Author: kannadanewsnow09

ಬೆಂಗಳೂರು : “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮತದಾರರ ಹಕ್ಕಿನ ರಕ್ಷಣೆಗೆ ಹೋರಾಟ ಆರಂಭ ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಮಂಗಳವಾರದಂದು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ” ಎಂದರು. “ತನಿಖೆ…

Read More

ಬೆಂಗಳೂರು : “ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, ಆಸ್ಪತ್ರೆಯ ಕ್ರಾಂತಿಕಾರಿ ತುರ್ತು ಚಿಕಿತ್ಸಾ ಯೋಜನೆ ‘ME Care’ (ಮಿ ಕೇರ್) ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ವೈದ್ಯ ವೃತ್ತಿಯಲ್ಲಿ ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ ನಡೆಯಬೇಕು. ಈಗ ತಂತ್ರಜ್ಞಾನವೂ ಮುಂದುವರೆದು ನಿಮ್ಮ ನೆರವಿಗಿದೆ. ಇದರಿಂದ ಸಾಕಷ್ಟು ಉಪಯೋಗವಾಗಿದೆ,” ಎಂದರು. ಗ್ರಾಮೀಣ ಮತ್ತು ನಗರ ಭಾಗದ ವೈದ್ಯಕೀಯ ಸೇವೆಯ ಕುರಿತು ಮಾತನಾಡಿದ ಡಿಸಿಎಂ, “ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಣೆ ಮಾಡಿದ ವೈದ್ಯರಿಗೆ ನಗರ ಭಾಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಸುಲಭ. ನಗರ ಭಾಗದಲ್ಲಿ ಹಿರಿಯ ವೈದ್ಯರ ಸಲಹೆ ಪಡೆದು ಕಿರಿಯ ವೈದ್ಯರು ಕೆಲಸ ಮಾಡಬೇಕಾಗುತ್ತದೆ. ನಾನು ಸ್ವಲ್ಪ ದಿನ ವೈದ್ಯಕೀಯ…

Read More

ದೈನಂದಿನ ತಪ್ಪದೆ ಹೇಳಬೇಕಾದ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…

Read More

ಮಂಡ್ಯ :- ಮದ್ದೂರು ನಗರದ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದ್ದು, ಅದರಂತೆ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ನಗರಸಭೆ ಕಛೇರಿಯ ನವೀಕರಣ ಹಾಗೂ ಹೆಚ್ಚುವರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ 2.20 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು ಪುರಸಭೆಯನ್ನು ಈಗಾಗಲೇ ರಾಜ್ಯ ಸರ್ಕಾರ ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಲಾಗಿದೆ. ಹೀಗಾಗಿ ನಗರದ ಜೊತೆಗೆ 4 ಗ್ರಾಮ ಪಂಚಾಯಿತಿಗಳು ಸಹ ಸೇರ್ಪಡೆಗೊಂಡಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿದ್ದು, ಹೀಗಾಗಿ ಹಳೇ ಕಟ್ಟಡವನ್ನು ನವೀಕರಣ ಹಾಗೂ ಹೆಚ್ಚುವರಿ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಾಗಿದೆ ಎಂದು ತಿಳಿಸಿದರು. ಮದ್ದೂರು ನಗರಸಭೆ ವ್ಯಾಪ್ತಿಯನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದ್ದು, ಅದರಂತೆ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು. ನಗರಸಭೆ ಕಛೇರಿಯ ಪಕ್ಕದ ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನವಾಗಿ ನಗರಸಭೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಪೌರಾಡಳಿತ ಸಚಿವರಿಗೆ 10 ಕೋಟಿ ರೂ…

Read More

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ ನಡೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಇರುವಂತ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ರಿಕ್ಕಿ ಕೇಜ್ ಮನೆಯ ಮುಂಭಾಗದಲ್ಲಿ ಇದ್ದಂತ ನೀರಿನ ಸಂಪಿನ ಮುಚ್ಚಳವನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯ ಮುಂಭಾಗದಲ್ಲಿದ್ದಂತ ನೀರಿನ ಸಂಪಿನ ಮುಚ್ಚಳ ಕದ್ದೊಯ್ಯುತ್ತಿರುವಂತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿರುವಂತ ಇಬ್ಬರು ಕಳ್ಳರು, ರಿಕ್ಕಿ ಕೇಜ್ ಮನೆಯ ನೀರಿನ ಸಂಪಿನ ಮುಚ್ಚಳವನ್ನು ಹೊತ್ತೊಯ್ದಿರೋದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ. https://twitter.com/rickykej/status/1999710877021286575 https://kannadanewsnow.com/kannada/cabinet-clears-indias-biggest-education-overhaul-bill-replacing-ugc-aicte/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ನವದೆಹಲಿ: ಕೇಂದ್ರ ಸಚಿವ ಸಂಪುಟವು ಭಾರತ ಉನ್ನತ ಶಿಕ್ಷಣ ಆಯೋಗ (HECI) ಮಸೂದೆ ಎಂದು ಕರೆಯಲಾಗುತ್ತಿದ್ದ ವಿಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆಯನ್ನು ಅಂಗೀಕರಿಸಿದ ನಂತರ ಭಾರತದ ಉನ್ನತ ಶಿಕ್ಷಣ ಚೌಕಟ್ಟನ್ನು ಪ್ರಮುಖವಾಗಿ ಮರುಹೊಂದಿಸಲು ಸಜ್ಜಾಗಿದೆ. ಕರಡು ಕಾನೂನು UGC, AICTE ಮತ್ತು NCTE ಗಳನ್ನು ಬದಲಿಸಲು ಒಂದೇ ಉನ್ನತ ಶಿಕ್ಷಣ ನಿಯಂತ್ರಕವನ್ನು ರಚಿಸುತ್ತದೆ, ಇದು ದೇಶಾದ್ಯಂತ ಎಲ್ಲಾ ವೈದ್ಯಕೀಯೇತರ ಮತ್ತು ಕಾನೂನೇತರ ಸಂಸ್ಥೆಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP 2020) ವಿವರಿಸಿದಂತೆ ಹೊಸ ಆಯೋಗವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ನಿಯಂತ್ರಣ, ಮಾನ್ಯತೆ ಮತ್ತು ಶೈಕ್ಷಣಿಕ ಮಾನದಂಡಗಳನ್ನು ನಿರ್ವಹಿಸುತ್ತದೆ. ವೈದ್ಯಕೀಯ ಮತ್ತು ಕಾನೂನು ಕಾಲೇಜುಗಳು ತಮ್ಮ ಅಸ್ತಿತ್ವದಲ್ಲಿರುವ ನಿಯಂತ್ರಕರ ಅಡಿಯಲ್ಲಿಯೇ ಉಳಿಯುತ್ತವೆ. 12 ಡಿಸೆಂಬರ್ 2025 ರಂದು ಅನುಮೋದನೆಯು ಇತ್ತೀಚಿನ ದಶಕಗಳಲ್ಲಿ ಭಾರತೀಯ ಉನ್ನತ ಶಿಕ್ಷಣದಲ್ಲಿನ ಅತಿದೊಡ್ಡ ರಚನಾತ್ಮಕ ಬದಲಾವಣೆಗಳಲ್ಲಿ ಒಂದಾಗಿದೆ. ವೀಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆ ಉನ್ನತ ಶಿಕ್ಷಣ ನಿಯಂತ್ರಕ ಮತ್ತು NEP 2020 ದೃಷ್ಟಿಕೋನ NEP…

Read More

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ. ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಅತ್ಯಾಚಾರ ಪ್ರಕರಣ ವರದಿಯಾಗಿದೆ. 10 ವರ್ಷದ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರವನ್ನು ಕಾಮುಕರು ನಡೆಸಿರೋದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಇಬ್ಬರು ಕೀಚಕರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ  ಹಿರಿಯೂರು ತಾಲೂಕಿನ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು 24 ಹಾಗೂ 40 ವರ್ಷದವರಾಗಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ಈ ಸಂಬಂಧ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಈ ಇಬ್ಬರು ತಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಅಪ್ರಾಪ್ತ ಮಗಳ ಮೇಲೆ ಕಳೆದ ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಈ ವಿಷಯವನ್ನು ಯಾರಿಗಾದರೂ…

Read More

ಬೆಂಗಳೂರು: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ಪರಿಚಯಿಸಲಾಗಿದೆ ಇದು ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್ ಹೇಳಿದರು. ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್, ಕರ್ನಾಟಕ ಸ್ಟೇಟ್ ಚಾರ್ಟೆಡ್ ಅಕೌಂಟ್ಸ್ ಅಸೋಸಿಯೇಷನ್ ಬೆಂಗಳೂರು ಬ್ರಾಂಚ್ ಆಫ್ ಎಸ್ಐಆರ್ ಸಿ ಆಫ್ ಐಸಿಎಐ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 28ನೇ ರಾಷ್ಟೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಕಾಯ್ದೆ, 1961 ಅನ್ನು ಆರು ದಶಕಗಳ ನಂತರ ರದ್ದುಪಡಿಸಲಾಗಿದ್ದು, ಅದರ ಬದಲಿಗೆ ಆದಾಯ ತೆರಿಗೆ ಕಾಯ್ದೆ, 2025 ಜಾರಿಗೆ ಬರುತ್ತದೆ. ಇದು ಮುಂದಿನ ಏಪ್ರಿಲ್ ನಿಂದ ಜಾರಿಗೆ ಬರಲಿದೆ. ಅನುಸರಣೆ ಸರಳೀಕರಣ, ಡಿಜಿಟಲ್ ಪರಿವರ್ತನೆ ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮಾನವಪರವಾದ ಪಕ್ಷಪಾತವನ್ನು ಕಡಿಮೆ ಮಾಡಲು ಆದ್ಯತೆ ನೀಡಲಾಗುತ್ತಿದೆ. ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು…

Read More

ಬೆಂಗಳೂರು: ಸಾರಿಗೆ ಬಸ್ಸುಗಳು ಅಪಘಾತ, ಅವಘಡದಂತ ಸಂದರ್ಭದಲ್ಲಿ ರಿಪೇರಿ ಮಾಡೋದು ಕಷ್ಟವಾಗಿತ್ತು. ಇನ್ಮುಂದೆ ಇದು ಆಗೋದಿಲ್ಲ. ಕಾರಣ ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತು ಸ್ಪಂದಿಸಲು ನೆರವಾಗುವಂತ ಅಪಘಾತ ತುರ್ತು ಸ್ಪಂದನ ವಾಹನಗಳಿಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು “ಅಪಘಾತ ತುರ್ತು ಸ್ಪಂದನ ವಾಹನ” ಗಳಿಗೆ (Accident Emergency Response Vehicle) ಚಾಲನೆ ನೀಡಿದರು. ಈ ವಾಹನಗಳು ನಿಗಮದ ಬಸ್ಸುಗಳು ಮಾರ್ಗ ಮಧ್ಯೆ ಅಪಘಾತ/ ಅವಘಡಕ್ಕೀಡಾಗಿ (ಬ್ರೇಕ್ ಡೌನ್) ದುರಸ್ಥಿಗೊಂಡಲ್ಲಿ ಸದರಿ ವಾಹನವನ್ನು ಶೀಘ್ರವಾಗಿ ರಿಪೇರಿಗೊಳಿಸುವ ಸಲುವಾಗಿ ಮೊಬೈಲ್ ವರ್ಕಷಾಪ್ ಮಾದರಿಯಲ್ಲಿ ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಈ ಎರಡು ವಾಹನಗಳನ್ನು ಬೆಂಗಳೂರು ಹಾಗೂ ಮೈಸೂರು ಕೇಂದ್ರ ಸ್ಥಳಗಳಲ್ಲಿ ನಿಯೋಜಿಸಲಾಗುವುದು. ಇದರಿಂದ ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಪ್ರದೇಶದಲ್ಲಿ ಉಂಟಾಗುವ ಅಪಘಾತ/ಅವಘಢಗಳನ್ನು…

Read More