Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಹಣಕಾಸು ಮಂತ್ರಿಯಾಗಿದ್ದಾಗ , ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ ಎಂದರು. ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ಉಳಿದೆಲ್ಲ ಹೋಬಳಿಗಳಲ್ಲೂ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಹತ್ತನೆ ತರಗತಿಯಲ್ಲಿ ಓದುವ ಮಕ್ಕಳಿಗೆ ವಾರಕ್ಕೆ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಅನ್ನಭಾಗ್ಯದಡಿ 5 ಕೆಜಿ…
ಮೈಸೂರು: ನಗರದ ಹೊರ ವಲಯದ ಕೆ ಆರ್ ಎಸ್ ಬ್ಯಾಕ್ ವಾಟರ್ ನಲ್ಲಿ ನೂರಕ್ಕೆ ಅಧಿಕ ಯುವಕ-ಯುವತಿಯರಿಂದ ನಡೆಸುತ್ತಿದ್ದಂತ ಪಾರ್ಟಿ ಮೇಲೆ ದಾಳಿ ಮಾಡಿದ್ದಂತ ಪಿಎಸ್ಐ ಅವರನ್ನು ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಲಾಗಿದೆ. ಮೈಸೂರು ಹೊರ ವಲಯದ ಕೆ ಆರ್ ಎಸ್ ಬ್ಯಾಕ್ ವಾಟರ್ ನಲ್ಲಿ ಸೆಪ್ಟೆಂಬರ್.28ರಂದು ಯುವತಿ-ಯುವಕರು ಸೇರಿ ರೇವ್ ಪಾರ್ಟಿ ನಡೆಸುತ್ತಿದ್ದಾಗೆ ತಿಳಿದು ಬಂದಿತ್ತು. ಈ ಪಾರ್ಟಿಯ ಮೇಲೆ ಇಲವಾಲ ಠಾಣೆಯ ಪಿಎಸ್ಐ ಮಂಜುನಾಥ್ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿತ್ತು. ಆದರೇ ಈ ವೇಳೆ ಕೆಲವರು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಹಲ್ಲೆಯಲ್ಲಿ ಪಿಎಸ್ಐ ಮಂಜುನಾಥ್ ನಾಯಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪ್ರಕರಣದ ನಂತ್ರ ಎಎಸ್ಐ ನಾಗೇಶ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಪಿಎಸ್ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಂತವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ 64 ಮಂದಿ ವಿರುದ್ಧ ಎಫ್ಐಆರ್ ಕೂಡ ದಾಖಲಿಸಲಾಗಿತ್ತು. ಪಾರ್ಟಿ ಆಯೋಜಿಸಿದ್ದ ಐವರಿಗೆ ನ್ಯಾಯಾಂಗ ಬಂಧನ ಕೂಡ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Karnataka Chief Minister Siddaramaiah ) ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಸೆ.30ರಂದು ಪ್ರಕರಣ ದಾಖಲಿಸಿದೆ. ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲು ಫೆಡರಲ್ ಏಜೆನ್ಸಿ ಜಾರಿ ಪ್ರಕರಣ ಮಾಹಿತಿ ವರದಿ (Enforcement Case Information Report- ECIR) ಸಲ್ಲಿಸಿದೆ ಎಂದು ವರದಿ ತಿಳಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು. ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮುಡಾ ಭೂ…
BREAKING: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಬಿಗ್ಶಾಕ್: ಮುಡಾ ಕೇಸ್ನಲ್ಲಿ EDಯಿಂದ ECIR ದಾಖಲು | CMSiddaramaiah
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಅಲ್ಲದೇ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವಂತ ಸಾಧ್ಯತೆ ಇದೆ. https://kannadanewsnow.com/kannada/good-news-for-the-people-of-bengaluru-bmtc-buses-to-ply-on-this-route/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/
ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ ಇರುತ್ತದೆ. ಅವರು ಬರಿಗೈಯಲ್ಲಿ ಇರುತ್ತಾರೆ ಮತ್ತು ಖರ್ಚಿಗೆ 500 ರೂಪಾಯಿ ಬಂದರೂ ಪರವಾಗಿಲ್ಲ. ಕುಟುಂಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವ ಪರಿಸ್ಥಿತಿ ಇದೆ. ಅಂದರೆ ಕೆಲವರಿಗೆ ದಿನನಿತ್ಯದ ಜೀವನಕ್ಕೆ ಬೇಕಾಗುವ ಹಾಲು, ತರಕಾರಿಗಳನ್ನು ಕೊಳ್ಳಲು ಕೂಡ ತಿಂಗಳ ಕೊನೆಯಲ್ಲಿ ಹಣವಿರುವುದಿಲ್ಲ. ಇಂಥವರ ಪರಿಸ್ಥಿತಿ ಬದಲಾಗಬೇಕು. ಕೈಯಿಂದ ಕೈಗೆ ಆದಾಯ ಬರುತ್ತಲೇ ಇರಬೇಕು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ…
ಬೆಂಗಳೂರು: ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 03.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 298-ಎಂವೈ ಯಶವಂತಪುರ ದೇವನಹಳ್ಳಿ ಮತ್ತಿಕೆರೆ, ಬಿ.ಇ.ಎಲ್ ಸರ್ಕಲ್, ಹೆಬ್ಬಾಳ, ಯಲಹಂಕ 2 ಸದರಿ ಮಾರ್ಗದ ವೇಳಾಪಟ್ಟಿ ಕೆಳಕಂಡಂತಿದೆ. ಬಿಡುವ ವೇಳೆ ಯಶವಂತಪುರ ದೇವನಹಳ್ಳಿ 0545, 0720, 0935, 1520, 1620, 2020 0545, 0720, 1305, 1405, 1810, 1945 https://kannadanewsnow.com/kannada/will-fight-till-cm-siddaramaiah-resigns-this-fight-wont-stop-r-ashoka/ https://kannadanewsnow.com/kannada/breaking-another-victim-of-killer-bmtc-in-bengaluru-bike-rider-dies-after-being-hit-by-bus-wheel/
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು. ಚುನಾವಣಾ ಬಾಂಡ್ ಬಗ್ಗೆ ಕಾಂಗ್ರೆಸ್ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ 1,500 ಕೋಟಿ ರೂ.ಗೂ ಅಧಿಕ ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ…
ಬೆಂಗಳೂರು: ನಗರದಲ್ಲಿ ಮಹಿಳಾ ಸಬಲೀಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದರ ಭಾಗವಾಗಿ ಉಚಿತ ಇ-ಆಟೋಗಳನ್ನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ವಿತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಹಿಳಾ ಸಬಲೀಕರಣದಲ್ಲಿ ದಿಟ್ಟ ಹೆಜ್ಜೆ ಇಡುತ್ತಾ ಬೆಂಗಳೂರು ನಗರ ಪೊಲೀಸರು, ಪರಿಹಾರ, ಯುನೈಟೆಡ್ ವೇ ಬೆಂಗಳೂರು ಹಾಗೂ ಎನ್ ಟಿಟಿ ಡಾಟಾ ಸಹಯೋಗದಲ್ಲಿ ಕಮಾಂಡ್ ಸೆಂಟರ್ ನಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 5 ಉಚಿತ ಇ- ಆಟೋಗಳನ್ನು ವಿತರಣೆ ಮಾಡಲಾಯಿತು ಎಂದು ತಿಳಿಸಿದೆ. https://twitter.com/BlrCityPolice/status/1840723230363168932 ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹಾಗೂ ಹಿರಿಯ ಅಧಿಕಾರಿಗಳು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಕೀ ವಿತರಣೆ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಿದರು. ಜತೆಗೆ ಈ ಮಹಿಳೆಯರು ಚಾಲನೆ ಮಾಡಿದ ಆಟೋದಲ್ಲಿ ಪೊಲೀಸ್ ಅಧಿಕಾರಿಗಳು ಸವಾರಿ ಮಾಡಿ ಈ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದರು ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. https://kannadanewsnow.com/kannada/applications-invited-for-free-training-in-embroidery-erywork/…
ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.…
BIG BREAKING: ‘BJP ನಾಯಕ’ರಿಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ‘FIR’ಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನಡಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ನೀಡಿದೆ. ಇಂದು ಬಿಜೆಪಿ ಮುಖಂಡ ನಳೀನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತ್ರ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. ಹೈಕೋರ್ಟ್ ನ್ಯಾಯಪೀಠವು ಚುನಾವಣಾ ಬಾಂಡ್ ಹೆಸರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ರಾಘವೇಂದ್ರ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ಮುಖಂಡರ ಮೇಲೆ ದಾಖಲಾಗಿದ್ದಂತ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆೆ ನೀಡಿ ಆದೇಶಿಸಿದೆ. https://kannadanewsnow.com/kannada/another-good-news-for-government-employees-state-govt-issues-important-order-on-promotions/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/