Author: kannadanewsnow09

ಇರಾನ್: 2020 ರಲ್ಲಿ ಯುಎಸ್ ಡ್ರೋನ್ನಿಂದ ಕೊಲ್ಲಲ್ಪಟ್ಟ ದಿವಂಗತ ಕಮಾಂಡರ್ ಕಾಸ್ಸೆಮ್ ಸೊಲೈಮಾನಿ ಅವರ ಸ್ಮರಣಾರ್ಥ ಇರಾನ್ನಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 100 ಜನರ ಸಾವಿಗೆ ಕಾರಣವಾದ ಮತ್ತು ಅನೇಕರು ಗಾಯಗೊಂಡ ಎರಡು ಸ್ಫೋಟಗಳ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ಗುರುವಾರ ವಹಿಸಿಕೊಂಡಿದೆ. ಗುಂಪು ತನ್ನ ಸಂಯೋಜಿತ ಟೆಲಿಗ್ರಾಮ್ ಚಾನೆಲ್ಗಳಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಹೌದು 2020 ರಲ್ಲಿ ಯುಎಸ್ ಡ್ರೋನ್ನಿಂದ ಕೊಲ್ಲಲ್ಪಟ್ಟ ಕಮಾಂಡರ್ ಖಾಸಿಮ್ ಸೊಲೈಮಾನಿ ಸ್ಮರಣಾರ್ಥ ಇರಾನ್ನಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 100 ಜನರನ್ನು ಬಲಿ ತೆಗೆದುಕೊಂಡ ಮತ್ತು ಹಲವಾರು ಜನರನ್ನು ಗಾಯಗೊಳಿಸಿದ ಎರಡು ಸ್ಫೋಟಗಳ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ಗುರುವಾರ ವಹಿಸಿಕೊಂಡಿದೆ. https://kannadanewsnow.com/kannada/state-government-nominates-6-members-to-mangalore-university-syndicate-authority/ https://kannadanewsnow.com/kannada/state-kadugolla-welfare-association-expresses-deep-regret-over-incident-of-assault-on-dalit-youth-in-chikmagalur/

Read More

ಬೆಂಗಳೂರು: ನಗರದಲ್ಲಿ ಇನ್ನೂ ಬಾಲ್ಯವಿವಾಹ ಜೀವಂತವಾಗಿದೆ. ಅಪ್ರಾಪ್ತೆಯನ್ನು ವಿವಾಹವಾದ ಬಳಿಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸೋದಕ್ಕೆ ಪ್ರಯತ್ನ ಪಟ್ಟ ಯುವಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಗೆ ತಾಯಿ ವಿವಾಹ ಮಾಡಿಸಿದ್ದಳು. ದೇವಾಲಯದಲ್ಲಿ 27 ವರ್ಷದ ಯುವಕನೊಂದಿಗೆ ಅಪ್ರಾಪ್ತೆಯನ್ನು ವಿವಾಹ ಮಾಡಿಸಲಾಗಿತ್ತು. ಈ ಬಳಿಕ ಬಾಲಕಿಯೊಂದಿಗೆ ಬಲವಂತವಾಗಿ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಮಾನಸಿಕವಾಗಿ ಘಾಸಿಕೊಂಡ ಅಪ್ರಾಪ್ತ ಬಾಲಕಿ, ಮಕ್ಕಳ ಕಲ್ಯಾಣ ಸಮಿತಿಗೆ ಕರೆ ಮಾಡಿ ಅಪ್ರಾಪ್ತ ವಯಸ್ಸಿಗೆ ಇಷ್ಟವಿಲ್ಲದಿದ್ದರೂ ಮದುವೆ ಮಾಡಿಸಿದ್ದು. ಯುವಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸೋದರ ಬಗ್ಗೆ ದೂರು ನೀಡಿದ್ದಳು. ಸ್ಥಳಕ್ಕೆ ಆಗಮಿಸಿದಂತ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಲವಂತವಾಗಿ ಮದುವೆ ಮಾಡಿಸಿದ್ದು, ಯುವಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದರ ಬಗ್ಗೆ ಅಲವತ್ತುಕೊಂಡಿದ್ದಾಳೆ. ಈ ಮಾಹಿತಿ ಆಧರಿಸಿ, ಇದೀಗ ಯುವಕನ ವಿರುದ್ಧ ಆರ್ ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. https://kannadanewsnow.com/kannada/ksrtc-bus-overturns-in-hassan-4-passengers-injured-one-in-critical-condition/ https://kannadanewsnow.com/kannada/state-government-nominates-6-members-to-mangalore-university-syndicate-authority/

Read More

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಹಾಸನದ ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಕಾರು ಒಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ. ಈ ವೇಳೆಯಲ್ಲಿ 14ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾದ ಕಾರಣ, ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನರಾಯಪಟ್ಟಣ ಸಂಚಾರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-kadugolla-welfare-association-expresses-deep-regret-over-incident-of-assault-on-dalit-youth-in-chikmagalur/ https://kannadanewsnow.com/kannada/state-government-nominates-6-members-to-mangalore-university-syndicate-authority/

Read More

ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೇರಮರಡಿಯಲ್ಲಿ ದಲಿತಯುವಕನ ಮೇಲೆ ನಡೆದ ಘಟನೆಗೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ತೀವ್ರ ವಿಷಾದವನ್ನು ವ್ಯಕ್ತ ಪಡಿಸಿದೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪತ್ರಿಕೆ ಮತ್ತು ಟಿವಿಯಲ್ಲಿ ಪ್ರಸಾರವಾದಂತ ಚಿಕ್ಕಮಗಳೂರಿನಲ್ಲಿ ನಡೆದಂತ ದಲಿತ ಯುವಕನ ಮೇಲಿನ ಘಟನೆಯ ಬಗ್ಗೆ ವರದಿಯನ್ನು ನೋಡಿದೆ ಸದರಿ ಘಟನೆ ವಾತ್ಸವಾಗಿ ನಡೆದಿದ್ದರೆ ಖಂಡನೀಯವಾದುದು. ಇತ್ತೀಚೆಗೆ ಇಂತಹ ಘಟನೆಗಳು ರಾಜ್ಯದಲ್ಲಿ ಯಾವ ಗೊಲ್ಲರಹಟ್ಟಿಗಳಲ್ಲಿ ನಡೆದಿರಲಿಲ್ಲ ಜೊತೆಗೆ ರಾಜ್ಯ ಸರ್ಕಾರ ಮತ್ತು ನಮ್ಮ ಸಂಘಟನೆ ಅಲ್ಲಲ್ಲಿ ಕೆಲವು ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಲು ಕೆಲಸವನ್ನು ಮಾಡಿದ್ದೆವು. ಶ್ರೀ ಕೃಷ್ಣ ಜಾಂಬವಂತನ ಮಗಳಾದ ಜಾಂಬವತಿಯನ್ನು ವಿವಾಹವಾಗಿರುವುದರಿಂದ ನಾವು ಆದಿಕರ್ನಾಟಕ ಜನಾಂಗದವರು ನೆಂಟರು ಬಂಟರು ಆಗಿದ್ದೆವೆ. ಈಗಿರುವಾಗ ಅವರನ್ನು ನಮ್ಮ ಮನೆಯಿಂದ ಹೊರಗೆ ಇಡುವ ಪ್ರವೃತ್ತಿ ಸಲ್ಲದು ಎಂದಿದ್ದಾರೆ. ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಅವರಿಗೆ ಬಹಿಷ್ಕಾರ ಹಾಕಿದರೆ ಕಾನೂನಿನ ಪ್ರಕಾರ ಅಪರಾದವಾಗುತ್ತದೆ. ಯಾರೊ ಮಾಡಿದ ತಪ್ಪಿಗೆ ಇಡೀ ಸಮಾಜ ತಲೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 6 ಮಂದಿ ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 6 ಮಂದಿಯನ್ನು ನಾಮನಿರ್ದೇಶ ಮಾಡಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ಮಂಗಳೂರು ವಿವಿಯ ಸಿಂಡಿಕೇಟ್ ಗೆ ಸುರೇಶ್ ಕುಮಾರ್ ಬಿ ನಾವೂರು, ಸಿ.ಎ ನಿತಿನ್ ಚ ಶೆಟ್ಟಿ, ಮಜೂಡಿತ್ ಮೆಂಡೋನಿಕ, ರಘುರಾಜ್, ಅಚ್ಯುತ್ ಗಟ್ಟಿ ಹಾಗೂ ಸವಾದ್ ಸುಳ್ಯ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನಾಮನಿರ್ದೇಶಿತ ಸದಸ್ಯರು ಮೀಸಲಾತಿಯ, ವಿದ್ಯಾರ್ಹತೆ ಬಗ್ಗೆ ಒಂದು ತಿಂಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ ನಾಮನಿರ್ದೇಶಿತ ಸದಸ್ಯರು ನಾಮನಿರ್ದೇಶನಗೊಂಡ ವಿವಿಯ ಸಂಯೋಜಿತ ಕಾಲೇಜಿನಲ್ಲಿ ಅಥವಾ ವಿವಿಯ ಯಾವುದೇ ಸ್ಥಾನಮಾನದಲ್ಲಿ ನಿಯೋಜನೆ ಹೊಂದಿರದ ಬಗ್ಗೆ ದೃಢೀಕರಿಸಿಕೊಳ್ಳತಕ್ಕದ್ದು.…

Read More

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 298 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6900 ಹಾಗೂ RAT ಪರೀಕ್ಷೆ ಮೂಲಕ 891 ಜನರು ಸೇರಿದಂತೆ 7791 ಮಂದಿಯನ್ನು ಕೋವಿಡ್ ಸೋಂಕು ( Covid19 Case ) ಪತ್ತೆ ಪರೀಕ್ಷೆಗೆ ಒಳಪಡಿಸಿರೋದಾಗಿ ತಿಳಿಸಿದೆ. ಈ ಪರೀಕ್ಷೆಯಲ್ಲಿ ಬೆಂಗಳೂರಲ್ಲಿ 172, ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರ್ಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6,…

Read More

ಹುಬ್ಬಳ್ಳಿ; ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಮುಂದೆ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸರಿಗೆ ದೂರು ನೀಡಿದೆ. ಈ ಕುರಿತಂತೆ ಇಂದು ಕಾಂಗ್ರೆಸ್ ನಿಯೋಗವು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ತೆರಳಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ನಿಂದಿಸಲಾಗಿದೆ. ಕಾನೂನು ಸುವ್ಯವಸ್ಥೆ ಮೀರುವಂತೆ ಪೊಲೀಸ್ ಠಾಣೆಗೆ ನುಗ್ಗೋದಕ್ಕೆ ಯತ್ನಿಸಿ ಪ್ರತಿಭಟನೆ ನಡೆಸಲಾಗಿದೆ ಅಂತ ದೂರಿನಲ್ಲಿ ಉಲ್ಲೇಖಿಸಿ, ಬಿಜೆಪಿ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ದೂರಿನಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ 43 ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ. https://kannadanewsnow.com/kannada/note-the-deadline-for-online-application-for-class-6-entrance-examination-of-residential-schools-has-been-extended/ https://kannadanewsnow.com/kannada/breaking-50000-people-to-attend-pm-modis-mega-event-in-abu-dhabi-on-february-13-ahlan-modi/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ ತುಷಾರ್ ಗಿರಿ ನಾಥ್ ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕೆಂದು ಸೂಚಿಸಿದರು. ಸಮೀಕ್ಷೆ ನಡೆಸುವಾಗ ನಾಮಪಲಕದಲ್ಲಿ ಕನ್ನಡ ಬಳಕೆ ಮಾಡದಿದ್ದಲ್ಲಿ…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ನಂತ್ರ, ಅವುಗಳ ವ್ಯವಸ್ಥಿತ ಜಾರಿಗೆ ಟೈಮ್ ಲೈನ್ ನೀಡಲಾಗಿತ್ತು. ಈ ಬಳಿಕ ಎಲ್ಲಾ ಫಲಾನುಭವಿ ಯೋಜನೆಗಳು ಮತ್ತು ಸಹಾಯಧನವನ್ನು ಏಕೀಕೃತ ನೇರ ನಗದು ವರ್ಗಾವಣೆ ವೇದಿಕೆ ಮೂಲಕ ನಿರ್ವಹಿಸೋ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಎಲ್ಲಾ ಫಲಾನುಭವಿ ಯೋಜನೆಗಳು ಮತ್ತು ಸಹಾಯಧನವನ್ನು ಏಕೀಕೃತ ನೇರ ನಗದು ವರ್ಗಾವಣೆ ವೇದಿಕೆ ಮೂಲಕ ನಿರ್ವಹಿಸಲು ಸೂಚಿಸಿಲಾಗಿರುತ್ತದೆ ಅಂತ ತಿಳಿಸಿದ್ದಾರೆ. ಇಲ್ಲಿಯವರೆಗೂ 379 ಯೋಜನೆಗಳನ್ನು ಈ ವೇದಿಕೆಯಲ್ಲಿ ಒಳತರಲಾಗಿದೆ. ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು 2018-2020ನೇ ಸಾಲಿನಲ್ಲಿ ನಡೆಸಿದ ನೇರ ನಗರು ವರ್ಗಾವಣೆ ಮೇಲಿನ ಕಾರ್ಯನಿರ್ವಹಣಾ ಲೆಕ್ಕ ಪರಿಶೋಧನ ವರದಿಯಲ್ಲಿ ಈ ಕೆಳಕಂಡ ನೇರ ನಗದು ವರ್ಗಾವಣೆ ತಂತ್ರಾಂಶದ ಚಟುವಟಿಕೆಗಳಿಗೆ ಕಾಲ ಮಿತಿಯನ್ನು ನಿಗದಿ ಪಡಿಸಲು ಸೂಚಿಸಿರುತ್ತಾರೆ ಅಂತ ತಿಳಿಸಿದ್ದಾರೆ. ಸೇವೆಗಳ…

Read More