Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 96, RAT ಮೂಲಕ 8 ಮಂದಿ ಸೇರಿದಂತೆ 104 ಜನರನ್ನು ಕೊರೋನಾ ಪರೀಕ್ಷೆಗೆ ( Corona Test ) ಒಳಪಡಿಸಲಾಗಿತ್ತು. ಇವರಲ್ಲಿ 9 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ ಎಂದಿದೆ. ರಾಜ್ಯದಲ್ಲಿ ಇದೀಗ 47 ಕೊರೋನಾ ಪಾಸಿಟಿವ್ ಕೇಸ್ ಇದ್ದಾವೆ. ಇವರಲ್ಲಿ 46 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ಒಬ್ಬರು ಮಾತ್ರವೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/tej-pratap-yadav-the-elder-son-of-lalu-prasad-yadav-has-been-expelled-from-the-rjd-party/ https://kannadanewsnow.com/kannada/big-news-schools-to-reopen-in-the-state-from-may-29th-books-and-uniforms-distributed-to-students-on-the-first-day/
ಪಾಟ್ನಾ : ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಭಾನುವಾರ ತೇಜ್ ಪ್ರತಾಪ್ ಯಾದವ್ ಅವರನ್ನು “ಬೇಜವಾಬ್ದಾರಿಯುತ ವರ್ತನೆ”ಗಾಗಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಅವರ ಹಿರಿಯ ಮಗನೊಂದಿಗಿನ ಎಲ್ಲಾ ಕುಟುಂಬ ಸಂಬಂಧಗಳನ್ನು ಕಡಿದುಕೊಂಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿ ವರ್ತನೆಯು ನಮ್ಮ ಕುಟುಂಬ ಮೌಲ್ಯಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಈ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ತೆಗೆದುಹಾಕುತ್ತೇನೆ. ಇನ್ನು ಮುಂದೆ, ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಆರ್ಜೆಡಿ ಮುಖ್ಯಸ್ಥರು ಹೇಳಿದರು. ಬಿಹಾರದ ಮಾಜಿ ಸಚಿವ ಯಾದವ್ ಯುವತಿಯೊಬ್ಬಳೊಂದಿಗೆ “ಸಂಬಂಧದಲ್ಲಿದ್ದಾರೆ” ಎಂದು ಫೇಸ್ಬುಕ್ನಲ್ಲಿ ವೈರಲ್ ಆದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿರುವ ತಮ್ಮ ಖಾತೆಯನ್ನು…
ಮೈಸೂರು : ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಕ್ರಾಂತಿಗಳು ನಡೆದಿವೆ ಆದರೆ, ಸಮಾನತೆಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರು ಕಲಾಮಂದಿರದಲ್ಲಿಂದು ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೌಢ್ಯ, ಅಸ್ಪೃಶ್ಯತೆ, ಶ್ರೇಣಿರಹಿತ, ಜಾತಿ ರಹಿತ ಸಮಾಜ ಬಸವಾದಿ ಶರಣರ ಕಲ್ಪನೆಯಾಗಿತ್ತು. 800 ವರ್ಷಗಳು ಕಳೆದರೂ ಅದು ಸಾಕಾರವಾಗಿಲ್ಲ ಎಂದರು. ಮಹಿಳೆಯರಿಗೆ ಸಮಾನತೆ ನೀಡಿದ್ದೇ ಬಸವಾದಿ ಶರಣರು. ಅಕ್ಕನಿಗೆ ಮಹಾದೇವಿ ಎಂದು ಹೇಳುವ ಮೂಲಕ ಸರಿಸಮಾನವಾದ ಸ್ಥಾನ ಮಾನ ನೀಡಿದರು. ಮಹಿಳಾ ಸ್ವಾತಂತ್ರ್ಯ, ಮಹಿಳಾ ಸಮಾನತೆಗೆ 12ನೇ ಶತಮಾನದಲ್ಲೇ ನಾಂದಿ ಹಾಡಿದರು ಎಂದರು. ವಚನಗಳಲ್ಲಿ ಎಲ್ಲಸಮಸ್ಯೆಗೂ ಪರಿಹಾರ: ಇಂದು ಸಮಾಜದಲ್ಲಿನ ಎಲ್ಲ ಸಮಸ್ಯೆಗಳಿಗೂ ವಚನಗಳಲ್ಲಿ ಪರಿಹಾರವಿದೆ. ಇಂದು ಯುವಜನರು ಮದ್ಯ, ಮಾದಕವಸ್ತುಗಳ ದಾಸರಾಗುತ್ತಿದ್ದಾರೆ. ಇಂತಹ ಯುವಕರಿಗೆ ವಚನಗಳು ಮಾರ್ಗದರ್ಶನ ಮಾಡುತ್ತವೆ. ಸರಿದಾರಿಗೆ ತರುತ್ತವೆ ಎಂದರು. ವೃತ್ತಿ ಗೌರವ ಅತಿ ಮುಖ್ಯ: ಬಸವಾದಿ ಶರಣರು ಕಾಯಕವೇ ಕೈಲಾಸ…
ಹಾಸನ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಂಗಡಿಯ ಗೋಡೆಯೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಸ್ಥಳದಲ್ಲಿದ್ದಂತ ಮೂವರು ಮಹಿಳೆಯರು, ಓರ್ವ ಪುರುಷನಿಗೆ ಗಾಯಗೊಂಡಿರುವಂತ ಘಟನೆ ಹಾಸನದ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿಯಲ್ಲಿ ಅಂಗಡಿಯ ಗೋಡೆ ಕುಸಿದು ಸಫಿಯಾ, ಶಹನಾಜ್, ಫಯಿಮಾ ಬಾನು, ನಿಜಾರ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಶೋಕಗೌಡ ಎಂಬುವರಿಗೆ ಸೇರಿದ್ದಂತ ಅಂಗಡಿಯ ಗೋಡೆ ಭಾರೀ ಮಳೆಯಿಂದಾಗಿ ಕುಸಿತಗೊಂಡಿದೆ. ಈ ಪರಿಣಾಮ ಸ್ಥಳದಲ್ಲಿದ್ದಂತ ನಾಲ್ವರು ಗಾಯಗೊಂಡಿದ್ದಾರೆ. ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/a-tragic-incident-in-mandya-a-5-year-old-boy-dies-due-to-electric-shock/ https://kannadanewsnow.com/kannada/big-news-schools-to-reopen-in-the-state-from-may-29th-books-and-uniforms-distributed-to-students-on-the-first-day/
ಮಂಡ್ಯ: ಜಿಲ್ಲೆಯಲ್ಲಿ ಧಾರುಣ ಘಟನೆ ಎನ್ನುವಂತೆ ಆಟವಾಡುತ್ತಿದ್ದಂತ ಐದು ವರ್ಷದ ಬಾಲಕನಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾನೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿ ಆಟವಾಡುತ್ತಿದ್ದಂತ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದು ಸಂಜೀವ್(5) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಸಂಜೀವ್ ತಮ್ಮ ಮನೆಯಲ್ಲಿ ಕಣ್ಣಾಮುಚ್ಚಾಲೆ ಆಟವನ್ನು ಆಡುತ್ತಿದ್ದನು. ಮನೆಯ ಬಾಗಿಲು ತೆಗೆಯುತ್ತಿದ್ದ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾನೆ. ಆತನನ್ನು ವಿದ್ಯುತ್ ಶಾಕ್ ನಿಂದ ತಪ್ಪಿಸೋದಕ್ಕೆ ತಾಯಿ ಯತ್ನಿಸಿದ್ದಾರೆ. ಆದರೇ ಅದು ಸಾಧ್ಯಾವಗಿಲ್ಲ. ವಿದ್ಯುತ್ ಶಾಕ್ ನಿಂದ ಸಂಜೀವ್ ಸಾವನ್ನಪ್ಪಿದರೇ, ತಾಯಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/priyank-kharge-writes-a-letter-to-the-minister-of-rural-development-regarding-the-delay-in-the-release-of-funds-under-the-narag-program/ https://kannadanewsnow.com/kannada/big-news-schools-to-reopen-in-the-state-from-may-29th-books-and-uniforms-distributed-to-students-on-the-first-day/
ಬೆಂಗಳೂರು: 2025–26ನೇ ಹಣಕಾಸು ವರ್ಷಕ್ಕೆ ಕರ್ನಾಟಕ ರಾಜ್ಯಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್ಆರ್ಇಜಿಎಸ್) ಅಡಿ ಹಣ ಬಿಡುಗಡೆಯಲ್ಲಿ ಮುಂದುವರೆದ ವಿಳಂಬದ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವವರಿಗೆ ಪತ್ರ ಬರೆದಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ಈ ಮಹತ್ವದ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ದೃಢವಾಗಿ ಬದ್ಧವಾಗಿದೆ, ಯೋಜನೆಯ ಅವಶ್ಯಕತೆಗಳಿಗೆ ಅನುಗುಣವಾಗಿ, ರಾಜ್ಯದ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಅಗತ್ಯವಿರುವ ಎಲ್ಲಾ ಬಳಕೆಯ ಪ್ರಮಾಣಪತ್ರಗಳು ಮತ್ತು ದಾಖಲೆಗಳನ್ನು ಸಲ್ಲಿಸಿದಾಗ್ಯೂ, ಹಣವನ್ನು ಬಿಡುಗಡೆ ಮಾಡದ ಕಾರಣ ರಾಜ್ಯವು ಪ್ರಸ್ತುತ ತೀವ್ರ ಆರ್ಥಿಕ ಮತ್ತು ಆಡಳಿತಾತ್ಮಕ ನಿರ್ಬಂಧಗಳನ್ನು ಎದುರಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ವಿವರಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಯಾವುದೇ ಸಾಮಗ್ರಿ ಹಾಗೂ ನಿಧಿಗಳನ್ನು ಬಿಡುಗಡೆ…
ಬೆಂಗಳೂರು: ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ ಕಾರಣದಿಂದ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ನಿರ್ಧರಿಸಿದ್ದಾರೆ. ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು. ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾತನಾಡಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು, ನಮ್ಮ ಶಾಸಕರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಆರು ತಿಂಗಳು ಅಮಾನತು ಮಾಡಿದ್ದು ಸರಿಯಲ್ಲ. ಹೀಗೆ ಆದ್ರೇ ಸನದಲ್ಲಿ ಆಡಳಿತ ಪಕ್ಷವೇ ಇರಬೇಕಾಗುತ್ತೆ. ಸಿಎ ಸಹ ಇದು ಇಲ್ಲಿಗೆ ಮುಗಿಯಬೇಕು ಅಂದಿದ್ದಾರೆ. ಸ್ಪೀಕರ್ ಸಹ ನಾಳೆಯಿಂದ…
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ. ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು. ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ. https://kannadanewsnow.com/kannada/minister-h-k-patil-inaugurates-the-guided-walking-tour-of-vidhana-soudha/ http://kannadanewsnow.com/kannada/big-news-schools-to-reopen-in-the-state-from-may-29th-books-and-uniforms-distributed-to-students-on-the-first-day/
ಬೆಂಗಳೂರು: ವಿಧಾನ ಸೌಧವು ನಮ್ಮ ರಾಜ್ಯದ ಪ್ರಜಾಪ್ರಭುತ್ವದ ಜೀವಂತ ಕಥೆಯಾಗಿದ್ದು, ಇದನ್ನು ಸಾರ್ವಜನಿಕರಿಗೆ ತೆರೆದಿರುವುದು ಪಾರದರ್ಶಕತೆ, ಪರಂಪರೆ ಮತ್ತು ನಾಗರಿಕ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕರ್ನಾಟಕ ವಿಧಾನ ಸಭೆಯ ಸಚಿವಾಲಯದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಮಾರ್ಗದರ್ಶಿ ನಡಿಗೆ ಪ್ರವಾಸ (Walking Guided Tour) ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿಧಾನ ಸೌಧವು ಇನ್ನು ಮುಂದೆ ಸಾರ್ವಜನಿಕರಿಗೂ ಮುಕ್ತವಾಗಲಿದೆ. ಕಲಾಕೌಶಲ್ಯದ ವಿರಳ ದಾಖಲೆಯಾಗಿ ಇತಿಹಾಸದಲ್ಲಿ ದಾಖಲಾಗಿರುವ ಆಡಳಿತಸೌಧವನ್ನು ದೂರದಿಂದಲೇ ನೋಡಿ ಫೊಟೋ ತೆಗೆದು ಸಂತಸ ಪಡುತ್ತಿದ್ದ ಜನರಿಗೆ ಈಗ ಇದನ್ನ ಹತ್ತಿರದಿಂದ ನೋಡುವ ಸದವಕಾಶ ಲಭ್ಯವಿದೆ ಎಂದರು. ಇದು ಕೇವಲ ಕಟ್ಟಡವಲ್ಲ. ಜಗತ್ತಿನ ಅತ್ಯಂತ ಸುಂದರವಾದ ಕಟ್ಟಡ, ವಿದ್ಯಾರ್ಥಿಗಳಿಗೆ,…
ರಾಂಪುರ: ಹಿಮಾಚಲ ಪ್ರದೇಶದ ರಾಂಪುರದಲ್ಲಿ ಶನಿವಾರ ಸಂಜೆ ಸಂಭವಿಸಿದ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿ, 5 ರಿಂದ 6 ವಾಹನಗಳು ಕೊಚ್ಚಿ ಹೋಗಿವೆ. ಜನರ ಮನೆಗಳೊಳಗೆ ನೀರು ನುಗ್ಗಿದ್ದು, ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಬೇಕು ಮತ್ತು ನಷ್ಟದ ಸರಿಯಾದ ಮೌಲ್ಯಮಾಪನ ಮಾಡಿ ಪರಿಹಾರ ನೀಡಬೇಕು ಎಂದು ಅಣ್ಣಿ ಶಾಸಕ ಲೋಕೇಂದರ್ ಕುಮಾರ್ ಒತ್ತಾಯಿಸಿದರು. ನಿನ್ನೆ ಸಂಜೆ ಇಲ್ಲಿ ಆಲಿಕಲ್ಲು ಮಳೆಯೊಂದಿಗೆ ಸುರಿದ ಭಾರೀ ಮಳೆಯಿಂದಾಗಿ ಮೋಡ ಕವಿದ ವಾತಾವರಣ ಉಂಟಾಗಿದೆ. 5-6 ಕಾರುಗಳು ಕೊಚ್ಚಿ ಹೋಗಿವೆ ಮತ್ತು ಸುಮಾರು 24-25 ಕಾರುಗಳು ಹಾನಿಗೊಳಗಾಗಿವೆ. ಇಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ನಷ್ಟದ ಬಗ್ಗೆ ಸರಿಯಾದ ಮೌಲ್ಯಮಾಪನ ಮಾಡುವಂತೆ ನಾನು ಲೋಕೇಂದರ್ ಕುಮಾರ್ ಮತ್ತು ಕಂದಾಯ ಇಲಾಖೆಗೆ ಸೂಚಿಸಿದ್ದಾರೆ. https://twitter.com/ANI/status/1926538687812083765 ಸ್ಥಳೀಯರಾದ ಸಲೀಂ ಅಹ್ಮದ್ ಮಾತನಾಡಿ ಸಂಜೆ ಬಿರುಗಾಳಿಯೊಂದಿಗೆ ಭಾರೀ ಮಳೆಯಾಯಿತು. ಹಳ್ಳಗಳು ಮತ್ತು ಚರಂಡಿಗಳಿಂದ ನೀರು ಹರಿಯಲು ಪ್ರಾರಂಭಿಸಿತು. ವಾಹನಗಳು ಸಹ ಅತಿ ವೇಗವಾಗಿ ಹರಿಯಲು ಪ್ರಾರಂಭಿಸಿದವು. ಜನರು ತಮ್ಮ ಮನೆಗಳಿಂದ…