Author: kannadanewsnow09

ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ. ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ಬೆಂಗಳೂರು: ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ವಿಚಾರಣೆ ಗೈಗೆತ್ತಿಕೊಳ್ಳಬೇಕು ಎಂದರೆ ಸರ್ಕಾರದ ಅನುಮತಿ ಕಡ್ಡಾಯ ಎಂಬ ನಿಯಮ ಈಗಾಗಲೇ ಇದೆ. ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೇ ಸಿಬಿಐ ಅಧಿಕಾರಿಗಳು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಬೇಕು. ಈ ಸಂಬಂಧ ಸರ್ಕಾರ ಯಾವ ಬದಲಾವಣೆಯನ್ನೂ ಮಾಡಿಲ್ಲ. ಇದೇ ಕಾರಣಕ್ಕೆ ಇಂದು ಸಿಬಿಐ ಯಾವುದೇ ಪ್ರಕರಣ ತನಿಖೆಗೆ ತೆಗೆದುಕೊಳ್ಳಬೇಕು ಎಂದರೆ ಒಂದೋ ರಾಜ್ಯ ಸರ್ಕಾರ ಅನುಮತಿ ನೀಡಬೇಕು. ಇಲ್ಲವೇ ನ್ಯಾಯಾಲಯ ನಿರ್ದೇಶಿಸಬೇಕು ಎಂಬುದು…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಹ್ಯಾರಿ ಪಾಟರ್ ಮತ್ತು ಡೌನ್ಟನ್ ಅಬ್ಬೆ ಚಿತ್ರಗಳಲ್ಲಿ ಅಪ್ರತಿಮ ಪಾತ್ರಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಬ್ರಿಟಿಷ್ ನಟಿ ಡೇಮ್ ಮ್ಯಾಗಿ ಸ್ಮಿತ್ ತಮ್ಮ 89 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಖಚಿತಪಡಿಸಿದೆ. ಪ್ರೀತಿಯ ಹ್ಯಾರಿ ಪಾಟರ್ ಸರಣಿಯಲ್ಲಿ ಪ್ರೊಫೆಸರ್ ಮಿನರ್ವ ಮೆಕ್ಗೊನಾಗಲ್ ಪಾತ್ರವನ್ನು ನಿರ್ವಹಿಸಿದ್ದ ಸ್ಮಿತ್ ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಶಾಂತಿಯುತವಾಗಿ ನಿಧನರಾದರು. ಅವರ ಪುತ್ರರಾದ ಕ್ರಿಸ್ ಲಾರ್ಕಿನ್ ಮತ್ತು ಟೋಬಿ ಸ್ಟೀಫನ್ಸ್ ಅವರು ಪ್ರಚಾರಕ ಕ್ಲೇರ್ ಡಾಬ್ಸ್ ಮೂಲಕ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರು ತೀವ್ರ ದುಃಖವನ್ನು ವ್ಯಕ್ತಪಡಿಸಿದರು. ತೀವ್ರವಾದ ಖಾಸಗಿ ವ್ಯಕ್ತಿ, ಅವರು ಕೊನೆಯಲ್ಲಿ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಇದ್ದಳು. ಅವರು ಇಬ್ಬರು ಪುತ್ರರು ಮತ್ತು ಐದು ಪ್ರೀತಿಯ ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರು ತಮ್ಮ ಅಸಾಧಾರಣ ತಾಯಿ ಮತ್ತು ಅಜ್ಜಿಯನ್ನು ಕಳೆದುಕೊಂಡು ದುಃಖತಪ್ತವಾಗಿದೆ ಎಂದಿದ್ದಾರೆ. ಮ್ಯಾಗಿ ಸ್ಮಿತ್ ಅವರ ವೃತ್ತಿಜೀವನವು ಆರು ದಶಕಗಳಿಗೂ ಹೆಚ್ಚು ಕಾಲ ವ್ಯಾಪಿಸಿತು. ಇದು ಅವರನ್ನು ಬ್ರಿಟಿಷ್…

Read More

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ, ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇನೆಂದರೇ ಬಗರ್ ಹುಕುಂ ವಿಲೇ ಪ್ರಕ್ರಿಯೆ ಆರಂಭಗೊಳಿಸಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಗರ್ ಹುಕುಂ ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9.80ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಅಧಿಕ. ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳೂ ಕನಿಷ್ಟ ಮಟ್ಟದ ಅರ್ಜಿ ವಿಲೇ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಬೇಕು. ಅಲ್ಲದೆ, ಅರ್ಹರಿಗೆ ಭೂ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯಾದ್ಯಂತ ಶೇ. 81.74 ರಷ್ಟು ಆಧಾರ್ ಸೀಡಿಂಗ್ ರಾಜ್ಯಾದ್ಯಂತ ಈವರೆಗೆ ಶೇ. 81.74 ರಷ್ಟು ಆಧಾರ್ ಸೀಡಿಂಗ್ ಕೆಲಸವನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವ…

Read More

ಬೆಂಗಳೂರು: ರಾಜ್ಯದ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯಾಧ್ಯಂತ ಖಾಸಗಿ ಸರ್ವೇಯರ್ ಮೂಲಕ ನಂಬರ್ ಪೋಡಿ ಅಭಿಯಾನ ಆರಂಭಿಸಲಾಗುತ್ತಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ 22 ಲಕ್ಷ ಖಾಸಗಿ ಸರ್ವೇ ನಂಬರ್ಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದಾರೆ. ಪ್ರತಿಯೊಬ್ಬರ ಹಿಸ್ಸಾಗೆ ತಕ್ಕಂತೆ ಪ್ರತ್ಯೇಕ ಪಹಣಿ ಮಾಡಿಕೊಡಬೇಕಾದ್ದು ಕಂದಾಯ ಇಲಾಖೆಯ ಮೂಲಕ ಕರ್ತವ್ಯ. ಆದರೆ, ಈವರೆಗೆ ಆ ಕೆಲಸ ಆಗಿಲ್ಲ. ನಾವು ಹೀಗೆ ಪಹಣಿ ಮಾಡಿಕೊಡಲು ಮುಂದಾದರೆ ಕನಿಷ್ಟ 60 ಲಕ್ಷ ಜನರಿಗೆ ಮಾಡಿಕೊಡಬೇಕಾಗುತ್ತದೆ ಎಂದರು. ನಾವೂ ದರ್ಖಾಸ್ತು ಪೋಡಿ ಕೆಲಸದ ಜೊತೆಗೆ ಅದನ್ನೂ ಮಾಡಿಕೊಡಲು ತೀರ್ಮಾನಿಸಿದ್ದೇವೆ. ಅದೇ ಕಾರಣಕ್ಕೆ ಹಿಂದೆ ಪೋಡಿ ಮುಕ್ತ ಅಭಿಯಾನ ಆರಂಭಿಸಲಾಗಿತ್ತು. ಆದರೆ, ನಮ್ಮನ್ನು ಹುಡುಕಿ ಬಂದವರಿಗೆ ಪಹಣಿ ಮಾಡಿಕೊಡಲಾಯಿತೇ ವಿನಃ ಎಲ್ಲರಿಗೂ ಮಾಡಿಕೊಡಲಾಗಿಲ್ಲ. ಆದರೆ, ಈ ಬಾರಿ ಒಟ್ಟು ಎಷ್ಟು ಬಾಕಿ ಇದೆ ಅದನ್ನೆಲ್ಲ ಟಾರ್ಗೆಟ್ ಆಗಿ ತಗೊಂಡು ಎಲ್ಲರಿಗೂ ಕೆಲಸ ಮಾಡಿಕೊಡಲಾಗುವುದು…

Read More

ಬೆಂಗಳೂರು: ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು. ರೈತರ ಈ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ದೃಢವಾದ ಹೆಜ್ಜೆ ಇಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯಲ್ಲಿ ಕಳೆದ ಒಂದು ವರ್ಷದಿಂದ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ಅಧಿಕಾರಿಗಳನ್ನು ಗುರುತಿಸಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಲಾಯಿತು. ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ವಾಸ್ತವದಲ್ಲಿ ರಾಜ್ಯಾದ್ಯಂತ ಎಷ್ಟು ಜನ ರೈತರ ಪೋಡಿ ಕೆಲಸ ಬಾಕಿ ಇದೆ ಎಂಬ ಮಾಹಿತಿಯಾಗಲಿ, ಅಂಕಿಸಂಖ್ಯೆಯಾಗಲಿ ಸರ್ಕಾರದ ಬಳಿ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ಪ್ರಗತಿ ಕೆಲಸವೊಂದೇ ಬಾಕಿ ಇದ್ದು, ಸೆಪ್ಟೆಂಬರ್.2 ರಿಂದಲೇ ದರ್ಖಾಸ್ತು ಪೋಡಿ ಬಾಕಿ ಕೆಲಸ ಅಭಿಯಾನ ಮಾದರಿಯಲ್ಲಿ ಆರಂಭಿಸಲಾಗಿದೆ. ರೈತರ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಗೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವೆಸ್ಟ್ ಇಂಡೀಸ್ನ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ ಗಾಯದ ಸಮಸ್ಯೆಯಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇತಿಹಾಸದಲ್ಲಿ ಪ್ರಮುಖ ಟಿ 20 ವಿಕೆಟ್ ಪಡೆದ 40 ವರ್ಷದ ಆಟಗಾರ, ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್ ಅಭಿಯಾನದ ಕೊನೆಯಲ್ಲಿ ನಿವೃತ್ತರಾಗಲು ಯೋಜಿಸಿದ್ದರು. ಆದಾಗ್ಯೂ, ತೊಡೆಯ ಗಾಯವನ್ನು ಅನುಭವಿಸಿದ ನಂತರ, ಟ್ರಿನ್ಬಾಗೊ ನೈಟ್ ರೈಡರ್ಸ್ ಆಟಗಾರ ತಕ್ಷಣವೇ ಮುಗಿಸಲು ನಿರ್ಧರಿಸಿದ್ದಾರೆ. “ನನ್ನ ಮನಸ್ಸು ಮುಂದುವರಿಯಲು ಬಯಸುತ್ತದೆ, ಆದರೆ ನನ್ನ ದೇಹವು ಇನ್ನು ಮುಂದೆ ನೋವು, ಸ್ಥಗಿತ ಮತ್ತು ಒತ್ತಡವನ್ನು ಸಹಿಸುವುದಿಲ್ಲ” ಎಂದು ಬ್ರಾವೋ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. “ನನ್ನ ತಂಡದ ಸಹ ಆಟಗಾರರು, ನನ್ನ ಅಭಿಮಾನಿಗಳು ಅಥವಾ ನಾನು ಪ್ರತಿನಿಧಿಸುವ ತಂಡಗಳನ್ನು ನಿರಾಸೆಗೊಳಿಸುವ ಸ್ಥಿತಿಯಲ್ಲಿ ನಾನು ಇರಲು ಸಾಧ್ಯವಿಲ್ಲ. ಆದ್ದರಿಂದ, ಭಾರವಾದ ಹೃದಯದಿಂದ, ನಾನು ಅಧಿಕೃತವಾಗಿ ಕ್ರೀಡೆಯಿಂದ ನಿವೃತ್ತಿ ಘೋಷಿಸುತ್ತೇನೆ. ಇಂದು, ಚಾಂಪಿಯನ್ ವಿದಾಯ ಹೇಳಿದರು. ಎಲ್ಲಾ ಟಿ 20 ಪಂದ್ಯಗಳಲ್ಲಿ 600 ಕ್ಕೂ ಹೆಚ್ಚು ವಿಕೆಟ್ ಪಡೆದ…

Read More

ಬೆಂಗಳೂರು: SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್ಎಸ್ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ…

Read More

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಅದರಂತೆ ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇಂದು ಸಂಜೆ ಎಚ್ ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ. 2007ರಲ್ಲಿ ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕೆರ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಈ ಕುರಿತು ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿತ್ತು. ಆದರೆ, 2021ರಿಂದ ಲೋಕಾಯುಕ್ತದಿಂದ ಯಾವುದೇ ಪ್ರಗತಿಯಾಗಿಲ್ಲ ಎಂದು…

Read More

ಬೆಂಗಳೂರು: ಬ್ರಾಹ್ಮಣ ಮುಂದುವರಿದ ಸಮಾಜ ಎಂಬ ಕಾರಣಕ್ಕೆ ಸಮುದಾಯದಲ್ಲಿರುವ ಬಡವರಿಗೆ ಅನ್ಯಾಯವಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯವತಿಯಿಂದ ಆಯೋಜಿಸಿದ್ದ ವಿಶ್ಚಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಬ್ರಾಹ್ಮಣ ಸಮುದಾಯದ ಮಕ್ಕಳು ಪಬ್ಲಿಕ್ ಸರ್ವೀಸ್ ಹುದ್ದೆಗಳತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಇದೆ.‌ ನಮಗೆ ಸರ್ಕಾರಿ ಕೆಲಸಗಳು ಸಿಗಲ್ಲ ಎಂದು ಬಹುತೇಕರು ಇಂದು ಡಾಕ್ಟರ್, ಎಂಜಿನಿಯರ್ ಆಗುವುದಕ್ಕೆ ಆಸಕ್ತಿ ತೋರುತ್ತಿದ್ದಾರೆ. ಆದರೆ ಕೆ.ಎ.ಎಸ್, ಐಎಎಸ್ ಹುದ್ಧೆಗಳನ್ನ ಅಲಂಕರಿಸಲು ಪ್ರಯತ್ನಿಸಬೇಕು. ಇದರಿಂದ ಸಾರ್ವಜನಿಕ ಕಾರ್ಯದಲ್ಲಿ ನಿಮ್ಮನ್ನ ನೀವು ತೊಡಗಿಸಿಕೊಳ್ಳುವುದರ ಜೊತೆಗೆ ಸಮಾಜದ ಬಡವರಿಗು ನೀವು ಸಹಾಯ ಮಾಡಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಈ ಹಿಂದೆ ಬ್ರಾಹ್ಮಣ ಸಮುದಾಯದವರು ಎಲ್ಲ ಸಿದ್ಧಾಂತಗಳ ರಂಗಗಳಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರು. ಹಾಗೆ ನೋಡಿದರೇ ಬ್ರಾಹ್ಮಣರು ನಿಜವಾದ ಜಾತ್ಯಾತೀತರು. ಬ್ರಾಹ್ಮಣ ಸಮುದಾಯದ ಶಾಸಕರು ಗೆದ್ದು ಬರುವ ಕ್ಷೇತ್ರಗಳಲ್ಲಿ ಸಮುದಾಯದ ಮತಗಳು ತೀರಾ ಕಡಿಮೆ.. ಇತರ ಸಮುದಾಯದ…

Read More