Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ( Corona ) ಆರ್ಭಟ ಮುಂದಿವರೆದಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 252 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 7359 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳಊರು 172, ಹಾಸನ 20, ಮೈಸೂರು 08 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 252 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಇಂದು 441 ಸೋಂಕಿತರು ಗುಣಮುಖರಾಗಿದ್ದಾರೆ. 252 ಮಂದಿ ಸೋಂಕಿತರಿಗೆ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ( Covid19 Case ) ಸಂಖ್ಯೆ 1031ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3.42ರಷ್ಟಿದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/good-news-for-devotees-of-savadatti-yellamma-minister-ramalinga-reddys-master-plan-for-holistic-development/ https://kannadanewsnow.com/kannada/bcci-announces-official-partners-for-team-indias-home-season-2024-26/

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವಂತ 2024ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಈ ಮೊದಲಿನ ದಿನಾಂಕಕ್ಕೂ ಎರಡು ದಿನ ಮೊದಲೇ ಪರೀಕ್ಷೆ ನಡೆಸೋದಾಗಿ ಮರು ದಿನಾಂಕವನ್ನು ಕೆಇಎ ಪ್ರಕಟಿಸಿದೆ. ಈ ಕುರಿತಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024ನೇ ಸಾಲಿನ ಸಿಇಟಿ ಪರೀಕ್ಷಾ ದಿನಾಂಕಗಳಂದೇ ಎನ್ ಡಿಎ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು. ಹೀಗಾಗಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಿರೋದಾಗಿ ತಿಳಿಸಿದ್ದಾರೆ. ಕೆಇಎಯಿಂದ ಏಪ್ರಿಲ್ 20, 21ರಂದು ಈ ಮೊದಲು ಸಿಇಟಿ ಪರೀಕ್ಷೆ ನಡೆಸೋದಾಗಿ ದಿನಾಂಕ ಘೋಷಣೆ ಮಾಡಲಾಗಿತ್ತು. ಆದ್ರೇ ಎನ್ ಡಿಎ ಪರೀಕ್ಷೆ 21ರಂದು ಇದ್ದ ಕಾರಣ ಸಿಇಟಿ 2024ರ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸೋದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಕೆಇಎಯಿಂದ 2024ರ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 20, 21ರ ಬದಲಾಗಿ ಏಪ್ರಿಲ್ 18, 19ಕ್ಕೆ ಎರಡು ದಿನ ಮುಂಚೆ ನಡೆಸೋದಾಗಿ ದಿನಾಂಕವನ್ನು…

Read More

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-2026ರ ದೇಶೀಯ ಮತ್ತು ಅಂತರರಾಷ್ಟ್ರೀಯ ಋತುವಿಗೆ ಟೀಮ್ ಇಂಡಿಯಾದ ಅಧಿಕೃತ ಪಾಲುದಾರರನ್ನು ಮಂಗಳವಾರ ಪ್ರಕಟಿಸಿದೆ. ಕ್ಯಾಂಪಾ ಮತ್ತು ಆಟಂಬರ್ಗ್ ಟೆಕ್ನಾಲಜೀಸ್ ಅನ್ನು ಭಾರತೀಯ ತವರು ಋತುವಿನಲ್ಲಿ ಅಧಿಕೃತ ಪಾಲುದಾರರಾಗಿ ನೇಮಿಸಲಾಗಿದೆ ಎಂದು ಉನ್ನತ ಕ್ರಿಕೆಟ್ ಮಂಡಳಿ ದೃಢಪಡಿಸಿದೆ. ಭಾರತೀಯ ಪುರುಷರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಪೂರ್ಣಗೊಳಿಸಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20 ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ. ನಂತರ ಕೆ.ಎಲ್.ರಾಹುಲ್ ಪಡೆ ದಕ್ಷಿಣ ಆಫ್ರಿಕಾವನ್ನು 2-1 ಅಂತರದಿಂದ ಸೋಲಿಸಿ ಏಕದಿನ ಸರಣಿಯನ್ನು ಗೆದ್ದುಕೊಂಡಿತು. ಕೇಪ್ಟೌನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಶತಕದ ನೆರವಿನಿಂದ ಭಾರತ 1-1ರ ಸಮಬಲ ಸಾಧಿಸಿದೆ. ಆಲ್ರೌಂಡರ್ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ 20 ಐ ಸರಣಿಗೆ ಆತಿಥ್ಯ ವಹಿಸಲಿದೆ. ಅಫ್ಘಾನಿಸ್ತಾನ ವಿರುದ್ಧದ ಟಿ 20 ಐ ಸರಣಿಗೆ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ನಡೆದಿದ್ದಂತ ದಂಪತಿಗಳ ಡಬ್ಬಲ್ ಮರ್ಡರ್ ಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಹಣಕ್ಕಾಗಿ ದಂಪತಿಗಳನ್ನು ಕೊಂದಿದ್ದಂತ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಂದ್ಲೆ ಗ್ರಾಮದಲ್ಲಿ ಡಿಸೆಂಬರ್ 20, 2019ರಂದು ಮನೆಯಲ್ಲಿದ್ದಂತ 2 ಲಕ್ಷ ಹಣ, 160 ಗ್ರಾಮ ಚಿನ್ನಾಭರಣವನ್ನು ಕದ್ದು ದಂಪತಿಗಳಾದಂತ ನಾರಾಯಣ ನಾಯ್ಕ್, ಸಾವಿತ್ರಿ ನಾಯ್ಕ್ ಹತ್ಯೆ ಮಾಡಿ ಅವರ ತಮ್ಮನ ಮಗ ಸುಕೇಶ್ ಪರಾರಿಯಾಗಿದ್ದನು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಂತ ಪೊಲೀಸರು ಬೆಂಗಳೂರಿನ ಜಿಗಣಿ ಮೂಲಕ ವೆಂಕಟರಾಜ್, ನಾಗರಾಜ್, ಭರತ್ ಹಾಗೂ ಸುಕೇಶ್ ನನ್ನು ಬಂಧಿಸಿದ್ದರು. ಈ ಪ್ರಕರಣದ ಕುರಿತಂತೆ ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದಂತ ವಿಜಯಕುಮಾರ್ ಅವರು, ಇಂದು ತೀರ್ಪು ಪ್ರಕಟಿಸಿದ್ದಾರೆ. ಹಣಕ್ಕಾಗಿ ದಂಪತಿಗಳನ್ನು ಹತ್ಯೆ ಮಾಡಿದಂತ ಸುಕೇಶ್, ವೆಂಟರಾಜ್, ನಾಗರಾಜ್ ಹಾಗೂ ಭರತ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. https://kannadanewsnow.com/kannada/ceo-suchana-sent-to-6-day-police-custody-for-killing-her-own-child/ https://kannadanewsnow.com/kannada/good-news-for-devotees-of-savadatti-yellamma-minister-ramalinga-reddys-master-plan-for-holistic-development/

Read More

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಇಂತಹ ಅವರು ಶೀಘ್ರ ಗುಣಮುಖರಾಗಲೆಂದು ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಕರ್ನಾಟಕ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು ಬೆಂಗಳೂರು: ಕರ್ನಾಟಕ ರಾಜ್ಯಪಾಲರಾಗಿರುವಂತ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ( Covid19 Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್…

Read More

ಬೆಂಗಳೂರು: ಕರ್ನಾಟಕ ರಾಜ್ಯಪಾಲರಾಗಿರುವಂತ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ( Covid19 Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ತಿಳಿದು ಬಂದಿದೆ ಎಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಪಾಸಿಟಿವ್ ( Covid19 Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರ್ದದುಗೊಳಿಸಿರೋದಾಗಿ ತಿಳಿಸಿದೆ. ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಂಜಾಗ್ರತಾ ಕ್ರಮವಾಗಿ ರಾಜಭವನದಲ್ಲೇ ಕ್ವಾರಂಟೈನ್ ಆಗಲಿದ್ದಾರೆ. ಅವರು ಕೊರೋನಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಆರೋಗ್ಯವಾಗಿದ್ದಾರೆ.…

Read More

ಮನುಷ್ಯನಿಗೆ ಹಣದ ಅವಶ್ಯಕತೆ ಯಾವಾಗಲೂ ಇದ್ದೇ ಇರುತ್ತದೆ. ಮನುಷ್ಯನ ಬಹುತೇಕ ಎಲ್ಲಾ ಕಷ್ಟಗಳನ್ನು ಹಣದಿಂದ ಪರಿಹಾರ ಮಾಡಬಹುದಾದ ಕಾರಣ ಹಣಕ್ಕೆ ಇಷ್ಟು ಪ್ರಾಮುಖ್ಯತೆ. ಜೀವನದಲ್ಲಿ ಕಷ್ಟ ಬಂದಾಗ ಅವಶ್ಯಕತೆಗೆ ಬೇಕಾದಷ್ಟು ಹಣ ಇಲ್ಲದಿದ್ದರೆ ಸಾಲ ಮಾಡುವ ಪರಿಸ್ಥಿತಿ ಬರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ…

Read More

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar chand gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಕೋವಿಡ್ ಲಕ್ಷಣಗಳನ್ನು ಹೊಂದಿದ್ದಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಅವರ ಪರೀಕ್ಷೆಯ ವರದಿ ಬಂದಿದ್ದು, ಇದೀಗ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಕೋವಿಡ್ ಪಾಸಿಟಿವ್ ( Covid19 Postive ) ಎಂಬುದಾಗಿ ಪರೀಕ್ಷೆಯ ವರದಿಯಿಂದ ದೃಢಪಟ್ಟ ಕಾರಣ, ಅವರ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದಿಗೊಳಿಸಿರೋದಾಗಿ ರಾಜ್ಯಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಪಾಸಿಟಿವ್ ಆಗಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುಲಿದ್ದಾರೆ ಎಂಬುದಾಗಿಯೂ ತಿಳಿಸಿದೆ. https://kannadanewsnow.com/kannada/ceo-suchana-sent-to-6-day-police-custody-for-killing-her-own-child/ https://kannadanewsnow.com/kannada/good-news-for-devotees-of-savadatti-yellamma-minister-ramalinga-reddys-master-plan-for-holistic-development/

Read More

ಬೆಂಗಳೂರು: ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸೋರ ವಿರುದ್ಧ ಕಠಿಣ ನಿಲುವನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಒಂದು ವೇಳೆ ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸಿದ್ರೇ ಡಿಎಲ್ ರದ್ದುಗೊಳಿಸೋದಾಗಿ ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಅಲ್ಲದೇ ಈಗಾಗಲೇ 711 ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023 ನೇ ಸಾಲಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಮಾರಣಾಂತಿಕ ಅಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘನಾ ಪ್ರಕರಣಗಳಲ್ಲಿ ಭಾಗಿಯಾದ ಚಾಲಕರ/ಸವಾರರ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಜಪ್ತಿಪಡಿಸಿಕೊಂಡು, ಸದರಿ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಬೆಂಗಳೂರು ನಗರ ಸೇರಿದಂತೆ, ಕರ್ನಾಟಕದ ಇತರೆ ಜಿಲ್ಲೆ ಹಾಗೂ ಹೊರರಾಜ್ಯಗಳ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಛೇರಿಗಳಿಗೆ ಒಟ್ಟು 2974 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ. ಈ ರೀತಿ ಅಮಾನತ್ತುಪಡಿಸಲು ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಳುಹಿಸಿಕೊಟ್ಟ 2974 ಡ್ರೈವಿಂಗ್ ಲೈಸೆನ್ಸ್‌ಗಳಲ್ಲಿ 711 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಛೇರಿಯ…

Read More

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದು, ತಲೆ ಮರೆಸಿಕೊಂಡು ಓಡಾಡುತ್ತಿದ್ದಂತ ನಟೋರಿಯಸ್ ರೌಡಿ ಶೀಟ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ, ಬಂಧಿಸಿದ್ದಾರೆ. ಮಂಗಳೂರು ಹೊರ ವಲಯದಲ್ಲಿ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಎಂಬಾತ ತಲೆ ಮರೆಸಿಕೊಂಡಿರೋ ಮಾಹಿತಿ ಮೇರೆಗೆ, ಸ್ಥಳಕ್ಕೆ ಪೊಲೀಸರು ಬಂಧಿಸೋದಕ್ಕೆ ತೆರಳಿದ್ದಾರೆ. ಪೊಲೀಸರು ಬಂಧಿರೋ ವಿಷಯ ತಿಳಿದಂತ ಆತ, ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗೋದಕ್ಕೆ ಯತ್ನಿಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ನಡೆಸಿದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ನನ್ನು ಶರಣಾಗುವಂತೆ ಸೂಚಿಸಲಾಗಿದೆ. ಆದರೂ ಕೇಳದೇ ಅಲ್ಲಿಂದ ಪರಾರಿಯಾಗೋದಕ್ಕೆ ಯತ್ನಿಸಿದಾಗ ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಗಂಡೇಟಿನಿಂದ ಗಾಯಗೊಂಡಿದ್ದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಅನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ceo-suchana-sent-to-6-day-police-custody-for-killing-her-own-child/ https://kannadanewsnow.com/kannada/good-news-for-devotees-of-savadatti-yellamma-minister-ramalinga-reddys-master-plan-for-holistic-development/

Read More