Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ: ಹುಬ್ಬಳ್ಳಿಯ ಕೆಶ್ವಾಪೂರದ ನಿವಾಸಿಯಾದ ಮೇಘಾ ದೇಶಪಾಂಡೆಯವರು ಎದುರುದಾರ ಓಲಾ ಎಲೆಕ್ಟ್ರಿಕ್ ಕಂಪನಿಯವರ ಸ್ಕೂಟರ್ನ್ನು ರೂ.1,62,010 ಪಾವತಿಸಿ ಖರೀದಿಸಿದ್ದರು. ಖರೀದಿಸಿದ ಮರು ದಿನವೇ ಅವರ ಸ್ಕೂಟರ ಮೇಲೆ ಕೆಲವೊಂದು ಮಾರ್ಕಗಳು ಮೂಡಿದ್ದವು ಅದನ್ನು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸುವುದಾಗಿ ಹೇಳಿದರೂ ಅದನ್ನು ಸರಿಪಡಿಸಿ ಕೊಟ್ಟಿರಲಿಲ್ಲ. ಅಲ್ಲದೇ ವಾಹನ ಕೇಲವ 20-30 ಕಿ.ಮಿ. ನಂತರ ನಡು ರಸ್ತೆಯಲ್ಲಿ ಬಂದ್ ಬಿಳ್ಳುತ್ತಿತ್ತು ಮತ್ತು ವಾಹನದ ಆಯಿಲ್ ಸೋರುವಿಕೆಯೂ ಕಂಡು ಬಂದಿತು. ಈ ವಿಷಯವನ್ನು ಎದುರುದಾರರಿಗೆ ತಿಳಿಸಿದಾಗ ಅವರು ಅದರ ಸ್ಟಾಕ್ ಇರುವುದಿಲ್ಲ ಅಂತಾ ತಿಳಿಸಿರುತ್ತಾರೆ. ಜೂನ್ 2024 ರಲ್ಲಿ ವಾಹನವೂ ಪೂರ್ತಿಯಾಗಿ ಉಪಯೊಗಿಸಲು ಬಾರದೇ ಇದ್ದ ಕಾರಣ ಎದುರುದಾರರಿಗೆ ಸಾಕಷ್ಟು ಸಲ ವಿನಂತಿಸಿದರೂ ಅದನ್ನು ಸರಿಪಡಿಸಿರುವುದಿಲ್ಲ. ಅಂತಹ ಎದುರುದಾರರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ: 31/08/2024 ರಂದು ದೂರನ್ನು ಸಲ್ಲಿಸಿದ್ದರು.…
ಧಾರವಾಡ : 2014-15 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 18 ಗಣತಿ ಚಾರ್ಜ್ ಅಧಿಕಾರಿಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ರಾಜ್ಯ ಕಾರ್ಯದರ್ಶಿ (ಆಡಳಿತ) ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು ಅವರು ಬಾಕಿ ಉಳಿದ ಗೌರವಧನವನ್ನು ಬಿಡುಗಡೆ ಮಾಡಿರುತ್ತಾರೆ. ಕಾರಣ ಸಂಬಂಧಿಸಿದ ಗಣತಿದಾರರು ಹಾಗೂ ಮೇಲ್ವಿಚಾರಕರು ತಮ್ಮ ವಿವರಗಳೊಂದಿಗೆ ಮಾರ್ಚ್ 25, 2025 ರೊಳಗಾಗಿ ಆಯಾ ಸಂಬಂಧಿಸಿದ ಗಣತಿ ಚಾರ್ಜ ಅಧಿಕಾರಿಗಳ ಕಚೇರಿಗಳಿಗೆ ಖುದ್ದಾಗಿ ಭೇಟಿಯಾಗಿ, ಗೌರವಧನವನ್ನು ಪಡೆಯಲು ಸೂಚಿಸಲಾಗಿದೆ. ತಪ್ಪಿದಲ್ಲಿ ಹಾಗೂ ಮಾಹಿತಿ ಲಭ್ಯವಾಗದ ಗಣತಿದಾರರ, ಮೇಲ್ವಿಚಾರಕರ ಗೌರವಧನವನ್ನು ರಾಜ್ಯ ಕಾರ್ಯದರ್ಶಿ (ಆಡಳಿತ) ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು ಅವರಿಗೆ ಬಾಕಿ ಉಳಿದ ಗೌರವಧನವನ್ನು ಮರಳಿ ಕಳುಹಿಸಿಲಾಗುವುದು. ಸದರಿ ಹಣವನ್ನು ಸರ್ಕಾರಕ್ಕೆ ಮರಳಿಸಿದ ನಂತರ ತಮ್ಮ ಸಂಭಾವನೆ ಮೊತ್ತ ನೀಡಲು ಅವಕಾಶವಿರುವುದಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ…
ಬೆಂಗಳೂರು: ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶಾಸಕರಿಗೆ ಔತಣ ಕೂಟವನ್ನು ಆಯೋಜಿಸಿದ್ದಾರೆ. ಈ ಔತಣ ಕೂಟದಲ್ಲಿ ಇಬ್ಬರು ಬಿಜೆಪಿಯ ಶಾಸಕರು ಭಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರು ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಔತಣ ಕೂಟವನ್ನು ಆಯೋಜಿಸಲಾಗಿದೆ. ಈ ಔತಣ ಕೂಟದಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರು ಭಾಗಿಯಾಗಿದ್ದಾರೆ. ಸಚಿವರು, ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಆಯೋಜಿಸಿರುವಂತ ಔತಣ ಕೂಟದಲ್ಲಿ ಬಿಜೆಪಿಯ ಶಾಸಕ ಎಸ್.ಟಿ ಸೋಮಶೇಖರ್ ಹಾಗೂ ಹೆಬ್ಬಾರ್ ಕೂಡ ಆಗಮಿಸಿ, ಭಾಗಿಯಾಗಿದ್ದಾರೆ. ಕಾಂಗ್ರೆಸ್ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಂತ ಈ ಇಬ್ಬರು ನಾಯಕರು, ಎಲ್ಲಾ ವಿಚಾರದಲ್ಲೂ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇಂತಹ ಇಬ್ಬರು ಬಿಜೆಪಿ ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ನಲ್ಲಿ ಭಾಗಿಯಾಗಿದ್ದಾರೆ. https://kannadanewsnow.com/kannada/ballari-power-supply-will-be-disrupted-in-these-areas-of-the-district-on-march-14/ https://kannadanewsnow.com/kannada/rs-1300-crore-construction-scam-president-approves-fir-against-sisodia-satyendra-jain/
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 110/11ಕೆ.ವಿ ಬಿಸಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಕಕ್ಕಬೇವಿನಹಳ್ಳಿ, ಬೇವಿನಹಳ್ಳಿ ಮತ್ತು ಅಮರಾಪುರ ಗ್ರಾಮಗಳಲ್ಲಿ ಶಿಥಿಲಗೊಂಡ ಕಂಬಗಳ ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 03 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ಟಿ.ಬೂದಿಹಾಳ್. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತೆಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು. ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ತೆಗ್ಗಿನಬೂದಿಹಾಳ್, ಅಮರಾಪುರ, ಗೋಡೆಹಾಳ್, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ, ವಿಘ್ನೇಶ್ವರ ಕ್ಯಾಂಪ್, ಧನಲಕ್ಷಿö್ಮ ಕ್ಯಾಂಪ್, ಕೆರೆಕ್ಯಾಂಪ್, ಮಾಳೆಗಡ್ಡೆ ಕ್ಯಾಂಪ್ ಗ್ರಾಮಗಳು ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ. https://kannadanewsnow.com/kannada/cbse-gives-another-chance-to-class-12-students-who-could-not-appear-for-exams-on-march-12/ https://kannadanewsnow.com/kannada/rs-1300-crore-construction-scam-president-approves-fir-against-sisodia-satyendra-jain/
BREAKING: 1,300 ಕೋಟಿ ಕಟ್ಟಡ ನಿರ್ಮಾಣ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧದ FIRಗೆ ರಾಷ್ಟ್ರಪತಿ ಅನುಮೋದನೆ
ನವದೆಹಲಿ: ದೆಹಲಿ ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದಲ್ಲಿ 1,300 ಕೋಟಿ ರೂ.ಗಳ ಹಗರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಎಫ್ಐಆರ್ ದಾಖಲಿಸಲು ಅಧ್ಯಕ್ಷ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 2022 ರಲ್ಲಿ, ದೆಹಲಿ ಸರ್ಕಾರದ ವಿಚಕ್ಷಣಾ ನಿರ್ದೇಶನಾಲಯವು ಹಗರಣದ ಬಗ್ಗೆ ತನಿಖೆಗೆ ಶಿಫಾರಸು ಮಾಡಿತು ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತು. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಮತ್ತು ಜೈನ್ ವಿರುದ್ಧ ಎಫ್ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ವಿಚಕ್ಷಣಾ ಆಯೋಗ (ಸಿವಿಸಿ) ಫೆಬ್ರವರಿ 17, 2020 ರ ವರದಿಯಲ್ಲಿ ದೆಹಲಿ ಆಡಳಿತದಲ್ಲಿ 2,400 ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ “ಎದ್ದುಕಾಣುವ ಅಕ್ರಮಗಳನ್ನು” ಎತ್ತಿ ತೋರಿಸಿದೆ https://kannadanewsnow.com/kannada/cbse-gives-another-chance-to-class-12-students-who-could-not-appear-for-exams-on-march-12/ https://kannadanewsnow.com/kannada/process-to-recruit-2000-teaching-and-non-teaching-posts-to-begin-soon-minister-m-c-sudhakar/
ನವದೆಹಲಿ:’ ಹೋಳಿ ಆಚರಣೆಯಿಂದಾಗಿ ಮಾರ್ಚ್ 15 ರಂದು ಬೋರ್ಡ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಗುರುವಾರ ಪ್ರಕಟಿಸಿದೆ. ನಿಯಮಿತ ಪರೀಕ್ಷೆಗಳ ನಂತರ ನಡೆಸಲಾಗುವ ಈ ವಿಶೇಷ ಪರೀಕ್ಷೆಯನ್ನು ಸಾಮಾನ್ಯವಾಗಿ ಕ್ರೀಡಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗುತ್ತದೆ. “ದೇಶದ ಹೆಚ್ಚಿನ ಭಾಗಗಳಲ್ಲಿ ಮಾರ್ಚ್ 14 ರಂದು ಹೋಳಿ ಹಬ್ಬವನ್ನು ಆಚರಿಸಲಾಗಿದ್ದರೂ, ಕೆಲವು ಸ್ಥಳಗಳಲ್ಲಿ, ಆಚರಣೆಗಳು ಮಾರ್ಚ್ 15 ರಂದು ನಡೆಯುತ್ತವೆ ಅಥವಾ ಆಚರಣೆಗಳು ಮಾರ್ಚ್ 15 ರವರೆಗೆ ಹರಡುತ್ತವೆ ಎಂದು ಸಿಬಿಎಸ್ಇಗೆ ತಿಳಿಸಲಾಗಿದೆ” ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಪಿಟಿಐಗೆ ತಿಳಿಸಿದ್ದಾರೆ. ಪ್ರತಿಕ್ರಿಯೆಯ ನಂತರ, ವೇಳಾಪಟ್ಟಿಯ ಪ್ರಕಾರ ಪರೀಕ್ಷೆ ನಡೆಯಲಿದ್ದು, ಫೆಬ್ರವರಿ 15 ರಂದು ಹಾಜರಾಗಲು ಕಷ್ಟಪಡುವ ವಿದ್ಯಾರ್ಥಿಗಳು ನಂತರದ ದಿನಾಂಕದಂದು ಪತ್ರಿಕೆಯನ್ನು ಬರೆಯಲು ಆಯ್ಕೆ ಮಾಡಬಹುದು ಎಂದು ಭಾರದ್ವಾಜ್ ಹೇಳಿದರು. “ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಂಡಳಿಯ ನೀತಿಯ ಪ್ರಕಾರ ವಿಶೇಷ…
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಯ ಭರ್ತಿ ಮಾಡಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1900182233417474325 ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಗೆ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 08 ಔಷಧ ಪರಿವೀಕ್ಷಕರು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಉಳಿದ 104 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 83 ಪರಿವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ ಮೇರೆಗೆ 67 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದಿನಾಂಕ: 23-06-2021ರಂದು ಇಲಾಖೆಗೆ ಆಯ್ಕೆಪಟ್ಟಿಯನ್ನು ಕಳುಹಿಸಲಾಗಿದೆ. ಸದರಿ ಆಯ್ಕೆಪಟ್ಟಿಯನ್ನು ವಿವಿಧ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು…
ಬೆಂಗಳೂರು: ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ ಚರ್ಚೆ ಮಾಡಿದೆ. ಅಂತಿಮವಾಗಿ ಯೋಜನಾ ಪ್ರಾಧಿಕಾರ ಪೂರ್ವಾನುಮತಿ ಆಧಾರದ ಮೇಲೆ ಮಾಸ್ಟರ್ ಪ್ಲಾನ್ ಮಾಡಬೇಕು ಎಂದು ಸೇರಿಸಲಾಗಿದೆ. ಇಲ್ಲಿ ಕೈಗಾರಿಕೆಗಳು ಬೆಂಗಳೂರು ನಗರದ ಒಳಗೆ ಇದ್ದರೂ ಸ್ಥಳೀಯ ಸಂಸ್ಥೆಗಳ ವಿಶ್ವಾಸದೊಂದಿಗೆ ಮಾಡಬೇಕು ಎಂದು ತಿದ್ದುಪಡಿ ಮಾಡಲಾಗಿದೆ. ಇನ್ನು ವಾರ್ಡ್ ಸಂಖ್ಯೆ ಆಧರಿಸಿ ನಾಮನಿರ್ದೇಶನ ವಿಚಾರವಾಗಿ ಏಳು ಸದಸ್ಯರನ್ನು ಲಾಟರಿ ಮೂಲಕ ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು. ನಂತರ ಇದನ್ನು ಅಂಗೀಕರಿಸಲಾಯಿತು.…
ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರೆತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದ್ದು, ಈ ಬಾರಿಯ ಟೆಂಡರ್ ನಲ್ಲಿ ಖರೀಧಿಸಲಾಗುತ್ತಿದೆ ಎಂದರು. ಕೆಲವೊಂದು ಔಷಧಿಗಳ ಕೊರತೆಗೆ ಕಾರಣ ಟೆಂಡರುಗಳಲ್ಲಿ ಯಾರೂ ಭಾಗವಹಿಸದೇ ಇರುವುದು. ಈ ಔಷಧಿಗಳ ಮೌಲ್ಯ ಮತ್ತು ಪ್ರಮಾಣ ಕಡಿಮೆ ಇರುವುದರಿಂದ ಹಲವಾರು ಬಾರಿ ಟೆಂಡರ್ ಆಹ್ವಾನಿಸದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಔಷಧಿ ಸರಬರಾಜು, ಖರೀದಿ ಪ್ರಕ್ರಿಯೆಯ ಟೆಂಡರ್ ಷರತ್ತುಗಳನ್ನು ಸರಳೀಕರಣ ಮಾಡಿ ಔಷಧಿಗಳನ್ನು ಸರಬರಾಜು ಮಾಡಲು ಹೆಚ್ಚಿನ ಬಿಡ್ ದಾರರು ಭಾಗವಹಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು. ಪ್ರಸ್ತುತ ಆರೋಗ್ಯ ಸಂಸ್ಥೆಗಳು ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ…
ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. https://twitter.com/KarnatakaVarthe/status/1900162162984968652 https://kannadanewsnow.com/kannada/state-govt-planning-to-increase-retirement-age-of-super-speciality-doctors-dr-sharan-prakash-patil/ https://kannadanewsnow.com/kannada/bollywood-actress-bhagyashree-suffers-serious-injury-while-playing-pickle-ball-doctors-give-13-stitches-on-her-forehead/












