Subscribe to Updates
Get the latest creative news from FooBar about art, design and business.
Author: kannadanewsnow09
ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ ಹಾಗಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಇಂತಹ ಕುಲದೇವರ ಆರಾಧನೆಯಿಂದ ನಾವು ಇತರ ದೇವತೆಗಳ ಕೃಪೆಯನ್ನೂ ಪಡೆಯಬಹುದು. ಕುಲದೇವತೆಯನ್ನು ಪೂಜಿಸದೆ ಅನ್ಯದೇವತೆಗಳನ್ನು ಪೂಜಿಸಿದರೂ ಪ್ರಯೋಜನವಾಗುವುದಿಲ್ಲ. ಅಂತಹ ಕುಲದೇವತೆಯನ್ನು ನಾವು ಯಾವುದೇ ರೀತಿಯಲ್ಲಿ…
ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಡಿಸಿಎಂ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಮುಖ್ಯಮಂತ್ರಿಗೆ ಧೈರ್ಯ ಎನ್ನುವುದು ಇದ್ದರೆ ತಕ್ಷಣವೇ ಅವರನ್ನು ಸಂಪುಟದಿಂದ ಆಚೆ ಹಾಕಬೇಕು ಎಂದು ಆಗ್ರಹಿಸಿದರು. ತನಗೆ ಪಿಆರ್ ಮಾಡುತ್ತಿರುವ ಕಂಪನಿಯೊಂದು ಬರೆದುಕೊಟ್ಟ ಸ್ಕ್ರಿಪ್ಟ್ ನಂತೆ ಅವರು ಬುಧವಾರ ಇಡೀ ದಿನದ ಡ್ರಾಮಾ ನಡೆಸಿದರು. ಇದು ಅಸೂಕ್ಷ್ಮತೆಯ ಪರಮಾವಧಿ. ವಿಮಾನ ನಿಲ್ದಾಣದಲ್ಲಿ, ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆ ವ್ಯಕ್ತಿ ವರ್ತಿಸಿದ ರೀತಿ ನೋಡಿದರೆ ಅವರಿಗೆ ಯಾವುದೇ ರೀತಿಯ ಮಾನವೀಯತೆಯ ಗುಣಗಳು ಇಲ್ಲ. ಸಾವಿನಲ್ಲಿಯೂ ಪ್ರಚಾರಕ್ಕೆ ಹಪಾಹಪಿಸಿದ ವ್ಯಕ್ತಿ ಎಂದು…
ಬೆಂಗಳೂರು: ಆರ್.ಸಿ.ಬಿ. ಗೆಲುವಿನ ಸಂಬಂಧ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಹನ್ನೊಂದು ಯುವ ಮಕ್ಕಳ ಸಾವಿಗೆ ಕಾರಣ ನೇರವಾಗಿ ರಾಜ್ಯ ಸರ್ಕಾರವೇ ಹೊರಬೇಕಾಗಿದೆ. ಮಾನ್ಯ ಮುಖ್ಯಮಂತ್ರಿಗಳು (ಸಿಎಂ) ಮತ್ತು ಮಾನ್ಯ ಉಪ ಮುಖ್ಯಮಂತ್ರಿಗಳು (ಡಿಸಿಎಂ) ನೇರ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ವಿಧಾನಸೌಧದ ಬಿಜೆಪಿ ಕಚೇರಿಯ ಪತ್ತಿಕಾಗೋಷ್ಠಿಯಲ್ಲಿ ಇಂದು ಅವರು ಮಾತನಾಡಿದರು. ಸಂಭ್ರಮಾಚರಣೆ ಮಾಡಬೇಕಾಗಿದ್ದದ್ದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯವರು, ಇವರು ಯಾಕೆ ಮಾಡಬೇಕಾಗಿತ್ತು ಎಂದು ಪ್ರಶ್ನಿಸಿದರು. ಇಂತಹ ದುರ್ಘಟನೆಯಲ್ಲಿ ಮಡಿದವರಿಗೆ ಸರ್ಕಾರ ಕೇವಲ 10 ಲಕ್ಷಗಳ ಪರಿಹಾರ ಘೋಷಣೆ ಮಾಡಿರುವುದು ಸರಿಯಲ್ಲ, ರೌಡಿಗಳು ಮತ್ತು ದೇಶದ್ರೋಹಿಗಳಿಗೆ 25 ಲಕ್ಷ ಕೊಡುತ್ತಾರೆ, ಅದೇ ರಾಜ್ಯ ಸರ್ಕಾರವೇ ಹೊಣೆಯಾಗಿರುವ ದುರ್ಘಟನೆಯಲ್ಲಿ ಮಡಿದವರಿಗೆ 10 ಲಕ್ಷ ಘೋಷಣೆ ಮಾಡಿರುವುದು ನಾಚಿಕೆಗೇಡಿನ ಸಂಗತಿ, ಜನರ ಪ್ರಾಣಕ್ಕೆ ಬೆಲೆಯಿಲ್ಲವೇ ಎಂದು ಸರ್ಕಾರದ ಕ್ರಮವನ್ನು ಖಂಡಿಸಿದರು. ಕ್ರಿಕೆಟ್ ಟೀಮ್ ನಲ್ಲಿ 11 ಜನ ಆಟ ಆಡುತ್ತಾರೆ ಹಾಗೆಯೇ ನಿನ್ನೆದಿನ ಕಾಲ್ತುಳಿತಕ್ಕೆ…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್, ಪದಾಧಿಕಾರಿಗಳಾದ ವೆಂಕಟೇಶ, ಎ ಬಿ.ಕುಮಾರ್, ಕಾ.ಪ್ರಕಾಶ್, ಹಿರಿಯೂರು ಟಿ.ಪ್ರಸನ್ನ ಇದ್ದರು.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್ ಹೋಗುತ್ತಿದೆ. ಹೈಕೋರ್ಟ್ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್ಗೆ ಸಲ್ಲಿಕೆಯಾಗಬೇಕು. ಈ ಎಲ್ಲ ಸಾವುಗಳಿಗೆ ನ್ಯಾಯ ನೀಡಬೇಕು. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಇದು ಕ್ರಿಕೆಟ್ ಅಸೋಸಿಯೇಶನ್ ಕಾರ್ಯಕ್ರಮ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಮರೆತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ನೋಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯನವರ ಕೈ ಕೆಳಗೆ ಕೆಲಸ ಮಾಡುವ, ಅವರಿಗೆ ವರದಿ…
ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕಿಕ್ತ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ…
ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗವು ರೈಲ್ವೆ ಮಂಡಳಿಯ ನಿರ್ದೇಶನದಂತೆ ಅಂತಾರಾಷ್ಟ್ರೀಯ ಮಟ್ಟದ ಲೆವಲ್ ಕ್ರಾಸಿಂಗ್ ಜಾಗೃತಿದಿನ (ILCAD) ಅನ್ನು 2025ರ ಜೂನ್ 5 ರಂದು ಆಚರಿಸಿತು. ಈ ಕಾರ್ಯಕ್ರಮದ ಉದ್ದೇಶ, ಮಾನವ ಸಹಿತ ಕ್ರಾಸಿಂಗ್ಗಳಲ್ಲಿ ರಸ್ತೆ ಬಳಕೆದಾರರಲ್ಲಿ ಜಾಗೃತಿ ಮೂಡಿಸಿ ಅಪಘಾತಗಳನ್ನು ತಡೆಯುವುದು. ಈ ಬಗ್ಗೆ ಮಾಹಿತಿ ನೀಡಿರುವಂತ ಮೈಸೂರು ನೈರುತ್ಯ ರೈಲ್ವೆ ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಅವರು, ಮೈಸೂರು ನಗರದ ಕೋಕ್ಕರಹಳ್ಳಿ ಲೆವಲ್ ಕ್ರಾಸಿಂಗ್ ಗೇಟ್ ಸಂಖ್ಯೆ 01 ರಲ್ಲಿ ಬೆಳಿಗ್ಗೆ 09:30 ಗಂಟೆಗೆ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದಿದ್ದಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ (DRM) ಮುದಿತ್ ಮಿತ್ತಲ್, ಇತರ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಜಾಗೃತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ತಂಡವೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರೊಂದಿಗೆ ಸಂವಾದ…
ಬೆಂಗಳೂರು : ದೊಡ್ಡಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ ಆಗಿರಲಿಲ್ಲ. ಮೊದಲನೇಯದಾಗಿ ಸಾವನ್ನಪ್ಪಿರುವ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಸಿಎಂ ಅವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜೆಸ್ಟ್ರೆಟಿಯಲ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗು ಹೇಳಲು ಸಾಧ್ಯವಿಲ್ಲ ಎಂದರು ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಚಾಲಕ ಕಂ ನಿರ್ವಾಹಕ ಹುದ್ದೆಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಕೆ ಎಸ್ ಆರ್ ಟಿ ಸಿಯಿಂದ ಕರೆಯಲಾಗಿದ್ದಂತ ಚಾಲಕ ಕಂ ನಿರ್ವಾಹಕ ಹುದ್ದೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಿಗಮದ ಕೇಂದ್ರ ಕಚೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್ ಸೈಟ್ www.ksrtcjobs.karnataka.gov.in ನಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ಚಾಲಕ ಕಂ ನಿರ್ವಾಹಕರ ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಕೊನೆಯ ಅಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದಂತೆ ವಿವರವನ್ನು ಸಂಭವನೀಯ ಆಯ್ಕೆಪಟ್ಟಿಯಲ್ಲಿ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಇನ್ನೂ ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ದಿನಾಂಕ: 11-06-2025 ರ ಸಂಜೆ 5.30 ರ ಒಳಗಾಗಿ ಕರಾರಸಾ ನಿಗಮ, ಕೇಂದ್ರ ಕಛೇರಿ, ನೇಮಕಾತಿ ಶಾಖೆ, ಶಾಂತಿನಗರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ dycpmrct@ksrtc.org ಮುಖಾಂತರ…
ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಅದೇ ಇಂದು ನಗರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸುವ ಮೂಲಕ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನಮ್ಮ ಕ್ಲಿನಿಕ್ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಸಾಗರದ ಬಿಹೆಚ್ ರಸ್ತೆಯ ಟಿವಿಎಸ್ ಶೋ ರೂಂ ಹಿಂಭಾಗದಲ್ಲಿ ನಮ್ಮ ಕ್ಲಿನಿಕ್ ಸಾರ್ವಜನಿಕರ ಸೇವೆಗೆ ಶಾಸಕರು ಲೋಕಾರ್ಪಣೆಗೊಳಿಸಿದರು. ಈ ಬಳಿಕ ಮಾತನಾಡಿದಂತ ಅವರು ಸಾಗರದ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಸಾಗರ ತಾಲ್ಲೂಕಿನ ವಿವಿಧ ಊರುಗಳಿಂದ ಆಗಮಿಸುವವರಿಗೆ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ನಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಸಿಗುವಂತ ಕೆಲಸ ಮಾಡಲಾಗಿದೆ. ‘ನಮ್ಮ ಕ್ಲಿನಿಕ್’ಗಳಲ್ಲಿ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ…














