Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಕ್ಟೋಬರ್.18ರ ಇಂದಿನಿಂದ ಅಕ್ಟೋಬರ್.24ರವರೆಗೆ ಒಂದು ವಾರಗಳ ಕಾಲ ಕೆಲ ಜಿಲ್ಲೆಗಳಲ್ಲಿ ಭಾರೀ, ಹಗುರ, ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಚಂಡಮಾರುತದ ಪರಿಚಲನೆಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯವರೆಗೆ ಕರ್ನಾಟಕ ಮತ್ತು ರಾಯಲಸೀಮಾದಾದ್ಯಂತ ಒಂದು ತೊಟ್ಟಿಯು ಸಾಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ವರೆಗೆ ವಿಸ್ತರಿಸುತ್ತದೆ ಎಂದು ಹೇಳಿದೆ. ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ: ದಿನ 1 (18 ನೇ ಸೆಪ್ಟೆಂಬರ್ 2024): ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ…
ಬೆಂಗಳೂರು: ನಾನು ಮುಡಾದ ಯಾವುದೇ ಫೈಲ್ ಗಳನ್ನು ತಂದಿಲ್ಲ. ಈ ಬಗ್ಗೆ ದೇವರ ಮುಂದೆ ಆಣೆ ಮಾಡೋದಕ್ಕೂ ನಾನು ಸಿದ್ಧ ಎಂಬುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಡಾ ಹಗರಣದಲ್ಲಿ ಸಿಎಂ ತಪ್ಪು ಇಲ್ಲವೇ ಇಲ್ಲ. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ನಾನಂತೂ ಮುಡಾದಿಂದ ಯಾವುದೇ ಫೈಲ್ ತಗೊಂಡು ಬಂದಿಲ್ಲ ಎಂಬುದಾಗಿ ತಿಳಿಸಿದರು. ಮೋಸ್ಟ್ಲೀ ಛಲವಾದಿ ನಾರಾಯಣಸ್ವಾಮಿ ಮನೆಯಲ್ಲಿ ಇರಬೇಕು. ಇಲ್ಲದೇ ಕುಮಾರಸ್ವಾಮಿ ತಂದಿರಬೇಕು. ನಾನು ಮುಡಾದಿಂದ ಒಂದೇ ಒಂದು ಸಣ್ಣ ಪೇಪರ್ ತಂದಿಲ್ಲ. ನಾನು ಚಾಮುಂಡೇಶ್ವರಿ, ಮಂಜುನಾಥನ ಮೇಲೆ ಬೇಕಾದ್ರೂ ಆಣೆ ಪ್ರಮಾಣಕ್ಕೆ ಸಿದ್ಧ ಎಂಬುದಾಗಿ ಹೇಳಿದರು. ಅಂದಹಾಗೇ ಬಿಜೆಪಿ ಸೇರಿದಂತೆ ವಿಪಕ್ಷಗಳ ನಾಯಕರು ಮುಡಾದಿಂದ ಫೈಲ್ ತಂದಿದ್ದಾರೆ. ರಾತ್ರೋ ರಾತ್ರಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಫೈಲ್ ಹೆಲಿಕಾಪ್ಟರ್ ಮೂಲಕ ತಂದಿದ್ದಾರೆ. ಇವುಗಳನ್ನೇ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ತೋರಿಸಿ ಮಾತನಾಡಿದ್ದು ಎಂಬುದಾಗಿ ಆರೋಪ ಮಾಡಿದ್ದರು. ಇದಕ್ಕೆ ಇಂದು ನಾನು…
ಶಿವಮೊಗ್ಗ : ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸAಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು. ನ.1 ರ ಬೆಳಿಗ್ಗೆ 8 ಗಂಟೆಯಿAದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ…
ಮೈಸೂರು: ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಇಡಿ ಅಧಿಕಾರಿಗಳು, ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಕಮೀಷನರ್ ಅವರಿಗೆ 41 ಪ್ರಶ್ನೆಗಳನ್ನು ಇಡಿ ಕೇಳಿದ್ದು, ಅದರ ಮಾಹಿತಿ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಡಾ ಕಮೀಷನರ್ ಗೆ 41 ಪ್ರಶ್ನೆಗಳಿರುವಂತ ನೋಟಿಸ್ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅದರಲ್ಲಿ ಸರ್ವೆ ನಂಬರ್ 464ಕ್ಕೆ ಸಂಬಂಧಿಸಿದಂತೆ ನೋಟಿಫಿಕೇಷನ್ ನಕಲು ಪ್ರತಿ ನೀಡುವಂತೆ ಕೋರಿದೆ. ಇನ್ನೂ ಡಿನೋಟಿಫಿಕೇಷನ್ ಮಾಡುವಾಗ ಯಾವೆಲ್ಲ ನೀತಿ ನಿಯಮವನ್ನು ಪಾಲಿಸಲಾಗಿದೆ.? ದೇವರಾಜು ಅವರ ಮನವಿಯ ಮೇರೆಗೆ ಏನಾದ್ರೂ ಪ್ರಕ್ರಿಯೆ ಆಗಿದ್ಯಾ ಎಂಬ ಮಾಹಿತಿ ಒದಗಿಸುವಂತೆಯೂ ಕೋರಿದೆ. ಭೂಸ್ವಾದೀನಕ್ಕೆ ಸಂಬಂಧಿಸಿದಂತ ಮಾಹಿತಿ ನೀಡುವಂತೆ ನೋಟಿಫಿಕೇಷನ್ ದಾಖಲೆಗಳ ನಕಲು ಪ್ರತಿ ನೀಡುವಂತೆ, ನೋಟಿಫಿಕೇಷನ್ ಭೂಮಿ ಮಾರಾಟಕ್ಕೆ, ವರ್ಗಾವಣೆಗೆ ಅವಕಾಶವಿದ್ಯಾ ಎನ್ನುವಂತೆ ಮಾಹಿತಿಯನ್ನು ಕೇಳಿದೆ. ಈ ಪ್ರಶ್ನೆಗಳಲ್ಲದೇ ಬರೋಬ್ಬರಿ 41 ಪ್ರಶ್ನೆಗಳನ್ನು ಮುಡಾ ಕಮೀಷನರ್ ಮುಂದೆ ಇಡಿ ಅಧಿಕಾರಿಗಳು ಇಟ್ಟಿದ್ದಾರೆ. ಆ ಎಲ್ಲಾ…
ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ. ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲಕ 16 ವರ್ಷದ ಮೈಕೆಲ್ ಎಂಬ ಬಾಲಕನು ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು…
ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಆ ಭಾಗದ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 17.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 289-ಎಸ್ ಕೆಂಪೇಗೌಡ ಬಸ್ ನಿಲ್ದಾಣ ಬಾಗಲೂರು ಹೆಬ್ಬಾಳ, ಯಲಹಂಕ, ವೆಂಕಟಾಲ, ಸಾತನೂರು 2 ಸದರಿ ಮಾರ್ಗದ ವೇಳಾಪಟ್ಟಿ ಕೆಳಕಂಡಂತಿದೆ. ಬಿಡುವ ವೇಳೆ ಕೆಂಪೇಗೌಡ ಬಸ್ ನಿಲ್ದಾಣ ಬಾಗಲೂರು 0635, 0700, 1000, 1030, 1630, 1700, 2030, 2100 0515, 0535, 0800, 0830, 1455, 1525, 1830, 1900 https://kannadanewsnow.com/kannada/education-co-pilot-scheme-to-be-implemented-to-improve-learning-outcomes-in-govt-schools-madhu-bangarappa/ https://kannadanewsnow.com/kannada/law-on-prevention-of-child-marriages-cant-be-stunted-by-personal-laws-sc/
ನವದೆಹಲಿ: ಭೂಗತ ಪಾತಕಿ ಅಬು ಸಲೇಂಗೆ ಬಿಡುಗಡೆಯ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ 25 ವರ್ಷಗಳ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸುವ ಒಂದು ತಿಂಗಳ ಮೊದಲು ಮಾತ್ರ ಅವನ ಬಿಡುಗಡೆಗೆ ಅಗತ್ಯವಾದ ದಾಖಲೆಗಳನ್ನು ಕಳುಹಿಸಲಾಗುವುದು ಎಂದು ಸಿಬಿಐ ಗುರುವಾರ ಹೇಳಿದೆ. ಸಲೇಂ ತನ್ನ ವಕೀಲ ಫರ್ಹಾನಾ ಶಾ ಮೂಲಕ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಬಿಡುಗಡೆಯ ತಾತ್ಕಾಲಿಕ ದಿನಾಂಕವನ್ನು ನೀಡುವಂತೆ ಮಹಾರಾಷ್ಟ್ರ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು. ಎರಡು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಲೇಂ 23 ವರ್ಷ 8 ತಿಂಗಳು ಜೈಲಿನಲ್ಲಿ ಕಳೆದಿದ್ದಾನೆ. 2005ರಲ್ಲಿ ಸಲೇಂನನ್ನು ಗಡೀಪಾರು ಮಾಡಿದಾಗ ಪೋರ್ಚುಗಲ್ಗೆ ನೀಡಿದ ಸಾರ್ವಭೌಮ ಬದ್ಧತೆಯ ಪ್ರಕಾರ, ಅವರನ್ನು 25 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ 2022 ರಲ್ಲಿ ಹೇಳಿತ್ತು. ವಿಶೇಷ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ, 2022 ರಲ್ಲಿ ಸುಪ್ರೀಂ ಕೋರ್ಟ್ ಸಲೇಂನನ್ನು ಭಾರತದಲ್ಲಿ ಬಂಧಿಸಿದಾಗ ಅಕ್ಟೋಬರ್ 12, 2005 ರಿಂದ…
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷಣ ಕೋಪೈಲಟ್ʼ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೈಕ್ರೋಸಾಫ್ಟ್ ಮತ್ತು ಶಿಕ್ಷಣ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ “ಶಿಕ್ಷಣ ಕೋಪೈಲೆಟ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ. ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು…
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನವÀರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕಡತಗಳನ್ನು ಹೆಲಿಕಾಪ್ಟರ್ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು; ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇಲ್ಲವಾದರೆ ಇ.ಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಮನವಿ ಮಾಡಿದರು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು.. ಭ್ರಷ್ಟಾಚಾರ ಅಪರಾಧವಲ್ಲ…
ಬೆಂಗಳೂರು: “ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಮಾಹಿತಿ ನೀಡಿದರು. “ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ತಿಳಿಸಿದರು. “ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ…