Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಲಾಗುವುದು. ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಜವಾಬ್ದಾರಿಯುತ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಭಿವೃದ್ಧಿಯಲ್ಲಿ ತಾರತಮ್ಯ ಹೋಗಲಾಡಿಸುವ ಮಹತ್ವಾಕಾಂಕ್ಷೆಯೊಂದಿಗೆ ಸಂವಿಧಾನದ 371 (ಜೆ) ಅನುಚ್ಚೇದಕ್ಕೆ ತಿದ್ದುಪಡಿ ತಂದು ಕಲ್ಪಿಸಲಾಗಿರುವ ಸಂವಿಧಾನಾತ್ಮಕ ಹಕ್ಕು ಮತ್ತು ಸೌಕರ್ಯಗಳ ಜಾರಿಗೆ ಅಧಿಕಾರಿಗಳು ಅನಾಸಕ್ತಿ ತೋರುತ್ತಿರುವುದನ್ನು ಗಮನಿಸಲಾಗುತ್ತಿದೆ.…
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್ ಪುನರ್ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಶ್ರೀ ಬೈರತಿ ಸುರೇಶ ಅವರು ಸೂಚಿಸಿದರು. ಮೈಸೂರು ಸುತ್ತ ಮುತ್ತಲಿನ 20 ರಿಂದ 30 ಹಳ್ಳಿಗಳನ್ನು ಬೃಹತ್…
ಬೆಂಗಳೂರು : ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಕ್ಕಳಲ್ಲಿ ಕ್ಯಾನ್ಸರ್ ಆತಂಕಕಾರಿ ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ ಆತಂಕಕಾರಿ ವಿಷಯ. ಇದರ ಬಗ್ಗೆ ತಾಲ್ಲೂಕು ಹಾಗೂ…
ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಪರಿಷತ್ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು. ದುರ್ಬಳಕೆ ತಡೆಗಟ್ಟಲು ಕ್ರಮ ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು.…
ನವದೆಹಲಿ: ಪವಿತ್ರ ರಂಜಾನ್ ತಿಂಗಳಲ್ಲಿ ಗುಲ್ಮಾರ್ಗ್ನ ಸ್ಕೀ ರೆಸಾರ್ಟ್ನಲ್ಲಿ ಆಯೋಜಿಸಲಾದ ಫ್ಯಾಷನ್ ಶೋಗೆ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 24 ಗಂಟೆಗಳಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ನಡೆಸಲಾದ ಈ ಫ್ಯಾಷನ್ ಶೋ ಅನ್ನು ಧಾರ್ಮಿಕ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ. ಅವರು ಇದನ್ನು “ಅಶ್ಲೀಲ” ಮತ್ತು ಕಣಿವೆಯ ಸಾಂಸ್ಕೃತಿಕ ಮತ್ತು ಧಾರ್ಮಿಕ ನೀತಿಗಳಿಗೆ ವಿರುದ್ಧವಾಗಿದೆ ಎಂದು ಬಣ್ಣಿಸಿದ್ದಾರೆ. ಕಾಶ್ಮೀರದ ಉನ್ನತ ಧರ್ಮಗುರು ಮಿರ್ವೈಜ್ ಉಮರ್ ಫಾರೂಕ್ ಈ ಘಟನೆಯನ್ನು ತೀವ್ರವಾಗಿ ಟೀಕಿಸಿದ ನಂತರ, “ಪ್ರವಾಸೋದ್ಯಮ ಪ್ರಚಾರದ ಹೆಸರಿನಲ್ಲಿ ಅಶ್ಲೀಲತೆಯನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದ ನಂತರ ವಿವಾದವು ವೇಗವನ್ನು ಪಡೆದುಕೊಂಡಿತು. “ಅತಿರೇಕ! ಪವಿತ್ರ ರಂಜಾನ್ ತಿಂಗಳಲ್ಲಿ ಗುಲ್ಮಾರ್ಗ್ನಲ್ಲಿ ಅಶ್ಲೀಲ ಫ್ಯಾಷನ್ ಶೋ ಆಯೋಜಿಸಲಾಗಿದೆ. ಅದರ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗಿದ್ದು, ಜನರಲ್ಲಿ ಆಘಾತ ಮತ್ತು ಕೋಪವನ್ನು ಉಂಟುಮಾಡಿದೆ” ಎಂದು ಮಿರ್ವೈಜ್ ಎಕ್ಸ್ನಲ್ಲಿ ಬರೆದಿದ್ದಾರೆ. “ಸೂಫಿ,…
ಬೆಂಗಳೂರು: ಚಿತ್ರನಟಿ ರನ್ಯಾರಾವ್ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂಬುದಾಗಿ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ ಟಿ ಬಿ ಜಯಚಂದ್ರ ಅವರು ಮಾತನಾಡಿದರು. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾರಾವ್ ಅವರು ನಿರ್ದೇಶಕಿ ಆಗಿರುವ ಕ್ವಿರೋಡ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಕೆಐಎಡಿಬಿ ವತಿಯಿಂದ 2023ರಲ್ಲಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಆದರೆ ರನ್ಯಾ ರಾವ್ ಅವರು ಕೆಐಎಡಿಬಿ ಜಮೀನಿನ ಖರೀದಿಗೆ ಹಣ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರ ಕಂಪನಿಗೆ ಕೆಐಎಡಿಬಿ ಜಮೀನನ್ನು ನೀಡಿಲ್ಲ ಎಂದು ಟಿಬಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. 2023 ಜನವರಿಯಲ್ಲಿ 12 ಎಕರೆ ಜಮೀನನ್ನು ರನ್ಯಾ ರಾವ್ ಅವರ ಕಂಪನಿಗೆ ಮಂಜೂರು ಮಾಡಲಾಗಿತ್ತು. 2023 ಮೇ ತಿಂಗಳಲ್ಲಿ ತಾವು ಶಾಸಕರಾದ ನಂತರ ಸ್ಥಳೀಯರಿಗೆ ಕೆಐಎಡಿಬಿ ಜಮೀನು ನೀಡಬೇಕೆಂದು ನಿರ್ಧಾರ ಕೈಗೊಂಡಿರುವುದರಿಂದ ರನ್ಯಾ…
ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಖ್, ಸ್ವಿಮಿಂಗ್ ಫೂಲ್ನ ಸುತ್ತಮುತ್ ಮಹಿಳಾ ಪಾಲಿಟೆಕ್ನಿಕ್, ರಾಮಕೃಷ್ಣ ಐಟಿಐ ಕಾಲೇಜ್, ಸ್ನೇಹ ಅಪಾರ್ಟ್ಮೆಂಟ್, ಚಂದನ ಪಾರ್ಕ್, ಗಾಡಿಕೊಪ್ಪ ಜ್ಞಾನಗಂಗಾ ಶಾಲೆ, ಕಾಳಿದಾಸ ಬಡಾವಣೆ, ನಂಜಪ್ಪ ಲೈಫ್ ಕೇರ್, ಸಂಭ್ರಮ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಘ-ಸಂಸ್ಥೆಗಳ ನೋಂದಣಿ ನವೀಕರಿಸಲು ಸೂಚನೆ ಶಿವಮೊಗ್ಗ ಜಿಲ್ಲೆಯ ಸಹಕಾರ ಇಲಾಖೆಯು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ-1960 ಕಲಂ 13 ರಂತೆ ನೋಂದಣಿಯಾದ ಪ್ರತಿಯೊಂದು ಸಂಘ-ಸಂಸ್ಥೆಗಳು ಪ್ರತಿವರ್ಷ ನವೀಕರಣಗೊಳಿಸಿಕೊಳ್ಳುವುದು ಕಡ್ಡಾಯ. ಅನೇಕ ಸಂಘ-ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ ಇರುವುದರಿಂದ ಇಂತಹ ಸಂಘ-ಸಂಸ್ಥೆಗಳ ಹಿತದೃಷ್ಠಿಯಿಂದ ಕೂಡಲೇ ಪ್ರತಿ ವರ್ಷಕ್ಕೆ ರೂ. 3,000/-ಗಳ ದಂಡ ಪಾವತಿಸಿ ನವೀಕರಿಸಿಕೊಳ್ಳುವುದು. ಇಂತಹ ಸಂಘ ಸಂಸ್ಥೆಗಳು…
ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: I. ಮೈಸೂರು-ದಾನಾಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲು (06211/06212) ಸಂಚಾರ: ರೈಲು ಸಂಖ್ಯೆ 06211 ಮೈಸೂರು-ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 11 ರಂದು ಬೆಳಿಗ್ಗೆ 10:05ಕ್ಕೆ ಮೈಸೂರಿನಿಂದ ಹೊರಟು, ಮಾರ್ಚ್ 13 ರಂದು ಸಂಜೆ 5:00 ಗಂಟೆಗೆ ದಾನಾಪುರ ತಲುಪಲಿದೆ. ಇದೇ ರೈಲು (06212), ಮಾರ್ಚ್ 16 ರಂದು ಬೆಳಗಿನ ಜಾವ 01:05 ಕ್ಕೆ ದಾನಾಪುರದಿಂದ ಹೊರಟು, ಮಾರ್ಚ್ 18 ರಂದು ಬೆಳಿಗ್ಗೆ 03:40 ಕ್ಕೆ ಮೈಸೂರಿಗೆ ಆಗಮಿಸಲಿದೆ. ಮಾರ್ಗದಲ್ಲಿ, ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ದಾವಣಗೆರೆ, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ,…
ನವದೆಹಲಿ: ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಪ್ರಸ್ತುತ ಸ್ಥಗಿತವನ್ನು ಎದುರಿಸುತ್ತಿದೆ. ಏಕೆಂದರೆ ಪ್ರಪಂಚದಾದ್ಯಂತದ ಬಳಕೆದಾರರು ಅಪ್ಲಿಕೇಶನ್ ಮತ್ತು ವೆಬ್ಸೈಟ್ ಪ್ರತಿಕ್ರಿಯಿಸುತ್ತಿಲ್ಲ ಎಂಬ ದೂರುಗಳನ್ನು ವರದಿ ಮಾಡುತ್ತಿದ್ದಾರೆ. ಹಲವಾರು ಬಳಕೆದಾರರು ತಮ್ಮ ಎಕ್ಸ್ ಫೀಡ್ ಅನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಪತ್ತೆಹಚ್ಚುವ ಡೌನ್ಡೆಟೆಕ್ಟರ್ ಪ್ರಕಾರ, ಅನೇಕ ಬಳಕೆದಾರರು ಸ್ಥಗಿತವನ್ನು ವರದಿ ಮಾಡಿದ್ದಾರೆ. ಡೌನ್ ಡಿಟೆಕ್ಟರ್ನಲ್ಲಿನ ಮಾಹಿತಿಯ ಪ್ರಕಾರ, ಮೈಕ್ರೋಬ್ಲಾಗಿಂಗ್ ಸೈಟ್ ಮಧ್ಯಾಹ್ನ 3 ಗಂಟೆ ಸುಮಾರಿಗೆ 1,000 ಕ್ಕೂ ಹೆಚ್ಚು ಜನರಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಎಕ್ಸ್ ಸ್ಥಗಿತವನ್ನು ಅನುಭವಿಸಿದಾಗಿನಿಂದ, ಹಲವಾರು ಬಳಕೆದಾರರು ಇದನ್ನು ದೃಢೀಕರಿಸಲು ಫೇಸ್ಬುಕ್ ಮತ್ತು ರೆಡ್ಡಿಟ್ನಂತಹ ಇತರ ಪ್ಲಾಟ್ಫಾರ್ಮ್ಗಳನ್ನು ತಲುಪಿದ್ದಾರೆ.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಪಕರಣ ಕೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು ರನ್ಯಾರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದ್ದು ಇದೀಗ ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇಂತಹ ಆರೋಪಿಯನ್ನು ಮಾರ್ಚ್.15ರವರೆಗೆ ಡಿ ಆರ್ ಐ ಕಸ್ಟಡಿಗೆ ನೀಡಿ, ಕೋರ್ಟ್ ಆದೇಶಿಸಿದೆ. ಹೌದು ವಿಚಾರಣೆ ನಡೆಸಿದ ಬಳಿಕ ಡಿ ಆರ್ ಐ ಅಧಿಕಾರಿಗಳು ಉದ್ಯಮಿಯ ಪುತ್ರನನ್ನು ಅರೆಸ್ಟ್ ಮಾಡಿದ್ದಾರೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ಇದೀಗ ಡಿ ಆರ್ ಐ ಅಧಿಕಾರಿಗಳಿಂದ ಉದ್ಯಮಿಯ ಪುತ್ರ ಬಂಧನವಾಗಿದೆ. ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಲಾಗಿದೆ. ಉದಿನಿ ಪುತ್ರರನ್ನು ಅರೆಸ್ಟ್ ಮಾಡಿರುವ ಗಡಿಯಾರ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉದ್ಯಮಿ ಪುತ್ರ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದಾರೆ. ಹೋಟೆಲ್ ಮಾಲೀಕನ ತಮ್ಮನ…














