Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಎಂಟಿಸಿಯಿಂದ ದರ್ಜೆ-3ರ ಮೇಲ್ವಿಚಾರಕೇತರರ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತೆಯನ್ನು ಪಡೆದಿರುವಂತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಸಂಸ್ಥೆಯ ವೆಬ್ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದೆ. ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ತತ್ಸಂಬಂಧ ಅಭ್ಯರ್ಥಿಗಳು ಕಾಲಕಾಲಕ್ಕೆ ಸಂಸ್ಥೆಯ ವೆಬ್ಸೈಟ್ ಅನ್ನು ಪರಿಶೀಲಿಸುವುದು ಎಂದು ತಿಳಿಸಿದೆ. ಅಲ್ಲದೇ, ಕರೆಪತ್ರದಲ್ಲಿ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ…
ನವದೆಹಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗಡ್ಚಿರೋಲಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ನಕ್ಸಲಿಸಂನ ಕೇಂದ್ರವಾಗಿದೆ. ತಲೆಗೆ 8 ಲಕ್ಷ ರೂ.ಗಳ ಬಹುಮಾನದೊಂದಿಗೆ ನಕ್ಸಲೀಯ ದಂಪತಿಗಳು ಶರಣಾದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/breaking-upsc-engineering-exam-2025-mains-exam-postponed-upsc-exam/
ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಆಹಾರ ಕಿಟ್ ವಿತರಣೆ ಮಾಡಲು ಮುಂದಾಗಿರುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ಸುಳಿವು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅಧಿಕಾರಿ ಪೀರ್ಸಾಬ್.ಹಚ್ ಅವರು, ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ತುಮಕೂರು ಅವರು, ಹಿರಿಯೂರು-ಶಿರಾ 66 ಕೆಪಿ ಏಕಮುಖ ಪ್ರಸರಣ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಅಳವಡಿಸುವ ಕಾಮಗಾರಿಯು ಹಿರಿಯೂರು ಷುಗರ್ ಫ್ಯಾಕ್ಟರಿ ಹತ್ತಿರ ದಿನಾಂಕ 22-10-2024ರಂದು ಹಮ್ಮಿಕೊಂಡಿರುವ ಪ್ರಯುಕ್ತ ಹಿರಿಯೂರು 66/11 ಕೆವಿ ವಿದ್ಯುತ್ ಉಪ ಕೇಂದ್ರದ ಮಾರ್ಗಮುಕ್ತತೆ ನೀಡಬೇಕೆಂದು ತಿಳಿಸಿರುತ್ತಾರೆ ಎಂದಿದ್ದಾರೆ. ಈ ಪ್ರಯುಕ್ತ ದಿನಾಂಕ:-22.10.2024 ರಂದು ಹಿರಿಯೂರು 66/11 ಕೆ ವಿ ವಿ ವಿ ಕೇಂದ್ರದ ಎಲ್ಲಾ 11 ಕೆವಿ ಪ್ರಸರಣ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಬೆಳಿಗ್ಗೆ: 09.00 ರಿಂದ ಸಂಜೆ: 05.00 ರವರೆಗೆ ಈ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಿದೆ. ಈ ಕುರಿತಂತೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು – ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಹೀಗಿವೆ ದೀಪಾವಳಿ ಹಬ್ಬದ ಪ್ರಯುಕ್ತ ಸಂಚರಿಸಲಿರುವಂತ ವಿಶೇಷ ರೈಲುಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06209/06210) ರೈಲು ಸಂಚಾರ ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ, ಅರ್ಹತೆಯನ್ನು ಪಡೆದಂತ ಅಭ್ಯರ್ಥಿಯಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ. ದಿನಾಂಕ 18-10-2024ರಲ್ಲಿ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಯನ್ನು ದಿನಾಂಕ 01-02-2023ರ ಸುತ್ತೋಲೆಯ ಅನ್ವಯ ತಯಾರಿಸಿ ಪ್ರಕಟಿಸಲಾಗಿದೆ. ದಿನಾಂಕ 06-06-2020ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ…
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಹಾಸನಾಂಬ ದೇವಿಯ ದೇವಾಲಯವಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವಂತ ಹಾಸನಾಂಬೆ ತಾಯಿಯ ಬಾಗಿಲು ತೆರೆಯೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.24ರಂದು ಮಧ್ಯಾಹ್ನ 12ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಂತ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರು, ಹಾಸನಾಂಬ ದೇವಾಲಯವು ಅಕ್ಟೋಬರ್.24ರಂದು ಮಧ್ಯಾಹ್ನ 12 ಗಂಟೆಗೆ ಬಾಗಿಲು ತೆರೆಯಲಿದೆ. ಆದರೇ ಮೊದಲ ದಿನವಾದಂತ ಅಂದು ಭಕ್ತರಿಗೆ ಹಾಸನಾಂಬ ದರ್ಶನಕ್ಕೆ ಅವಕಾಶವಿಲ್ಲ ಎಂದರು. ಮೊದಲ ಮತ್ತು ಕೊನೆಯ ದಿನದಂದು ಹಾಸನಾಂಬ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುವುದಿಲ್ಲ. ಅಕ್ಟೋಬರ್.25ರಿಂದ 11 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಿಯ ದರ್ಶನಕ್ಕೆ ಟಿಕೆಟ್ ಖರೀದಿಸಿಯೂ ಭಕ್ತರು ದರ್ಶನ ಮಾಡಬಹುದಾಗಿದೆ. 1000 ಹಾಗೂ 300 ರೂ ಟಿಕೆಟ್ ಖರೀದಿಸಿದವರಿಗೆ ಒಂದೊಂದು ಲಾಡು, ಪ್ರಸಾದವನ್ನು ವಿತರಿಸುವುದಾಗಿ ತಿಳಿಸಿದರು. ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ…
ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂಬುದಾಗಿ ಸಿ.ಪಿ ಯೋಗೇಶ್ವರ್ ಅವರು ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದಂತ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಂತ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಆನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/cp-yogeshwar-meets-speaker-horatti-and-formally-resigns-from-mlc-post/
ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದರು. ಆದರೇ ಅವರಿಗೆ ಬಿಜೆಪಿ ನೀಡುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳೇ ಆ ಕ್ಷೇತ್ರದಲ್ಲಿ ನಿಲ್ಲುವುದು ಖಚಿತವಾಗಿತ್ತು. ಈ ಸುಳಿವು ಅರಿತಂತ ಸಿಪಿ ಯೋಗೇಶ್ವರ್ ಅವರು, ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ನೀಡಿದ್ದಾರೆ. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/breaking-upsc-engineering-exam-2025-mains-exam-postponed-upsc-exam/
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ಹಾನಿ ಪರಿಶೀಲನೆ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು. ಕಳೆದೊಂದು ತಿಂಗಳಿಂದ ಪ್ರವಾಹ ಸಂಬಂಧದ ಸಭೆಯೇ ನಡೆದಿಲ್ಲ. ಸರ್ಕಾರ ಕೂಡಲೇ ಸಭೆ ಕರೆದು ಕನಿಷ್ಠ 5,000 ಕೋಟಿ ರೂ. ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ವಿಶೇಷವಾಗಿ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. 16 ತಿಂಗಳ ಕಾಂಗ್ರೆಸ್ ಸರ್ಕಾರದ…