Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 55 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಆನೇಕಲ್ ಪೊಲೀಸ್ ಠಾಣೆಯ ಪಿಎಸ್ಐ ಪ್ರದೀವ್ ಕುಮಾರ್ ಅವರನ್ನು ರಾಮನಗರ ಜಿಲ್ಲೆಯ ಕೋಡಿಹಳ್ಳಿ ಪೊಲೀಸ್ ಠಾಣೆಯ ಖಾಲಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬನ್ನೇರುಘಟ್ಟ ಠಾಣೆಯ ಸಿದ್ದನಗೌಡ ಜಲಪೂರ ಅವರನ್ನು ಆನೇಕಲ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಜಿಗಣಿ ಠಾಣೆಯ ಶಭಾನಾ ಭಾನು ಯಾಸೀನ್ ಮಾಕಂದಾರ್ ಅವರನ್ನು ಸರ್ಜಾಪುರ ಠಾಣೆಗೆ, ಸರ್ಜಾಪುರ ಠಾಣೆಯ ದುಂಡಪ್ಪ ಬಾರ್ಕಿ ಅವರನ್ನು ಮಾದನಾಯಕನಹಳ್ಳಿ ಠಾಣೆಗೆ, ಸೂರ್ಯನಗರ ಠಾಣೆಯ ಬಸವರಾಜು ಸವಟಗಿ ಅವರನ್ನು ತುಮಕೂರಿನ ನೊಣವಿನಕೆರೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಎಂ ಗಂಗಪ್ಪ ಅವರನ್ನು ಬೆಂಗಳೂರಿನ ನಂದಗುಡಿ ಠಾಣೆಗೆ, ನಂದಗುಡಿ ಠಾಣೆಯ ವಿ ಸುಬ್ರಮಣಿ ಅವರನ್ನು ಹೊಸಕೋಟೆ ಸಂಚಾರ ಪೊಲೀಸ್ ಠಾಣೆಗೆ ವರ್ಗಾವರ್ಗಿ ಮಾಡಲಾಗಿದೆ.…

Read More

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ದೇವಾಲಯಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಹಾಗೂ ಆದಾಯದಲ್ಲೂ ಏರಿಕೆಯಾಗಿದೆ. ಕಳೆದ ವರ್ಷಕ್ಕಿತಂ ಈ ವರ್ಷ 3 ಕೋಟಿ ಹೆಚ್ಚಳವಾಗಿದೆ. ದಕ್ಷಿಣ ಭಾರತಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದ ವಾರ್ಷಿಕ ಆದಾಯವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2024-25ನೇ ಸಾಲಿನಲ್ಲಿ 71 ಕೋಟಿ ರೂ. ದಾಟಿದೆ. ಇದು ಕಳೆದ ವರ್ಷಕ್ಕಿಂತ 3 ಕೋಟಿ ರೂ. ಹೆಚ್ಚು. ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು ಹಾಗೂ ಚಿನ್ನಾಭರಣ, ಚಂಡಿಕಾ ಹೋಮ ಸೇರಿ ವಿವಿಧ ಪೂಜೆಗಳಿಂದ ಬರುವ ಆದಾಯ, ನಿತ್ಯ ಪೂಜೆ, ಆನ್‌ಲೈನ್ ಪೂಜೆಗಳ ಆದಾಯವನ್ನು ಇದು ಒಳಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಹೊರತುಪಡಿಸಿದರೆ ಕೊಲ್ಲೂರು ರಾಜ್ಯದಲ್ಲೇ ಅತಿ ಹೆಚ್ಚು ಆದಾಯವಿರುವ ಕ್ಷೇತ್ರವಾಗಿದೆ. https://twitter.com/KarnatakaVarthe/status/1908515915450507394

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ ಎನ್ನುವಂತೆ ನೌಕರರು ತಮ್ಮ ಸಂಬಂಳದ ಖಾತೆಗಳನ್ನು ಹೆಚ್ ಆರ್ ಎಂ ಎಸ್ ನಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ಸಂಬಳ ಪ್ಯಾಕೇಜುಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೂ ಕಡ್ಡಾಯಗೊಳಿಸಲಾಗಿದೆ ಎಂದಿದೆ. ವಿವಿಧ ಬ್ಯಾಂಕುಗಳು ಒದಗಿಸುವ ಸಂಬಂಳ ಪ್ಯಾಕೇಜುಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ ಕಡ್ಡಾಯಗೊಳಿಸಲಾಗಿದೆ. ಬ್ಯಾಂಕುಗಳು, ಅಂಚೆ ಕಚೇರಿಗಳು ನೀಡುವ ಪಿಎಂ ಜೆ ಜೆ ಬಿ ವೈ ಮತ್ತು ಪಿಎಂಎಸ್ ಬಿವೈ ಯೋಜನೆಗಳ ಅಡಿಯಲ್ಲಿ ಸ್ವಯಂ ಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿ, ನೌಕರರಿಗೆ ಆದೇಶಿಸುವುದು ಅಂತ ತಿಳಿಸಿದೆ. ಬ್ಯಾಂಕುಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂ ಪ್ರೇರಿತ ಆಧಾರದ ಮೇಲೆ…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…

Read More

ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1908488820259213730 ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.…

Read More

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಏಪ್ರಿಲ್.14, 2025ರಂದು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.ದ ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ DOT: 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಒಂದು ವೇಳೆ ಇಂತಹ ಘಟನೆಗಳು ನಡೆದರೇ ಅಂತಹ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳೋದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ ಎಂದಿದೆ. ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ ಎಂಬುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದು ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ ರೂಪಿಸುವ ಬಗ್ಗೆ ಕೇಂದ್ರ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖಂಡರ ಜತೆ ಮಹತ್ವದ ಮಾತುಕತೆ ನಡೆಸಿದರು. ನಗರದ ತಮ್ಮ ನಿವಾಸದಲ್ಲಿ ಆಹ್ವಾನಿತ ಮುಖಂಡರ ಜತೆ ಸಭೆ ನಡೆಸಿದ ಸಚಿವರು; ಕ್ರಿಯಾಶೀಲವಲ್ಲದ ಜಿಲ್ಲಾಧ್ಯಕ್ಷರ ಬದಲಾವಣೆ, ಖಾಲಿ ಇರುವ ಜಿಲ್ಲಾಧ್ಯಕ್ಷರ ಸ್ಥಾನಗಳ ಭರ್ತಿ, ಸದಸ್ಯತ್ವ ನೋಂದಣಿಯ ಪ್ರಗತಿ ಬಗ್ಗೆಯೂ ಮುಖಂಡರ ಜತೆ ಮಹತ್ವದ ಚರ್ಚೆ ನಡೆಸಿದರು. ಅಲ್ಲದೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ರಾಜ್ಯವ್ಯಾಪಿ ಹೋರಾಟಗಳನ್ನು ಹಮ್ಮಿಕೊಳ್ಳುವಂತೆ ಸಚಿವರು ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿದ್ಯುತ್, ನೀರು, ಬಸ್ ಪ್ರಯಾಣ ದರ, ಹಾಲು, ಮೊಸರು, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಜನರ ಪರವಾಗಿ ಪಕ್ಷ ಹೋರಾಟಗಳನ್ನು ನಡೆಸಬೇಕು. ಜನರ ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಇದನ್ನು ಯಾರೂ…

Read More

ಮೈಸೂರು: ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಮೈಸೂರು – ದರ್ಬಂಗಾ ನಡುವೆ 10 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸೇವೆಗಳ ವಿವರಗಳು ಹೀಗಿವೆ: ರೈಲು ಸಂಖ್ಯೆ 06211/06212 ಮೈಸೂರು – ದರ್ಬಂಗಾ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ (ಪ್ರತಿ ದಿಕ್ಕಿನಲ್ಲಿ 10 ಟ್ರಿಪ್‌ಗಳು): ರೈಲು ಸಂಖ್ಯೆ 06211 ಏಪ್ರಿಲ್ 8 ರಿಂದ ಜೂನ್ 10, 2025 ರವರೆಗೆ ಪ್ರತಿ ಮಂಗಳವಾರ ಮೈಸೂರಿನಿಂದ ರಾತ್ರಿ 20:30 ಕ್ಕೆ ಹೊರಟು ಶುಕ್ರವಾರ ರಾತ್ರಿ 10:00 ಗಂಟೆಗೆ ಧರ್ಬಂಗಾ ತಲುಪಲಿದೆ. ತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06212 ಏಪ್ರಿಲ್ 12 ರಿಂದ ಜೂನ್ 14, 2025 ರವರೆಗೆ ಪ್ರತಿ ಶನಿವಾರ ಮಧ್ಯಾಹ್ನ 15:45 ಕ್ಕೆ ಧರ್ಬಂಗಾದಿಂದ ಹೊರಟು ಮಂಗಳವಾರ ಮಧ್ಯಾಹ್ನ 3:00 ಕ್ಕೆ ಮೈಸೂರಿಗೆ ಆಗಮಿಸಲಿದೆ. ಮಾರ್ಗದಲ್ಲಿ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ದಾವಣಗೆರೆ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್…

Read More

ನವದೆಹಲಿ: ಲಾಜಿಸ್ಟಿಕ್ಸ್ ಸೇವೆಗಳ ಪೂರೈಕೆದಾರ ಡೆಲ್ಲಿವರಿ ಲಿಮಿಟೆಡ್ ಶನಿವಾರ (ಏಪ್ರಿಲ್ 5) ತನ್ನ ವ್ಯವಹಾರವನ್ನು ವಿಸ್ತರಿಸಲು ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್ ಅನ್ನು ಸುಮಾರು 1,400 ಕೋಟಿ ರೂ. ನಗದು ಪರಿಗಣನೆಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಘೋಷಿಸಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ಕಂಪನಿಯು ತನ್ನ ಷೇರುದಾರರಿಂದ ಸುಮಾರು 1,400 ಕೋಟಿ ರೂ. ನಗದು ಪರಿಗಣನೆಗೆ ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್‌ನಲ್ಲಿ ನಿಯಂತ್ರಣ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಣಾಯಕ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಹೇಳಿದೆ. ಕಂಪನಿಯ ಮಂಡಳಿಯು “ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್‌ನ ನೀಡಲಾದ ಮತ್ತು ಪಾವತಿಸಿದ ಷೇರು ಬಂಡವಾಳದ ಕನಿಷ್ಠ 99.4 ಪ್ರತಿಶತಕ್ಕೆ ಸಮಾನವಾದ ಷೇರುಗಳನ್ನು ಸಂಪೂರ್ಣವಾಗಿ ದುರ್ಬಲಗೊಳಿಸಿದ ಆಧಾರದ ಮೇಲೆ, 1,407 ಕೋಟಿ ರೂ. ಮೀರದ ಖರೀದಿ ಪರಿಗಣನೆಗೆ ಸ್ವಾಧೀನಪಡಿಸಿಕೊಳ್ಳಲು” ಅನುಮೋದಿಸಿದೆ. ಕಂಪನಿ, ಇಕಾಮ್ ಎಕ್ಸ್‌ಪ್ರೆಸ್ ಮತ್ತು ಅವರ ಷೇರುದಾರರ ನಡುವೆ ಷೇರು ಖರೀದಿ ಒಪ್ಪಂದವನ್ನು ಕಾರ್ಯಗತಗೊಳಿಸಲು ಮತ್ತು ಇತರ ಅಗತ್ಯ ದಾಖಲೆಗಳನ್ನು ಕಾರ್ಯಗತಗೊಳಿಸಲು ಮಂಡಳಿಯು ಅನುಮೋದನೆ ನೀಡಿದೆ. ಮುಂದಿನ ಆರು ತಿಂಗಳೊಳಗೆ ಒಪ್ಪಂದ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಗುರುಗ್ರಾಮ್…

Read More