Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಸಂಚುಕೋರರನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ಬಂಧಿಸಿರುವುದಾಗಿ ಎನ್ಐಎ ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21 ನೇ ಆರೋಪಿ ಅತೀಕ್ ಅಹ್ಮದ್ ಆಗಿದ್ದಾನೆ. ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್ಗೆ ಆಶ್ರಯ ಮತ್ತು ಸಹಾಯ ಮಾಡಿದ್ದರು. ಜನರಲ್ಲಿ ಭಯ ಮತ್ತು ಕೋಮು ಅಶಾಂತಿಯನ್ನು ಪ್ರಚೋದಿಸಲು ಪಿಎಫ್ಐ ಕಾರ್ಯಸೂಚಿಯ ಭಾಗವಾಗಿ ಮುಸ್ತಫಾ…
ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಆಸ್ತಿಮಜ್ಜೆ ಕಸಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಂಸದ ಡಾ.ಸಿಎನ್ ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಈಗ ಉಚಿತವಾಗಿದೆ ಎಂದಿದ್ದಾರೆ. ಈ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ / ಜೀವನ್ ಸಾರ್ಥಕತೆ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಕೋಡ್ ಮಾಡಲಾದ ಕಾರ್ಯವಿಧಾನವಾಗಿ ಸೇರಿಸಲು ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಿದ್ದೆ ಮತ್ತು ನಿರಂತರವಾಗಿ ಅನುಸರಿಸುತ್ತಿದೆ ಎಂದಿದ್ದಾರೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 45 ಪೊಲೀಸ್ ಇನ್ಸ್ ಪೆಕ್ಟರ್ (Police Inspecton ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ. ಬಾಲಾಜಿ ಬಾಬು ಹೆಚ್ ಎನ್ ಎಂಬುವರನ್ನು ಕರ್ನಾಟಕ ಲೋಕಾಯುಕ್ತದಿಂದ ಬೆಂಗಳೂರಿನ ಸಂಜಯನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ರಘು ಕೆ.ಕೆ ಅವರನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ, ಐಎಸ್ ಡಿ ಕರ್ತವ್ಯದಲ್ಲಿದ್ದಂತ ರಾಜಶೇಖರ್ ಎನ್ ಹೆಚ್ ಅವರನ್ನು ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 45 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಪಟ್ಟಿ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ…
ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್ಒ) ಸ.ಆ.ಚಿ ಶ್ರೀಮಂಗಲ-01 ಹುದ್ದೆ, ಸ.ಹೋ.ಚಿ ಪಾರಾಣೆ-01 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್, ಬಿಎಚ್ಎಂಎಸ್ ಮಾಸಿಕ ವೇತನ ರೂ.40,000 (ರೂ.25,000 ಒಂದು ತಿಂಗಳಿಗೆ ಮತ್ತು ರೂ.15 ಸಾವಿರ ಒಂದು ತಿಂಗಳಿಗೆ ಪರ್ಮಾಪಾರ್ಮೆನ್ಸ್ ಪೇಮೆಂಟ್) ಸಾ.ಅಭ್ಯರ್ಥಿ 01. ಈ ಹುದ್ದೆಯು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್ಒ) ಹುದ್ದೆಗಳನ್ನು ಒಂದು ವರ್ಷದವರೆಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ. ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ದಂಧೆ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಮೈಕ್ರೋ ಫೈನಾನ್ಸ್, ಮೀಡರ್ ಬಡ್ಡಿಗೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ಮುಂದಾಗಿದೆ. ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1881674549533848024 https://kannadanewsnow.com/kannada/what-money-did-the-congressmen-use-for-the-convention-today-rajkumar-patil-telkus-question/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/
ಕಲಬುರಗಿ : ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ; ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕಿಸಿದರು. ಎಲ್ಲರೂ ಖಾದಿಧಾರಿಗಳಾಗಿ ಇರಬೇಕು ಎಂಬುದು ಹಳೆ ಕಾಂಗ್ರೆಸ್ಸಿನ ಸಿದ್ಧಾಂತ. ಇವತ್ತು ಶೇ 5- 10 ರಷ್ಟು ಖಾದಿಧಾರಿಗಳೂ ಅಲ್ಲಿ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಮಹಾತ್ಮ ಗಾಂಧಿಯವರು ಈ ಕಾಲದಲ್ಲಿ ಇದ್ದಿದ್ದರೆ, ಈ ಕಾಂಗ್ರೆಸ್ಸಿನವರನ್ನು…
ಬೆಂಗಳೂರು: ನಾಳೆ ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ. ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. https://twitter.com/KarnatakaVarthe/status/1881695628616704380 https://kannadanewsnow.com/kannada/good-news-for-commuters-one-way-special-train-to-run-from-bengaluru-to-banaras-on-the-occasion-of-kumbh-mela/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಒನ್-ವೇ ವಿಶೇಷ ರೈಲು (06579) ಜನವರಿ 23, 2025 ರಂದು ಮಧ್ಯಾಹ್ನ 1:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 25, 2025 ರಂದು ಮಧ್ಯಾಹ್ನ 1:30ಕ್ಕೆ ತನ್ನ ಗಮ್ಯಸ್ಥಾನವಾದ ಬನಾರಸ್ ತಲುಪಲಿದೆ. ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ರಾಣಿಬೆನ್ನೂರು, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಬೆಳಗಾವಿ, ಘಟಪ್ರಭಾ, ರಾಯಬಾಗ, ಮೀರಜ್, ಸಾಂಗ್ಲಿ, ಕಿರ್ಲೋಸ್ಕರವಾಡಿ, ಕರಾಡ್, ಸತಾರಾ, ಪುಣೆ, ಅಹ್ಮದ್ನಗರ, ಕೋಪರ್ಗಾಂವ್, ಮನ್ಮಾಡ್ ಭೂಸಾವಲ್, ಇಟಾರ್ಸಿ, ಜಬಲ್ಪುರ್, ಸತ್ನಾ, ಮಾಣಿಕ್ಪುರ್, ಪ್ರಯಾಗ್ರಾಜ್ ಛೋಕಿ, ಮಿರ್ಜಾಪುರ ಮತ್ತು ವಾರಣಾಸಿ ನಿಲ್ದಾಣಗಳಲ್ಲಿ ನಿಲ್ಲಲಿದೆ. ಒನ್ ವೇ ಸ್ಪೆಷಲ್ ನಲ್ಲಿ 01 ಜನರಲ್ ಸೆಕೆಂಡ್ ಕ್ಲಾಸ್, 17 ಸ್ಲೀಪರ್ ಕ್ಲಾಸ್ ಮತ್ತು…
ಈ ರಾಶಿಯವರಿಗೆ ಗುರು-ಪುಷ್ಯ ಅಮೃತ ಸಿದ್ಧಿ ಯೋಗ ಇದೇ ಜನವರಿ 23, ಗುರುವಾರ. ಪುಷ್ಯ ನಕ್ಷತ್ರ ಗುರುವಾರದ ದಿನ ಬಂದಿದೆ. ನಕ್ಷತ್ರ ಪ್ರಾರಂಭ ಸಮಯ : ಗುರುವಾರ ಹಗಲು 08:15 ಗಂಟೆಯಿಂದ ನಕ್ಷತ್ರ ಮುಗಿಯುವ ಸಮಯ : ಶುಕ್ರವಾರ ಹಗಲು 10:27 ಗಂಟೆಯವರೆಗೆ ಈ ದಿನ ಗುರು ದತ್ತಾತ್ರೇಯ, ದಕ್ಷಿಣಾಮೂರ್ತಿ, ಬೃಹಸ್ಪತಿ, ರಾಘವೇಂದ್ರ, ಸಾಯಿಬಾಬಾ ಮಂತ್ರ ಅಥವಾ ಸ್ತೋತ್ರ ಗಳನ್ನು ಜಪ – ಪಾರಾಯಣ ಮಾಡಿ. ಈ ದೇವರ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯಿರಿ. ಜಾತಕದಲ್ಲಿ ಗುರು ಪೀಡಿತನಾಗಿದ್ದರೆ ಅಥವಾ ಬಲಹೀನನಾಗಿದ್ದರೆ ಅಥವಾ ಪ್ರಸ್ತುತ ಗುರುಬಲ ಇಲ್ಲದ ರಾಶಿಗಳು (ಮೇಷ, ವೃಷಭ, ಕಟಕ, ಕನ್ಯಾ, ವೃಶ್ಚಿಕ, ಮಕರ, ಕುಂಭ) ಪರಿಹಾರ ಮಾಡಿಕೊಳ್ಳುವುದು ಪರಿಣಾಮಕಾರಿ. ವಿಶೇಷವಾಗಿ ಮೇಷ, ವೃಷಭ, ಕಟಕ ಮತ್ತು ಮಕರ ರಾಶಿ ಸಂಜಾತರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ…