Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಈ ಬಗ್ಗೆ ವಿವರಣೆ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು. “ಕೆಇಆರ್…
ಚಿಕ್ಕಬಳ್ಳಾಪುರ: ತನ್ನ ಪ್ರಿಯಕರ ಬೇರೊಬ್ಬ ಹುಡುಗಿಯ ಜೊತೆಗೆ ಮಾತನಾಡಿದ್ದಕ್ಕೆ, ಮನನೊಂದು ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ಪ್ರಿಯಕರ ಆದರ್ಶ ಜೊತೆಗೆ ನಿನ್ನೆ ಪ್ರೇಯಸಿ ಸುಚಿತ್ರಾ ಜಗಳ ಆಡಿದ್ದಾಳೆ. ಇದಕ್ಕೆ ಕಾರಣ ಬೇರೊಬ್ಬ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಎನ್ನಲಾಗಿದೆ. ಈ ಕಾರಣದಿಂದಲೇ ಮನನೊಂದಂತ ಪ್ರೇಯಸಿ ಸುಚಿತ್ರಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/railway-double-track-work-these-trains-cancelled/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/
ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ – ಮಕ್ಕಾಜಿಪಲ್ಲಿ ಭಾಗದ ರೈಲ್ವೆ ಜೋಡಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ವಿವರಗಳು ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು: ಫೆಬ್ರವರಿ 25 ರಿಂದ 28, 2025 ರವರೆಗೆ ರೈಲು ಸಂಖ್ಯೆ 66559 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ಮತ್ತು ರೈಲು ಸಂಖ್ಯೆ 66560 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ರೈಲುಗಳ ಪ್ರಯಾಣವನ್ನು ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ. ಫೆಬ್ರವರಿ 25 ರಿಂದ 27, 2025 ರವರೆಗೆ ರೈಲು ಸಂಖ್ಯೆ 77213 ಗುಂತಕಲ್-ಹಿಂದೂಪುರ ಡೆಮು ಮತ್ತು ಫೆಬ್ರವರಿ 26, 2025 ರಿಂದ ಫೆಬ್ರವರಿ 28, 2025 ರವರೆಗೆ ರೈಲು ಸಂಖ್ಯೆ 77214 ಹಿಂದೂಪುರ-ಗುಂತಕಲ್ ಡೆಮು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದಾಗಲಿವೆ. ರೈಲುಗಳ ಸಂಚಾರ ಭಾಗಶಃ ರದ್ದು: ಫೆಬ್ರವರಿ 25 ರಿಂದ 28, 2025 ರವರೆಗೆ ರೈಲು ಸಂಖ್ಯೆ 06595…
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಖುಷಿ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಮಾಡಿದೆ. https://twitter.com/KarnatakaVarthe/status/1893974870758666644 ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಲ್ಲೇಖಿತ(1)ರ ಪ್ರಸ್ತಾವನೆ ಕುರಿತು, ಉಲ್ಲೇಖಿತ(2)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ಪಾವತಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಅಧಿಕಾರಿ/ಸಿಬ್ಬಂದಿಗಳ ವೇತನಕ್ಕೆ ಅನುದಾನವನ್ನು ಲೆಕ್ಕ ಶೀರ್ಷಿಕೆ:2250-00-102-4-00 ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮಾದಾಯ ದತ್ತಿಗಳು ಅಡಿ ಒದಗಿಸಲಾಗುವುದು. DDO ರವರು ಈ ಲೆಕ್ಕಶೀರ್ಷಿಕೆ ಅನ್ನು ಮ್ಯಾಪ್ ಮಾಡಿಕೊಳ್ಳುವಂತೆ ಹಾಗೂ ಈ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು HRMS ನಲ್ಲಿ ದಾಖಲಿಸುವಂತೆ…
ಬೆಂಗಳೂರು: ಇದೇ ಮೊದಲ ಬಾರಿಗೆ ದೈಹಿಕ ಶಿಕ್ಷಕರಿಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಲಾಗಿತ್ತು. ಮುಂದುವರೆದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-29ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ: 03-02-2025ರಂದು ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅಯೋಜಿಸುವಾಗ ಈ ಕೆಳಕಂಡಂತೆ ಸೇರ್ಪಡೆ ಮಾಡಿಕೊಂಡು ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಿದ್ದಾರೆ. ದೈಹಿಕ ಶಿಕ್ಷಕರನ್ನು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸುವುದು. ಪೋಲಿಸ್ (ಸಮವಸ್ತ್ರದಾರಿಗಳಿಗೆ ಹಾಗೂ, ಕ್ರೀಡಾ ಮೀಸಲಾತಿಯಡಿ ಆಯ್ಕೆಯಿಂದ ಎಲ್ಲಾ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ ಎಂದಿದ್ದಾರೆ. ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗಳ ಬ್ಯಾಜ್ ನಂಬರ್ ಸಿಬ್ಬಂದಿಗಳು( ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ…
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್ಸೈಟ್ ತಿತಿತಿ.sims_shimogಚಿ.ಛಿom ನಲ್ಲಿ ಪಡೆಯತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಹೆಸರಿಗೆ ಪಡೆದಿರುವ ರೂ.1000 ಡಿಡಿ ಯೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವೊಗ್ಗ 577201 ಈ ವಿಳಾಸಕ್ಕೆ ಸಲ್ಲಿಸಬೇಕು. ಲಕೋಟೆಯ ಮೇಲೆ ಟೆಕ್ನಿಕಲ್ ಆಫೀಸರ್ ಎಂದು ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆಯನ್ನು ನಿಯಮಾವಳಿಗಳ ಪ್ರಕಾರ ನಡೆಸಲಾಗುವುದು ಎಂದು ಸಿಮ್ಸ್ ನಿರ್ದೇಶಕರು ಮತ್ತು ಡೀನ್ ತಿಳಿಸಿದ್ದಾರೆ. https://kannadanewsnow.com/kannada/kanakapura-one-dead-several-injured-as-under-construction-arch-collapses/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/
ಬೆಂಗಳೂರು: ನಗರದಲ್ಲಿ ಪ್ರೀತಿಸಲು ನಿರಾಕರಿಸಿದಂತ ಯುವತಿಯ ಕಾರು, ಬೈಕ್ ಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿದಂತ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇದಷಅಟೇ ಅಲ್ಲದೇ ರೌಡಿ ಶೀಟರ್ ರಾಹುಲ್ ಯುವತಿಯ ತಂದೆಗೂ ಚಾಕುವಿನಿಂದ ಇರಿದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಈ ಘಟನೆ ನಡೆದಿದೆ. ರೌಡಿ ಶೀಟರ್ ರಾಹುಲ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆತ ರೌಡಿ ಶೀಟರ್ ಆಗಿದ್ದರೂ ಯುವತಿ ಆತನನ್ನು ಪ್ರೀತಿಸುತ್ತಿದ್ದಳು. ಆದರೇ ಕೆಲ ದಿನಗಳಿಂದ ಆತನಿಂದ ಯುವತಿ ಅಂತರ ಕಾಯ್ದುಕೊಂಡಿದ್ದಳಂತೆ. ಈ ಕಾರಣದಿಂದ ಸಿಟ್ಟಾದಂತ ರೌಡಿ ಶೀಟರ್ ರಾಹುಲ್, ಯುವತಿಯ ಮನೆಯ ಮುಂದೆ ನಿಲ್ಲಿಸಿದ್ದಂತ ಕಾರು, ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರಿದ್ದನು. ಇದಷ್ಟೇ ಅಲ್ಲದೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎನ್ನುವಂತೆ ಯುವತಿಯ ಮನೆಗೆ ತೆರಳಿ ತಂದೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನುವುದು ಬೆಳಕಿಗೆ ಬಂದಿದೆ. ಘಟನೆಯ ನಂತ್ರ ಗಿರಿನಗರ ಪೊಲೀಸರು ಆರೋಪಿ ರಾಹುಲ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಪ್ರಿಯತಮೆ ತಾಯಿಯಿಂದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ…
ರಾಮನಗರ: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮತಕ್ಷೇತ್ರ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಅದೇ ನಿರ್ಮಾಣ ಹಂತದ ಆರ್ಚ್ ಕುಸಿತಗೊಂಡ ಪರಿಣಾಮ ಅದರಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಕನಕಪುರದ ರೂರಲ್ ಕಾಲೇಜಿನಲ್ಲಿ ನಿರ್ಮಾಣ ಹಂತದ ಆರ್ಚ್ ಏಕಾಏಕಿ ಕುಸಿತಗೊಂಡಿದೆ. ಈ ಘಟನೆಯಲ್ಲಿ ಆರ್ಚ್ ಅಡಿಯಲ್ಲಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರ್ಚ್ ಕುಸಿತದಿಂದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವಂತ ಶಂಕೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಈ ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದೆ. https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/ https://kannadanewsnow.com/kannada/bengaluru-over-100-school-vehicles-seized-by-rto-officials/
ಬೆಂಗಳೂರು : “ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕಾಗುತ್ತದೆ. ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ…
ನವದೆಹಲಿ: ಎಲ್ ಪಿಜಿ ಸಿಲಿಂಡರ್ ನಲ್ಲಿ ಎಷ್ಟು ಅನಿಲ ಉಳಿದಿದೆ ಅಂತ ನೀವು ಒಂದು ಕ್ಷಣದಲ್ಲಿ ಕಂಡುಹಿಡಿಯಬಹುದು. ಅದು ಹೇಗೆ ಅಂತ ಮುಂದೆ ಓದಿ. 1. ತೂಕವನ್ನು ಪರಿಶೀಲಿಸಿ ಎಲ್ಲಾ ಗ್ಯಾಸ್ ಸಿಲಿಂಡರ್ ಗಳು ‘ತಾರೆ ತೂಕ’ (ಅಥವಾ ಟಿ.ಡಬ್ಲ್ಯೂ.) ಎಂದು ಕರೆಯಲ್ಪಡುವ ಏನನ್ನಾದರೂ ಹೊಂದಿರುತ್ತವೆ, ಇದು ಖಾಲಿ ಗ್ಯಾಸ್ ಸಿಲಿಂಡರ್ ನ ಒಟ್ಟು ತೂಕವಾಗಿದೆ. ಟಿ.ಡಬ್ಲ್ಯೂ.ಗೆ ನಿಖರವಾದ ಮೊತ್ತವನ್ನು ಕಂಡುಹಿಡಿಯಲು ನೀವು ಸಿಲಿಂಡರ್ ಅನ್ನು ಸ್ಟಾಂಪ್ ಮಾಡಿದ ಗುರುತುಗಾಗಿ ಪರಿಶೀಲಿಸಬಹುದು, ಅದು ತೂಕವನ್ನು ಹೇಳುತ್ತದೆ, ಸಾಮಾನ್ಯವಾಗಿ ಕಿಲೋಗ್ರಾಂಗಳಲ್ಲಿ. ಟಿ.ಡಬ್ಲ್ಯೂ. ಸಾಮಾನ್ಯವಾಗಿ ಕ್ಯಾಪ್ ಮೇಲೆ ಇರುತ್ತದೆ. 2. ಸಿಲಿಂಡರ್ ಮೇಲೆ ಬಿಸಿ ನೀರನ್ನು ಸುರಿಯಿರಿ ಎಷ್ಟು ಅನಿಲ ಉಳಿದಿದೆ ಎಂದು ತೂಕ ಮಾಡಲು ಅಥವಾ ಲೆಕ್ಕಹಾಕಲು ನಿಮಗೆ ಸಾಧ್ಯವಾಗದಿದ್ದರೆ, ನೀವು ಮಾಡಬೇಕಾದಂತ ಮತ್ತೊಂದು ಪತ್ತೆ ವಿಧಾನವೆಂದರೇ ಬಿಸಿ ನೀರನ್ನು ಗ್ಯಾಸ್ ಸಿಲಿಂಡರ್ ಮೇಲೆ ಸುರಿಯುವುದು. ಗ್ಯಾಸ್ ಸಿಲಿಂಡರ್ ನಲ್ಲಿ ಇದ್ದರೇ ಅದರ ಮೇಲೆ ಕೈ ಇಟ್ಟು ನೋಡಿದಾಗ ತಣ್ಣಗಿನ ಅನುಭವ ನೀಡುತ್ತದೆ.…