Author: kannadanewsnow09

ಈಗಿನ ಕಾಲದಲ್ಲೂ ಸಹ ಮಂತ್ರಗಳ ಸಹಾಯದಿಂದ ಎಷ್ಟೇ ಕಠಿಣವಾದ ಕೆಲಸಗಳನ್ನು ಬೇಕಾದರೂ ಮಾಡಬಹುದು, ಇಲ್ಲಿ ಒಬ್ಬ ಹಿಮಾಲಯದ ಗುರುಗಳಿಗೆ ವಾಯು ಗಮನ ಸಿದ್ಧಿ ಕೂಡ ಇತ್ತು. ಅಂದರೆ ಆ ದಿನಗಳಲ್ಲಿ ಇವರು ಗಾಳಿಯಂತೆ ವೇಗವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ಇಂದು ನಾವು ತಿಳಿಸುವ ಈ ಒಂದು ಮಂತ್ರವನ್ನು ಜಪ ಮಾಡಿದರೆ ಹಣದ ಹರಿವು ಹೆಚ್ಚಾಗುವುದು ಖಚಿತ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ,…

Read More

ಬೆಂಗಳೂರು: ಯುವನಿಧಿ ಯೋಜನೆಗೆ ನೋಂದಣಿ ಆರಂಭಗೊಂಡ ಬಳಿಕ, ಯೋಜನೆಯ ಅನುಷ್ಠಾನಕ್ಕಾಗಿ, ಫಲಾನುಭವಿಗಳ ಖಾತೆಗೆ ಹಣ ಜಮಾ ಕಾರ್ಯಕ್ರಮ ಜನವರಿ.12ರಂದು ಶಿವಮೊಗ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಬಗ್ಗೆ ಮಹತ್ವದ ಮಾಹಿತಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಹಾಗೂ ಅತ್ಯಂತ ಮಹಾತ್ವಾಕಾಂಕ್ಷೆಯ “ಯುವನಿಧಿ” ಯೋಜನೆಯು ಯುವ ಜನಾಂಗದ ಉಜ್ವಲ ಭವಿಷ್ಯವನ್ನು ಕಲ್ಪಿಸುವ ಹಿತದೃಷ್ಠಿಯಿಂದ 2022-23 ನೇ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರ ಲ್ಲಿ ತೇರ್ಗಡೆಯಾಗಿ 180 ದಿನಗಳವರೆಗೆ ಉದ್ಯೋಗ ಅವಕಾಶ ದೊರೆಯದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ 1,500 ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ ಎಂದಿದ್ದಾರೆ. ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀಯುತ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು 26/12/2023 ರಂದು ಸದರಿ ಯೋಜನೆಯ ನೊಂದಣಿ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದರು ಅಂತ ತಿಳಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿತರ ಸಂಖ್ಯೆ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 328 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, RTPCR ಮೂಲಕ ಕಳೆದ 24 ಗಂಟೆಯಲ್ಲಿ 6418 ಹಾಗೂ RAT ಪರೀಕ್ಷೆಯ ಮೂಲಕ 787 ಸೇರಿದಂತೆ 7205 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 328 ಜನರಿಗೆ ಪಾಸಿಟಿವ್ ಬಂದಿದೆ ಅಂತ ತಿಳಿಸಿದೆ. ಬೆಂಗಳೂರು ನಗರದಲ್ಲಿ 163, ಬಾಗಲಕೋಟೆ 04, ಬಳ್ಳಾರಿ 09, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 05, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 07, ಚಿತ್ರದುರ್ಗ 05, ದಕ್ಷಿಣ ಕನ್ನಡ 08, ದಾವಣಗೆರೆ 03, ಧಾರವಾಡ 02, ಗದಗ 01 ಕೇಸ್ ಪತ್ತೆಯಾಗಿದೆ. ಹಾಸನ 12, ಹಾವೇರಿ, ಕೋಲಾರ ಹಾಗೂ ಉಡುಪಿ ಜಿಲ್ಲೆಯಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ. ಮಂಡ್ಯ 07, ಮೈಸೂರು  26, ರಾಯಚೂರು 04,…

Read More

ಬೆಂಗಳೂರು : ದೃಷ್ಟಿಯಿಲ್ಲದ ಯುವತಿಗೆ ಕೆಲಸ, ಬಿಡಿಎ ಫ್ಲಾಟ್, ಬಡವರ ಜಾಗ ರಕ್ಷಣೆಗೆ ಅಧಿಕಾರಿಗಳಿಗೆ ತಾಕೀತು, ದಾಖಲೆಗಳು ಸರಿ ಇದ್ದರೂ ಖಾತೆ ಮಾಡಿಕೊಡದ ಅಧಿಕಾರಿಗಳ ತರಾಟೆ, ದಯಾಮರಣ ಕೋರಿ ಬಂದವರಿಗೆ ಸಾಂತ್ವನ, ಆರ್ಥಿಕ ನೆರವು. ಹೀಗೆ ಒಂದಾದ ಮೇಲೆ ಒಂದರಂತೆ ಸಂಕಷ್ಟ ಹೊತ್ತು ಬಂದ ಜನರಿಗೆ ಪರಿಹಾರ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾರ್ಯವೈಖರಿ ಮೂಲಕ ಜನರ ಮನಗೆದ್ದರು. ಯಲಹಂಕ ನ್ಯೂ ಟೌನ್ ನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಮನವಿ ಸಲ್ಲಿಸಲು ಬಂದಂತಹ ಸಾರ್ವಜನಿಕರ ಅಹವಾಲುಗಳನ್ನು ಕೂಲಂಕುಷವಾಗಿ ಆಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಮಸ್ಯೆಗಳಿಗೆ ಪರಿಹಾರ ಹೇಳಿದರು. ನಿನ್ನ ಭೂಮಿಯನ್ನು ಯಾರಿಗೂ ಕೊಡಬೇಡ.., ಜಾಗ ಉಳಿಸಿಕೋ…, ಅಳಬೇಡಮ್ಮ ನಮ್ಮ ಸರ್ಕಾರವಿದೆ, ನಾನಿದ್ದೇನೆ, ನಿನ್ನ ಜಾಗದಲ್ಲೇ ಇರು, ಅದನ್ನು ಬಿಡಬೇಡ, ಎಂಜಿನಿಯರ್ ಒಂದು ವಾರದಲ್ಲಿ ಈ ಸಮಸ್ಯೆ ಬಗೆಹರಿಯಬೇಕು ಎಂಬ ತಾಕೀತು ಮತ್ತು ಸಾಂತ್ವನದ ಮಾತುಗಳು ಕಂಗಾಲಾಗಿ ಬಂದವರ ಮುಖದಲ್ಲಿ ಭರವಸೆಯ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರೆಯಲಾಗಿದ್ದಂತ ತಾಂತ್ರಿಕ ಸಹಾಯಕ ಹುದ್ದೆಯ ( KSRTC Post of Technical Assistant ) ನೇಮಕಾತಿಗೆ ಸಂಬಂಧಿಸಿದಂತೆ, ಇಂದು ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಹಾಯಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿಯನ್ನು ಹಾಗೂ ಕಟ್-ಆಫ್ ವಿವರಗಳನ್ನು ದಿನಾಂಕ:05-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಸದರಿ ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ನೇರವಾಗಿ ಅಥವಾ ಅಂಚೆ ಮೂಲಕ ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕ), ಕರಾರಸಾ ನಿಗಮ, ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು ಇವರಿಗೆ ಸಲ್ಲಿಸುವುದು ಹಾಗೂ ಇ-ಮೇಲ್ dycpmrct@ksrtc.org ಮೂಲಕವೂ ಕೂಡ ಸಲ್ಲಿಸಬಹುದಾಗಿದೆ ಎಂದು ಹೇಳಿದೆ. ನಿಗದಿತ ದಿನಾಂಕದ ನಂತರ ಸ್ವೀಕರಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದನ್ನು…

Read More

ಬೆಂಗಳೂರು: ಯಾತ್ರಾರ್ಥಿಗಳ ಕನಸು ನನಸಾಗಿಸೋ ಸಲುವಾಗಿ ಕರ್ನಾಟಕ್ ಭಾರತ್ ಗೌರವ್ ದಕ್ಷಿಣ ಯಾತ್ರಾವನ್ನು ಆಯೋಜಿಸಲಾಗಿದೆ. ಈ ಯೋಜನೆಯಡಿ ರಾಮೇಶ್ವರ, ಕನ್ಯಾಕುಮಾರಿ, ಮದುರೈ, ತಿರುವನಂತಪುರಕ್ಕೆ ಯಾತ್ರೆಯನ್ನು ಆಯೋಜಿಸಲಾಗಿದೆ. ಇಲ್ಲಿಗೆ ತೆರಳೋರಿಗೆ ರಾಜ್ಯ ಸರ್ಕಾರದಿಂದಲೇ 5000 ಸಹಾಯಧನವನ್ನು ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾ ರಾಮೇಶ್ವರ, ಕನ್ನಯಾಕುಮಾರಿ, ಮದುರೈ, ತಿರುವನಂತಪುರಕ್ಕೆ ಆಯೋಜಿಸಲಾಗಿದೆ. ಯಾತ್ರೆಯು ದಿನಾಂಕ 18-01-2024ರಿಂದ ಐಆರ್ ಸಿಟಿಸಿ, ಐಟಿಎಂಎಸ್ ವೆಬ್ ಸೈಟ್ ಮೂಲಕ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ. ಈ ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ 15,000 ರೂ ಆಗಿದೆ. ಕರ್ನಾಟಕ ಸ್ರಕಾರದಿಂದ ರೂ.5000 ಸಹಾಯಧನ ನೀಡಲಾಗುತ್ತದೆ. ಯಾತ್ರಿಯು ಕೇವಲ 10000 ಮಾತ್ರವೇ ಪಾವತಿಸಬೇಕಾಗಿದೆ ಅಂತ ತಿಳಿಸಿದ್ದಾರೆ. ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾಗೆ ರೈಲು ಹತ್ತೋದಕ್ಕೆ, ಇಳಿಯೋದಕ್ಕೆ ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಅವಕಾಶ ನೀಡಲಾಗಿದೆ ಎಂದಿದ್ದಾರೆ.…

Read More

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಹಾಗೂ ಅವರನ್ನು ಲೋಕಸಭೆ ಚುನಾವಣೆ ಕಣದಿಂದ ತಪ್ಪಿಸಲು ಸ್ವತಃ ಮುಖ್ಯಮಂತ್ರಿ ಅವರೇ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೇರ ಆರೋಪ ಮಾಡಿದರು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಸರಕಾರ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ನೇರ ಆರೋಪ ಮಾಡಿದರು. ಕಳೆದ 2-3 ದಿನಗಳಿಂದ ರಾಜ್ಯ ಸರಕಾರದಿಂದ ಅಧಿಕಾರ ದುರ್ಬಳಕೆ ಆಗುತ್ತಿದೆ. ಮಾಧ್ಯಮಗಳಲ್ಲೂ ಸಹ ಬೇರೆ ಯಾವುದೇ ವಿಷಯಗಳಿಗೆ ಗಮನ ಕೊಡಲು ಆಗದಷ್ಟು ರೀತಿಯಲ್ಲಿ ಪ್ರಚಾರ ಸಿಗುತ್ತಿದೆ. ಕಾರಣ ಹುಬ್ಬಳ್ಳಿ ಘಟನೆ. 30 ವರ್ಷದ ಕೇಸ್ ‌ನಲ್ಲಿ ಕರ ಸೇವಕನ…

Read More

ಬೆಂಗಳೂರು: ಬಿಜೆಪಿ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಜೀ ಅವರ ಕೈಯನ್ನು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷರಲ್ಲಿ ಕೇಳಿ ನಡೆಸುವ ನನ್ನ ಪ್ರವಾಸದ ವೇಳೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಮುಖರ ಜೊತೆ ಮಾತನಾಡುವೆ ಎಂದ ಅವರು, ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ವಿವರಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಲು ಅವರು ಮನವಿ ಮಾಡಿದರು. ಎಸ್‍ಸಿ ಮೋರ್ಚಾ ನೂತನ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜು, ಸಂಸದ ಮುನಿಸ್ವಾಮಿ, ರಾಜ್ಯ…

Read More

ಕಲಬುರ್ಗಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಕಲಬುರ್ಗಿಯ ಅಫಜಲಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಶಾಸಕ ಎಂ.ವೈ ಪಾಟೀಲ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ತೆರಳುತ್ತಿದ್ದಂತ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಶಾಸಕ ಎಂ.ವೈ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ತಿಳಇದು ಬಂದಿದೆ. ಜೇವರ್ಗಿ(ಬಿ) ಗ್ರಾಮದ ಬಳಿಯಲ್ಲಿ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಕಾರಿನಲ್ಲಿದ್ದಂತ ಶಾಸಕ ಎಂ.ವೈ ಪಾಟೀಲ್ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/note-register-for-yuvanidhi-scheme-as-follows/ https://kannadanewsnow.com/kannada/karsevak-shrikant-poojary-granted-bail/

Read More

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್‍ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಶಿವಮೊಗ್ಗ ದೂ.ಸಂ: 08182-255293 ಸಂಪರ್ಕಿಸಬಹುದು ಎಂದು…

Read More