Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯಾಧ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಸ್ಕಾಂ ದುಬಾರಿ ಸ್ಮಾರ್ಟ್ ಮೀಟರ್ ದರ ಏರಿಕೆಗೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಬೆಸ್ಕಾಂ ಸ್ಮಾರ್ಟ್ ಮೀಟರ್ ಶೇ.800ರಷ್ಟು ದುಬಾರಿ ದರ ತೆರುವುದರಿಂದ ಜನರನ್ನು ಪಾರು ಮಾಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಬೆಸ್ಕಾಂಗೆ ಖಡಕ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಮೀಣ ಮತ್ತು ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಎನ್ ಟಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಪಡೆಯಲು ಒತ್ತಾಯಿಸಬಾರದೆಂದು ಸೂಚಿಸಿದೆ. ಈ ಹಿನ್ನಲೆಯಲ್ಲಿ ಶೇ.400ರಿಂದ 800ರಷ್ಟು ಅಧಿಕ ದರದೊಂದಿಗೆ ಖರೀದಿಸಬೇಕಿದ್ದಂತ ಸ್ಮಾರ್ಟ್ ಮೀಟರ್ ದುಬಾರಿ ಬೆಲೆಗೆ ಬ್ರೇಕ್ ಬಿದ್ದಂತೆ ಆಗಿದೆ. https://kannadanewsnow.com/kannada/state-government-orders-fixing-retirement-age-of-asha-workers-at-60-years/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಆಯ್ಕೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು, ನಿವೃತ್ತಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದಂತ ಸಾಮಾಜಿ ಆರೋಗ್ಯ ಕಾರ್ಯಕರ್ತೆಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿರುವಂತ ಆಶಾ ಕಾರ್ಯಕರ್ತೆಯರು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯಾಧ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ತಂತ್ರಜ್ಞಾನ ಇತ್ಯಾದಿಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿ ನಿವೃತ್ತಿಯ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/b-khata-for-unauthorised-properties-in-gram-panchayat-limits-state-govt/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಬಿ-ಖಾತಾ ನೀಡಲು ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ರಾಜ್ಯದ ಪಟ್ಟಣ, ನಗರ ಪ್ರದೇಶದಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಮಾಡಿದಂತೆಯೇ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೂ ಇದೇ ಕ್ರಮ ವಹಿಸಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಜ್ಯ ಸರ್ಕಾರದಿಂದ ಹಳ್ಳಿಗಳಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ನೀಡಲು ಕಾಯ್ದೆಗೂ ತಿದ್ದುಪಡಿ ತರೋದಕ್ಕೆ ಪರಿಶೀಲನೆ ನಡೆಸುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ನಗರ, ಪಟ್ಟಣ ವ್ಯಾಪ್ತಿಯಲ್ಲಿ ನೀಡುವಂತೆಯೇ ಬಿ-ಖಾತಾ ವಿತರಣೆಗೆ ನಿರ್ಧಾರವನ್ನು ಸರ್ಕಾರ ಶೀಘ್ರವೇ ಪ್ರಕಟಿಸೋ ಸಾಧ್ಯತೆ ಇದೆ. https://kannadanewsnow.com/kannada/bill-to-be-introduced-in-assembly-waiver-of-loans-if-financers-are-forced-to-recover/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ(ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ಗುರುವಾರದಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳೋದಕ್ಕೆ ಅವಕಾಶವಿದೆ. ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಅಥವಾ ಲೇವಾದೇವಿದಾರರು ಸಾಲಗಾರನಿಂದ ಬಲವಂತದ ವಸೂಲಿಗೆ ಪ್ರಯತ್ನಿಸೋದನ್ನು ನಿಷೇಧಿಸಲಾಗಿದೆ. ಒಂದೊಮ್ಮೆ ಸಾಲ ಪಡೆದಿರುವ ಸಮಾಜದ ದುರ್ಬಲ ವರ್ಗದವರ ಬಲಿ ಬಲವಂತ ಮಾಡಿ ಸಾಲಗಾರ ಪಡೆದಿರುವ ಸಾಲ ಹಾಗೂ ಬಡ್ಡಿ ಮನ್ನಾ ಆಗಿದೆ ಎಂದು ಭಾವಿಸಬೇಕು ಎಂಬ ಮಹತ್ವದ ಅಂಶವನ್ನು ವಿಧೇಯಕ ಒಳಗೊಂಡಿದೆ. ಇದಷ್ಟೇ ಅಲ್ಲದೇ ಇಂಥಹ ಸಂಸ್ಥೆ ಅಥವಾ ಲೇವಾದೇವಿದಾರ ಸಾಲ, ಬಡ್ಡಿ ವಸೂಲಿಗೆ ಹೂಡುವ ಯಾವುದೇ ದಾವೆ ಅಥವಾ ವ್ಯವಹಾರವನ್ನು ನ್ಯಾಯಾಲಯಗಳು ಪುರಸ್ಕರಿಸಬಾರದು. ಸಾಲಗಾರ ಅಥವಾ ಆತನೊಂದಿಗೆ ಯಾರ ವಿರುದ್ಧವಾದರೂ ಜಂಟಿಯಾಗಿ ದಾವೆ ಹೂಡಿದ್ದರೇ ತಕ್ಷಣದಿಂದ ರದ್ದಾಗಬೇಕು. ಇನ್ನೂ ಯಾವುದೇ ಮೈಕ್ರೋ…
ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5.00ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಗುರುವಾರದಂದು ವಿಧಾನಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಸದಸ್ಯರಾದ ವೇದವ್ಯಾಸ ಕಾಮತ್ ಡಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ 1650 ಚಿಕಿತ್ಸಾ ವೆಚ್ಚಗಳಲ್ಲಿ 294 ಸಾಮಾನ್ಯ/ಸರಳ ಚಿಕಿತ್ಸಾ ವಿಧಾನಗಳು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದ್ದು 251 ಕ್ಲಿಷ್ಟಕರ ದ್ವಿತೀಯ ಹಂತದ ಚಿಕಿತ್ಸಾ ವಿಧಾನಗಳು, 934 ತೃತೀಯ ಹಂತದ ಚಿಕಿತ್ಸಾ ವಿಧಾನಗಳು ಮತ್ತು 171 ತುರ್ತು ಚಿಕಿತ್ಸಾ ವಿಧಾನಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ಪಡೆಯಬಹುದಾಗಿದೆ. ಲಭ್ಯವಿಲ್ಲದ ಚಿಕಿತ್ಸಾ ವಿಧಾನಗಳಿಗೆ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್ಬಿಪಿ2022 ಪ್ಯಾಕೇಜನ್ನು ಅನುಷ್ಠಾನಗೊಳಿಸಲು ಸರ್ಕಾರದ…
ಬೆಂಗಳೂರು: ಮಂಗನ ಕಾಯಿಲೆ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಇದರಿಂದ ಅನೇಕ ರೋಗಿಗಳು ಯಾವುದೇ ತೊಂದರೆಗಳಿಲ್ಲದೇ ಮಂಗನ ಕಾಯಿಲೆ ಸೋಂಕಿನಿಂದ ಚೇತರಿಸಿಕೊಳ್ಳತ್ತಾರೆ. ಈ ಖಾಯಿಲೆಯು ಬೇಸಿಗೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಂಗನ ಕಾಯಿಲೆಯಿಂದ ಸಾವುಗಳು ಸಂಭವಿಸದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಲಾಗಿದೆ. ಈ ರೋಗಕ್ಕೆ ಯಾವುದೇ ಲಸಿಕೆ ಇರುವುದಿಲ್ಲ. ಈ ಹಿಂದೆ ಇದ್ದ ಲಸಿಕೆ ಕ್ಷಮತೆ ಕಳೆದುಕೊಂಡಿದೆ. ಈಗಾಗಲೇ ಐಸಿಎಂಆರ್ ಜೊತೆ ಚರ್ಚೆ ಮಾಡಿ ನಿರಂತರ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಹಾಗೂ ಲಸಿಕಾಗೆ ಸಂಶೋಧನೆ ಕಾರ್ಯ ನಡಿಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಸದಸ್ಯರಾದ ಅರಗ ಜ್ಞಾನೇಂದ್ರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ 674 ಖಚಿತ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಯಾವುದೇ ಖಚಿತ ಡೆಂಗ್ಯೂ ಮರಣ ಪ್ರಕರಣಗಳು ವರದಿಯಾಗಿರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ಮಂಗನ ಕಾಯಿಲೆ ಸೊಂಕಿತ ಓರ್ವ…
ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು/ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ. ಮಾಚ 10…
ಬೆಂಗಳೂರು : ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಳೆಯ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ನೆಲಸಮಗೊಳಿಸಿ ಇದೇ ಜಾಗದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಗುರುವಾರದಂದು ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಮಟಾ ಶಾಸಕರಾದ ದಿನಕರ್ ಕೇಶವಶೆಟ್ಟಿ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಭೂಮಿಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹಸ್ತಾಂತರವಾಗಿರುವುದಿಲ್ಲ ಮತ್ತು ಸದರಿ ಪ್ರಸ್ತಾವನೆಗೆಗೆ ಯಾವುದೇ ರೀತಿಯ ಅನುದಾನ ಮಂಜೂರಾಗಿರುವುದಿಲ್ಲ. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದ್ದು ಈಗಾಗಲೇ ಇಲಾಖೆಯಿಂದ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು…
ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ನ್ನು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿಯ ವೇಳೆಯಲ್ಲಿ 3 ಗಂಟೆಗಳ ಕಾಲ ಒಟ್ಟು 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ಕೃಷಿ ಫೀಡರ್ ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ ನಿರಂತರವಾಗಿ 3 ಪೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆÉ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್ ಕುಮಾರ್ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಾರ್ಮ್ ಹೌಸ್ ಗಳನ್ನು ಹೊಂದಿರುವ ಎಲ್ಲಾ ಕೃಷಿ ಪೀಡರ್ ಗಳಿಗೆ ಒಎಲ್ಪಿ-ರಿಲೇಗಳ್ನು ಬಳಸಿಕೊಂಡು…












