Author: kannadanewsnow09

ಮಡಿಕೇರಿ :-220/66/11ಕೆವಿ, 66/11ಕೆವಿ ಮತ್ತು 33/11ಕೆ.ವಿ ಸ್ವೀಕರಣಾ ಕೇಂದ್ರದಿಂದ ನವೆಂಬರ್, 13 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಣೆ ಹಿನ್ನೆಲೆ ನವೆಂಬರ್, 13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಕುಶಾಲನಗರ ಪಟ್ಟಣ, ಗೊಂದಿಬಸವನಹಳ್ಳಿ, ಮುಳ್ಳುಸೋಗೆ, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕೆದಕಲ್, ನಾಕೂರು, ಹೊಸಕೋಟೆ, ಮತ್ತಿಕಾಡು, ಗರ್ಗಂದೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಕೂಡಿಗೆ, ಕೂಡುಮಂಗಳೂರು, ದೊಡ್ಡತ್ತೂರು, ಚಿಕ್ಕತ್ತೂರು, ಹೆಬ್ಬಾಲೆ, ತೊರೆನೂರು, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/sc-st-farmers-in-the-state-applications-invited-for-cultivation-of-horticulture-crops/ https://kannadanewsnow.com/kannada/first-in-india-gender-minority-womans-name-mentioned-in-passport-as-mother/

Read More

ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ ಚನ್ನಗಿರಿ ತಾಲ್ಲೂಕಿನವರಿಗೆ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಚನ್ನಗಿರಿ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/first-in-india-gender-minority-womans-name-mentioned-in-passport-as-mother/ https://kannadanewsnow.com/kannada/centre-tells-sc-that-it-approves-menstrual-cycle-policy-for-school-girls/

Read More

ಬೆಂಗಳೂರು: ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರ ಮಗ ಅವಿನ್‌ ಅಕ್ಕೈ ಪದ್ಮಶಾಲಿ ಅವರಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯು ತಂದೆಯ ಹೆಸರನ್ನು ಉಲ್ಲೇಖಿಸದೆ ಪಾಸ್‌ಪೋರ್ಟ್‌ ನೀಡಿದೆ. ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಎಂದಿದೆ. ತಂದೆಯ ಹೆಸರಿಲ್ಲದೆ ನೀಡಲಾದ ಪಾಸ್‌ಪೋರ್ಟ್‌ ದೇಶದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಪೋಷಕರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪಾಸ್‌ಪೋರ್ಟ್‌ ಪಡೆಯಲು ಸಹಕಾರವಿತ್ತ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳಿಗೆ ಅಕ್ಕೈ ಪದ್ಮಶಾಲಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka …

Read More

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಅನುಮೋದಿಸಿದ “ಶಾಲೆಗೆ ಹೋಗುವ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ” ಯನ್ನು ರೂಪಿಸುವ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಕೇಂದ್ರವು ಏಪ್ರಿಲ್ 10, 2023 ರ ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿತು ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಹಿಳಾ ಶಾಲಾ ಮಕ್ಕಳ ಮುಟ್ಟಿನ ನೈರ್ಮಲ್ಯದ ಬಗ್ಗೆ ನೀತಿಯನ್ನು ರೂಪಿಸಿದೆ, ಇದನ್ನು ಸಂಬಂಧಪಟ್ಟ ಸಚಿವರು ನವೆಂಬರ್ 2, 2024 ರಂದು ಅನುಮೋದಿಸಿದ್ದಾರೆ ಎಂದು ಹೇಳಿದರು. 6 ರಿಂದ 12 ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲು ಮತ್ತು ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ಪ್ರತ್ಯೇಕ ಮಹಿಳಾ ಶೌಚಾಲಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ…

Read More

ದಾವಣಗೆರೆ: ಹಿಂದೆ ಮತಾಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿದ್ದೀರಿ. ಈಗ ಮತ್ತೆ ಬೆಂಕಿ ಹಚ್ಚಲು ಸ್ವತಃ ನೀವೇ ಮುಂದಾಗಿದ್ದೀರಿ. ಓಲೈಕೆ ರಾಜಕಾರಣ ಮಾಡಲು ಇತಿಮಿತಿ ಇರಬೇಕು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಜೋಕೆ ಎಂಬುದಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಕ್ಪ್ ಬೋರ್ಡ್ ಮೂಲಕ ರಾಜ್ಯದ ಹಿಂದೂಗಳ ಆಸ್ತಿ ಕಬಳಿಸಲು ಯತ್ನಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಿವಿಲ್ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4 ರಷ್ಟು ಮೀಸಲಾತಿ ನೀಡಲು ಹೊರಟಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂಬುದಾಗಿ ಗುಡುಗಿದ್ದಾರೆ. ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು CM ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು…

Read More

ಬೆಂಗಳೂರು: ಇಂದು ರಾಜ್ಯಾಧ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಲ್ಲಿ ಕರ್ನಾಟಕ ಲೋಕಾಯುಕ್ತದಿಂದ ದಾಳಿಯನ್ನು ನಡೆಸಲಾಯಿತು. ಹಾಗಾದ್ರೇ ಈ ದಾಳಿಯ ವೇಳೆಯಲ್ಲಿ ಪತ್ತೆಯಾದಂತ ಅಸಮತೋನ ಆಸ್ತಿ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್‌-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 12.11.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ವಿಠಲ್‌ ಶಿವಪ್ಪ ಧವಳೇಶ್ವರ್‌,…

Read More

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ. ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು. 95-ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯ ಎಲ್ಲಾ…

Read More

ನವದೆಹಲಿ: ಭರೂಚ್ ಮತ್ತು ಅಂಕಲೇಶ್ವರ ನಡುವೆ ಚಲಿಸುತ್ತಿದ್ದ ಅವಂತಿಕಾ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬಗ್ಗೆ ಸುದ್ದಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದರು. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಭರೂಚ್ನ ಸಿಲ್ವರ್ ಬ್ರಿಡ್ಜ್ ಬಳಿ ಪಶ್ಚಿಮ ಎಕ್ಸ್ಪ್ರೆಸ್ ರೈಲಿನಿಂದ ಹೊಗೆ ಬರುತ್ತಿರುವುದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿತ್ತು. ಎಂಜಿನ್ನಿಂದ ಎರಡನೇ ಕಂಪಾರ್ಟ್ಮೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಠಾತ್ ಬೆಂಕಿ ಕಾಣಿಸಿಕೊಂಡ ನಂತರ ರೈಲು 45 ನಿಮಿಷಗಳ ಕಾಲ ಸ್ಥಗಿತಗೊಂಡಿತು. ಅಗ್ನಿಶಾಮಕ ದಳದ ಜೊತೆಗೆ, ಪೊಲೀಸರು ಸಹ ಸ್ಥಳದಲ್ಲಿದ್ದಾರೆ. ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಇದು ಬ್ರೇಕಿಂಗ್ ಸ್ಟೋರಿ, ಹೆಚ್ಚಿನ ವಿವರಗಳನ್ನು ಸೇರಿಸಲಾಗುವುದು.. https://kannadanewsnow.com/kannada/upsc-recruitment-2019-apply-for-pre-training/ https://kannadanewsnow.com/kannada/sandur-assembly-bypoll-to-be-held-tomorrow-all-set-for-peaceful-polling-says-dc/

Read More

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ ಕೋರ್ಸ್ಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಐಆರ್‌ಎಸ್ ಸೇರಿದಂತೆ 36 ವಿವಿಧ ಸೇವೆಯ ಹುದ್ದೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯುಪಿಎಸ್‌ಸಿ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸ್ಥಾನ ಹಂಚಿಕೆಯಲ್ಲಿ ಅಂಗವಿಕಲ/ವಿಕಲಚೇತನ, ಹಾಸ್ಟೆಲ್ ವಿದ್ಯಾರ್ಥಿಗಳು, ವಸತಿ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ವಿದ್ಯಾರ್ಥಿಗಳು, ಸೂಕ್ಷö್ಮ/ಅತಿ ಸೂಕ್ಷö್ಮ ಸಮುದಾಯ/ಸಫಾಯಿ ಕರ್ಮಚಾರಿ ಸಮುದಾಯದ ಮಕ್ಕಳಿಗೆ ವಿಶೇಷ ಮೀಸಲಾತಿ ಇರುತ್ತದೆ. ತರಬೇತಿಗೆ ಪದವಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯ್ಕೆ ಪ್ರಕ್ರಿಯ ಹಂತದಲ್ಲಿ ಪದವಿ ವ್ಯಾಸಂಗ ಪೂರ್ಣ ಮುಕ್ತಾಯಗೊಳಿಸಿರುವ ಬಗ್ಗೆ ಅಧಿಕೃತ ದಾಖಲೆಗಳನ್ನು…

Read More

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ನ.13 ರಂದು ಬೆಳಿಗ್ಗೆ 05.30 ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ 07 ಗಂಟೆಯಿAದ ಮತದಾನ ಪ್ರಕ್ರಿಯೆ ಆರಂಭಗೊAಡು ಸಂಜೆ 06 ಗಂಟೆಯವರೆಗೆ ನಡೆಯಲಿದೆ. ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದಾರೆ. 1,17,935 ಪುರುಷ ಮತದಾರರು, 1,18,438 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಗಳಿವೆ ಎಂದು ಮಾಹಿತಿ ನೀಡಿದರು. ನಗರ ವ್ಯಾಪ್ತಿಯಲ್ಲಿ…

Read More