Author: kannadanewsnow09

ಬೆಂಗಳೂರು: ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು,…

Read More

ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲೀ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ದ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು. ಶ್ರೀಕಾಂತ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ…

Read More

ಯಾದಗಿರಿ: ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ವ್ಯಾನ್ ಉರುಳಿ ಬಿದ್ದಿದೆ. ಈ ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಹೊತ್ತಿ ಉರಿದಿರೋ ಘಟನೆ ಯಾದಗಿರಿಯ ಚಿತ್ತಾಪುರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಓಮ್ನಿ ವ್ಯಾನ್ ಒಂದರ ಟೈಯರ್ ಸ್ಪೋಟಗೊಂಡಿದೆ. ಈ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೆ ಪಲ್ಟಿಯಾಗಿದೆ. ಓಮ್ನಿ ವ್ಯಾನ್ ಪಲ್ಟಿಯಾದ ಪರಿಣಾಮ ಅದರೊಟ್ಟಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದಂತ ವಾಹನ ಸಾವರರು ಓಮ್ನಿ ವ್ಯಾನಿನಲ್ಲಿದ್ದಂತ ಓರ್ವನನ್ನು ಹೊರಗೆ ಎಳೆದುಕೊಂಡಿದ್ದಾರೆ. ಈ ಬಳಿಕ ಓಮ್ನಿ ವ್ಯಾನ್ ಸಂಪೂರ್ಣವಾಗಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿದೆ. ಈ ಅವಗಢದಲ್ಲಿ ಗಾಯಗೊಂಡಿದ್ದಂತ ಓರ್ವ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದಂತ ಚಿತ್ತಾಪುರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಮ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/ https://kannadanewsnow.com/kannada/trinamool-congress-leader-shot-dead-by-bike-borne-assailants-in-west-bengal/

Read More

ಬೆಂಗಳೂರು: ನಮಗೆ ಹಣ ಬೇಡ ಅಕ್ಕಿ ಕೊಡಿ ಎಂಬುದಾಗಿ ರಾಜ್ಯದ ಅನ್ನಭಾಗ್ಯ ಫಲಾನುಭವಿಗಳ ಒತ್ತಾಯವಾಗಿದೆ. ಇದರ ನಡುವೆ ಅಕ್ಕಿ ಸಿಗೋವರೆಗೂ ಹೆಚ್ಚುವರಿ 5 ಕೆಜಿ ಅಕ್ಕಿಗೆ ಹಣ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲವು ಕಡೆ ಅಕ್ಕಿ ಬೇಕು. ನಮಗೆ ಹಣ ಬೇಡ ಎಂಬುದಾಗಿ ಅನ್ನಭಾಗ್ಯ ಫಲಾನುಭವಿಗಳು ಕೇಳುತ್ತಿದ್ದಾರೆ. ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆಗಾಗಿ ಅಕ್ಕಿಗಾಗಿ ಸರ್ಕಾರ ಹುಡುಕಾಟ ಮುಂದುವರೆಸಿದೆ ಎಂದರು. ಹೆಚ್ಚುವರಿ 5 ಕೆಜಿ ಅಕ್ಕಿಯನ್ನೇ ವಿತರಣೆ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಿಂದ ಖರೀದಿಗೆ ಕ್ರಮವಹಿಸಲಾಗಿದೆ. ಆದ್ರೇ ಸೂಕ್ತ ಬೆಲೆ ನಿಗದಿಯಾಗುತ್ತಿಲ್ಲ. ಅದರಲ್ಲೂ ಈ ಸಲ ಮಳೆ ಕಡಿಮೆಯಾಗಿರೋ ಕಾರಣ ಉತ್ಪಾದನೆಯೂ ಕುಂಠಿತಗೊಂಡಿದೆ ಎಂದರು. ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಕಿ ಬದಲಾಗಿ ಸದ್ಯಕ್ಕೆ ಹಣವನ್ನೇ ನೀಡಲಾಗುತ್ತದೆ. ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣವನ್ನು ಜಮಾ ಮಾಡಲಾಗುತ್ತದೆ. ಅಕ್ಕಿ ದೊರೆತ ಕೂಡಲೇ…

Read More

ನವದೆಹಲಿ: ಮಾಲ್ಡೀವ್ಸ್ ಸರ್ಕಾರ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ‘ವಿದೇಶಿ ನಾಯಕರು ಮತ್ತು ಉನ್ನತ ಅಧಿಕಾರಿಗಳಿಗೆ’ ಸಂಬಂಧಿಸಿದಂತೆ ‘ಅವಹೇಳನಕಾರಿ ಹೇಳಿಕೆಗಳನ್ನು’ ನೀಡದಂತೆ ತನ್ನ ಅಶಿಸ್ತಿನ ಸಚಿವರಿಗೆ ಎಚ್ಚರಿಕೆ ನೀಡಿದೆ. ಹೊಸದಾಗಿ ಆಯ್ಕೆಯಾದ ಮೊಹಮ್ಮದ್ ಮುಯಿಝು ಸರ್ಕಾರದ ಸಚಿವರು ಮತ್ತು ಇತರ ನಾಯಕರು ಲಕ್ಷದ್ವೀಪಕ್ಕೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದ್ದಕ್ಕಾಗಿ ಭಾರತೀಯರು ಮತ್ತು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಮತ್ತು ಜನಾಂಗೀಯ ನಿಂದನೆಗಳನ್ನು ಬಳಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ. ವೈಯಕ್ತಿಕ ಅಭಿಪ್ರಾಯ, ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂಬುದಾಗಿ ಮಾಲ್ಡೀವ್ಸ್ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಕೆಲವು ಸಚಿವರು ನೀಡಿದ ಹೇಳಿಕೆಗಳು ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ದ್ವೀಪ ರಾಷ್ಟ್ರ ಹೇಳಿದೆ. “ವಿದೇಶಿ ನಾಯಕರು ಮತ್ತು ಉನ್ನತ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮಾಲ್ಡೀವ್ಸ್ ಸರ್ಕಾರಕ್ಕೆ ತಿಳಿದಿದೆ. ಈ ಅಭಿಪ್ರಾಯಗಳು ವೈಯಕ್ತಿಕವಾಗಿವೆ ಮತ್ತು ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಅಭಿವ್ಯಕ್ತಿ ಸ್ವಾತಂತ್ರ್ಯವನ್ನು…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಮಾಲ್ಡೀವ್ಸ್ ನ ಅನೇಕ ನಾಯಕರು ಕೀಳು ಮಟ್ಟದ ಹೇಳಿಕೆ ನೀಡಿದ್ದರು. ಇದರ ಬಗ್ಗೆ ಮಾಲ್ಡೀವ್ಸ್ ಸರ್ಕಾರದಿಂದ ಸ್ಪಷ್ಟನೆ ಬಿಡುಗಡೆ ಮಾಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಮಾಲ್ಡೀವ್ಸ್ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದ್ದು, ವಿದೇಶಿ ನಾಯಕರು ಮತ್ತು ಉನ್ನತ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮಾಲ್ಡೀವ್ಸ್ ಸರ್ಕಾರಕ್ಕೆ ತಿಳಿದಿದೆ. ಈ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ. ಇನ್ನೂ ಇದಲ್ಲದೆ, ಸರ್ಕಾರದ ಸಂಬಂಧಿತ ಅಧಿಕಾರಿಗಳು ಅಂತಹ ಅವಹೇಳನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಮೋದಿ, ಭಾರತೀಯರ ಬಗ್ಗೆ ಅವಹೇಳನ ಹೇಳಿಕೆ ನೀಡೋರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದೆ. https://twitter.com/ANI/status/1743928887418208295 ಮಾಲ್ಡೀವ್ಸ್ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಟ್ವೀಟ್ ಮಾಡಿ, “ಮಾಲ್ಡೀವ್ಸ್ ಸರ್ಕಾರದ ಅಧಿಕಾರಿ ಮರಿಯಮ್ ಶಿಯುನಾ ಅವರು ಪ್ರಮುಖ ಮಿತ್ರರಾಷ್ಟ್ರದ ನಾಯಕನ ಬಗ್ಗೆ ಎಂತಹ ಭಯಾನಕ…

Read More

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಸ್ಟೇಯಾನ್ ಚೌಧರಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಜನರು ಬೆಚ್ಚಿ ಬೀಳುವಂತೆ ಆಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನು ಹಾಡ ಹಗಲೇ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ತ್ರಾವದಿಂದ ಅವರು ಆಸ್ಪತ್ರೆಗೆ ಸಾಗಿಸೋ ಮುನ್ನವೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಬಂಗಾಳದ ಬಹರಾಂಪುರದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬೈಕುಗಳಲ್ಲಿ ಬಂದ ವ್ಯಕ್ತಿಗಳ ಗುಂಪು ಚೌಧರಿಯ ಮೇಲೆ ಹತ್ತಿರದಿಂದ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಟಿಎಂಸಿ ಮುಖಂಡ ಸ್ಟೇಯಾನ್ ಚೌಧರಿ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/rafael-nadal-to-skip-australian-open-2024-due-to-micro-tear-on-muscle/ https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸ್ನಾಯು ಸೆಳೆತದಿಂದಾಗಿ ಮುಂಬರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಿಂದ ರಾಫೆಲ್ ನಡಾಲ್ ಹಿಂದೆ ಸರಿದಿದ್ದಾರೆ. 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ನಡಾಲ್, ಇತ್ತೀಚೆಗೆ ಬ್ರಿಸ್ಬೇನ್ ಇಂಟರ್ನ್ಯಾಷನಲ್ನಲ್ಲಿ ಒಂದು ವರ್ಷದ ಅನುಪಸ್ಥಿತಿಯ ನಂತರ ಪುನರಾಗಮನ ಮಾಡಿದ್ದರು. ಸ್ಪ್ಯಾನಿಷ್ ಟೆನಿಸ್ ಐಕಾನ್ ಪುನರಾಗಮನದ ನಂತರ ಡಬಲ್ಸ್ ಪಂದ್ಯವನ್ನು ಕಳೆದುಕೊಂಡರು. ಆದರೆ ಜೋರ್ಡಾನ್ ಥಾಂಪ್ಸನ್ ವಿರುದ್ಧದ ಮ್ಯಾರಥಾನ್ ಮುಖಾಮುಖಿಯಲ್ಲಿ 5-7, 7-6 (8/6), 6-3 ಸೆಟ್ ಗಳಿಂದ ಸೋಲುವ ಮೊದಲು ಸಿಂಗಲ್ಸ್ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್ ವರೆಗೆ ಹೋದರು. ಥಾಂಪ್ಸನ್ ಅವರೊಂದಿಗಿನ ಕ್ವಾರ್ಟರ್ ಫೈನಲ್ ಸಭೆಯಲ್ಲಿ ನಡಾಲ್ ಗಾಯದ ಭೀತಿಯಿಂದ ಬಳಲುತ್ತಿದ್ದರು. ಮೂರನೇ ಸೆಟ್ ನಲ್ಲಿ ವೈದ್ಯಕೀಯ ಸಮಯದ ಅಗತ್ಯವಿತ್ತು. 37 ವರ್ಷದ ಆಟಗಾರ ನಂತರ ಮೆಲ್ಬೋರ್ನ್ನಲ್ಲಿ ಎಂಆರ್ಐ ಸ್ಕ್ಯಾನ್ಗೆ ಒಳಗಾಗಿದ್ದರು. ಅಲ್ಲಿ ಸ್ನಾಯುವಿನ ಮೇಲೆ ಸೂಕ್ಷ್ಮ ನೀರು ಕಂಡುಬಂದಿದೆ. ಇದು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್ನಲ್ಲಿ ಐದು ಸೆಟ್ಗಳ ಮುಖಾಮುಖಿಗಳನ್ನು ಆಡುವ ಸಾಧ್ಯತೆಯನ್ನು ತಳ್ಳಿಹಾಕಿದೆ.…

Read More

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಬ್ಬ ಯುವತಿಗೆ ಯುವಕನೋರ್ವನಿಂದ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಯುವತಿ ಭದ್ರತಾ ಸಿಬ್ಬಂದಿಗಳಿಗೆ ನೀಡಿದಂತ ಮಾಹಿತಿ ಮೇರೆಗೆ ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿರೋದಾಗಿ ತಿಳಿದು ಬಂದಿದೆ. ಜನವರಿ.1ರಂದು ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಾಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿರೋದಾಗಿ ಯುವತಿ ಮೆಟ್ರೋ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾಳೆ. ಯುವತಿ ನೀಡಿದಂತ ದೂರನ್ನು ಆಧರಿಸಿ, ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಲಾಗಿದೆ. ಆ ಯುವಕನನ್ನು ವಿಚಾರಣೆ ನಡೆಸಿದಾಗ, ತಾನು ಲೈಂಗಿಕ ಕಿರುಕುಳ ನೀಡಿದಂತ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ತಪ್ಪಾಯ್ತು ಮತ್ತೆ ಹೀಗೆ ಮಾಡೋದಿಲ್ಲ ಅಂತ ಪೊಲೀಸರು, ಯುವತಿಯ ಮುಂದೆ ಕ್ಷಮೆಯಾಚಿಸಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-govt-has-declared-undeclared-emergency-in-karnataka-former-cm-basavaraj-bommai/ https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/

Read More

ಬೆಳಗಾವಿ: ನಗರದಲ್ಲಿ ಇಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಹಲ್ಲೆಗೆ ಒಳಗಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಬೆಳಗಾವಿ ನಗರದಲ್ಲಿ ಡಿಸಿಪಿ ರೋಹನ್ ಜಗದೀಶ್ ಮಾತನಾಡಿ, ಸಂಬಂಧಿ ಮುಸ್ಕಾನ್ ಜೊತೆ ಸಚಿನ್ ಲಮಾಣಿ ಓಡಾಡುತ್ತಿದ್ರು. ಈ ವೇಳೆ ಯುವಕ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದಂತ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಈ ಪ್ರಕರಣದಲ್ಲಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದೆ. ಮೊಹಮ್ಮದ್ ಇನಾಂದಾರ್, ಆತೀಫ್ ಅಹ್ಮದ್ ಶೇಖ್, ಸೈಫ್ ಆಲಿ ಮುಗ್ದುಮ್, ಉಮರ್ ಬಡೇಗರ್, ಆಜಾನ್, ರಿಯಾನ್ ರೋಟವಾಲೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದಂತ ಇಬ್ಬರನ್ನು ವಿಹೆಚ್ ಪಿ ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಕುಟುಂಬ ವರ್ಗದವರಿಗೂ ಧೈರ್ಯ ತುಂಬಿ ಆರ್ಥಿಕ ಸಹಾಯ…

Read More