Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ: ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮೆಟ್ಟಿಲು ಹತ್ತಿದ ಬಡವರ ಜೀವಸಮಾಧಿಯಾಗುತ್ತದೆ. ಯಾರೂ ವಾಪಸ್ ಬರುವುದಿಲ್ಲ. ಶ್ರೀಮಂತರು ಈ ಬಡವರು ಇಟ್ಟ ಗಿರವಿ ವಸ್ತುಗಳನ್ನು ಹೊಡೆದುಕೊಳ್ಳುತ್ತಾರೆ ಎಂದು ವಿಶ್ಲೇಷಿಸಿದರು. ಬಾಬಾಸಾಹೇಬರು ಹೇಳಿದಂತೆ ಕಾಂಗ್ರೆಸ್ ಸುಡುವ ಮನೆಯೇ ಹೊರತು ಅದು ಭವಿಷ್ಯ ನೀಡುವ ಮನೆಯಲ್ಲ ಎಂದರು. ದಲಿತರ ಪರ ಇರುವ ಮತ್ತು ಅಂಬೇಡ್ಕರರಿಗೆ ಗೌರವ ಕೊಡುವ ಬಿಜೆಪಿ ಮತ್ತು ಮೋದಿಯವರನ್ನು ಸರ್ವರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಸಿದ್ದರಾಮಯ್ಯನವರು ಹಗರಣಗಳ ಮೂಲಕ ಕಾಗೆ ಥರ ಕಪ್ಪಾಗಿದ್ದಾರೆ. ಅಲ್ಲಿ ಕಪ್ಪು ಚುಕ್ಕಿ ತೋರಿಸಲು ಸಾಧ್ಯವೇ ಪ್ರಶ್ನಿಸಿದರು. ದಲಿತರಿಗೆ 42 ಸಾವಿರ ಕೊಡುವುದಾಗಿ ಬಜೆಟ್ನಲ್ಲಿ ಪ್ರಕಟಿಸುತ್ತಾರೆ. 14 ಸಾವಿರ ಕೋಟಿಯನ್ನು ಗ್ಯಾರಂಟಿಗಾಗಿ ಅದರಿಂದ ತೆಗೆಯುತ್ತಾರೆ. ದಲಿತರ ದುಡ್ಡು ದಲಿತರು ಕೊಟ್ಟ ಗ್ಯಾರಂಟಿ ಯಾವುದದು ಎಂದು ಕೇಳಿದರು. ದಲಿತರಿಗೆ…
ಬೆಂಗಳೂರು: ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತನಾರಾಯಣ್ ಅವರು ತಿಳಿಸಿದರು. ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಕೋರಿದ್ದಾಗಿ ತಿಳಿಸಿದರು. ಭ್ರಷ್ಟಾಚಾರ ತಡೆಗಾಗಿ ಈ ದೂರು ನೀಡಿದ್ದೇವೆ. ಯುದ್ಧ ಪ್ರಾರಂಭವಾಗಿದೆ ಎಂದು ಹೇಳಿದರು. ಸಚಿವ ಕೆ.ಜೆ.ಜಾರ್ಜ್ ಅವರು 9 ಸುಳ್ಳು ಹೇಳಿದ್ದಾರೆ. ಇದನ್ನು ಪತ್ರಿಕಾಗೋಷ್ಠಿಯಲ್ಲೂ ತಿಳಿಸಿದ್ದೇವೆ. ಬೇನಾಮಿ, ದುರ್ಬಳಕೆ ನಡೆದಿರುವುದು, ಗ್ರಾಹಕರಿಗೆ ಕಡ್ಡಾಯ ಮಾಡಲು ಅವಕಾಶ ಇಲ್ಲದಿದ್ದರೂ ಮಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ಎಂ.ಡಿ. ಮಹಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್, ಬಾಲಾಜಿ ಮತ್ತಿತರರ ವಿರುದ್ಧ ದೂರು ಕೊಟ್ಟಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿ ರಾಜಶ್ರೀ ಎಂಬ ಪ್ಲಂಬರ್…
ಬೆಂಗಳೂರು: ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು. ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು. 5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ…
ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಅಗುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ ಹತ್ಯೆ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ಧಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು. ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ. ಓಂಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಹೇಳಿದರು. ಮುತ್ತಪ್ಪ ರೈ ಪುತ್ರ…
ಪಾಟ್ನ: ಏಪ್ರಿಲ್ 17, ಗುರುವಾರ ಸಂಜೆ ಇಂಡಿಗೋ ವಿಮಾನ 6E-653 ರಲ್ಲಿದ್ದ ಪ್ರಯಾಣಿಕರು ಉದ್ವಿಗ್ನ ಕ್ಷಣವನ್ನು ಅನುಭವಿಸಿದರು, ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ವಿಧಾನಕ್ಕೆ ಪ್ರಬಲವಾದ ಲೇಸರ್ ಕಿರಣವು ಅಡ್ಡಿಪಡಿಸಿತು. ಕ್ಷಣಕಾಲ ಗಲಿಬಿಲಿಗೊಂಡ ಪೈಲೆಟ್, ಆ ಬಳಿಕ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡಿರುವುದಾಗಿ ತಿಳಿದು ಬಂದಿದೆ. ಪುಣೆಯಿಂದ ಆಗಮಿಸುತ್ತಿದ್ದ ವಿಮಾನವು ಇಳಿಯಲು ಸಿದ್ಧವಾಗುತ್ತಿದ್ದಾಗ ಸಂಜೆ 6:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಹತ್ತಿರದ ವಿವಾಹ ಸ್ಥಳದಿಂದ ಹೊರಹೊಮ್ಮುವ ಡಿಜೆ ಲೇಸರ್ ಬೆಳಕು ಕಾಕ್ಪಿಟ್ಗೆ ಬಡಿದು, ಪೈಲಟ್ನ ದೃಷ್ಟಿಯನ್ನು ತಾತ್ಕಾಲಿಕವಾಗಿ ದುರ್ಬಲಗೊಳಿಸಿತು ಮತ್ತು ವಿಮಾನದ ಸ್ಥಿರತೆಯನ್ನು ಅಡ್ಡಿಪಡಿಸಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಶ್ಲಾಘನೀಯ ಶಾಂತತೆಯನ್ನು ಪ್ರದರ್ಶಿಸಿದ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ನಂತರ, ವಿಮಾನವು ತನ್ನ ಮುಂದಿನ ನಿಗದಿತ ತಾಣವಾದ ಅಹಮದಾಬಾದ್ಗೆ ತೆರಳಿತು. ಘಟನೆಗೆ ಪ್ರತಿಕ್ರಿಯೆಯಾಗಿ, ವಿಮಾನ ನಿಲ್ದಾಣದ ಆವರಣದ ಬಳಿ ಲೇಸರ್ ಕಿರಣಗಳನ್ನು…
ಬೆಂಗಳೂರು: ರಾಜ್ಯದ ಜನರೇ ಬೆಚ್ಚಿ ಬೀಳುವಂತೆ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕಣ್ಣಿಗೆ ಖಾರದಪುಡಿ ಎರಚಿ, ಚಾಕುವಿನಿಂದ ಕೊಲೆ ಮಾಡಿರೋದಾಗಿ ಪೊಲೀಸರಿಗೆ ಸ್ಥಳ ಪರಿಶೀಲನೆ ವೇಳೆಯಲ್ಲಿ ಪತ್ತೆಯಾದಂತ ವಸ್ತುಗಳಿಂದ ದೃಢಪಟ್ಟಿದೆ. ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆ ಬಳಿಕ I Have Finished Monster ಎಂಬುದಾಗಿ ಮತ್ತೋರ್ವ ಮಾಜಿ ಡಿಜಿ ಮತ್ತು ಐಜಿಪಿ ಪತ್ನಿಗೆ ಕರೆ ಮಾಡಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್(68) ಅವರನ್ನು ಅವರ ಪತ್ನಿ ಪಲ್ಲವಿ ಎಂಬುವರೇ ಚಾಕುವಿನಿಂದ ಇರಿದು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಓಂ ಪ್ರಕಾಶ್ ಕೊಲೆ ಬಳಿಕ ವೀಡಿಯೋ ಕರೆಯನ್ನು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿ ಪತ್ನಿ ಪಲ್ಲವಿ ಮಾಡಿದ್ದಾರೆ. I Have Finished…
ಶಿವಮೊಗ್ಗ: ತಿರುಪತಿಯಿಂದ ಶಿವಮೊಗ್ಗಕ್ಕೆ ತೆರಳಬೇಕಿದ್ದಂತ ವಿಮಾನವೊಂದು ಹವಾಮಾನ ವೈಪರಿತ್ಯದಿಂದಾಗಿ ಬೆಳಗಾವಿಯಲ್ಲಿ ಲ್ಯಾಂಡ್ ಆಗಿದೆ. ಪ್ರಯಾಣಿಕರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರಿಂದ ಶಿವಮೊಗ್ಗಕ್ಕೆ ಬರೋದಕ್ಕೆ ಪರದಾಡುವಂತೆ ಆಗಿದೆ. ತಿರುಪತಿಯಿಂದ ಶಿವಮೊಗ್ಗಕ್ಕೆ ಸುಮಾರು 80 ಪ್ರಯಾಣಿಕರನ್ನು ಹೊತ್ತ ಸ್ಟಾರ್ ಏರ್ ಲೈನ್ಸ್ ವಿಮಾನ ಹೊರಟಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಗೆ ಹವಾಮಾನ ವೈಪರಿತ್ಯ ಅಡ್ಡಿಯಾಗಿತ್ತು. ಹೀಗಾಗಿ ಶಿವಮೊಗ್ಗದ ಬದಲು ಬೆಳಗಾವಿಯಲ್ಲಿ ಸ್ಟಾರ್ ಏರ್ ಲೈನ್ಸ್ ವಿಮಾನ ಲ್ಯಾಂಡ್ ಆಗಿದೆ. ಶಿವಮೊಗ್ಗ ಬದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿದ ನಂತ್ರ, ಅಲ್ಲಿಂದ ಶಿವಮೊಗ್ಗಕ್ಕೆ ತೆರಳೋದಕ್ಕೆ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಪ್ರಯಾಣಿಕರು ಸ್ಟಾರ್ ಏರ್ ಲೈನ್ಸ್ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೇ ಶಿವಮೊಗ್ಗಕ್ಕೆ ಬೆಳಗಾವಿಯಿಂದ ತೆರಳಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆಸುತ್ತಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/former-dg-and-igp-om-prakashs-wife-pallavi-arrested-in-murder-case/ https://kannadanewsnow.com/kannada/cm-siddaramaiah-announces-minimum-wages-for-all-pourakarmikas-minimum-wages-for-contract-employees/
ಬೆಳ್ತಂಗಡಿ: “ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು” ಎಂದರು. “ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ…
ಬೆಂಗಳೂರು: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆ ಬಳಿಕ I Have Finished Monster ಎಂಬುದಾಗಿ ಮತ್ತೋರ್ವ ಮಾಜಿ ಡಿಜಿ ಮತ್ತು ಐಜಿಪಿ ಪತ್ನಿಗೆ ಕರೆ ಮಾಡಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್(68) ಅವರನ್ನು ಅವರ ಪತ್ನಿ ಪಲ್ಲವಿ ಎಂಬುವರೇ ಚಾಕುವಿನಿಂದ ಇರಿದು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಓಂ ಪ್ರಕಾಶ್ ಕೊಲೆ ಬಳಿಕ ವೀಡಿಯೋ ಕರೆಯನ್ನು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿ ಪತ್ನಿ ಪಲ್ಲವಿ ಮಾಡಿದ್ದಾರೆ. I Have Finished Monster ಎಂಬುದಾಗಿ ವೀಡಿಯೋ ಕರೆಯಲ್ಲಿ ತಿಳಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ ಮೂರು ದಿನಗಳ ಹಿಂದೆ ಐಪಿಎಸ್ ಫ್ಯಾಮಿಲಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಪತ್ನಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದರು. ನನ್ನ ಪತಿ ನನಗೆ, ಮಗಳಿಗೆ ತುಂಬಾ…
ಬೆಂಗಳೂರು: ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ. ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು. ಓಂ ಪ್ರಕಾಶ್ ಅವರ ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪತ್ನಿ ಪಲ್ಲವಿ ಹತ್ಯೆಗೈದಿದ್ದಾರೆ. ಓಂ ಪ್ರಕಾಶ್ ಅವರ ಹೊಟ್ಟೆ ಭಾಗಕ್ಕೆ 4ರಿಂದ 5 ಬಾರಿ ಇರಿದಿದ್ದರಿಂದ ನೆಲ ಮಹಡಿಯಲ್ಲಿ ರಕ್ತದ ಮಡುವಿನಲ್ಲಿ 15 ರಿಂದ 20 ನಿಮಿಷ ರಕ್ತದ ಮಡುವಿನಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. I Have Finished Monster:…













