Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ದಸರಾ ಗೋಲ್ಟ್ ಪಾಸ್ ಸೇರಿದಂತೆ ವಿವಿಧ ಪಾಸ್ ಗಳ ದರವನ್ನು ಪ್ರಕಟಿಸಲಾಗಿತ್ತು. ಈಗ ಯುವ ದಸರಾ ವೀಕ್ಷಣೆಗೂ ಟಿಕೆಟ್ ನಿಗದಿ ಗೊಳಿಸಲಾಗಿದೆ. ಇಂದಿನಿಂದ ಆನ್ ಲೈನ್ ನಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.6ರಿಂದ 10ರವರೆಗೆ ನಿತ್ಯ ಸಂಜೆ 6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಅ.6ರಂದು ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಉದ್ಘಾಟಿಸಲಿದ್ದಾರೆ. ‘ಟಿಕೆಟ್ಗಳನ್ನು ಸೆ.27ರಿಂದ ಆನ್ಲೈನ್ನಲ್ಲಿ ದಸರಾದ ಅಧಿಕೃತ ಜಾಲತಾಣವಾದ https://mysoredasara.gov.in ಹಾಗೂ Book My Show ಮೂಲಕ ಖರೀದಿಸಬಹುದು. ವೀಕ್ಷಕರ ಗ್ಯಾಲರಿ–1 (ವೇದಿಕೆ ಸಮೀಪ) ಟಿಕೆಟ್ ಮುಖಬೆಲೆ ₹8 ಸಾವಿರ ಹಾಗೂ ವೀಕ್ಷಕರ ಗ್ಯಾಲರಿ–2ರ ಟಿಕೆಟ್ಗಳ ಮುಖಬೆಲೆ ₹5 ಸಾವಿರ ನಿಗದಿಪಡಿಸಲಾಗಿದೆ.…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅದೃಷ್ಟದ ಹಠಾತ್ ಹೊಡೆತ. ತಕ್ಷಣ ನಮ್ಮ ಸಾಮಾನ್ಯ ಜೀವನ ರಾಜ ಜೀವನವಾಗಬೇಕು. ಇಷ್ಟೊಂದು ಐಷಾರಾಮಿ ಜೀವನ ನಮಗೆ ಹೇಗೆ ಸಿಕ್ಕಿತು ಎಂಬುದು ಯಾರಿಗೂ ತಿಳಿಯಬಾರದು. ಇದು ಅಂತಹ ರಹಸ್ಯ ಪರಿಹಾರವಾಗಿದೆ. ನಾಳೆ ಶುಕ್ರವಾರ, ಶುಕ್ರವಾರ ಶುಕ್ರದೇವನ ದಿನ. ನಾಳೆ ಶುಕ್ರ ಜಯಂತಿಯೂ ಇದೆ. ನಾಳೆ ಶುಕ್ರದೇವನ ಜನ್ಮದಿನ. ಈ ದಿನದಂದು ಮಹಾಲಕ್ಷ್ಮಿ ಪೂಜೆಯು ಉತ್ತಮ ಫಲಿತಾಂಶವನ್ನು ನೀಡುತ್ತದೆ. ಅಷ್ಟೇ ಅಲ್ಲ ಪುರಟಾಸಿ ಮಾಸ ಬಂದ ಎರಡನೇ ಶುಕ್ರವಾರವೂ ಹೌದು. ಈ ದಿನ ನಾವು ಮಾಡಬೇಕಾದ ಶುಕ್ರವಾರದ ಪೂಜೆಯ…
ಬೆಂಗಳೂರು: ಕಲ್ಯಾಣ ಕರ್ನಾಟಕದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,000 ಶಿಕ್ಷಕರನ್ನು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ 7 ಜಿಲ್ಲೆಗಳ ಶೇ.80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಅಂದಹಾಗೇ ಈಗಾಗಲೇ ಖಾಲಿ ಹುದ್ದೆಗಳ ಮಾಹಿತಿಯನ್ನು ಇಲಾಖೆ ಪಡೆದುಕೊಂಡಿದೆ. ಅವುಗಳ ನೇಮಕಾತಿಗೂ ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ಕೂಡಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ. https://twitter.com/KarnatakaVarthe/status/1839244592064983187 https://kannadanewsnow.com/kannada/beware-treating-pourakarmikas-with-disrespect-is-a-punishable-offence/ https://kannadanewsnow.com/kannada/good-news-for-high-school-students-state-govt-to-provide-internet/ https://kannadanewsnow.com/kannada/good-news-for-rural-journalists-state-govt-orders-distribution-of-free-bus-passes/
ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ಪೌರ ಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧವಾಗಿದೆ. ಅವರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ.. ಹೌದು.. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಭಾರತದ ಸಂವಿಧಾನದ 17ನೇ ವಿಧಿಯು ʼಅಸ್ಪೃಶ್ಯತೆʼ ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ / ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ / ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. https://twitter.com/KarnatakaVarthe/status/1839215127087784202 ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ…
ಮಂಡ್ಯ : ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ಮದ್ದೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮದ್ದೂರು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗೇಗೌಡ ಮಾತನಾಡಿ, ನಾವು ತಾಂತ್ರಿಕವಾಗಿ ಅನುಭವಿ ಸಿಬ್ಬಂದಿಯಲ್ಲ. ಆದರೂ, ಸರ್ಕಾರ ವಹಿಸಿದ ತಾಂತ್ರಿಕ ಕೆಲಸ ನಿರ್ವಹಿಸುತ್ತಿದ್ದೇವೆ. ಮೂಲಸೌಕರ್ಯ ವಿಚಾರವಾಗಿ ಕಡೆಗಣನೆಗೆ ಒಳಗಾಗಿದ್ದೇವೆ. ಹಾಗಾಗಿ ಕೆಲಸಕ್ಕೆ ಸಾಮೂಹಿಕವಾಗಿ ರಜೆ ಹಾಕಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದೇವೆ ಎಂದರು. ತಾಲೂಕಿನಾದ್ಯಂತ ಕೆಲಸ ಮಾಡುತ್ತಿರುವ ನಮಗೆ ಸುಸಜ್ಜಿತವಾದ ಕಚೇರಿ ಕಲ್ಪಿಸಬೇಕು. ಅಲ್ಲಿ ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆ ಒದಗಿಸಬೇಕು. ಸಂಯೋಜನೆ, ಇ-ಆಫೀಸ್, ಗರುಡ, ಭೂಮಿ, ನವೋದಯ, ದಿಶಾಂಕ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್ಫೋನ್ಗಳನ್ನು ನೀಡಬೇಕು’…
ಬೆಂಗಳೂರು: ರಾಜ್ಯದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಪ್ರೌಢ ಶಾಲೆಗಳಿಗೆ ಇಂಟರ್ನೆಟ್ ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 200 ಕೋಟಿ ರೂ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಶಿಗ್ಗಾಂವಿ, ಹಾನಗಲ್, ಕುಂದಗೋಳದಲ್ಲಿ ಹಳ್ಳ ಹರಿಯುತ್ತದೆ. ಇದನ್ನ ನಿಯಂತ್ರಿಸುವುದಕ್ಕೆ ನೂತನ ಯೋಜನೆಗೆ ಅನುಮತಿಸಲಾಗಿದೆ. ನೀರು ಸದ್ಬಳಕೆ ಮಾಡುವ ರೀತಿಯಲ್ಲಿ ಯೋಜನೆ ರೂಪಿಸಲಾಗುತ್ತಿದೆ. 16 ಟಿಎಂಸಿ ನೀರು ಇದರಲ್ಲಿ ವ್ಯರ್ಥವಾಗುತ್ತದೆ. ರೈತರ ದೃಷ್ಟಿಯಿಂದ ಈ ಯೋಜನೆ ತರಲಾಗುತ್ತಿದೆ. ಪ್ರೌಢಶಾಲೆಗಳಲ್ಲಿ ಇಂಟರ್ ನೆಟ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 74 ಆದರ್ಶ ವಿದ್ಯಾಲಯಗಳ ಮೇಲ್ದರ್ಜೆಗೇರಿಕೆಗೆ ಸಮ್ಮತಿ ನೀಡಲಾಗಿದೆ. ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಮಾತನಾಡಿದ ಅವರು, ಸಿವಿಲ್ ಸರ್ವೀಸ್ ಕೋಡ್ ಮಾಡಬೇಕು. ಹೈಕೋರ್ಟ್ ಇದನ್ನಹೇಳಿತ್ತು. ಸಿವಿಲ್ ಸರ್ವೀಸ್ ಕೋಡ್ ಬೇಕೇ ಬೇಡವೇ ಎಂದು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಸಚಿವ ಸಂಪುಟ ಉಪ ಸಮಿತಿ…
ಬೆಂಗಳೂರು: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಮಾಧ್ಯಮದವರಿಗೆ ತಿಳಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದೆ. ಕೇಂದ್ರಕ್ಕೆ ಇದನ್ನೇ ರೆಫರ್ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಹಿಂದೆಯೂ ಇದೇ ನಿರ್ಣಯ ತೆಗೆದುಕೊಳ್ಳಲಾಗಿತ್ತು ಎಂದರು. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಚುನಾವಣೆ ನಿಗದಿಯಾಗಿದೆ. ಎಂಎಲ್ ಸಿ ಬೈ ಎಲೆಕ್ಷನ್ ಗೆ ಸಮ್ಮತಿ ನೀಡಲಾಗಿದೆ. ಮೇಲ್ಮನೆಯ ಎರಡು ಸ್ಥಾನಗಳಿಗೆ ನಾಮಕರಣ ಮಾಡಲಾಗುತ್ತಿದೆ. ಆಯ್ಕೆ ಮಾಡುವ ಅಧಿಕಾರ ಸಿಎಂಗೆ ನೀಡಿಕೆ ಮಾಡಲಾಗಿದೆ ಎಂದರು. ಬೆಂಗಳೂರು ವಿವಿ ಅಭಿವೃದ್ಧಿಗೆ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ಐಐಟಿ ಮಾದರಿಯಲ್ಲಿ ನಿರ್ಮಿಸಲು ಅನುದಾನ ನೀಡಲಾಗುತ್ತಿದೆ. 530 ಕೋಟಿ ಅನುದಾನ ನೀಡಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಸಿಖ್ ಸಮುದಾಯ ವಿವಾಹ ನೊಂದಣಿಗೆ ತಿದ್ದುಪಡಿ ತರಲಾಗುತ್ತಿದೆ.…
ಶಿವಮೊಗ್ಗ: ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಬೋಧಕ – ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ, ಸಾಮರ್ಥ್ಯ ಮತ್ತು ಉತ್ಪಾದಕತೆಗಳು ವೃದ್ಧಿಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು “ಸಹ್ಯಾದ್ರಿ ಸಡಗರ” ಉತ್ಸವದ ಅಡಿ ಸೇ. 26-28ರವರೆಗೆ ವಿವಿಯಲ್ಲಿ ಆಯೋಜಿಸಲಾಗಿದೆ. ಜಾಥಾದೊಂದಿಗೆ ಹೆಜ್ಜೆಹಾಕುವ ಮೂಲಕ ಕುಲಪತಿಗಳು ಚಾಲನೆ ನೀಡಿ ಮಾತನಾಡಿದರು. ವಿಶ್ವವಿದ್ಯಾಲಯವು ಉನ್ನತ ಮಟ್ಟದ ಸಂಸ್ಥೆಯಾಗಿದ್ದು ಇಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ಸಹ್ಯಾದ್ರಿ ಸಡಗರದ ಮೂಲಕ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ಬೆಸೆಯುವ, ಬೆಳೆಸುವ ವೇದಿಕೆ ಒದಗಿಸಲಾಗಿದೆ. ಒಟ್ಟಿಗೆ ಕೆಲಸ ಮಾಡುವ ಮೂಲಕ ವಿವಿಯನ್ನು ಎತ್ತರಕ್ಕೆ ಕೊಂಡೊಯ್ಯಲಾಗುವುದು ಎಂದರು. ಈ ಸಂದರ್ಭದಲ್ಲಿ ವಿವಿಯ ಆಡಳಿತಂಗ ಕುಲಸಚಿವ ಎ ಎಲ್ ಮಂಜುನಾಥ್ ಮತ್ತು ಪರೀಕ್ಷಾಂಗ ಕುಲಸಚಿವ ಪ್ರೊಫೆಸರ್ ಎಸ್ ಎಂ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದಂತ ಮುಕ್ತ ಅವಕಾಶವನ್ನು ಹಿಂಪಡೆಯುವುದು ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಹಾಗಾದ್ರೇ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದಿನ ಸಂಪುಟ ಸಭೆಯಲ್ಲಿ 25 ವಿಷಯಗಳ ಬಗ್ಗೆ ಇಂದು ಚರ್ಚೆಯಾಗಿದೆ. ಎರಡು ಹೊರತುಪಡಿಸಿ ಉಳಿದೆಲ್ಲದಕ್ಕೆ ಅನುಮತಿ ನೀಡಲಾಗಿದೆ. ಮಹತ್ವದ ವಿಷಯವನ್ನ ಚರ್ಚೆ ಮಾಡಿದ್ದೇವೆ ಎಂದರು. ರಾಜ್ಯಪಾಲರು ಮೇಲ್ಮೇಲೆ ಪತ್ರ ಬರೆಯುತ್ತಿದ್ದಾರೆ. ತಕ್ಷಣ ಕಳಿಸಿ,ನಾಳೆ ಕಳಿಸಿ ಅಂತ ಸೂಚಿಸ್ತಿದ್ದಾರೆ. ಎಲ್ಲಾ ನಿಯಮಗಳನ್ನಪರಿಶೀಲಿಸಿದ್ದೇವೆ. ಯಾವುದೇ ಮಾಹಿತಿ ನೀಡುವ ಮುನ್ನ ಪರಿಶೀಲನೆ ಅಗತ್ಯವಿದೆ. ಕ್ಯಾಬಿನೆಟ್ ಒಪ್ಪಿಗೆ ಪಡೆದು ಕಳಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇವೆ. ಇದನ್ನ ಕ್ಯಾಬಿನೆಟ್ ನಲ್ಲಿ ಸಮ್ಮತಿ ನೀಡಿದ್ದೇವೆ. ಒಪ್ಪಿಗೆ ಇಲ್ಲದೆ ಯಾವುದೇ ಪತ್ರ…
ನವದೆಹಲಿ: ಜನಪ್ರಿಯ ಕಂಟೆಂಟ್ ಕ್ರಿಯೇಟರ್ ರಣವೀರ್ ಅಲ್ಲಾಬಾಡಿಯಾ ಅವರ ಬಿಯರ್ ಬೈಸೆಪ್ಸ್ ಸೇರಿದಂತೆ ಅವರ ಎರಡು ಯೂಟ್ಯೂಬ್ ಚಾನೆಲ್ಗಳನ್ನು ಹ್ಯಾಕ್ ಮಾಡಿ ‘ಟೆಸ್ಲಾ’ ಎಂದು ಮರುನಾಮಕರಣ ಮಾಡಲಾಗಿದೆ. ಅಲ್ಲದೇ ಅದರಲ್ಲಿದ್ದಂತ ವೀಡಿಯೋಗಳನ್ನು ಡಿಲೀಟ್ ಕೂಡ ಮಾಡಲಾಗಿದೆ. ಭಾರತೀಯ ಸುಪ್ರೀಂ ಕೋರ್ಟ್ನ ಯೂಟ್ಯೂಬ್ ಚಾನೆಲ್ ಅನ್ನು ಇತ್ತೀಚೆಗೆ ಹ್ಯಾಕ್ ಮಾಡಿದ ನಂತರ ಈ ಘಟನೆ ನಡೆದಿದೆ. ರಣವೀರ್ ಅವರ ಚಾನೆಲ್ಗಳಲ್ಲಿ ಒಂದಾದ ಬೀರ್ ಬೈಸೆಪ್ಸ್ ಅನ್ನು “@Elon.ಟ್ರಂಪ್.ಟೆಸ್ಲಾ_ಲೈವ್ 2024” ಎಂದು ಮರುನಾಮಕರಣ ಮಾಡಲಾಗಿದೆ. ಅವರ ವೈಯಕ್ತಿಕ ಚಾನೆಲ್ ಅನ್ನು “@Tesla.ಈವೆಂಟ್.ಟ್ರಂಪ್_2024” ಎಂದು ಮರುನಾಮಕರಣ ಮಾಡಲಾಗಿದೆ. ಎರಡೂ ಚಾನೆಲ್ಗಳಲ್ಲಿ, ಎಲ್ಲಾ ಪಾಡ್ಕಾಸ್ಟ್ಗಳು ಮತ್ತು ಸಂದರ್ಶನಗಳನ್ನು ಹ್ಯಾಕರ್ಗಳು ತೆಗೆದುಹಾಕಿದರು ಮತ್ತು ಡೊನಾಲ್ಡ್ ಟ್ರಂಪ್ ಮತ್ತು ಎಲೋನ್ ಮಸ್ಕ್ ಅವರ ಘಟನೆಗಳ ಹಳೆಯ ಫೀಡ್ಗಳನ್ನು ಅವುಗಳ ಸ್ಥಾನದಲ್ಲಿ ಪ್ರಕಟಿಸಲಾಯಿತು. ತಮ್ಮ ಮೊದಲ ಯೂಟ್ಯೂಬ್ ಚಾನೆಲ್ ಬೀರ್ ಬೈಸೆಪ್ಸ್ನೊಂದಿಗೆ, ಅವರು ತಮ್ಮ 22 ನೇ ವಯಸ್ಸಿನಲ್ಲಿ ವೀಡಿಯೊ ರಚನೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಪ್ರಸ್ತುತ ಸುಮಾರು ಏಳು…