Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ, ಕೆಲ ರೈಲುಗಳನ್ನು ಭಾಗಶಃ ರದ್ದು & ನಿಯಂತ್ರಿಸಲಾಗುತ್ತದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ. ಭಾಗಶಃ ರದ್ದು: 1. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟ ವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ. 2. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ. 3. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1, 2024 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ಬಾಗಲಕೋಟ ವರೆಗೆ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವಂತ ಎ.16 ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಎ16ನೇ ಆರೋಪಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕೋರ್ಟ್ ವಿಚಾರಣೆ ನಡೆಸಿತು. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವಂತ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಮರ್ಜರ್ ಕೇಸಲ್ಲಿ ಆರೋಪಿಯಾಗಿರುವಂತ ಕೇಶವ ಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅಂದಹಾಗೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿಲ್ಲ. ಬದಲಾಗಿ ಸಾಕ್ಷ್ಯನಾಶದ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಇನ್ನೂ ಇದೇ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ಸಲ್ಲಿಸಿದ್ದಂತ…
BREAKING: ರಾಜ್ಯ ಸರ್ಕಾರದಿಂದ ‘ಮೈಸೂರು ದಸರಾ ಆನೆ’ ಮುಂದೆ ಪೋಟೋ, ರೀಲ್ಸ್ ಗೆ ಬ್ರೇಕ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
ಬೆಂಗಳೂರು: ಮೈಸೂರು ದಸರಾ ಆನೆಗಳು ಕಾಡಿನಿಂದ ನಾಡಿಗೆ ಬಂದು, ಅರಮನೆಯಲ್ಲಿ ದಸರಾ ಮಹೋತ್ಸವ ಸಿದ್ಧತೆಯಲ್ಲಿ ಪಾಲ್ಗೊಳ್ಳಲು ಬೀಡು ಬಿಟ್ಟಿದ್ದಾವೆ. ಈ ಆನೆ ಮುಂದೆ ಅನೇಕ ಪ್ರವಾಸಿಗರು, ಅಧಿಕಾರಿಗಳು ಪೋಟೋ ತೆಗೆದುಕೊಳ್ಳುವುದು, ರೀಲ್ಸ್ ಮಾಡುವುದು ಕಂಡು ಬಂದಿತ್ತು. ಇದರಿಂದ ಆನೆಗಳು ಬೆದರಿ, ಅದರಿಂದ ಅನಾಹುತವಾಗುವ ಸಂಭವ ಇರುವುದರಿಂದ ರಾಜ್ಯ ಸರ್ಕಾರ ಮೈಸೂರು ದರಸಾ ಆನೆಗಳ ಮುಂದೆ ಪೋಟೋ, ರೀಲ್ಸ್ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಕೋರಿ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.27ಕ್ಕೆ ಮುಂದೂಡಿಕೆ ಮಾಡಿದೆ. ಇಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶೈಂಕರ್ ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. ಈ ಹಿನ್ನಲೆಯಲ್ಲಿ ಅರ್ಜಿಯನ್ನು ಕೋರ್ಟ್ ಸೆಪ್ಟೆಂಬರ್.27ಕ್ಕೆ ಮುಂದೂಡಿಕೆ ಮಾಡಿದೆ. ಅಂದಹಾಗೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರರು ಜೈಲು ಪಾಲಾಗಿದ್ದಾರೆ. ಇಂತಹ ಆರೋಪಿಗಳಲ್ಲಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ. https://kannadanewsnow.com/kannada/rape-case-court-adjourns-hearing-on-mla-munirathnas-bail-plea-to-september-25/ https://kannadanewsnow.com/kannada/breaking-bengaluru-couple-arrested-with-drugs-worth-over-rs-1-crore/
ಬೆಂಗಳೂರು: ಬೆದರಿಕೆ, ಜಾತಿ ನಿಂದನೆ ಕೇಸ್ ಬಳಿಕ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.25ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಬಿಜೆಪಿ ಶಾಸಕ ಮುನಿರತ್ನ ಅವರು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ಈ ವೇಳೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್ ಪಿಪಿ ಎಸ್ ಪ್ರದೀಪ್ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ದೂರುದಾರ ಮಹಿಳೆಗೆ ನೋಟಿಸ್ ಜಾರಿಗೊಳಿಸಿದಂತ ಕೋರ್ಟ್, ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/ready-to-extend-necessary-cooperation-from-transport-department-for-service-of-more-ambulances-minister-ramalinga-reddy/ https://kannadanewsnow.com/kannada/breaking-bengaluru-couple-arrested-with-drugs-worth-over-rs-1-crore/
ಬೆಂಗಳೂರು: ರಾಜ್ಯದಲ್ಲಿ ಅಪಘಾತದಿಂದ ಗಾಯಗೊಂಡವರ ರಕ್ಷಣೆಗಾಗಿ ಸೇವೆ ಸಲ್ಲಿಸಲು 65 ಅಂಬುಲೆನ್ಸ್ ಗಳನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬ್ಯುಲೆನ್ಸ್ ಗಳನ್ನ ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬ್ಯುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನ ಅಳವಡಿಸಲಾಗಿದೆ. 39 BLS ಅಂಬ್ಯುಲೆನ್ಸ್ ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ ಗಳನ್ನ ಗುರುತಿಸಿದ್ದು, ಅಂಥಹ…
ಬೆಂಗಳೂರು: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬ್ಯುಲೆನ್ಸ್ ಗಳನ್ನ ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬ್ಯುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನ ಅಳವಡಿಸಲಾಗಿದೆ. 39 BLS ಅಂಬ್ಯುಲೆನ್ಸ್ ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ ಗಳನ್ನ ಗುರುತಿಸಿದ್ದು, ಅಂಥಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಅಂಬ್ಯುಲೆನ್ಸ್ ಗಳನ್ನ ನೀಡಲಾಗಿದೆ. ಅಂಬ್ಯುಲೆನ್ಸ್ ಗಳು ಹೇಗೆ ಕಾರ್ಯನಿರ್ವಹಿಸಲಿವೆ.? * ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಸನಿಹದ ಆಸ್ಪತ್ರೆಗಳಲ್ಲಿ ತಂಗಲಿವೆ. * 65 ಹಾಟ್ ಸ್ಪಾಟ್ ಗಳನ್ನ ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ…
ಬೆಂಗಳೂರು : ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ಪ್ರಥಮಬಾರಿಗೆ ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ ಎಂದರು. 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಇಲ್ಲಿಯವರೆಗೆ ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ. ರಾಜ್ಯಪಾಲರು ಸರ್ಕಾರದ ಪ್ರತಿನಿತ್ಯದ ಕೆಲಸಗಳು ಮತ್ತು ತೀರ್ಮಾನಗಳ ಬಗ್ಗೆ ಮಾಹಿತಿ ಕೊಡಿ ಅಂತ ಕೇಳಿದ್ದ ಉದಾಹರಣೆಗಳೇ ಇಲ್ಲ ಎಂದು ಹೇಳಿದರು. ಯಾವಾಗಲಾದರೂ ಒಮ್ಮೆ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಕಾನೂನು ಸುವ್ಯವಸ್ಥೆಯ ವಿಚಾರ ಇದ್ದರೆ…
ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್.24ರ ನಾಳೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್ವರೆಗೆ, ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಾಗರ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ಶಿವಮೊಗ್ಗ ಜಿಲ್ಲೆಯ ಮೆಸ್ಕಾಂ ಸಾಗರ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ದಿನಾಂಕ 26.09.2024 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00…
ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ. ಇದರ ಅಂಗವಾಗಿ ಅಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರಲ್ಲಿ ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಭಾನುವಾರ ಮಾಹಿತಿ ನೀಡಿರುವ ಅವರು, `ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ. 40 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದಿದ್ದಾರೆ. ಸಿಂಗಪುರದ ಬಯೊಪೋಲಿಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ…