Author: kannadanewsnow09

ಬೆಂಗಳೂರು: ನಗರದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಕೃಷಿ, ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1899725923064361229 https://kannadanewsnow.com/kannada/safety-and-security-of-tourists-in-the-state-is-a-special-priority-guidelines-issued-for-resorts-homestays/ https://kannadanewsnow.com/kannada/breaking-soujanya-rape-and-murder-case-hc-stays-fir-against-youtuber-sameer/

Read More

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್‌ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು ದುಷ್ಕರ್ಮಿಗಳು ಪುರುಷ ಪವಾಸಿಗರೊಂದಿಗೆ ವಾಗ್ವಾದ ಮಾಡಿ ಅವರುಗಳನ್ನು ಸಮೀಪದಲ್ಲಿಯೇ ತುಂಗಾಭದ್ರ ಎಡದಂಡೆ ಕಾಲುವೆಗೆ ನೂಕಿರುತ್ತಾರೆಂದು ವರದಿ ಮಾಡಿರುತ್ತಾರೆ. ಮುಂದುವರೆದು, ಹೋಮ್‌ಸ್ಯೆ ಮಾಲೀಕಳು ಹಾಗೂ ಮತ್ತೊಬ್ಬ ಇಸ್ರೇಲ್ ಪ್ರಜೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿರುತ್ತಾರೆ. ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ಒರಿಸ್ಸಾ ಮೂಲದ ವ್ಯಕ್ತಿ ಮೃತರಾಗಿರುವ ಘಟನೆ ಉಲ್ಲೇಖದ ಪತ್ರದಲ್ಲಿ ವರದಿಯಾಗಿರುತ್ತದೆ. ಮೇಲಿನ ಘಟನೆಯು ಅತ್ಯಂತ ದು:ಖಕರ ಹಾಗೂ ವಿಷಾದನೀಯವಾದುದಾಗಿದೆ.…

Read More

ನವದೆಹಲಿ: ಫೆಬ್ರವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು 7 ತಿಂಗಳ ಕನಿಷ್ಠ ಮಟ್ಟವಾದ 3.61% ಕ್ಕೆ ಇಳಿದಿದ್ದು, ಗ್ರಾಹಕರಿಗೆ ಭಾರಿ ನಿರಾಳತೆ ತಂದಿದೆ. ಜನವರಿಯಲ್ಲಿ, ಚಿಲ್ಲರೆ ಹಣದುಬ್ಬರವು 4.26% ರಷ್ಟಿತ್ತು. ಸರ್ಕಾರ ಹಂಚಿಕೊಂಡ ಅಧಿಕೃತ ಅಂಕಿ ಅಂಶವು ಅರ್ಥಶಾಸ್ತ್ರಜ್ಞರ ಸಮೀಕ್ಷೆಯಿಂದ ಸೂಚಿಸಲ್ಪಟ್ಟಿದ್ದಕ್ಕಿಂತ ಉತ್ತಮವಾಗಿದೆ. “ಜನವರಿ 2025 ಕ್ಕೆ ಹೋಲಿಸಿದರೆ ಫೆಬ್ರವರಿ 2025 ರ ಮುಖ್ಯ ಹಣದುಬ್ಬರದಲ್ಲಿ 65 ಬೇಸಿಸ್ ಪಾಯಿಂಟ್‌ಗಳ ಇಳಿಕೆ ಕಂಡುಬಂದಿದೆ. ಇದು ಜುಲೈ 2024 ರ ನಂತರ ವರ್ಷದಿಂದ ವರ್ಷಕ್ಕೆ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ” ಎಂದು ಅದು ಹೇಳಿದೆ. ಚಿಲ್ಲರೆ ಹಣದುಬ್ಬರದಲ್ಲಿನ ತೀವ್ರ ಕುಸಿತದ ಹಿಂದಿನ ದೊಡ್ಡ ಕಾರಣವೆಂದರೆ ಆಹಾರ ಬೆಲೆಗಳಲ್ಲಿನ ಇಳಿಕೆ. “2024 ರ ಫೆಬ್ರವರಿ ತಿಂಗಳಿಗೆ ಅಖಿಲ ಭಾರತ ಗ್ರಾಹಕ ಆಹಾರ ಬೆಲೆ ಸೂಚ್ಯಂಕ (CFPI) ಆಧರಿಸಿದ ವರ್ಷದಿಂದ ವರ್ಷಕ್ಕೆ ಹಣದುಬ್ಬರ ದರವು ಫೆಬ್ರವರಿ 2024 ಕ್ಕಿಂತ 3.75% (ತಾತ್ಕಾಲಿಕ)” ಎಂದು ದತ್ತಾಂಶವು ತೋರಿಸಿದೆ. ಜನವರಿ 2025 ಕ್ಕೆ ಹೋಲಿಸಿದರೆ ಫೆಬ್ರವರಿ 2025 ರಲ್ಲಿ ಆಹಾರ ಹಣದುಬ್ಬರದಲ್ಲಿ…

Read More

ಮೈಸೂರು: ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಕೊಡ ಮಾಡುವಂತ ಪಿಆರ್ ಟಿ ಕಲಾಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನ ಪಿಆರ್ ಟಿ ಕಲಾ ಪ್ರಶಸ್ತಿಗೆ ಹಿರಿಯ ಚಿತ್ರಕಲಾವಿಧೆ ಸುಧಾ ಮನೋಹರ್ ಹಾಗೂ ಮುಖವೀಣೆ ಆಂಜನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ಅವರು ಮಾಹಿತಿ ಹಂಚಿಕೊಂಡಿದ್ದು,ಪಿ.ಆರ್.ತಿಪ್ಪೇಸ್ವಾಮಿ ಅವರು ಕರ್ನಾಟಕ ಕಂಡ ಅಪ್ರತಿಮ ಕಲಾವಿದರು. ನಾಡಿನ ಸಮಕಾಲೀನ ಚಿತ್ರಕಲಾ ಜಗತ್ತಿನ ಮೇರು ಶಿಖರಗಳಲ್ಲೊಬ್ಬರಾಗಿದ್ದವರು. ಕರ್ನಾಟಕ ಚಿತ್ರಕಲೆಯ ಸರ್ವತೋಮುಖ ಬೆಳವಣಿಗೆಗಾಗಿ ಬದುಕಿನುದ್ದಕ್ಕೂ ದಣಿವರಿಯದೆ ದುಡಿದು, ನಮ್ಮಿಂದ ಮರೆಯಾದ ಹಿರಿಯಚೇತನ, ಹುಟ್ಟು ಕಲಾವಿದರಾದ ಅವರು ಸಾಂಸ್ಕೃತಿಕ ರಾಜಧಾನಿಯಾದ ಮೈಸೂರನ್ನು ತಮ್ಮ ಕಾರ್ಯಕ್ಷೇತ್ರವಾಗಿಸಿಕೊಂಡು ಚಿತ್ರಕಲೆ, ಸಾಹಿತ್ಯ, ಜಾನಪದ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು ಕಳೆದ 5-6 ದಶಕಗಳಲ್ಲಿ ಸಲ್ಲಿಸಿದ ಸೇವೆ ಅನನ್ಯವಾದುದು ಎಂದಿದ್ದಾರೆ. ಇಂದಿನ ದಿನಮಾನದಲ್ಲಿ ಕಾಣದ ವಿರಳ ವ್ಯಕ್ತಿತ್ವ ಅವರದು. ಮೈಸೂರಿನ ಚಾಮರಾಜ ಚಿತ್ರಕಲಾ ಶಾಲೆಯಲ್ಲಿ ಕಲೆಯ ಅಭ್ಯಾಸ ಮಾಡಿ ನಿಸರ್ಗಚಿತ್ರ ರಚನೆಯಲ್ಲಿ ನಿಷ್ಣಾತರೆನಿಸಿ ಸಿದ್ಧಿಯ…

Read More

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮಾರ್ಚ್.14ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರದಲ್ಲಿ ಕರೆಂಟ್ ಇರೋದಿಲ್ಲ. ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/are-bjp-now-aware-of-the-guarantee-implementation-committee-shivakumars-question/ https://kannadanewsnow.com/kannada/breaking-soujanya-rape-and-murder-case-hc-stays-fir-against-youtuber-sameer/

Read More

ಬೆಂಗಳೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅವರ ಹಕ್ಕು ಕಸಿದಿಲ್ಲ. ಶಾಸಕರ ಹಕ್ಕು ಹಾಗೇ ಇದೆ. ನಾವು ಬಡವರಿಗಾಗಿ ಹೊಸದಾಗಿ ಐದು ಗ್ಯಾಂಟಿ ಯೋಜನೆಗಳನ್ನು ನೀಡಿದ್ದು, ಈ ಯೋಜನಗಳು ಸರಿಯಾಗಿ ತಲುಪುತ್ತಿದೇಯೇ ಇಲ್ಲವೇ? ಇದರ ಸದುಪಯೋಗವಾಗುತ್ತಿದೆಯೇ ಅಥವಾ ದುರುಪಯೋಗವಾಗುತ್ತಿದೆಯೇ ಎಂದು ಮನೆ ಮನೆಗೆ ಹೋಗಿ ಪರಿಶೀಲನೆ ಮಾಡಲು ನಮ್ಮ ಜನರಿಗೆ ಜವಾಬ್ದಾರಿ ನೀಡಿದ್ದೇವೆ. ಜನರಿಗೆ ಯೋಜನೆ ಪಡೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಾವು ಇದನ್ನು ಮಾಡಿದ್ದೇವೆ. ಮಾನ್ಯ ಪ್ರಧಾನಮಂತ್ರಿಗಳು ಸೇರಿದಂತೆ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ್ದರು. ಈಗ ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಸೇರಿದಂತೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Counci-ICC) ಬಿಡುಗಡೆ ಮಾಡಿರುವ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಚಾಂಪಿಯನ್ಸ್ ಟ್ರೋಫಿ ವಿಜೇತರಿಗೆ ಬಹುಮಾನ ಲಭಿಸಿದೆ. ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ ಎರಡು ಸ್ಥಾನ ಮೇಲಕ್ಕೇರಿ ಅಗ್ರಸ್ಥಾನಕ್ಕೇರಿದ್ದಾರೆ. ಶುಬ್ಮನ್ ಗಿಲ್ ನಾಯಕತ್ವದ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಹಿಂದಿಕ್ಕಿ 3 ನೇ ಸ್ಥಾನಕ್ಕೆ ಏರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಭಾರತದ 252 ರನ್ಗಳ ಯಶಸ್ವಿ ಚೇಸಿಂಗ್ನಲ್ಲಿ 76 ರನ್ ಗಳಿಸುವ ಮೂಲಕ ಭಾರತದ ನಾಯಕ ಅಗ್ರ ಕ್ರಮಾಂಕದಲ್ಲಿ ಆಕ್ರಮಣಕಾರಿಯಾಗಿ ಮುಂದುವರಿದರು. ರೋಹಿತ್ ಕೇವಲ 41 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಭಾರತದ ಗೆಲುವಿಗೆ ವೇದಿಕೆ ಕಲ್ಪಿಸಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಯಾನಕ ಪ್ರದರ್ಶನದ ಹೊರತಾಗಿಯೂ, ಪಾಕಿಸ್ತಾನದ ಸ್ಟಾರ್ ಆಟಗಾರ ಬಾಬರ್ ಅಜಮ್ ತಮ್ಮ ನಂ.2 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಶುಬ್ಮನ್ ಗಿಲ್ 784…

Read More

ಬೆಂಗಳೂರು: ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕಕ್ಕೆ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನದಲ್ಲಿ ಅಂಕಿತ ಸೂಚಿಸಲಾಗಿತ್ತು. ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಅರಮನೆ( ಭೂ ಬಳಕೆ ಮತ್ತು ನಿಯಂತ್ರಣ) ಅಧಿನಿಯಮ 2025ಕ್ಕೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 14 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IVA) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದಿದೆ. ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಅಧಿನಿಯಮ, 2025 ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996…

Read More

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು. ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು. https://kannadanewsnow.com/kannada/bjp-delegation-writes-to-governor-asks-him-to-apprise-state-government/ https://kannadanewsnow.com/kannada/breaking-soujanya-rape-and-murder-case-hc-stays-fir-against-youtuber-sameer/

Read More

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾನ್ಯ ರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಿಜೆಪಿ- ಜೆಡಿಎಸ್ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ಗೌರವಾನ್ವಿತ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು. ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ ಎಂದರು. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದಾಗಿ ತಿಳಿಸಿದರು. ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಲೆ ಮತ್ತು ಕಾಲೇಜುಗಳ ಉಸ್ತುವಾರಿ ಸಮಿತಿಗಳಿಗೆ ಶಿಕಾರಿಪುರ ತಾಲ್ಲೂಕಿನ…

Read More