Subscribe to Updates
Get the latest creative news from FooBar about art, design and business.
Author: kannadanewsnow09
ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಕಾಂಗ್ರೆಸ್ ಪಕ್ಷ ರೈತರ ಜೀವನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ದ್ರೋಹ ಮಾಡುವ ಇತಿಹಾಸ ಹೊಂದಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಗಂಭೀರವಾಗಿಲ್ಲ. ಬಿಜೆಪಿ ಸರ್ಕಾರ ಆ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. https://kannadanewsnow.com/kannada/6-killed-over-20-injured-in-truck-bus-collision-in-uttar-pradesh/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ನಾದನ್ ದೆಹತ್ ಪೊಲೀಸ್ ಠಾಣೆಯ ಬಳಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಆರು ಮಂದಿಯನ್ನು ಸತ್ನಾಗೆ ಕಳುಹಿಸಲಾಗಿದೆ ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸತ್ನಾಕ್ಕೆ ಕಳುಹಿಸಲಾಗಿದೆ ಎಂದು ಮೈಹಾರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್ ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಮೈಹಾರ್ ಮತ್ತು ಅಮರ್ಪಟಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡ 17-20 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಎಸ್ಪಿ ಅಗರ್ವಾಲ್…
ಬೆಂಗಳೂರು: ತೀವ್ರ ಕೂತೂಹಲ ಮೂಡಿಸಿದ್ದಂತ ಬಿಗ್ ಬಾಸ್ ಕನ್ನಡ 11 ಆವೃತ್ತಿಯು ಇಂದಿನಿಂದ ಕಲರ್ಸ್ ಕನ್ನಡದಲ್ಲಿ ಆರಂಭಗೊಳ್ಳಲಿದೆ. ಈ ಸ್ಪರ್ಧೆಯಲ್ಲಿ ಭಾಗಿಯಾಗುವಂತ ಸ್ಪರ್ಧಿಗಳ ಹೆಸರು ಕೂಡ ರಿವೀಲ್ ಆಗಿದ್ದು, ನಾಲ್ವರು ಹೆಸರು ಫೈನಲ್ ಆಗಿದೆ. ಆ ಬಗ್ಗೆ ಮುಂದೆ ಓದಿ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ ಕನ್ನಡ 11ರ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ಚಾನಲ್ ನಲ್ಲಿ ಬಿಗ್ ಬಾಸ್ ಹೊಸ ಆವೃತ್ತಿಗೆ ಚಾಲನೆ ದೊರೆಯಲಿದೆ. ಹತ್ತು ಸೀಸನ್ ಗಳಲ್ಲಿ ನಿರೂಪಣೆ ಮಾಡಿಕೊಂಡು ಬಂದಿರುವಂತ ನಟ ಕಿಚ್ಚ ಸುದೀಪ್ ನಿರೂಪಣೆ ಈ ಸೀಜನ್ ನಲ್ಲೂ ಮುಂದುವರೆಯಲಿದೆ. ಈ ಬಾರಿ 16 ಸ್ಪರ್ಧಿಗಳ ಕುರಿತಂತೆ ವೀಕ್ಷಕರಲ್ಲಿ ಕುತೂಹಲ ಹೆಚ್ಚಿದ್ದು, ಇದಕ್ಕೂ ಮುನ್ನಾ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆಯಲ್ಲಿ ನಾಲ್ವರು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಿ, ಘೋಷಿಸಲಾಗಿದೆ. ಇವರೇ ನೋಡಿ ದೊಡ್ಮನೆ ಪ್ರವೇಶಿಸುವಂತ ಐವರು ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ 11ರ…
ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪ ಎದುರಿಸುತ್ತಿರುವಂತ ಬಿಜೆಪಿ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಗಳಲ್ಲಿ ಎಸ್ಐಟಿ ದಾಳಿ ನಡೆಸಿದೆ. ಈ ದಾಳಿಯ ವೇಳೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಶನಿವಾರದಂದು ವಿಶೇಷ ತನಿಖಾ ತಂಡದಿಂದ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಯಲ್ಲಿ ಅತ್ಯಾಚಾರ ಪ್ರಕರಣ ಸಂಬಂಧ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಶಾಸಕರ ನಿವಾಸದಲ್ಲಿದ್ದಂತ ಹಾರ್ಡ್ ಡಿಸ್ಕ್, ಪೆನ್ ಡ್ರೈವ್, 2 ಲ್ಯಾಪ್ ಟಾಪ್, ಸಿಸಿಟಿವಿ ಡಿವಿಆರ್ ಮತ್ತು ಶಾಸಕರ ಆಪ್ತರ ಮನೆಗಳಲ್ಲಿ ಪೆನ್ ಡ್ರೈವ್ ಸೇರಿದಂತೆ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಇನ್ನೂ ಪೆನ್ ಡ್ರೈವ್ ನಲ್ಲಿ ಇರುವಂತ ಮಾಹಿತಿ ಬಗ್ಗೆ ಕುತೂಹಲ ಮೂಡಿದ್ದು, ಅವುಗಳನ್ನು ಸೈಬರ್ ತಜ್ಞರ ಪರಿಶೀಲನೆಗೆ ಎಸ್ಐಟಿ ಕಳುಹಿಸಿದೆ. ಅದರಲ್ಲಿ ಯಾವೆಲ್ಲಾ ದಾಖಲೆಗಳು, ವೀಡಿಯೋಗಳಿದ್ದಾವೆ ಎಂಬುದು ಪರಿಶೀಲನೆಯ ನಂತ್ರ ತಿಳಿಯಲಿದೆ.
ಬೆಂಗಳೂರು: ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಸರಮಾಲೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು. ಈ ಕೇಂದ್ರ ಸಚಿವರ ಆರೋಪಗಳಿಗೆ ಲೋಕಾಯುಕ್ತ ಎಡಿಜಿಪಿ ಹಾಗೂ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಇಂದು ಎಸ್ಐಟಿಯ ಅಪರಾಧ ಸಂಖ್ಯೆ 16/14ರ ಆರೋಪಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮತ್ತು ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ನಿಮಗೆ ತಿಳಿದಿರುವಂತೆ ಎಸ್ಐಟಿ ಸಕ್ಷಮ ಪ್ರಾಧಿಕಾರದಿಂದ ಆರೋಪಿಗಳ ಪ್ರಾಸಿಕ್ಯೂಷನ್ ಅನುಮತಿಯನ್ನು ಕೋರಿತ್ತು. ಜಾಮೀನಿನ ಮೇಲಿರುವ ಈ ಆರೋಪಿ ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲು ಇದನ್ನು ಮಾಡಿದ್ದಾರೆ. ನನ್ನ ಮೇಲೆ ದಾಳಿ ಮಾಡುವ ಮೂಲಕ ಎಸ್ಐಟಿ ಅಧಿಕಾರಿಗಳ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವುದು ಅವರ ಉದ್ದೇಶ ಎಂದು ತೋರುತ್ತದೆ. ಆದರೆ ಆರೋಪಿ, ಅವನು ಎಷ್ಟೇ ಉನ್ನತ ಮತ್ತು ಶಕ್ತಿಶಾಲಿಯಾಗಿದ್ದರೂ, ಆರೋಪಿಯೇ. ಇಂತಹ ಆರೋಪಗಳು ಮತ್ತು ಬೆದರಿಕೆಗಳಿಂದ ನಾವು ವಿಚಲಿತರಾಗಬಾರದು.…
ನವದೆಹಲಿ: ಭಾರತೀಯ ಮಾರುಕಟ್ಟೆಗಳಲ್ಲಿ ನಿಷೇಧಿತ ಚೀನೀ ಬೆಳ್ಳುಳ್ಳಿ ಎಂಟ್ರಿಕೊಟ್ಟಿದೆ. ಒಂದು ವೇಳೆ ನೀವು ಈ ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್, ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು. ಹಾಗಾದ್ರೇ ಗುರುತಿಸೋದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. 2014 ರಿಂದ ಚೀನೀ ಬೆಳ್ಳುಳ್ಳಿಯನ್ನು ನಿಷೇಧಿಸಿದ್ದರೂ, ಇದನ್ನು ಭಾರತೀಯ ಮಾರುಕಟ್ಟೆಗಳಲ್ಲಿ ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದೆ ಮತ್ತು ಹೆಚ್ಚಿನ ಬೇಡಿಕೆಯಿದೆ. ಸ್ಥಳೀಯ ಅಡುಗೆಮನೆಗಳಲ್ಲಿ, ವಿಶೇಷವಾಗಿ ಉತ್ತರ ಭಾರತದಲ್ಲಿ, ಬೆಳ್ಳುಳ್ಳಿ ಸಾಮಾನ್ಯವಾಗಿ ಬಳಸುವ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುತ್ತದೆ. ಇದನ್ನು ಹೆಚ್ಚಿನ ರೀತಿಯ ಪಾಕಪದ್ಧತಿಗಳಲ್ಲಿ ಬಳಸಲಾಗುತ್ತದೆ. ಇದು ವಿಶಿಷ್ಟ ಪರಿಮಳ ಮತ್ತು ಶಕ್ತಿಯುತ ವಾಸನೆಯನ್ನು ಹೊಂದಿದೆ. ಇದು ಜನಪ್ರಿಯ ಸೇರ್ಪಡೆಯಾಗಿದೆ. ರುಚಿಯನ್ನು ಹೆಚ್ಚಿಸುವುದರ ಹೊರತಾಗಿ, ಬೆಳ್ಳುಳ್ಳಿ ವಿವಿಧ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ಇದರಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರ ಮತ್ತು ಪರಾವಲಂಬಿಗಳನ್ನು ಪ್ರತಿಬಂಧಿಸುವುದು ಮತ್ತು ನಾಶಪಡಿಸುವುದು, ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದು ಮತ್ತು ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುವುದು ಮತ್ತು ಯಕೃತ್ತನ್ನು ರಕ್ಷಿಸುವುದು ಸೇರಿವೆ. ತಜ್ಞರ ಪ್ರಕಾರ, ಬೆಳ್ಳುಳ್ಳಿ ಕ್ಯಾನ್ಸರ್…
ಶಿವಮೊಗ್ಗ: ಪತ್ರಕರ್ತರು ಸುದ್ದಿ ಮಾಡುವಾಗ ಸಮಾಜಿಕ ಹೊಣೆಗಾರಿಕೆಯನ್ನು ಹೊಂದಿರಬೇಕು. ಅವರು ಮಾಡುವ ಸುದ್ದಿಯು ಸಮಾಜವನ್ನು ದಿಕ್ಕು ತಪ್ಪಿಸಬಾರದು ಎಂದು ಪತ್ರಕರ್ತ ಡಿ ಎಮ್ ಪಿ ಸಿ ಅಧ್ಯಕ್ಷ ಚಾರ್ವಾಕ ರಾಘವೇಂದ್ರ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರದಲ್ಲಿರುವ DMPC ಕಚೇರಿಯಲ್ಲಿ ಪತ್ರಕರ್ತರಿಗೆ ಏರ್ಪಡಿಸಲಾಗಿದ್ದ ಸುದ್ದಿ ಬಗೆಯುವ ಬಗೆ ಎಂಬ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪತ್ರಕರ್ತರು ಸುದ್ದಿ ಮಾಡುವಾಗ ಬಹಳ ಎಚ್ಚರಿಕೆ ವಹಿಸಬೇಕು. ಪತ್ರಕರ್ತರು ಸಮಾಜವನ್ನು ಕೂಡಿಸುವ ಕೊಂಡಿಯಾಗಬೇಕೆ ವಿನಃ ಸಮಾಜವನ್ನು ಒಡೆಯುವ ಅಸ್ತ್ರವಾಗಬಾರದು. ಪತ್ರಕರ್ತರು ಮಾಡಿದ ಸುದ್ದಿಯಿಂದ ಜಗತ್ತಿನಲ್ಲಿ ಹಲವಾರು ಸಮಾಜಿಕ ಬದಲಾವಣೆಯಾಗಿದೆ ಎನ್ನುವುದನ್ನು ಹಲವು ಹಲವು ಘಟನೆಗಳನ್ನು ಉಲ್ಲೇಖಿಸಿ ವಿವರಿಸಿದರು.ಇತ್ತೀಚಿಗೆ ಆಪ್ರೀಖಾದ ಪಟಗ್ರಾಫರ್ ಒಬ್ಬ ತೆಗೆದ ಒಂದು ಚಿತ್ರದಿಂದ ಆ ಕುಟುಂಬದ ಭವಿಷ್ಯವೇ ಬದಲಾಯ್ತು. ಹಾಗೆ ದ್ವೇಶ ಕಾರುವ ಪತ್ರಕರ್ತರ ಸುಳ್ಳು ವರದಿಗಳಿಂದಾಗಿ ಸಮಾಜದಲ್ಲಿ ದೊಂಬಿ ಹಿಂಸೆ ಸಾವು ನೋವುಗಳಿಗೆ ಕಾರಣವಾಗಿರುವುದನ್ನು ಉದಾಹರಿಸಿದರು. ಸುದ್ದಿ ಮಾಡುವಾಗ ಯಾವುದೇ ರಾಗ ದ್ವೇಷವಿರದೆ ಸತ್ಯದ ಬೆನ್ನು ಹತ್ತಿ ಹೋಗಬೇಕು…
ಬೆಂಗಳೂರು: ಸಾಕು ಪ್ರಾಣಿಗಳ ಕಡಿತಕ್ಕೆ ಒಳಗಾಗೋದು, ಪರಚುವಿಕೆಗೆ ಒಳಗಾದಾಗ ನೀವು ನಿರ್ಲಕ್ಷ್ಯಿಸಿದ್ರೇ, ಸಾವು ಗ್ಯಾರಂಟಿಯೇ. ಹೀಗಾಗಿ ನೀವು ಯಾವುದೇ ಪ್ರಾಣಿಯಿಂದ ಕಡಿತಕ್ಕೆ, ಪರಚುವಿಕೆಗೆ ಒಳಗಾಗಿದ್ದರೇ ನಿರ್ಲಕ್ಷ್ಯಿಸ ಬೇಡಿ. ಏನು ಮಾಡಬೇಕು ಅಂತ ಮುಂದೆ ಓದಿ. ನೀವು ಯಾವುದೇ ಪ್ರಾಣಿಯಿಂದ (ಸಾಕು ಪ್ರಾಣಿಗಳೂ ಸಹ) ಕಡಿತಕ್ಕೆ ಅಥವಾ ಪರಚುವಿಕೆಗೆ ಒಳಗಾದರೆ ನಿರ್ಲಕ್ಷಿಸಬೇಡಿ. ಸಾಬೂನನ್ನು ಬಳಸಿ 15 ನಿಮಿಷಗಳ ಕಾಲ ಗಾಯವನ್ನು ನಿರಂತರವಾಗಿ ನೀರಿನಿಂದ ತೊಳೆಯಿರಿ. ಬಳಿಕ ನಿಮ್ಮ ಹತ್ತಿರದ ಆಸ್ಪತ್ರೆಗೆ ತೆರಳಿ ರೇಬಿಸ್ ನಿರೋಧಕ ಚುಚ್ಚುಮದ್ದು ಮತ್ತು ಇಮ್ಯುನೋಗ್ಲೋಬಲಿನ್ ಪಡೆದುಕೊಳ್ಳಿ. ನೆನಪಿಡಿ : ಯಾವುದೇ ರೀತಿಯ ಪ್ರಾಣಿಗಳು ಕಚ್ಚಿದಾಗ ತಕ್ಷಣವೇ ಮಕ್ಕಳು ತಮ್ಮ ಪೋಷಕರಿಗೆ / ಶಿಕ್ಷಕರಿಗೆ ತಿಳಿಸುವಂತೆ ಮಕ್ಕಳಲ್ಲಿ ಅರಿವು ಮೂಡಿಸಿ. https://twitter.com/KarnatakaVarthe/status/1840008312290451903 https://kannadanewsnow.com/kannada/dasara-to-be-celebrated-as-peoples-festival-cm-siddaramaiah/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಬೆಂಗಳೂರು: ನಾಡಹಬ್ಬ ಮೈಸೂರು ದಸರಾವನ್ನು ಜನರ ಉಸ್ತವವಾಗಿ ಆಚರಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ನಾಡಹಬ್ಬಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದಾರೆ. ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1839989544080347462 https://kannadanewsnow.com/kannada/decision-to-set-up-ai-skill-board-in-karnataka-priyank-kharge/ https://kannadanewsnow.com/kannada/that-mother-never-came-out-she-was-innocent-what-ks-eshwarappa-said-about-cms-wife-parvathi/
ಬೆಂಗಳೂರು: ವಿಶ್ವದಾಧ್ಯಂತ ಎಐ ತಂತ್ರಜ್ಞಾನ ಮುಂಚೂಣಿಯಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎಐ ಕೌಶಲ ಮಂಡಳಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್ ಪಾರ್ಕ್ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ ಮತ್ತು ಎಐ ಕೌಶಲ ಮಂಡಳಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1839972547074383992 ರಾಜ್ಯದ ಯುವಕ ಯುವತಿಯರು ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣಾರ್ಹತೆ ಪಡೆದ ನಂತರ, ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹಾಗೂ ವಿಭಿನ್ನ ಉದ್ಯೋಗ ಸಂಸ್ಥೆಗಳಲ್ಲಿ ವಿಭಿನ್ನವಾದ ನಿಪುಣತೆಯನ್ನು ಹೊಂದಿರುವ ಉದ್ಯೋಗಿಗಳ ಬೇಡಿಕೆಯಿರುವುದರಿಂದ ಕರ್ನಾಟಕ ಸರ್ಕಾರ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ಮೂಲಕ ನಾವು ರಾಜ್ಯದ ಯುವ ಸಮೂಹಕ್ಕೆ ಸೂಕ್ತ ತರಬೇತಿ ನೀಡಿ ಅವರನ್ನು ಅವಶ್ಯಕತೆಗೆ ಅನುಗುಣವಾದ ಉದ್ಯೋಗಗಳಿಗೆ ತಯಾರು…