Author: kannadanewsnow09

ಬೆಂಗಳೂರು: ಸಿದ್ದರಾಮಯ್ಯನವರು ಈಗ ಸಿಕ್ಕಿಬಿದ್ದಿದ್ದಾರೆ. ಜಗ್ಗೋಲ್ಲ; ಬಗ್ಗೋಲ್ಲ; ಏನೇ ಬಂದ್ರೂ ಎದುರಿಸ್ತೀನಿ ಎಂದವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ? ರಾತ್ರೋರಾತ್ರಿ ಜಗ್ಗಿದ್ದು, ಬಗ್ಗಿದ್ದು ಯಾಕೆ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದರಿಂದ ಅವರ ಕಪಟತನ ಎಂಥದ್ದೆಂದು ಅರ್ಥವಾಗುತ್ತದೆ. ನಿನ್ನೆ 14 ಸೈಟ್ ಸರೆಂಡರ್ ಮಾಡಿದ್ದಾಗಿ ಲೆಟರ್ ಕೊಟ್ಟಿದ್ದಾರೆ. ಆ ಪತ್ರದಲ್ಲಿ ದಿನಾಂಕವೂ ಇಲ್ಲ; ಆದ್ದರಿಂದ ಅದು ಖಾತ್ರಿಯೇನಲ್ಲ ಎಂದು ತಿಳಿಸಿದರು. ಹಳ್ಳಿಕಡೆ ‘ನೂರು ಬಾರಿ ಕದ್ದೋನು ಒಂದು ಸಾರಿಯಾದ್ರೂ ಸಿಗಲೇಬೇಕು’ ಎಂಬ ಗಾದೆ ಇದೆ. ಹಾಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಚಾ ಅಲ್ಲ. ನೂರಾರು ಬಾರಿ ಕದ್ದವರು ಒಂದು ಸಾರಿ ಸಿಕ್ಕಿ ಹಾಕಿಕೊಳ್ತಾರಲ್ವ? ಒಂದು ಸಾರಿ ಸಿಕ್ಕಿದರೂ ನೂರು ಬಾರಿ ಮಾಡಿದ ಹಾಗೇ ಎಂದು ವಿಶ್ಲೇಷಿಸಿದರು. ಇವರು ಜಗ್ಗಿದ ಮೇಲೆ ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ನಿಜವಾಗಿಯೂ…

Read More

ಬೆಂಗಳೂರು : ರಾಜ್ಯದಿಂದ ಈ ಬಾರಿಯ ಹಜ್ ಯಾತ್ರೆಗೆ 11 ಸಾವಿರ ಮಂದಿ ಆಕಾಂಕ್ಷಿ ಗಳು ಅರ್ಜಿ ಸಲ್ಲಿಸಿದ್ದು ಇದೇ 4 ರಂದು ಮಧ್ಯಾಹ್ನ ಕೇಂದ್ರ ಹಜ್ ಮಂಡಳಿ ಯಲ್ಲಿ ಈ ಲಾಟರಿ ಪ್ರಕ್ರಿಯೆ ನಡೆಯಲಿದೆ ಎಂದು ರಾಜ್ಯ ಹಜ್ ಸಮಿತಿ ಕಾರ್ಯ ನಿರ್ವಹಣಾ ಧಿಕಾರಿ ಸರ್ಫಾರಾಜ್ ಖಾನ್ ತಿಳಿಸಿದ್ದಾರೆ. ಈ ಲಾಟರಿ ಪ್ರಕ್ರಿಯೆ ನಡೆದ ತಕ್ಷಣ ಆಯ್ಕೆ ಯಾದವರಿಗೆ ಎಸ್ ಎಂ ಎಸ್ ಸಂದೇಶ ರವಾನೆ ಆಗಲಿದೆ. ಕಳೆದ ಬಾರಿ 9.500 ದಿಂದ 10 ಸಾವಿರ ಮಂದಿಗೆ ಅವಕಾಶ ದೊರೆತಿತ್ತು ಈ ಬಾರಿ ಇನ್ನೂ ಹೆಚ್ಚಿನ ಜನರಿಗೆ ಅವಕಾಶ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ರಾಜ್ಯಕ್ಕೆ ಈ ಬಾರಿಯ ಕೋಟಾ ಇನ್ನೂ ನಿಗದಿ ಆಗಿಲ್ಲ. ಅ.4 ರಂದು ಕೋಟಾ ಬಗ್ಗೆಯೂ ಸ್ಪಷ್ಟ ಸಂಖ್ಯೆ ಸಿಗಲಿದೆ. ನಂತರ ಹಜ್ ಸಮಿತಿ ಮುಂದಿನ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/major-surgery-to-administrative-machinery-by-state-government-11-kas-officers-transferred/ https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿಯ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ದೃಶ್ಯಾವಳಿ ಆಧರಿಸಿ ಹಿರಿಯೂರು ತಾಲ್ಲೂಕಿನ ಕೆ ಆರ್ ಹಳ್ಳಿ ವಿಎ ದಾಸೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ ಆರ್ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರು ವ್ಯಕ್ತಿಯೊಬ್ಬರು ತಮ್ಮ ಜಮೀನು ಕೆಲಸದ ವಿಚಾರವಾಗಿ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೆಲಸ ಮಾಡಿ ಕೊಡಲು ದುಡ್ಡು ಕೇಳಿದ್ದರು. ಅದರಂತೆ ವ್ಯಕ್ತಿಯೊಬ್ಬರು ಗ್ರಾಮ ಆಡಳಿತಾಧಿಕಾರಿ ದಾಸೇಗೌಡ ಅವರಿಗೆ ಲಂಚದ ಹಣವನ್ನು ನೀಡಿದ್ದಲ್ಲದೇ, ಅದನ್ನು ಪಡೆಯುತ್ತಿದ್ದ ವೇಳೆ ವೀಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಲಂಚ ಪಡೆಯುತ್ತಿದ್ದಂತ ವೇಳೆಯಲ್ಲಿ ಗ್ರಾಮ ಆಡಳಿತಾಧಿಕಾರಿ ದಾಸೇಗೌಡ ಅವರು ನನಗೇನು ಉಳಿಯೋದಿಲ್ಲ. ಇದರಲ್ಲಿ ಆರ್ ಐಗೆ ಕೊಡಬೇಕು. ಅವರಿಗೆ, ಇವರಿಗೆ ಕೊಡಬೇಕು ಅಂತ ಹೇಳಿದ್ದಲ್ಲದೇ, ಲಂಚ ಪಡೆದು ನಾಳೆ ಬನ್ನಿ. ನಿಮ್ಮ ಕೆಲಸ ರೆಡಿ ಮಾಡಿರುವೆ ಅಂತ ತಿಳಿಸಿದ್ದರು. ಈ ಎಲ್ಲಾ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ…

Read More

ಮೈಸೂರು: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಕಾರಣ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ಇಂದು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೇ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಬಿಗ್ ಶಾಕ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುತ್ತೇನೆ. ಜಾಮೀನು ರಹಿತ ವಾರೆಂಟ್ ರೀ ಕಾಲ್ ಮಾಡಿಸುವುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/ https://kannadanewsnow.com/kannada/will-work-with-conscience-wont-resign-siddaramaiah/

Read More

ಬೆಂಗಳೂರು: ನಾಗಸಂದ್ರ ಮತ್ತು ಮಾಧವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ದಿನಾಂಕ 03ನೇ ಅಕ್ಟೋಬರ್ 2024 ರಂದು ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಗಸಂದ್ರ ಮತ್ತು ಮಾಧವರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ ಎಂದಿದೆ. ದಿನಾಂಕ 3ನೇ ಅಕ್ಟೋಬರ್ 2024 ರಂದು ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ, ಈ ಅವಧಿಯಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ…

Read More

ಮಂಡ್ಯ : ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಕಬ್ಬಾರೆ, ನೀಲಕಂಠನಹಳ್ಳಿ ಹಾಗೂ ಕೆ.ಕೋಡಿಹಳ್ಳಿ ಗ್ರಾಮಗಳ ಏತ ನೀರಾವರಿ ಯೋಜನೆಗಳನ್ನು ಮಂಗಳವಾರ ಅಧಿಕಾರಿಗಳ ಜೊತೆಗೂಡಿ ವೀಕ್ಷಣೆ ಮಾಡಿ ಸಮರ್ಪಕವಾಗಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ಶಿಂಷಾ ನದಿಯಿಂದ ಹಲವು ಕಡೆ ಏತ ನೀರಾವರಿ ಯೋಜನೆಯನ್ನು ನಿರ್ಮಾಣ ಮಾಡಿ ಸರಿಯಾಗಿ ಕಾರ್ಯಾರಂಭ ಮಾಡದೇ ನಿರ್ಲಕ್ಷ ಮಾಡಲಾಗಿತ್ತು. ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿ ಮೋಟಾರ್, ಪೈಪ್ ಹಾಗೂ ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳಿವೆ. ಹೀಗಾಗಿ ಹಳೆಯ ಯಂತ್ರಗಳನ್ನು ತೆರವುಗೊಳಿಸಿ ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಇನ್ನು ಶಿಂಷಾ ನದಿಗೆ ಅಡ್ಡಲಾಗಿ ಹೊಸದಾಗಿ ಐದು ಕಡೆ ಚೆಕ್ ಡ್ಯಾಂ ನಿರ್ಮಾಣ ಮಾಡಲು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದರಿಂದ…

Read More

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು. ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಿನಾಂಕ 3.10.2024 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಚಂದ್ರಶೇಖರ್ ಪಾಲೆತ್ತಾಡಿ, ಶಿವಲಿಂಗಪ್ಪ ದೊಡ್ಡಮನಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲೇ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗಿಯಾಗುವಂತ ಪ್ರವಾಸಿಗರಿಗೆ ಬಿಗ್ ಶಾಕ್ ಎನ್ನುವಂತೆ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸುದ್ದಿಗೋಷ್ಠಿ ಮಾತನಾಡಿ,  ಅಕ್ಟೋಬರ್ 3 ರಂದು ದಸರಾ ವಸ್ತು ಪ್ರದರ್ಶನ ರಾತ್ರಿ 8 ಗಂಟೆಗೆ ಉದ್ಘಾಟನೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸ್ಥಳೀಯ ಜನಪ್ರನಿಧಿಗಳು, ಅಧಿಕಾರಗಳ ಸಮ್ಮುಖದಲ್ಲಿ ಉದ್ಘಾಟನೆ ಆಗಲಿದೆ. ಸುಮಾರು 90 ದಿನಗಳ ಕಾಲ ವಸ್ತು ಪ್ರದರ್ಶನವಿರುತ್ತದೆ ಎಂದಿದ್ದಾರೆ. ಈ ಬಾರಿ ಉದ್ಘಾಟನೆಗೂ ಮುನ್ನವೇ ಸರ್ಕಾರಿ ಮಳಿಗೆಗಳು ಭರ್ತಿಯಾಗುವಂತೆ ಸೂಚಿಸಲಾಗಿದೆ. ಈಗಾಗಲೇ 30 ಕ್ಕೂ ಹೆಚ್ಚು ಮಳಿಗೆಗಳು ತುಂಬಿವೆ. ಉಳಿದಂತೆ ಎಲ್ಲಾ ಖಾಸಗಿ ಮಳಿಗೆಗಳೂ ಕೂಡ ಅಂದೇ ಉದ್ಘಾಟನೆ ಆಗಲಿವೆ. ಬ್ರಾಂಡ್ ಮೈಸೂರು ಹೆಸರಿನಡಿ ಮೈಸೂರು ಬ್ರಾಂಡ್ ಪ್ರಾಡಕ್ಟ್ ಗಳೆಲ್ಲವೂ ಒಂದೇ ಸೂರಿನಡಿ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ವಸ್ತು…

Read More

ಬೆಂಗಳೂರು: ಅಕ್ಟೋಬರ್.3ರಿಂದ 12ರವರೆಗೆ ನಡೆಯಲಿರುವಂತ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 508 ಕಲಾ ತಂಡಗಳು, 6,500 ಕಲಾವಿದರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ವೇದಿಕೆ ಸಿದ್ಧಗೊಂಡಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು. ದಸರಾ ವೇಳೆ ಏರ್ ಶೋ ವಿಚಾರವಾಗಿ ಮಾತನಾಡಿದಂತ…

Read More