Subscribe to Updates
Get the latest creative news from FooBar about art, design and business.
Author: kannadanewsnow09
ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ. ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ…
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳನ್ನು ರಾಜ್ಯ ಸರ್ಕಾರ ಮಂಡಿಸುತ್ತಿದೆ. ಈ ವಿಧೇಯಕಗಳಿಗೆ ಅಂಗೀಕಾರ ದೊರೆಕಿಸಿಕೊಡುವ ಕಾರಣ, ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿಗೊಳಿಸಲಾಗಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಎಂ ಪಟ್ಟಣ ಅವರು ವಿಪ್ ಜಾರಿಗೊಳಿಸಿದ್ದಾರೆ. ಅದರಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳು ಇನ್ನೂ ಅಂಗೀಕಾರವಾಗಬೇಕಾಗಿರುವುದರಿಂದ ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲಾ ವಿಧಾನಸಭಾ ಸದಸ್ಯರು ತಪ್ಪದೇ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ತಪ್ಪದೇ ಶಾಸಕರು ವಿಧಾನಸಭೆಯಲ್ಲಿ ಹಾಜರಿರಬೇಕು ಅಂತ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದೂ, ಅದರಂತೆ ತಾವುಗಳು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ವಿಪ್ ನಲ್ಲಿ ತಿಳಿಸಲಾಗಿದೆ. https://kannadanewsnow.com/kannada/fake-cop-arrested-for-extortion-in-the-name-of-cops-in-bengaluru/ https://kannadanewsnow.com/kannada/breaking-high-level-investigation-into-honeytrap-cm-siddaramaiah-announces-honeytrap-cace/
ಬೆಂಗಳೂರು: ತಾನು ಪೊಲೀಸ್ ಎಂಬುದಾಗಿ ಹೇಳಿ, ಯುವಕ-ಯುವತಿಯರಿಗೆ ಬೆದರಿಸಿ, ಕಿರುಕುಳ ನೀಡಿ ಸುಲಿಗೆ ಮಾಡುತ್ತಿದ್ದಂತ ನಕಲಿ ಪೊಲೀಸ್ ಅನ್ನು ಬಂಧಿಸಲಾಗಿದೆ. ಬಂದಿತ ಆರೋಪಿಯನ್ನು ಆಸೀಫ್ ಎಂಬುದಾಗಿ ತಿಳಿದು ಬಂದಿದೆ. ಈತ ಆಟೋ ಚಾಲಕನಾಗಿದ್ದನು. ಪಾರ್ಕ್ ನಲ್ಲಿದ್ದವರನ್ನೇ ಟಾರ್ಗೆಟ್ ಮಾಡುತ್ತಿದ್ದಂತ ಆರೋಪಿ ಆಸೀಫ್, ತಾನು ಪೊಲೀಸ್ ಎಂಬುದಾಗಿ ಹೇಳಿ ಕಿರುಕುಳ ನೀಡುತ್ತಿದ್ದನು. ಅಲ್ಲದೇ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದನು. ನಕಲಿ ಪೊಲೀಸ್ ಆಸೀಫ್ ಇಬ್ಬರಿಂದ 12 ಗ್ರಾಂ ಚಿನ್ನದ ಸರ, ಐದು ಗ್ರಾಂ ರಿಂಗ್ ಹಾಗೂ ಹತ್ತು ಸಾವಿರ ಹಣ ಸುಲಿಗೆ ಮಾಡಿದ್ದನು. ಈ ಸಂಬಂಧ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರು ಆಧರಿಸಿ ನಕಲಿ ಪೊಲೀಸ್ ಆಸೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/breaking-our-budget-for-2025-26-is-the-5th-largest-budget-in-india-cm-siddaramaiah-cm-siddaramaiah/ https://kannadanewsnow.com/kannada/breaking-high-level-investigation-into-honeytrap-cm-siddaramaiah-announces-honeytrap-cace/
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ, ಸಭಾಧ್ಯಕ್ಷರಿಗೆ ಭರ್ಜರಿ ಕೊಡುಗೆ ನೀಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಜನಪ್ರತಿನಿಧಿಗಳ ವೇತನ ಹೆಚ್ಚಳ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಂಬಂಧ ರಾಜ್ಯದ ವಿಧಾನ ಮಂಡಲದ ಉಭಯ ಸದನದಲ್ಲಿ ಮಸೂದೆ ಮಂಡಿಸಲಾಗಿತ್ತು. ಕರ್ನಾಟಕದ ಮಂತ್ರಿಗಳ ಸಂಭಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂತಹ ಕಡತಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಹೀಗಾಗಿ ರಾಜ್ಯದ ಜನಪ್ರತಿನಿಧಿಗಳ ವೇತನ, ಭತ್ಯೆ ಹೆಚ್ಚಳವಾಗಲಿದೆ. ಕರ್ನಾಟಕ ಜನಪ್ರತಿನಿಧಿಗಳ ವೇತನ, ಭತ್ಯೆ ಎಷ್ಟು ಹೆಚ್ಚಳ? ಸಿಎಂ – 75,000 ದಿಂದ 1,50,000 ಸಚಿವರು – 60,000 ದಿಂದ 1.25 ಲಕ್ಷ ಶಾಸಕರು – 40,000 ದಿಂದ 80,000 ಸ್ಪೀಕರ್ – 75,000 ದಿಂದ 1.25 ಲಕ್ಷ ಸಭಾಪತಿ – 75,000 ದಿಂದ 1.25 ಲಕ್ಷ ಸಿಎಂ, ಸಚಿವರ ಆತಿಥ್ಯ ಭತ್ಯೆ…
ಬೆಂಗಳೂರು: ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಶೇ.100% ವೇತನ ಹೆಚ್ಚಳವನ್ನು ಪ್ರಸ್ತಾಪಿಸುವ ಕರಡು ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಹೀಗಾಗಿ ಕರ್ನಾಟಕದ ಚುನಾಯಿತ ಪ್ರತಿನಿಧಿಗಳಿಗೆ ಶೀಘ್ರದಲ್ಲೇ ವೇತನ, ಭತ್ಯೆಗಳು ಹೆಚ್ಚಾಗಲಿದ್ದಾವೆ. ಹಾಗಾದ್ರೇ ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು ಮತ್ತು ಭತ್ಯೆಗಳು (ತಿದ್ದುಪಡಿ) ಮಸೂದೆ, 2025ಯಲ್ಲಿ ಏನಿದೆ.? ಇದು ಶಾಸಕರು ಮತ್ತು ವಿಧಾನಸಭೆಗೆ ಸಂಬಂಧಿಸಿದ ಇತರ ಪ್ರಮುಖ ಅಧಿಕಾರಿಗಳಿಗೆ ವೇತನ ಮತ್ತು ಭತ್ಯೆ ಎಷ್ಟು ಹೆಚ್ಚಿಸಲಿದೆ ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು ಮತ್ತು ಭತ್ಯೆಗಳು (ತಿದ್ದುಪಡಿ) ಮಸೂದೆ, 2025ಕ್ಕೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಶಾಸಕರು ಮತ್ತು ಎಂಎಲ್ಸಿಗಳು ತಮ್ಮ ವೇತನವನ್ನು ದ್ವಿಗುಣಗೊಳ್ಳಲಿದೆ. ಆದರೆ ಮುಖ್ಯಮಂತ್ರಿಯ ವೇತನವು ತಿಂಗಳಿಗೆ ರೂ. 75,000 ರಿಂದ ರೂ. 1.5 ಲಕ್ಷಕ್ಕೆ ಏರುತ್ತದೆ. ಹಣಕಾಸಿನ ನಿರ್ಬಂಧಗಳು ಮತ್ತು 2022 ರಲ್ಲಿ ಕಡ್ಡಾಯವಾಗಿ ಸ್ಥಗಿತಗೊಂಡ ವೇತನ ಹೆಚ್ಚಳವನ್ನು ಉಲ್ಲೇಖಿಸಿ ಶಾಸಕರು ಬಾಕಿ ಇರುವ ಪರಿಷ್ಕರಣೆಗಳಿಗೆ ಒತ್ತಾಯಿಸುತ್ತಿರುವುದರಿಂದ…
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು. ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನು ಪ್ರಭಾಕರ್ ಅವರಿಗೆ ವಿವರಿಸಲಾಯಿತು. ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿಸಿದರು. ಪರಿಣಾಮವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು. https://kannadanewsnow.com/kannada/karnataka-governor-gives-green-signal-to-increase-salaries-allowances-of-elected-representatives-how-much-increase-here-are-the-details/ https://kannadanewsnow.com/kannada/big-news-what-did-deputy-cm-dk-shivakumar-say-about-akhand-karnataka-bandh-on-march-22/
ನವದೆಹಲಿ: ಏಪ್ರಿಲ್ 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನಾಗ್ಪುರ ಕ್ಷೇತ್ರದಿಂದ 18 ನೇ ಲೋಕಸಭೆಗೆ ಗೆದ್ದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಚುನಾವಣಾ ಅರ್ಜಿಯನ್ನು ನಾಗ್ಪುರದ ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಸೂರಜ್ ಬಲರಾಮ್ ಮಿಶ್ರಾ ಎಂಬವರು ಸಲ್ಲಿಸಿದ ಅರ್ಜಿಯಲ್ಲಿ, ಗಡ್ಕರಿ ಅವರ ಪಕ್ಷವಾದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯ ಛಾಯಾಚಿತ್ರ, ಹೆಸರು ಮತ್ತು ಪಕ್ಷದ ಚಿಹ್ನೆಯ ಜೊತೆಗೆ ಮತದಾರರ ವಿವರಗಳನ್ನು ಮುದ್ರಿಸುವ ಸಾಫ್ಟ್ವೇರ್ ಅನ್ನು ರಚಿಸುವ ಮೂಲಕ ಮತ್ತು ಈ ಚೀಟಿಗಳನ್ನು ಮತದಾರರಿಗೆ ವಿತರಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ. ಈ ಕಾಯ್ದೆಯು ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿದೆ. ಇದು ಭ್ರಷ್ಟ ಅಭ್ಯಾಸವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಆದಾಗ್ಯೂ, ನ್ಯಾಯಮೂರ್ತಿ ಉರ್ಮಿಳಾ ಜೋಶಿ-ಫಾಲ್ಕೆ ಅವರು “ವಸ್ತು ಸತ್ಯಗಳಿಂದ” ಮುಕ್ತರಾಗಿದ್ದಾರೆ ಮತ್ತು “ಅಪೂರ್ಣ ಕ್ರಮದ ಕಾರಣ”ವನ್ನು ಆಧರಿಸಿದ್ದಾರೆ ಎಂದು ತೀರ್ಮಾನಿಸಿದ ನಂತರ ಅರ್ಜಿಯನ್ನು ವಜಾಗೊಳಿಸಿದ್ದಾರೆ.…
ಬೆಂಗಳೂರು: ಹನಿಟ್ರ್ಯಾಪ್ ವಿವಾದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಏಳಿಸಿದೆ. ಗಾಳ ಹಾಕಿದ್ದು ಒಬ್ಬ ಸಚಿವರಿಗಷ್ಟೇ ಅಲ್ಲ, ಇನ್ನೂ ಹಲವರಿಗೆ ಎನ್ನುವ ಮಾಹಿತಿ ಇದೆ. ಹೀಗಾಗಿ ವರಿಷ್ಟರಿಗೆ ವಿವರ ನೀಡಲು ಸಿಎಂ ಸಿದ್ಧರಾಮಯ್ಯ ದೆಹಲಿಗೆ ಪಯಣ ಬೆಳಸಲಿದ್ದಾರೆ ಎನ್ನಲಾಗುತ್ತಿದೆ. ಹೌದು.. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತ್ರವಲ್ಲದೆ ರಾಜ್ಯ ಸಚಿವ ಸಂಪುಟದ ಇನ್ನೂ ಮೂರು ಮಂದಿಯನ್ನು ಹನಿ ಟ್ರ್ತಾಪ್ ಜಾಲಕ್ಕೆ ಸಿಲುಕಿಸಲು ಯತ್ನ ನಡೆದಿದ್ದು ಬಟಾ ಬಯಲಾಗಿದೆ. ರಾಜಧಾನಿ ಬೆಂಗಳೂರಿನ ಇಬ್ಬರು ಸಚಿವರು ಮತ್ತು ಮುಂಬೈ-ಕರ್ನಾಟಕ ಭಾಗದ ಪ್ರಭಾವಿ ಸಚಿವರೊಬ್ಬರನ್ನು ಖೆಡ್ಡಾಗೆ ಕೆಡವಲು ಯತ್ನ ನಡೆಸಿದ್ದು ಸದನದಲ್ಲೇ ಹೊರಬಿದ್ದಿದೆ. ಹನಿಟ್ರ್ಯಾಪ್ ನ ಸುಳಿವು ಸಿಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರಿನ ಓರ್ವ ಸಚಿವರು ಹನಿ ಟ್ರ್ಯಾಪ್ ಮಾಡಲು ಬಂದ ತಂಡವನ್ನು ಲಾಕ್ ಮಾಡಿದ್ದರು. ಹೀಗೆ ಲಾಕ್ ಆದ ಹನಿ ಟ್ರ್ಯಾಪ್ ತಂಡ ಧರ್ಮದೇಟು ಬೀಳುತ್ತಿದ್ದಂತೆಯೇ ಕಂಗಾಲು ಆಗಿದ್ದರು. ಹೀಗೆ ಕಂಗಾಲಾದ ಹನಿ ಟ್ರ್ತಾಪ್ ತಂಡದಿಂದ ಬಾಯ್ಬಿಡಿಸಿದ ಬೆಂಗಳೂರಿನ ಆ ಸಚಿವರು ಬಾಯ್ಬಿಡಿಸಿದ್ದು ಮಾತ್ರವಲ್ಲ ತಪ್ಪೊಪ್ಪಿಕೊಂಡ ಹನಿ ಟ್ರ್ಯಾಪ್ ತಂಡದಿಂದ ಇದರ ಸೂತ್ರಧಾರ ಯಾರೆಂಬ ಬಗ್ಗೆ…
ಬೆಂಗಳೂರು: ತನ್ನೊಂದಿಗೆ ವಾಸಿಸಲು ದಿನಕ್ಕೆ 5,000 ರೂ.ಗೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಿ ಸಾಫ್ಟ್ವೇರ್ ಎಂಜಿನಿಯರ್ ತನ್ನ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಕಾಂತ್ ಎಂದು ಗುರುತಿಸಲ್ಪಟ್ಟ ಪತಿ ತನ್ನ ಹೆಂಡತಿ ಬೇಡಿಕೆ ಇಟ್ಟಿರುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಈ ಪ್ರಕರಣವು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಯಿತು. ಈ ವಿಡಿಯೋ ವೈರಲ್ ಆಗಿದ್ದು, ಶ್ರೀಕಾಂತ್ ಅವರ ಪತ್ನಿ ದಿನನಿತ್ಯದ ಪಾವತಿಗಾಗಿ ತಮ್ಮ ಬೇಡಿಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಆನ್ ಲೈನ್ ನಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಸೆಳೆಯಿತು. ಅನೇಕರು ಸಂಬಂಧದ ಸ್ವರೂಪ ಮತ್ತು ದಂಪತಿಗಳ ನಡುವಿನ ಉದ್ವಿಗ್ನತೆಯನ್ನು ಪ್ರಶ್ನಿಸಿದರು. ಶ್ರೀಕಾಂತ್ ತನ್ನ ಹೆಂಡತಿಯ ಬೇಡಿಕೆಗಳು ಹಣಕ್ಕಿಂತ ಹೆಚ್ಚಿವೆ ಎಂದು ಹೇಳಿಕೊಂಡಿದ್ದಾನೆ. ಅವರ ಪ್ರಕಾರ, ಗರ್ಭಧಾರಣೆಯು ತನ್ನ ದೈಹಿಕ ನೋಟದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಳವಳವನ್ನು ಉಲ್ಲೇಖಿಸಿ ಅವಳು ಜೈವಿಕ ಮಕ್ಕಳನ್ನು ಹೊಂದಲು ನಿರಾಕರಿಸಿದಳು. ಬದಲಾಗಿ, ಅವಳು ಮಕ್ಕಳನ್ನು ದತ್ತು ಪಡೆಯಲು ಒತ್ತಾಯಿಸಿದಳು. ಆದರೆ ಶ್ರೀಕಾಂತ್ ಈ…












