Author: kannadanewsnow09

ಬಳ್ಳಾರಿ : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಗಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ…

Read More

ಬಳ್ಳಾರಿ : ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿರವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯ ಬ್ಯಾಂಕುಗಳೊAದಿಗೆ ಪ್ರಧಾನಮಂತ್ರಿ ಜನ್ ಜೀವನ್ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ರಾಜ್ಯ ಮಟ್ಟದಲ್ಲಿ ಸಕ್ರಿಯ ನೋಂದಣಿಗಳನ್ನು ಹೆಚ್ಚಿಸುವ ಸಲುವಾಗಿ ಜಿಲ್ಲಾ ಲೀಡ್ ಬ್ಯಾಂಕ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತಯರ ಸಹಯೋಗದೊಂದಿಗೆ ಈ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಅಭಿಯಾನ ಆಯೋಜಿಸುತ್ತಾರೆ ಎಂದು ಹೇಳಿದ್ದಾರೆ. ಮುಂಬರುವ ಎರಡು ತಿಂಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಎರಡು ಯೋಜನೆಗಳಲ್ಲಿ ಪ್ರತಿ ಪಂಚಾಯಿತಿಯಲ್ಲೂ ಕನಿಷ್ಠ 150ಕ್ಕೂ ಹೆಚ್ಚಿನ ನೋಂದಣಿಗಳನ್ನು ಮಾಡಿಸುವ ಉದ್ದೇಶ ಹೊಂದಲಾಗಿದೆ. ಆಯಾ ಗ್ರಾಪಂ…

Read More

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ,. ಎಂ.ಎ., ಎಂ.ಕಾA., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ. ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್‌ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೆöÊರ‍್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ. ಕೋವಿಡ್‌ನಿಂದಾಗಿ ಮೃತ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ…

Read More

ನವದೆಹಲಿ: ‘ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳು ಅಗತ್ಯವಿಲ್ಲ…’: ಅತ್ಯಾಚಾರದ 40 ವರ್ಷಗಳ ನಂತರ ಟ್ಯೂಷನ್ ಶಿಕ್ಷಕನ ವಿರುದ್ಧ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗಗಳಲ್ಲಿನ ಗಾಯದ ಗುರುತುಗಳ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಸುಮಾರು ನಾಲ್ಕು ದಶಕಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವು 40 ವರ್ಷಗಳ ಕಠಿಣ ಕಾನೂನು ಹೋರಾಟದ ನಂತರ ಮುಕ್ತಾಯಗೊಂಡಿದೆ. 1984ರ ಮಾರ್ಚ್ ನಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದ. ವಿಚಾರಣಾ ನ್ಯಾಯಾಲಯವು ಎರಡು ವರ್ಷಗಳಲ್ಲಿ ಆರೋಪಿಗಳನ್ನು ದೋಷಿ ಎಂದು ಘೋಷಿಸಿದರೂ, ಈ ಪ್ರಕರಣವು ದಶಕಗಳಿಂದ ಉನ್ನತ ನ್ಯಾಯಾಲಯಗಳಲ್ಲಿ ಕೊಳೆಯುತ್ತಿದೆ. ತೀರ್ಪನ್ನು ವಿಳಂಬಗೊಳಿಸಲು ಆರೋಪಿಗಳು ಸಣ್ಣ ವಾದವನ್ನು ಬಳಸಿದರು, ಅಂತಿಮವಾಗಿ ಸಂತ್ರಸ್ತೆಯ ನೋವು ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ವಿಸ್ತರಿಸಿದರು. ವಿಚಾರಣಾ ನ್ಯಾಯಾಲಯವು 1986 ರಲ್ಲಿ ತನ್ನ ತೀರ್ಪನ್ನು ನೀಡಿತು, ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿತು, ಆದರೆ ಅಲಹಾಬಾದ್ ಹೈಕೋರ್ಟ್ ಈ ತೀರ್ಪನ್ನು ಎತ್ತಿಹಿಡಿಯಲು ಇನ್ನೂ 25…

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಲಾಗುವುದು. ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಜವಾಬ್ದಾರಿಯುತ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಭಿವೃದ್ಧಿಯಲ್ಲಿ ತಾರತಮ್ಯ ಹೋಗಲಾಡಿಸುವ ಮಹತ್ವಾಕಾಂಕ್ಷೆಯೊಂದಿಗೆ ಸಂವಿಧಾನದ 371 (ಜೆ) ಅನುಚ್ಚೇದಕ್ಕೆ ತಿದ್ದುಪಡಿ ತಂದು ಕಲ್ಪಿಸಲಾಗಿರುವ ಸಂವಿಧಾನಾತ್ಮಕ ಹಕ್ಕು ಮತ್ತು ಸೌಕರ್ಯಗಳ ಜಾರಿಗೆ ಅಧಿಕಾರಿಗಳು ಅನಾಸಕ್ತಿ ತೋರುತ್ತಿರುವುದನ್ನು ಗಮನಿಸಲಾಗುತ್ತಿದೆ.…

Read More

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಶ್ರೀ ಬೈರತಿ ಸುರೇಶ ಅವರು ಸೂಚಿಸಿದರು. ಮೈಸೂರು ಸುತ್ತ ಮುತ್ತಲಿನ 20 ರಿಂದ 30 ಹಳ್ಳಿಗಳನ್ನು ಬೃಹತ್‌…

Read More

ಬೆಂಗಳೂರು : ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಕ್ಕಳಲ್ಲಿ ಕ್ಯಾನ್ಸರ್‌ ಆತಂಕಕಾರಿ ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ ಆತಂಕಕಾರಿ ವಿಷಯ. ಇದರ ಬಗ್ಗೆ ತಾಲ್ಲೂಕು ಹಾಗೂ…

Read More

ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು. ದುರ್ಬಳಕೆ ತಡೆಗಟ್ಟಲು ಕ್ರಮ ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು.…

Read More

ನವದೆಹಲಿ: ಪವಿತ್ರ ರಂಜಾನ್ ತಿಂಗಳಲ್ಲಿ ಗುಲ್ಮಾರ್ಗ್ನ ಸ್ಕೀ ರೆಸಾರ್ಟ್ನಲ್ಲಿ ಆಯೋಜಿಸಲಾದ ಫ್ಯಾಷನ್ ಶೋಗೆ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 24 ಗಂಟೆಗಳಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ನಡೆಸಲಾದ ಈ ಫ್ಯಾಷನ್ ಶೋ ಅನ್ನು ಧಾರ್ಮಿಕ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ. ಅವರು ಇದನ್ನು “ಅಶ್ಲೀಲ” ಮತ್ತು ಕಣಿವೆಯ ಸಾಂಸ್ಕೃತಿಕ ಮತ್ತು ಧಾರ್ಮಿಕ ನೀತಿಗಳಿಗೆ ವಿರುದ್ಧವಾಗಿದೆ ಎಂದು ಬಣ್ಣಿಸಿದ್ದಾರೆ. ಕಾಶ್ಮೀರದ ಉನ್ನತ ಧರ್ಮಗುರು ಮಿರ್ವೈಜ್ ಉಮರ್ ಫಾರೂಕ್ ಈ ಘಟನೆಯನ್ನು ತೀವ್ರವಾಗಿ ಟೀಕಿಸಿದ ನಂತರ, “ಪ್ರವಾಸೋದ್ಯಮ ಪ್ರಚಾರದ ಹೆಸರಿನಲ್ಲಿ ಅಶ್ಲೀಲತೆಯನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದ ನಂತರ ವಿವಾದವು ವೇಗವನ್ನು ಪಡೆದುಕೊಂಡಿತು. “ಅತಿರೇಕ! ಪವಿತ್ರ ರಂಜಾನ್ ತಿಂಗಳಲ್ಲಿ ಗುಲ್ಮಾರ್ಗ್ನಲ್ಲಿ ಅಶ್ಲೀಲ ಫ್ಯಾಷನ್ ಶೋ ಆಯೋಜಿಸಲಾಗಿದೆ. ಅದರ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗಿದ್ದು, ಜನರಲ್ಲಿ ಆಘಾತ ಮತ್ತು ಕೋಪವನ್ನು ಉಂಟುಮಾಡಿದೆ” ಎಂದು ಮಿರ್ವೈಜ್ ಎಕ್ಸ್ನಲ್ಲಿ ಬರೆದಿದ್ದಾರೆ. “ಸೂಫಿ,…

Read More

ಬೆಂಗಳೂರು: ಚಿತ್ರನಟಿ ರನ್ಯಾರಾವ್ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂಬುದಾಗಿ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ ಟಿ ಬಿ ಜಯಚಂದ್ರ ಅವರು ಮಾತನಾಡಿದರು. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾರಾವ್ ಅವರು ನಿರ್ದೇಶಕಿ ಆಗಿರುವ ಕ್ವಿರೋಡ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಕೆಐಎಡಿಬಿ ವತಿಯಿಂದ 2023ರಲ್ಲಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಆದರೆ ರನ್ಯಾ ರಾವ್ ಅವರು ಕೆಐಎಡಿಬಿ ಜಮೀನಿನ ಖರೀದಿಗೆ ಹಣ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರ ಕಂಪನಿಗೆ ಕೆಐಎಡಿಬಿ ಜಮೀನನ್ನು ನೀಡಿಲ್ಲ ಎಂದು ಟಿ‌ಬಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. 2023 ಜನವರಿಯಲ್ಲಿ 12 ಎಕರೆ ಜಮೀನನ್ನು ರನ್ಯಾ ರಾವ್ ಅವರ ಕಂಪನಿಗೆ ಮಂಜೂರು ಮಾಡಲಾಗಿತ್ತು. 2023 ಮೇ ತಿಂಗಳಲ್ಲಿ ತಾವು ಶಾಸಕರಾದ ನಂತರ ಸ್ಥಳೀಯರಿಗೆ ಕೆಐಎಡಿಬಿ ಜಮೀನು ನೀಡಬೇಕೆಂದು ನಿರ್ಧಾರ ಕೈಗೊಂಡಿರುವುದರಿಂದ ರನ್ಯಾ…

Read More