Author: kannadanewsnow09

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು. ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,500 ಕೋಟಿ ರೂ.ಗೂ ಅಧಿಕ ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ…

Read More

ಬೆಂಗಳೂರು: ನಗರದಲ್ಲಿ ಮಹಿಳಾ ಸಬಲೀಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದರ ಭಾಗವಾಗಿ ಉಚಿತ  ಇ-ಆಟೋಗಳನ್ನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ವಿತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಹಿಳಾ ಸಬಲೀಕರಣದಲ್ಲಿ ದಿಟ್ಟ ಹೆಜ್ಜೆ ಇಡುತ್ತಾ ಬೆಂಗಳೂರು ನಗರ ಪೊಲೀಸರು, ಪರಿಹಾರ, ಯುನೈಟೆಡ್ ವೇ ಬೆಂಗಳೂರು ಹಾಗೂ ಎನ್ ಟಿಟಿ ಡಾಟಾ ಸಹಯೋಗದಲ್ಲಿ ಕಮಾಂಡ್ ಸೆಂಟರ್ ನಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 5 ಉಚಿತ ಇ- ಆಟೋಗಳನ್ನು ವಿತರಣೆ ಮಾಡಲಾಯಿತು ಎಂದು ತಿಳಿಸಿದೆ. https://twitter.com/BlrCityPolice/status/1840723230363168932 ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹಾಗೂ ಹಿರಿಯ ಅಧಿಕಾರಿಗಳು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಕೀ ವಿತರಣೆ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಿದರು. ಜತೆಗೆ ಈ ಮಹಿಳೆಯರು ಚಾಲನೆ ಮಾಡಿದ ಆಟೋದಲ್ಲಿ ಪೊಲೀಸ್ ಅಧಿಕಾರಿಗಳು ಸವಾರಿ ಮಾಡಿ ಈ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದರು ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. https://kannadanewsnow.com/kannada/applications-invited-for-free-training-in-embroidery-erywork/…

Read More

ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.…

Read More

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನಡಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ನೀಡಿದೆ. ಇಂದು ಬಿಜೆಪಿ ಮುಖಂಡ ನಳೀನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತ್ರ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. ಹೈಕೋರ್ಟ್ ನ್ಯಾಯಪೀಠವು ಚುನಾವಣಾ ಬಾಂಡ್ ಹೆಸರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ರಾಘವೇಂದ್ರ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ಮುಖಂಡರ ಮೇಲೆ ದಾಖಲಾಗಿದ್ದಂತ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆೆ ನೀಡಿ ಆದೇಶಿಸಿದೆ. https://kannadanewsnow.com/kannada/another-good-news-for-government-employees-state-govt-issues-important-order-on-promotions/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಅಲ್ಲದೇ ಓಪಿಎಸ್ ಜಾರಿಗೂ ವರದಿ ನೀಡುವಂತೆ ಆದೇಶಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಮುಂಬಡ್ತಿ ಕುರಿತಂತೆ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಗಳ ಕಲ್ಯಾಣ ಸಮಿತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೆಲವು ಸರ್ಕಾರಿ ಅಧಿಕಾರಿ/ ನೌಕರರುಗಳು ನಿಯಮಾನುಸಾರ ಮೀಸಲಾತಿಗೆ ನಿಗಧಿಪಡಿಸಿರುವ ಪ್ರಾತಿನಿಧ್ಯ ಮುಂಬಡ್ತಿಯಲ್ಲಿ ದೊರೆಯುವಂತೆ ಸದರಿ ಸಮಿತಿಗೆ ಮನವಿಗಳನ್ನು ಸಲ್ಲಿಸಿರುತ್ತಾರೆ. ಈ ಬಗ್ಗೆ ಸದರಿ ಸಮಿತಿಯು ದಿನಾಂಕ: 20-06-2024ರ ಸಭೆಯಲ್ಲಿ ಚರ್ಚಿಸಲಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್ /126/ ಎಸ್‌ಸಿಆರ್/82, ದಿನಾಂಕ:26.11.1982 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಂಬಡ್ತಿಯಲ್ಲಿ 5 ವರ್ಷಗಳ ಅರ್ಹತಾದಾಯಕ…

Read More

ಉಡುಪಿ: ಜಿಲ್ಲೆಯ ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ತಂದೆ, ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಕಾರ್ಕಳ ಹಾಗೂ ಧರ್ಮಸ್ಥಳ ಹೆದ್ದಾರಿಯಲ್ಲಿ ಲಾರಿಯೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ತಂದೆ, ಮೂವರು ಮಕ್ಕಳು ಧಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದರೇ, ತಾಯಿಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಮೃತರನ್ನು ತಂದೆ ಸುರೇಶ್, ಮಕ್ಕಳಾದಂತ ಸಮೀಕ್ಷಾ, ಸುಶ್ಮಿತಾ ಹಾಗೂ ಸುಶಾಂತ್ ಎಂಬುವರಾಗಿದ್ದಾರೆ. ತಾಯಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-tourists-going-for-mysuru-dasara/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/

Read More

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ತೆರಳುವಂತ ಪ್ರವಾಸಿಗರಿಗೆ ಅನುಕೂಲಕ್ಕಾಗಿ, ನೈರುತ್ಯ ರೈಲ್ವೆಯಿಂದ, ದಸರಾ ಹಬ್ಬದ ಪ್ರಯುಕ್ತ ನಾಲ್ಕು ರೈಲುಗಳ ತಾತ್ಕಾಲಿಕ ನಿಲುಗಡೆಗೆ ವ್ಯವಸ್ಥೆ ಮಾಡಿದೆ. ರೈಲು ಸಂಖ್ಯೆ 16225/16226 ಮೈಸೂರು-ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 16222/16221 ಮೈಸೂರು-ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ನೀಡಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ತಾತ್ಕಾಲಿಕ ನಿಲುಗಡೆಗಳು ಅಕ್ಟೋಬರ್ 9 ರಿಂದ 13, 2024 ರವರೆಗೆ ಜಾರಿಯಲ್ಲಿರುತ್ತವೆ. ತಾತ್ಕಾಲಿಕ ನಿಲುಗಡೆಗಳ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ಪ್ರೆಸ್ ರೈಲು ಬೆಳಗುಲ (10:27/10:28 ಗಂಟೆ), ಕೃಷ್ಣರಾಜಸಾಗರ (10:31/10:32 ಗಂಟೆ), ಕಲ್ಲೂರು ಯಡಹಳ್ಳಿ (10:36/10:37 ಗಂಟೆ), ಸಾಗರಕಟ್ಟೆ (10:41/10:37 ಗಂಟೆ), ಸಾಗರಕಟ್ಟೆ (10:41/10:42) ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಗಳನ್ನು ಹೊಂದಿರುತ್ತದೆ. ರೈಲು ಸಂಖ್ಯೆ 16226 ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್ಪ್ರೆಸ್ ರೈಲು ಮಾವಿನಕೆರೆ (14:27/14:28 ಗಂಟೆ), ಹೊಸ ಅಗ್ರಹಾರ (15:25/15:26 ಗಂಟೆ),…

Read More

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್.2ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟಡವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಅಕ್ಟೋಬರ್ 02 ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. https://kannadanewsnow.com/kannada/good-news-for-railway-passengers-additional-coaches-to-be-attached-to-these-trains/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/

Read More

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಈ ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ ರೈಲ್ವೆಯು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: 1. ಅಕ್ಟೋಬರ್ 2 ರಿಂದ 11, 2024 ರವರೆಗೆ ಭುವನೇಶ್ವರದಿಂದ ಹೊರಡುವ ರೈಲು ಸಂಖ್ಯೆ 18463 ಭುವನೇಶ್ವರ-ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಡೈಲಿ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ. 2. ಅಕ್ಟೋಬರ್ 3 ರಿಂದ 12, 2024 ರವರೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು-ಭುವನೇಶ್ವರ ಪ್ರಶಾಂತಿ ಡೈಲಿ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ. 3. ಅಕ್ಟೋಬರ್ 6 ರಿಂದ 17, 2024 ರವರೆಗೆ ಭುವನೇಶ್ವರದಿಂದ ಹೊರಡುವ ರೈಲು ಸಂಖ್ಯೆ 12845 ಭುವನೇಶ್ವರ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸಾಮಾನ್ಯ ದ್ವಿತೀಯ ದರ್ಜೆ…

Read More

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/railway-passengers-attention-temporary-stoppages-continue-at-ramagiri-birur-and-alur-stations/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/

Read More