾಕಿಸ್ತಾನ, ಯೋಧನ ಪೋಟೋಕೂಡ ಬಿಡುಗಡೆ ಮಾಡಿತ್ತು. ನಿನ್ನೆ ರೇಂಜರ್ ಗಳು ಬಾರದ ಕಾರಣ ನಿನ್ನೆ ಧ್ವಜ ಸಭೆ ನಡೆದಿರಲಿಲ್ಲ. ಇದೀಗ ಅವರನ್ನು ಬಿಡುಗಡೆಗೆ ಪಾಕ್ ನಿರಾಕರಿಸಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಅವರನ್ನು ಮರಳಿ ಕರೆತರುವಂತೆ ಕುಟುಂಬಸ್ಥರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Read More