Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧವೇ ಪತ್ನಿ ಹಾಗೂ ಪುತ್ರಿ ಸಿಡಿದೆದ್ದಿದ್ದಾರೆ. ಸಿ.ಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಪುತ್ರಿ, ಪತ್ನಿ ದೂರು ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವಂತ ರಣದೀಪ್ ಸುರ್ಜೇವಾಲಾ ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ ಯೋಗೇಶ್ವರ್ ಅವರ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಭೇಟಿಯಾಗಿ ಈ ದೂರು ಸಲ್ಲಿಸಿದ್ದಾರೆ. ಸುರ್ಜೇವಾಲಾ ಅವರಿಗೆ ಸಲ್ಲಿಸಿರುವಂತ ದೂರಿನಲ್ಲಿ ಸಿ.ಪಿ ಯೋಗೇಶ್ವರ್ ತಮ್ಮ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಅವರು ಕೇಸ್ ಹಾಕಿ ಕೋರ್ಟ್, ಕಚೇರಿ ಅಲೆಸುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ದೂರವಾಗಿಲ್ಲದ ಕಾರಣ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸಿ.ಪಿ ಯೋಗೇಶ್ವರ್ ನೀಡುತ್ತಿರುವಂತ ಕಿರುಕುಳ ಸರಿಪಡಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/a-4th-grade-student-dies-of-a-heart-attack-while-listening-to-a-lesson/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಚಾಮರಾಜನಗರ: ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಕುಳಿತಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿಯಲ್ಲಿ 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್(10) ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಮನೋಜ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರಂತೆ. ಮನೋಜ್ ಗೆ ಹೃದಯದಲ್ಲಿ ಹೋಲ್ ಇತ್ತು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಈ ಕಾರಣದಿಂದ ಜಯದೇವ, ಅಪಲೋ ಆಸ್ಪತ್ರೆಯಲ್ಲಿ ಮನೋಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದುದಾಗಿ ತಿಳಿದು ಬಂದಿದೆ. https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಬೆಂಗಳೂರು: ನಿನ್ನೆ ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ಕೋಲಾರ ಹಾಗೂ ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋ ವೈದ್ಯ ಡಾ.ನಾಗರಾಜ್ ಶಂಕಿತ ಉಗ್ರರಿಗೆ ಸಹಾಯ ಮಾಡುತ್ತಿದ್ದ ಕಾರಣ ಬಂಧಿಸಲಾಗಿತ್ತು. ಇನ್ನೂ ಉತ್ತರ ವಿಭಾಗದ ನಗರ ಶಸ್ತ್ರ ಮೀಸಲು ಪಡೆಯ ಎಎಸ್ಐ ಚಾಂದ್ ಪಾಷಾ ಹಾಗೂ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾಳನ್ನು ಎನ್ಐಎ ಬಂಧಿಸಲಾಗಿತ್ತು. ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಂಕಿತ ಮೂವರು ಉಗ್ರರನ್ನು ಹಾಜರುಪಡಿಸಲಾಗಿತ್ತು. ಈ ಮೂವರನ್ನು 6 ದಿನಗಳ ಕಾಲ ಎನ್ಐಎ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.
ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಪೋರ್ಟಲ್ನಲ್ಲಿ https://ssp.postmatric.karnataka.gov.in/homepage.aspx , ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/ssppre, ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/post sa/signing.aspx ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೋಳ ಸರ್ಕಲ್, ಬಿ.ಎಸ್.ಎನ್.ಎಲ್. ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 08182- 251676 ಹಾಗೂ ಶಿವಮೊಗ್ಗ -9980150110, ಭದ್ರಾವತಿ-7899137243, ಶಿಕಾರಿಪುರ-9741161346, ಸಾಗರ-9535247757, ಸೊರಬ-9110493122, ತೀರ್ಥಹಳ್ಳಿ-9480767638 ಹಾಗೂ ಹೊಸನಗರ-9731922693 ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸುವುದು.
ಬೆಂಗಳೂರು: ರಾಜ್ಯಾಧ್ಯಂತ ಸಾವಿರಾರು ಮಂದಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಕಳೆದ 6 ತಿಂಗಳಿನಿಂದ ವೇತನ ನೀಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಅಸಹಕಾರ ಪ್ರತಿಭಟನೆ ಆರಂಭಿಸಿದ್ದಾರೆ. ಈ ಕಾರಣ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿ, ಜನರು ಪರದಾಡುವಂತೆ ಆಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ನರೇಗಾ ನೌಕರರ ಸಂಘದ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಅವರು, ರಾಜ್ಯ ಸರ್ಕಾರಕ್ಕೆ ಕಳೆದ ಹಲವು ತಿಂಗಳಿನಿಂದ ನೌಕರರ ಬಾಕಿ ವೇತನ ಬಿಡುಗಡೆ ಮನವಿ ಮಾಡಿದ್ದರೂ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಾಗಿ ನೌಕರರು ರಾಜ್ಯಾಧ್ಯಂತ ಕೆಲಸ ತೊರೆದು ಅಸಹಕಾರ ಪ್ರತಿಭಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು. ನರೇಗಾ ನೌಕರರಿಗೆ ವೇತನ ಬಾಕಿಗೆ ಕೇಂದ್ರ ಸರ್ಕಾರ ಅನುದಾನ ಮಂಜೂರು ಮಾಡಿರದೇ ಇರೋದು ಕಾರಣ ಎಂಬುದಾಗಿ ರಾಜ್ಯ ಸರ್ಕಾರ ಆರೋಪಿಸುತ್ತಿದೆ. ಅನುದಾನ ಮಂಜೂರಾದ ನಂತ್ರ ಈಗ ರಾಜ್ಯ ಸರ್ಕಾರ ಟೆಕ್ನಿಕಲ್ ಸಮಸ್ಯೆ ಆಗಿದೆ. ಬಿಡುಗಡೆ ಆಗಲಿದೆ, ಆಗಲಿದೆ…
ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಸಂಘವು ಘೋಷಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಫೆಬ್ರವರಿ, ಮಾರ್ಚ್, ಏಪ್ರಿಲ್ ಹಾಗೂ ಮೇ-2025ರ ಮಾಹೆಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗಾಗಿ ಮತ್ತು ಇತರ ಪ್ರಾಸಂಗಿಕ ಶುಲ್ಕಗಳಾದ ಸಗಟು ಮತ್ತು ಚಿಲ್ಲರೆ ಲಾಭಾಂಶ, ಸಾಗಾಣಿಕೆ ಶುಲ್ಕಗಳಿಗೆ ಉಂಟಾಗುವ ವೆಚ್ಚವನ್ನು ಭರಿಸಲು ರೂ.2082.99 ಕೋಟಿಗಳಅ ನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದಿದೆ. ಮೇಲ್ಕಂಡಂತೆ ಬಿಡುಗಡೆಗೊಳಿಸಿದ ಅನುದಾನದಲ್ಲಿ ರೂ.21.79 ಕೋಟಿಗಳು ಕರ್ನಾಟಕ ಆಹಾರ ನಾಗರೀಕ ಸರಬರಾಜು ನಿಗಮ ನಿಗಮಿತ, ಬೆಂಗಳೂರು ಇವರಲ್ಲಿ ಉಳಿಕೆಯಾಗಿರುತ್ತದೆ. ಹಾಗಾಗಿ ಫೆಬ್ರವರಿ-2025 ರಿಂದ ಮೇ- 20250 ಮಾಹವರೆಗೂ ಸಗಟು/ಚಿಲ್ಲರೆ ಲಾಭಾಂಶ ಸಾಗಾಣಿಕೆ ವೆಚ್ಚಕ್ಕಾಗಿ ಬಿಡುಗಡೆಗೊಳಿಸಲು ಕೊರತೆಯಾಗುತ್ತದೆ ಎಂದು ತಿಳಿಸಿರುತ್ತಾರೆ. ಮುಂದುವರೆದು, ಫೆಬ್ರವರಿ-2025 ರಿಂದ ಮೇ-2025ರ ಮಾಹೆವರೆಗೂ ಸಗಟು/ಚಿಲ್ಲರೆ ಲಾಭಾಂಶ, ಸಾಗಾಣಿಕೆ ವೆಚ್ಚಕ್ಕಾಗಿ ಅನುದಾನವು ಕೊರತೆಯಾಗಿದ್ದು, ಈ ಕೆಳಕಂಡ ಪಟ್ಟಿಯಲ್ಲಿ ವಿವರಿಸಿರುವಂತೆ…
ಬೆಂಗಳೂರು: ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಪಿಡುಗು ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕೆಂಧೂಳಿ ವಾರಪತ್ರಿಕೆ ಆಯೋಜಿಸಲಾಗಿದ್ದ “ವಾರಪತ್ರಿಕೆ ಅಂದು -ಇಂದು” ಕುರಿತ ವಿಚಾರಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಪಿಡುಗು ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ. ರಾಜ್ಯ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದರು. ಕೆಲವು ಗಂಭೀರ ವಿಷಯಗಳ ಪ್ರಸಾರ ಮಾಡಬೇಕಾದ ಮಾಧ್ಯಮಗಳು ಅದನ್ನು ಬಿಟ್ಟು ಮೌಢ್ಯ ಬಿತ್ತುವ ಕೆಲಸವಾಗುತ್ತಿದೆ. ಈ ಮೂಲಕ ಪತ್ರಿಕೋದ್ಯಮ ಹಾದಿ ತಪ್ಪುತ್ತಿದೆ ಎಂದರು. ಹಿರಿಯ ಪತ್ರಕರ್ತ ಶಶಿಧರ್ ಭಟ್ ಮಾತನಾಡಿ, ಪತ್ರಿಕೋದ್ಯಮದ ಮಡಿವಂತಿಕೆ ದೂರವಾಗಬೇಕು. ಪ್ರಶ್ನೆ ಮಾಡುವ…
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆರ್ಥಿಕ ಒತ್ತಡದಿಂದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಕುಬೇರಪ್ಪ ಎಂದೂ ಕರೆಯಲ್ಪಡುವ ಕುಬೇರ ಧರ್ಮ ನಾಯಕ್ (49) ಹಳ್ಳಿಹೊಳೆ ಗ್ರಾಮದ ಸುಲ್ಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರ ಪ್ರಕಾರ, ಈ ಘಟನೆ ಕಮಲಶಿಲೆ ಸೇತುವೆಯ ಬಳಿ ನಡೆದಿದೆ. ಧರ್ಮ ನಾಯಕ್ ಅವರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ರೇನ್ಕೋಟ್ ಮತ್ತು ದ್ವಿಚಕ್ರ ವಾಹನವನ್ನು ಹತ್ತಿರದಲ್ಲಿ ನಿಲ್ಲಿಸಲಾಗಿತ್ತು. ಮೂಲತಃ ಚಿತ್ರದುರ್ಗದವರಾದ ಅವರು ತಮ್ಮ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳೊಂದಿಗೆ ಹೊಸಂಗಡಿಯ ಸರ್ಕಾರಿ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದರು. ನಾಯಕ್ 2002 ರಿಂದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು 2022 ರಲ್ಲಿ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದರು. ನಾಯಕ್ ಚಿಟ್ ಫಂಡ್ನಿಂದ ಸಾಲ ಸೇರಿದಂತೆ ಹಲವು ಸಾಲಗಳನ್ನು ಪಡೆದಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಬಂಧಿತ ಸಾಲದ ದಾಖಲೆ…
ನವದೆಹಲಿ: ಭಯೋತ್ಪಾದಕರು ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ನಡೆಸಲು ಅಮೆಜಾನ್ ಮತ್ತು ಪೇಪಾಲ್ನಂತಹ ಇ-ಕಾಮರ್ಸ್ ವೇದಿಕೆಗಳನ್ನು ಬಳಸಿದ್ದಾರೆ. ಹಲವಾರು ಭಯೋತ್ಪಾದಕ ಸಂಘಟನೆಗಳು ವಸ್ತುಗಳನ್ನು ಖರೀದಿಸಲು ಮತ್ತು ಭಯೋತ್ಪಾದಕ ಹಣಕಾಸುಗಾಗಿ ಇ-ಕಾಮರ್ಸ್ ವೇದಿಕೆಗಳನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಜಾಗತಿಕ ಭಯೋತ್ಪಾದನಾ ಹಣಕಾಸು ಕಾವಲು ಸಂಸ್ಥೆ ಹಣಕಾಸು ಕಾರ್ಯಪಡೆ (FATF) ಮಂಗಳವಾರ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಸುಮಾರು 40 CRPF ಸಿಬ್ಬಂದಿಯನ್ನು ಬಲಿತೆಗೆದುಕೊಂಡ ಪುಲ್ವಾಮಾ ಭಯೋತ್ಪಾದಕ ದಾಳಿ ಮತ್ತು 2022 ರ ಗೋಕರ್ಣನಾಥ ದೇವಾಲಯದಂತಹ ಭಯೋತ್ಪಾದಕ ದಾಳಿಗಳನ್ನು ಸಂಸ್ಥೆಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಭಯೋತ್ಪಾದನೆಗೆ ಹಣಕಾಸು ಒದಗಿಸಲು ಇ-ಕಾಮರ್ಸ್ ವೇದಿಕೆಗಳು ಮತ್ತು ಆನ್ಲೈನ್ ಪಾವತಿ ಸೇವೆಗಳ ದುರುಪಯೋಗದ ಬಗ್ಗೆ ವರದಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಭಯೋತ್ಪಾದನಾ ಹಣಕಾಸು ಅಪಾಯಗಳ ಕುರಿತು ಸಮಗ್ರ ನವೀಕರಣ ಎಂಬ ಶೀರ್ಷಿಕೆಯ ತನ್ನ ವರದಿಯಲ್ಲಿ, FATF ಫೆಬ್ರವರಿ 2019 ರ ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯನ್ನು ವಿವರಿಸಿದೆ. ಈ ದಾಳಿಯು 40 CRPF ಸಿಬ್ಬಂದಿಯ ಸಾವಿಗೆ ಕಾರಣವಾಯಿತು ಮತ್ತು ಇದನ್ನು ಜೈಶ್-ಎ-ಮೊಹಮ್ಮದ್…
ಬೆಂಗಳೂರು: ರಾಜ್ಯದಲ್ಲಿ ಮೂವರು ಶಂಕಿತ ಉಗ್ರರನ್ನು ಎನ್ ಐ ಎ ಬಂಧಿಸಿದೆ. ಬೆಂಗಳೂರು, ಕೋಲಾರದಲ್ಲಿ ಶಂಕಿತ ಮೂವರು ಉಗ್ರರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು, ಕೋಲಾರದ ಐದು ಕಡೆಯಲ್ಲಿ ದಾಳಿ ನಡೆಸಿರುವಂತ ಎನ್ಐಎ, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್, ಫಾತೀಮಾರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು, ಕೋಲಾರದ 5 ಕಡೆಯಲ್ಲಿ ಎನ್ಐಎ ನಡೆಸಿದಂತ ದಾಳಿಯಲ್ಲಿ 2 ವಾಕಿಟಾಕಿ, ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/nrega-staff-not-paid-for-6-months-statewide-non-cooperation-protests-disruption-in-services/ https://kannadanewsnow.com/kannada/on-july-16-indian-nurse-nimisha-priya-is-executed-in-yemen-report/












