Author: kannadanewsnow09

ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು. ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ.…

Read More

ಬೆಂಗಳೂರು: 50 ಕೋಟಿ ರೂಪಾಯಿಗೆ ವಿಶ್ವದ ಅತೀ ದುಬಾರಿ ನಾಯಿ ಖರೀದಿಸಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಂತ ಸತೀಶ್ ಎಂಬುವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಎಂಬುವರು 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವಂತ ನಾಯಿಯನ್ನು ಖರೀದಿಸಿದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಮಾಹಿತಿ ಆಧರಿಸಿ ಇಂದು ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಂತ ಇಡಿ ಅಧಿಕಾರಿಗಳು, ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ವೇಳೆಯಲ್ಲಿ ಸತೀಶ್ ಖರೀದಿಸಿದಂತ ನಾಯಿ 50 ಕೋಟಿ ಹಣದ್ದಲ್ಲ ಎಂಬ ಸತ್ಯ ಬಯಲಾಗಿದೆ. ಅಂದಹಾಗೆ ಸತೀಶ್ ಕಾಡು ತೋಳ ಮತ್ತು ಕಕೇಶಿಯನ್ ಶೆಫರ್ಡ್ ತಳಿಯ ಮಿಶ್ರಣವಾಗಿರುವಂತ ತೋಳನಾಯಿ ಎಂಬುದಾಗಿ ಕರೆಯುವಂತ ನಾಯಿಯನ್ನು ಖರೀದಿಸಿದ್ದಾಗಿ ಹೇಳಿಕೊಂಡಿದ್ದರು. ಇದು ವಿಶ್ವದಲ್ಲೇ ಅತೀ ದುಬಾರಿಯಾದಂತ ನಾಯಿಯಾಗಿದೆ. ಇದರ ಬೆಲೆ 50 ಕೋಟಿ ಅಂತ ತಿಳಿಸಿದ್ದರು. ಆದರೇ ಅಷ್ಟು…

Read More

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 06.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 05.00ರವರೆಗೆ ಇಂದಿರಾಗಾAಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌAಡ್, ಸೂಡಾ ಕಚೇರಿ,…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೊರೆತಿತ್ತು. ಈ ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ. ಈ ವೇಳೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದಂತ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದಂತ ನಾಲ್ಕೂವರೆ ಕೆಜಿ ಕಾಡುಹಂದಿ ಮಾಂಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಭಾಕರ್, ಗಣಪತಿ ಮತ್ತು ಅಣ್ಣಪ್ಪ ಎಂಬುವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಂದಹಾಗೇ ಈ ಕಾರ್ಯಾಚರಣೆಯನ್ನು ಸಾಗರ-ಸೊರಬ ತಾಲ್ಲೂಕು ಡಿಎಫ್ಓ ಮೋಹನ್ ಕುಮಾರ್ ಹಾಗೂ ಎಸಿಎಫ್ ಮಾರ್ಗದಲ್ಲಿ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಉಪ ವಲಯ ಅರಣ್ಯಾಧಿಕಾರಿ ಕಿರಣ್, ಸಿಬ್ಬಂದಿಗಳಾದಂತ ಸುರೇಶ್, ಬಸವರಾಜ್, ಸುನೀತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವರದಿ:…

Read More

ನವದೆಹಲಿ: ಸುಪ್ರೀಂ ಕೋರ್ಟ್ ಗುರುವಾರ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯಡಿ ಕೇಂದ್ರ ಸರ್ಕಾರ ನೇಮಕಾತಿಗಳನ್ನು ಮಾಡುವುದನ್ನು ಅಥವಾ ಮಂಡಳಿಗಳನ್ನು ರಚಿಸುವುದನ್ನು ಮುಂದಿನ ಆದೇಶದವರೆಗೆ ತಡೆಯುವ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರವು ಒಂದು ವಾರದೊಳಗೆ ತನ್ನ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ತಿಳಿಸಿದರು. ಈ ಅವಧಿಯಲ್ಲಿ ತಿದ್ದುಪಡಿ ಮಾಡಿದ ಕಾನೂನಿನಡಿಯಲ್ಲಿ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಅವರು ಭರವಸೆ ನೀಡಿದರು. ಇದನ್ನು ದಾಖಲಿಸಿಕೊಂಡು, ನೋಂದಾಯಿತ ಅಥವಾ ಅಧಿಸೂಚನೆಯ ಮೂಲಕ ಘೋಷಿಸಲಾದ ಅಥವಾ “ಬಳಕೆದಾರರಿಂದ ವಕ್ಫ್” ಅಡಿಯಲ್ಲಿ ಯಾವುದೇ ವಕ್ಫ್‌ಗಳನ್ನು ಡಿನೋಟಿಫೈ ಮಾಡಬಾರದು ಅಥವಾ ಯಾವುದೇ ಸಂಗ್ರಾಹಕರ ಅಧಿಕಾರ ವ್ಯಾಪ್ತಿಯನ್ನು ಬದಲಾಯಿಸಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಸಾಲಿಸಿಟರ್ ಜನರಲ್ ಮಧ್ಯಂತರ ಆದೇಶವನ್ನು ಅಂಗೀಕರಿಸುವ ಮೊದಲು ಅದರ…

Read More

ನವದೆಹಲಿ: ಮುಂದಿನ ವಿಚಾರಣೆಯವರೆಗೆ ‘ಬಳಕೆದಾರರಿಂದ ವಕ್ಫ್’ ಸೇರಿದಂತೆ ಅಸ್ತಿತ್ವದಲ್ಲಿರುವ ವಕ್ಫ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಕೇಂದ್ರವು ಏಳು ದಿನಗಳಲ್ಲಿ ಪ್ರತಿಕ್ರಿಯಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ದಾಖಲಿಸುತ್ತದೆ. ಸುಪ್ರೀಂ ಕೋರ್ಟ್ ಹೇಳುತ್ತದೆ, ಕೌನ್ಸಿಲ್ ಮತ್ತು ಮಂಡಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ಭರವಸೆ ನೀಡಿದರು. ಮುಂದಿನ ವಿಚಾರಣೆಯ ದಿನಾಂಕದವರೆಗೆ, ಈಗಾಗಲೇ ನೋಂದಾಯಿಸಲಾದ ಅಥವಾ ಅಧಿಸೂಚನೆಯ ಮೂಲಕ ಘೋಷಿಸಲಾದ ವಕ್ಫ್-ಬೈ-ಯೂಸರ್ ಸೇರಿದಂತೆ ವಕ್ಫ್ ಅನ್ನು ಡಿನೋಟಿಫೈ ಮಾಡಲಾಗುವುದಿಲ್ಲ ಅಥವಾ ಕಲೆಕ್ಟರ್ ಬದಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಭರವಸೆ ನೀಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ. ಏಳು ದಿನಗಳಲ್ಲಿ ಕೇಂದ್ರವು ಪ್ರತಿಕ್ರಿಯೆಯನ್ನು ಸಲ್ಲಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. https://twitter.com/ANI/status/1912791070632460570 ಅಂದಹಾಗೇ, 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ…

Read More

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ ದಾಖಲಾಗುತ್ತಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಸಹಯೋಗದೊಂದಿಗೆ ಏಪ್ರಿಲ್ 11 ರಿಂದ ಮೇ 2025ರ ಅಂತ್ಯದವರೆಗೆ ಬೇಸಿಗೆ ರಜೆಯಲ್ಲಿ ಎಸ್.ಎಸ್.ಎಲ್.ಸಿ “ತಯಾರಿ” ಪೂರ್ವ ಸಿದ್ದತೆ ಶೀರ್ಷಿಕೆಯಡಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳಿಗೆ ಉಚಿತ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಯೂಟೂಬ್ ಲೈವ್ www.you tube.com@sankalplearningsolutions ಮೂಲಕ ಭಾನುವಾರವೂ ಸೇರಿದಂತೆ ಪ್ರತಿ ದಿನ ಸಂಜೆ 6.30 ರಿಂದ 8.30ರ ವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ನೇರ ಪ್ರಸಾರದಲ್ಲಿ ತರಗತಿಗಳು ನಡೆಯಲಿದ್ದು ಬೆಂಗಳೂರು ದಕ್ಷಿಣ ಜಿಲ್ಲೆಯ 89 ಸರ್ಕಾರಿ ಪ್ರೌಢಶಾಲೆಗಳ 7998 ವಿದ್ಯಾರ್ಥಿಗಳು ಹಾಗೂ 134 ಅನುದಾನಿತ ಪ್ರೌಢಶಾಲೆಗಳ 9,123 ವಿದ್ಯಾರ್ಥಿಗಳು ಒಟ್ಟು 17,121 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪಡೆದುಕೊಳ್ಳಲು…

Read More

ಕೆಎನ್ಎನ್ ಸ್ಪೆಷಲ್ ಡೆಸ್ಕ್: ಎಸ್ ಎಸ್ ಎಲ್ ಸಿ ಮುಗಿತಾ ಇದೆ ಮುಂದೆ ಏನು ಓದಬೇಕು, ಎಲ್ಲಿ ಓದಬೇಕು, ಯಾವುದು ಓದಬೇಕು ಎಂದು ಸಾಕಷ್ಟು ಗೊಂದಲಗಳೊಂದಿಗೆ ನೀವು ಕರಿಯರ್ ಬಗ್ಗೆ ಆಲೋಚನೆ ಮಾಡುತ್ತಿದ್ದರೆ, ನಿಮಗೆ ಒಂದೇ ಸೂರಿನಡಿ ಸಿಗುವ ಸಾಕಷ್ಟು ಕೋರ್ಸ್ ಗಳ ಅವಕಾಶಗಳನ್ನು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ನೀಡುತ್ತಿದೆ. ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ, ತಾಂತ್ರಿಕ ಶಿಕ್ಷಣದ ಜೊತೆಗೆ ಕೈಗಾರಿಕಾ ಸವಾಲುಗಳಿಗೆ ಸಿದ್ಧವಾಗಿರುವ ಕೌಶಲ್ಯಪೂರ್ಣ ವೃತ್ತಿಪರರನ್ನು ರೂಪಿಸುವಲ್ಲಿ ಜಿಟಿಟಿಸಿ ನಿರ್ಣಾಯಕ ಪಾತ್ರವಹಿಸುತ್ತಿದೆ.  ಇದು ತಾಂತ್ರಿಕ ತರಬೇತಿಯಲ್ಲಿ ಶ್ರೇಷ್ಠತೆಯ ಸಂಕೇತವಾಗಿ ನಿಂತಿದೆ. ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವವನ್ನು ಒದಗಿಸುವಲ್ಲಿ‌ ಜಿಟಿಟಿಸಿ ಮುಂಚೂಣಿಯಲ್ಲಿದೆ. ಕರ್ನಾಟಕದಾದ್ಯಂತ ಒಟ್ಟು 33 ಸೆಂಟರ್ ಗಳಲ್ಲಿ ಅತ್ಯಾಧುನಿಕ ತಾಂತ್ರಿಕ ಶಿಕ್ಷಣದ ಜೊತೆ ಆರ್ಟಿಫಿಯಲ್ ಇಂಟಲಿಜೆನ್ಸ್ ಮತ್ತು ರೋಬಿಟಿಕ್ಸ್ ನಂತಹ ಹಲವು ಹೊಸ ತಂತ್ರಜ್ಞಾನವನ್ನು ಒಳಗೊಂಡ ಡಿಪ್ಲೊಮಾ ಕೋರ್ಸ್ ಗಳನ್ನು ಮಾಡುತ್ತಿದೆ. ಜಿಟಿಟಿಸಿ ಏನು? ಸರ್ಕಾರಿ ಉಪಕರಣಗಾರ ಮತ್ತು ತರಬೇತಿ‌ ಕೇಂದ್ರವು ಕರ್ನಾಟಕ ಸರ್ಕಾರ…

Read More

ಬೆಂಗಳೂರು: ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ ಅಂತ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಂತೂ ಅನುಮಾನ ನಿಜವಾಯಿತು! ರಾಜ್ಯ ಕಾಂಗ್ರೆಸ್ ಮಾಡಿದ್ದು ಜಾತಿ ಗಣತಿ! ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ! ಸಿದ್ಧರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ’ ಎಂದು ಹೊಸ ಪೀಪಿ ಊದುತ್ತಿದ್ದಾರೆ ಎಂದಿದ್ದಾರೆ. ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ? ಎಂದು ಪ್ರಶ್ನಿಸಿದ್ದಾರೆ. ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ…

Read More

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ದೇವಾಲಯಗಳಲ್ಲಿ ಒಂದು ಮಲೆ ಮಹದೇಶ್ವರ ಬೆಟ್ಟ. ಇಲ್ಲಿನ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಕಳೆದ 35 ದಿನಗಳಲ್ಲಿ ಬರೋಬ್ಬರಿ 3.26 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದಂತ ಕಾಣಿಕೆಯನ್ನು ಏಣಿಕೆ ಮಾಡಲಾಯಿತು. ಈ ಬಾರಿ 35 ದಿನಗಳಲ್ಲಿ 3.26 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆಯೂ ಸಂಗ್ರಹವಾಗಿದೆ. ಇನ್ನೂ 11 ವಿದೇಶಿ ನೋಟುಗಳು, 2000 ರೂ ಮುಖಬೆಲೆಯ 20 ನೋಟುಗಳು ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯನ್ನು ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆಸಲಾಯಿತು. https://kannadanewsnow.com/kannada/breaking-two-killed-two-others-seriously-injured-in-road-accident-in-dharwad/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More