Author: kannadanewsnow09

ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. 2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕೆಪಿಎಸ್ಸಿ ತಿಳಿಸಿದೆ. https://twitter.com/secretarykpsc/status/1841119936242204705 ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ  ಈ ನಿಯಮ ಪಾಲನೆ ಕಡ್ಡಾಯ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎನ್ನುವಂತೆ ಇವರಿಗೆ ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಿಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್‌ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಶಾಲಾ ಮುಖ್ಯೋಪಾಧ್ಯಾಯರಿಗೆ ಮಹತ್ವದ ಸೂಚನೆಯನ್ನು ನೀಡಿದೆ.  ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್‌ನಲ್ಲಿ ದಾಖಲಿಸಬೇಕಾಗಿದೆ ಎಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆಗೆ ಒಳಪಡುವ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಶಾಲಾ ಶಿಕ್ಷಣ ಇಲಾಖೆಯ ಜಾಲತಾಣವಾದ schooleducation.karnataka.gov.in ನಲ್ಲಿ “…

Read More

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ. ಈ ಕುರಿತು ಪ್ರಕಟಣೆ ನೀಡಿದ್ದು,  ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ. ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ…

Read More

ಬೆಂಗಳೂರು: “ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2ರ ಇಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2ರ ಇಂದು ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿಯೂ ಇಂದು ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು  ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು. 500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ “ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ…

Read More

ಇರಾನ್: ಇಸ್ರೇಲ್ ಕಡೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಇರಾನ್ ಉಡಾವಣೆ ಮಾಡಿದೆ ಎಂಬುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಈ ಮೂಲಕ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ತೀವ್ರಗೊಂಡಿದೆ. ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ನ ನೆಲದ ಆಕ್ರಮಣದ ಹಿನ್ನೆಲೆಯಲ್ಲಿ ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯನ್ನು “ಸನ್ನಿಹಿತವಾಗಿ” ಪ್ರಾರಂಭಿಸಲು ಇರಾನ್ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳನ್ನು ಯುನೈಟೆಡ್ ಸ್ಟೇಟ್ಸ್ ನೋಡಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಎನ್ಬಿಸಿ ನ್ಯೂಸ್ಗೆ ತಿಳಿಸಿದ ಕೆಲವೇ ಗಂಟೆಗಳ ನಂತರ ಇಸ್ರೇಲ್ ರಕ್ಷಣಾ ಪಡೆಗಳ ಪ್ರಕಟಣೆ ಬಂದಿದೆ. ಇರಾನ್ ಇಸ್ರೇಲ್ ಮೇಲೆ ಯಾವುದೇ ನೇರ ದಾಳಿ ನಡೆಸಿದರೆ ಇರಾನ್ಗೆ ತೀವ್ರ ಪರಿಣಾಮ ಬೀರುತ್ತದೆ ಎಂದು ಶ್ವೇತಭವನದ ಅಧಿಕಾರಿ ಎಚ್ಚರಿಸಿದ್ದಾರೆ. “ಈ ದಾಳಿಯ ವಿರುದ್ಧ ಇಸ್ರೇಲ್ ಅನ್ನು ರಕ್ಷಿಸಲು ರಕ್ಷಣಾತ್ಮಕ ಸಿದ್ಧತೆಗಳನ್ನು ನಾವು ಸಕ್ರಿಯವಾಗಿ ಬೆಂಬಲಿಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದರು.

Read More

ದಕ್ಷಿಣ ಟೆಲ್ ಅವೀವ್ನ ಜಾಫಾದಲ್ಲಿ ಮಂಗಳವಾರ ಶಂಕಿತ “ಭಯೋತ್ಪಾದಕ” ಗುಂಡಿನ ದಾಳಿ ನಡೆದಿದೆ ಎಂದು ಇಸ್ರೇಲ್ ಪೊಲೀಸರು ವರದಿ ಮಾಡಿದ್ದಾರೆ. ಇದರ ಪರಿಣಾಮವಾಗಿ ಅನೇಕ ಸಾವುನೋವುಗಳು ಸಂಭವಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇಬ್ಬರೂ ಬಂದೂಕುಧಾರಿಗಳು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಇಸ್ರೇಲಿ ಮಾಧ್ಯಮಗಳ ಪ್ರಕಾರ, ಕನಿಷ್ಠ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ. ಲಘು ರೈಲು ನಿಲ್ದಾಣದ ಪಕ್ಕದ ಜೆರುಸಲೇಂ ಸ್ಟ್ರೀಟ್ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಇಸ್ರೇಲ್ನ ಎಂಡಿಎ ಆಂಬ್ಯುಲೆನ್ಸ್ ಸೇವೆಯು ಸಂಜೆ 7.01 ಕ್ಕೆ (ಭಾರತೀಯ ಕಾಲಮಾನ ರಾತ್ರಿ 9.31) ಗುಂಡಿನ ದಾಳಿಯಿಂದ ಗಾಯಗೊಂಡ ಜನರ ವರದಿಯನ್ನು ಸ್ವೀಕರಿಸಿದೆ ಎಂದು ಹೇಳಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೆಲವರು ಸೇರಿದಂತೆ ವಿವಿಧ ಮಟ್ಟದ ಗಾಯಗಳೊಂದಿಗೆ ಹಲವಾರು ಗಾಯಗೊಂಡ ಜನರಿಗೆ ವೈದ್ಯರು ಮತ್ತು ಅರೆವೈದ್ಯರು ಸ್ಥಳದಲ್ಲೇ ವೈದ್ಯಕೀಯ ಚಿಕಿತ್ಸೆ ನೀಡಿದರು ಎಂದು ಎಂಡಿಎ ರಾಯಿಟರ್ಸ್ಗೆ ತಿಳಿಸಿದೆ. https://kannadanewsnow.com/kannada/bengaluru-bmtc-conductor-stabbed-to-death-by-passenger/ https://kannadanewsnow.com/kannada/will-work-with-conscience-wont-resign-siddaramaiah/

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ನ ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಇಂದು ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವರಿಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿನಂದ ಚಾಕು ಇರಿತಕ್ಕೆ ಒಳಗಾದಂತ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ed-summons-muda-case-complainant-snehamayi-krishna-asks-him-to-submit-documents/ https://kannadanewsnow.com/kannada/will-work-with-conscience-wont-resign-siddaramaiah/

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ನೀಡಿದ್ದಂತ ದೂರು ದಾಖಲಿಸಿದ್ದಂತ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಅದರಲ್ಲಿ ಅಕ್ಟೋಬರ್.3ರಂದು ಬೆಳಿಗ್ಗೆ 11 ಗಂಟೆ ಒಳಗಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಸಾಕ್ಷ್ಯಾಧಾರ, ದಾಖಲೆಗಳನ್ನು ಇ-ಮೇಲ್ ಮೂಲಕ ಸಲ್ಲಿಸುವಂತೆ ಸೂಚಿಸಿದೆ. ಅಂದಹಾಗೇ ಮುಡಾದಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿಗೆ ನೀಡಲಾಗಿದ್ದಂತ 14 ಸೈಟ್ ಗಳನ್ನು ಅವರು ಹಿಂದಿರುಗಿಸಿದ್ದರು. ಈ ಬೆನ್ನಲ್ಲೇ ಕಂದಾಯ ಇಲಾಖೆಯಿಂದ ಕ್ರಯಪತ್ರವನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಮುಡಾಗೆ ಸೈಟ್ ಗಳನ್ನು ವಾಪಾಸ್ ನೀಡಲಾಗಿತ್ತು. ಈ ಕೇಸ್ ಸಂಬಂಧ…

Read More

ನವದೆಹಲಿ: ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಜೀವಂತ ಐಇಡಿಯನ್ನು ವಶಪಡಿಸಿಕೊಂಡಿದೆ. ಈ ಮೂಲಕ ಬೆಂಗಳೂರಲ್ಲಿ ಬಂಧಿಸಿದ್ದಂತ ಶಂಕಿತ ಉಗ್ರನಿಂದ ಬಯಲಾದಂತ ರಹಸ್ಯದಿಂದ ಜೀವಂತ ಐಇಡಿ ವಶಕ್ಕೆ ಪಡೆದಂತೆ ಆಗಿದೆ. ಆಗಸ್ಟ್.15ರಂದು ಸ್ವಾತಂತ್ರ್ಯ ದಿನಾಚರಣೆಯ ಪಿತೂರಿಯ ಭಾಗವಾಗಿ ಉಲ್ಫಾ (ಐ) ಭಯೋತ್ಪಾದಕರು ಇರಿಸಿದ್ದ ಸ್ಫೋಟಕವನ್ನು ಎನ್ಐಎ ತಂಡ ಇಂದು ಮುಂಜಾನೆ ವಶಪಡಿಸಿಕೊಂಡಿದೆ. ನಂತರ ಅಸ್ಸಾಂ ಪೊಲೀಸರ ಬಾಂಬ್ ನಿಷ್ಕ್ರಿಯ ದಳವು ಅದನ್ನು ನಿಷ್ಕ್ರಿಯಗೊಳಿಸಿತು. ಆಗಸ್ಟ್ 15 ರಂದು ಅಸ್ಸಾಂ ಪೊಲೀಸರು ಉತ್ತರ ಲಖಿಂಪುರ ಜಿಲ್ಲೆಯಿಂದ ಐಇಡಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಸಮಯದಲ್ಲಿ ಎನ್ಐಎಗೆ ಬಾಂಬ್ ಬಗ್ಗೆ ತಿಳಿದುಬಂದಿದೆ. ಉಲ್ಫಾ (ಐ) ನ ಎಸ್ಎಸ್ ಸಿ-ಇನ್-ಸಿ ಪರೇಶ್ ಬರುವಾ ಅವರು ಸ್ವಾತಂತ್ರ್ಯ ದಿನದಂದು ಅಸ್ಸಾಂನಾದ್ಯಂತ ನಿಷೇಧಿತ ಭಯೋತ್ಪಾದಕ ಸಂಘಟನೆಯಿಂದ ‘ಮಿಲಿಟರಿ’ ಪ್ರತಿಭಟನೆಯನ್ನು ಘೋಷಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ರಾಜ್ಯ ಪೊಲೀಸರು ಕ್ರಮ ಕೈಗೊಂಡಿದ್ದರು. ಸ್ವಾತಂತ್ರ್ಯ ದಿನಾಚರಣೆಯನ್ನು ಸಾರ್ವಜನಿಕವಾಗಿ ಬಹಿಷ್ಕರಿಸುವಂತೆ ಅವರು ಕರೆ…

Read More