Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಮಾಜಿ ನಾಯಕ ಚಂಪೈ ಸೊರೆನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಜನರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ಸೊರೆನ್, ಇಂದು, ಬಾಬಾ ತಿಲ್ಕಾ ಮಾಂಝಿ ಮತ್ತು ಸಿಡೋ-ಕನ್ಹು ಅವರ ಪವಿತ್ರ ಭೂಮಿಯಾದ ಸಂತಾಲ್ ಪರಗಣದಲ್ಲಿ ಬಾಂಗ್ಲಾದೇಶದ ಒಳನುಸುಳುವಿಕೆ ದೊಡ್ಡ ಸಮಸ್ಯೆಯಾಗಿದೆ. ನೀರು, ಅರಣ್ಯ ಮತ್ತು ಭೂಮಿಗಾಗಿ ಹೋರಾಟದಲ್ಲಿ ವಿದೇಶಿ ಬ್ರಿಟಿಷರ ಗುಲಾಮಗಿರಿಯನ್ನು ಎಂದಿಗೂ ಒಪ್ಪಿಕೊಳ್ಳದ ಆ ವೀರರ ವಂಶಸ್ಥರ ಭೂಮಿಯನ್ನು ಈ ನುಸುಳುಕೋರರು ಆಕ್ರಮಿಸಿಕೊಂಡಿದ್ದಾರೆ ಎಂಬ ಅಂಶಕ್ಕಿಂತ ಹೆಚ್ಚು ದುರದೃಷ್ಟಕರವಾದುದು ಏನಿದೆ. ಅವರ ಕಾರಣದಿಂದಾಗಿ, ಫೂಲ್-ಜಾನೋ ಅವರಂತಹ ಧೈರ್ಯಶಾಲಿ ಮಹಿಳೆಯರನ್ನು ತಮ್ಮ ಆದರ್ಶವೆಂದು ಪರಿಗಣಿಸುವ ನಮ್ಮ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆ ಅಪಾಯದಲ್ಲಿದೆ ಎಂದಿದ್ದಾರೆ. ಬಿಜೆಪಿ ಮಾತ್ರ ಈ ವಿಷಯದ ಬಗ್ಗೆ ಗಂಭೀರವಾಗಿದೆ ಮತ್ತು ಇತರ ಪಕ್ಷಗಳು ಮತಗಳಿಗಾಗಿ ಇದನ್ನು ನಿರ್ಲಕ್ಷಿಸುತ್ತಿವೆ. ಆದ್ದರಿಂದ, ಬುಡಕಟ್ಟು ಜನರ ಅಸ್ಮಿತೆ ಮತ್ತು ಅಸ್ತಿತ್ವವನ್ನು ಉಳಿಸುವ ಈ…
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಗಸ್ಟ್ 27 ರಂದು (ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕದಂದು ಶಾ ಐಸಿಸಿ ಉನ್ನತ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂಬ ಸುದ್ದಿಯನ್ನು ದೃಢಪಡಿಸಲಾಯಿತು. ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶಾ ಪಾತ್ರರಾಗಿದ್ದಾರೆ. https://kannadanewsnow.com/kannada/karnataka-govt-advertisements-heres-the-guidelines-for-digital-media/ https://kannadanewsnow.com/kannada/breaking-dysp-m-k-ganapathy-suicide-case-sc-gives-big-relief-to-power-minister-kj-george/
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ನವದೆಹಲಿ: ಮೂಲಗಳ ಪ್ರಕಾರ, ಭಾರ್ತಿ ಏರ್ಟೆಲ್ ಮ್ಯೂಸಿಕ್ ವರ್ಟಿಕಲ್ನಿಂದ ನಿರ್ಗಮಿಸಲಿದೆ ಮತ್ತು ತನ್ನ ವಿಂಕ್ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸಲಿದೆ. ಕಂಪನಿಯು ಎಲ್ಲಾ ವಿಂಕ್ ಮ್ಯೂಸಿಕ್ ಉದ್ಯೋಗಿಗಳನ್ನು ಒಳಗೊಳ್ಳುತ್ತದೆ. ಮುಂದಿನ ಎರಡು ತಿಂಗಳಲ್ಲಿ ವಿಂಕ್ ಮ್ಯೂಸಿಕ್ ಅನ್ನು ಮುಚ್ಚಲು ಏರ್ಟೆಲ್ ಯೋಜಿಸುತ್ತಿದೆ. ಇದು ಎಲ್ಲಾ ಉದ್ಯೋಗಿಗಳನ್ನು ಕಂಪನಿಯಲ್ಲಿ ಸೇರಿಸಿಕೊಳ್ಳುತ್ತದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಏರ್ಟೆಲ್ ವಕ್ತಾರರನ್ನು ಸಂಪರ್ಕಿಸಿದಾಗ, ಈ ಬೆಳವಣಿಗೆಯನ್ನು ದೃಢಪಡಿಸಿದರು. ನಾವು ವಿಂಕ್ ಮ್ಯೂಸಿಕ್ ಅನ್ನು ಸೂರ್ಯಾಸ್ತಗೊಳಿಸುತ್ತೇವೆ ಮತ್ತು ಎಲ್ಲಾ ವಿಂಕ್ ಮ್ಯೂಸಿಕ್ ಉದ್ಯೋಗಿಗಳನ್ನು ಏರ್ಟೆಲ್ ಪರಿಸರ ವ್ಯವಸ್ಥೆಯಲ್ಲಿ ವಿಲೀನಗೊಳಿಸಲಾಗುವುದು ಎಂದು ನಾವು ದೃಢಪಡಿಸಬಹುದು ಎಂದಿದ್ದಾರೆ. ಏರ್ಟೆಲ್ ಬಳಕೆದಾರರು ಆಪಲ್ ಮ್ಯೂಸಿಕ್ಗೆ ಪ್ರವೇಶವನ್ನು ಹೊಂದಿರುತ್ತಾರೆ. ಹೆಚ್ಚುವರಿಯಾಗಿ, ವಿಂಕ್ ಪ್ರೀಮಿಯಂ ಬಳಕೆದಾರರು ಆಪಲ್ಗಾಗಿ ಏರ್ಟೆಲ್ನಿಂದ ವಿಶೇಷ ಕೊಡುಗೆಗಳನ್ನು ಪಡೆಯುತ್ತಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಐಫೋನ್ ಬಳಸುವ ಗ್ರಾಹಕರಿಗೆ ವಿಶೇಷ ಕೊಡುಗೆಗಳೊಂದಿಗೆ ಆಪಲ್ ಮ್ಯೂಸಿಕ್ ಗೆ ಪ್ರವೇಶವನ್ನು ಒದಗಿಸಲು ಕಂಪನಿಯು ಆಪಲ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. https://kannadanewsnow.com/kannada/national-best-teacher-award-2024-two-teachers-from-karnataka-honoured/ https://kannadanewsnow.com/kannada/good-news-from-the-central-government-rs-72000-will-be-available-every-year-under-this-scheme-pension/ https://kannadanewsnow.com/kannada/karnataka-govt-advertisements-heres-the-guidelines-for-digital-media/
ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ-2024 ಅನ್ನು ಪ್ರಕಟಿಸಲಾಗಿದೆ. ಈ ಗರಿಮೆಗೆ ಕರ್ನಾಟಕ ಇಬ್ಬರು ಶಿಕ್ಷಕರು ಪಾತ್ರರಾಗಿದ್ದಾರೆ. ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ 2024ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 2024ರಲ್ಲಿ 50 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿರುವಂತ ರಾಷ್ಟ್ರೀಯ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಕರ್ನಾಟಕದ ಇಬ್ಬರು ಶಿಕ್ಷಕರು ಪಡೆದಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್ ಗಿರೀಶ್ ಅವರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಬಂದಿದೆ. ಇವರಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ.ಆರ್ ಅವರಿಗೂ ಸಂದಿದೆ. https://kannadanewsnow.com/kannada/karnataka-govt-advertisements-heres-the-guidelines-for-digital-media/ https://kannadanewsnow.com/kannada/breaking-dysp-m-k-ganapathy-suicide-case-sc-gives-big-relief-to-power-minister-kj-george/
ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ಮಂದಿ ಡಿಜಿಟಲ್ ಮೀಡಿಯಾ ವೇದಿಕೆಗಳೊಂದಿಗೆ ಸುದ್ದಿಯನ್ನು ಸಾರ್ವಜನಿಕರಿಗೆ ತಲುಪಿಸುವಂತ ಕೆಲಸ ಮಾಡುತ್ತಿದ್ದಾರೆ. ಈ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಡಿಜಿಟಲ್ ಮೀಡಿಯಾಗಳಿಗೂ ಸರ್ಕಾರಿ ಜಾಹೀರಾತು ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಿ ತಿಳಿಸಲಾಗಿದೆ. ಲಕ್ಷ ಲಕ್ಷ ವೀವ್ಸ್, ಮಿಲಿಯನ್ಸ್ ಗಟ್ಟಲೇ ಫಾಲೋವರ್ಸ್.. ಹೀಗಿದ್ದರೂ ಪೇಪರ್, ಟಿವಿಗಳಿಗೆ ನೀಡುತ್ತಿದ್ದಂತ ಸರ್ಕಾರಿ ಜಾಹೀರಾತು ಮಾತ್ರ, ಡಿಜಿಟಲ್ ಮೀಡಿಯಾಗಳಿಗೆ ಸಿಗುತ್ತಿರಲಿಲ್ಲ. ಇದಕ್ಕೆ ಅವಕಾಶವೂ ಇರಲಿಲ್ಲ. ಆದರೇ ಈಗ ಡಿಜಿಟಲ್ ಮೀಡಿಯಾದವರಿಗೂ ಬಂಗಾರದ ಬೆಲೆ ಬಂದಿದೆ. ರಾಜ್ಯ ಸರ್ಕಾರದಿಂದ ಕರ್ನಾಟಕ ಡಿಜಿಟಲ್ ಮೀಡಿಯಾ ಜಾಹೀರಾತು ಮಾರ್ಗಸೂಚಿ-2024 ಪ್ರಕಟಿಸಿದ್ದು, ಅದರಲ್ಲಿನ ಮಾನದಂಡಗಳನ್ನು ಪೂರೈಸಿದವರಿಗೆ ಶೀಘ್ರವೇ ಸರ್ಕಾರಿ ಜಾಹೀರಾತು ನೀಡಲಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ, ಡಿಜಿಟಲ್ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದ್ರೇ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ಧಿಷ್ಟ ಜನರನ್ನು ತಲುಪುವುದರಿಂದ ಸರ್ಕಾರಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳ ಜಾಹೀರಾತುಗಳಲ್ಲಿ ಈಗ ಡಿಜಿಟಲ್…
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದೇಶದ ಉಳಿದ ಭಾಗಗಳ ಮೇಲೆ ತನ್ನ ‘ಹಕ್ಕು’ (ಕಬ್ಜಾ) ಪ್ರತಿಪಾದಿಸಲು ಪಕ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಕಾಶ್ಮೀರದಲ್ಲಿ ನೀಡಿದ ಹೇಳಿಕೆಗಳು ಮತ್ತೊಂದು ವಿವಾದವನ್ನು ಹುಟ್ಟುಹಾಕಿವೆ. ಹಾಗಾದ್ರೇ ಕಾಂಗ್ರೆಸ್ ಕಬ್ಜಾ ಮನಸ್ಥಿತಿ ಹೊಸ ಲಕ್ಷಣವೇ? ಆ ಬಗ್ಗೆ ಒಂದು ಐತಿಹಾಸಿಕ ಮತ್ತು ಸಮಕಾಲೀನ ವಿಶ್ಲೇಷಣೆಯನ್ನು ಮುಂದೆ ಓದಿ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಬ್ಜಾ ಹೇಳಿಕೆಯನ್ನು ಅನೇಕ ಟೀಕಾಕಾರರು ವಿವರಿಸಿದ್ದಾರೆ. ಈ ಮನಸ್ಥಿತಿಯು ಕಾಂಗ್ರೆಸ್ ಪಕ್ಷವು ಇತಿಹಾಸದುದ್ದಕ್ಕೂ ಅಧಿಕಾರ ಮತ್ತು ಆಡಳಿತದ ಬಗ್ಗೆ ಪಕ್ಷದ ವಿಧಾನವನ್ನು ನಿರೂಪಿಸಿದೆ ಎಂಬುದಾಗಿ ಅನೇಕರು ಹೇಳಿದ್ದಾರೆ. ರಾಷ್ಟ್ರೀಯ ಏಕತೆ ಮತ್ತು ಭದ್ರತೆಯ ವೆಚ್ಚದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರವನ್ನು ಕಸಿದುಕೊಳ್ಳುವ ಮತ್ತು ಹಿಡಿದಿಟ್ಟುಕೊಳ್ಳುವ ಮನಸ್ಥಿತಿಯನ್ನು ನಿರಂತರವಾಗಿ ಹೇಗೆ ಪ್ರದರ್ಶಿಸಿದೆ ಎಂಬುದನ್ನು ಅನ್ವೇಷಿಸಲು ಐತಿಹಾಸಿಕ ಸಂದರ್ಭ ಮತ್ತು ಪ್ರಸ್ತುತ ಸನ್ನಿವೇಶಗಳೊಂದಿಗೆ ವಿವರಿಸುತ್ತಾ ಹೋಗುತ್ತಾರೆ. ಆ ಬಗ್ಗೆ ಈ ಕೆಳಗಿನ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಷಯಗಳು ಪೋಟೋಗಳ ಮೂಲಕ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವಂತ ಕಾರಾಗೃಹ ಇಲಾಖೆಯು, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ಕೋರ್ಟ್ ಮೊರೆ ಹೋಗಿತ್ತು. ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ ಕಾರಣ, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಂಬಂಧ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾಗಿರುವಂತ ನಟ ದರ್ಶನ್…
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿಟಲ್ ಮಾಧ್ಯಮಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ಅನ್ನು ಪ್ರಕಟಿಸಿದೆ. ಹೀಗಾಗಿ ಆ ಮಾರ್ಗಸೂಚಿಯಂತೆ ಡಿಜಿಟಲ್ ಮೀಡಿಯಾಗಳಿಗೆ ವಾರ್ತಾ ಇಲಾಖೆಯಿಂದ ಸರ್ಕಾರಿ ಜಾಹೀರಾತುಗಳನ್ನು ನೀಡಲು ಕ್ರಮವಹಿಸಲಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟಿತವಾದಲ್ಲಿ ಸರ್ಕಾರದ ಜಾಹೀರಾತುಗಳು ಯುವ ಸಮೂಹವನ್ನು ತಲುಪಲು ಸಹಕಾರಿಯಾಗುವುದರಿಂದ ಹಾಗೂ ಡಿಜಿಟಲ್ ಮಾಧ್ಯಮಗಳು ಇತ್ತೀಚೆಗೆ ಸರ್ಕಾರದ ಜಾಹೀರಾತು ಕೋರಿ ಇಲಾಖೆಗೆ ಮನವಿಗಳನ್ನು ಸಲ್ಲಿಸುತ್ತಿದ್ದು, ಡಿಜಿಟಲ್ ಮಾಧ್ಯಮಗಳಿಗೆ ಇಲಾಖೆಯಿಂದ ಜಾಹೀರಾತು ದರ ನಿಗದಿಯಾಗಿಲ್ಲದ ಕಾರಣ ಸರ್ಕಾರದ ಜಾಹೀರಾತುಗಳನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ, ಪ್ರಸ್ತುತ ಕೇಂದ್ರ ಸರ್ಕಾರದ ಡಿ.ಎ.ವಿ.ಪಿ. ಸಿದ್ಧಪಡಿಸಿರುವ ನೀತಿಯನ್ನು ಪರಿಗಣನೆಗೆ ತೆಗೆದುಕೊಂಡು ಅದೇ ಮಾದರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಡಿಜಿಟಲ್ ಪಾಲಿಸಿಯನ್ನು…
ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ…