Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ 20ಕ್ಕೂ ಹೆಚ್ಚು ಅಧಿಕಾರಿಗಳು ಮುಡಾ ಕಚೇರಿ, ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಭೂ ಮಾಲೀಕ ದೇವರಾಜು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿಯ ಮೇಲೆ ಮುಡಾ ಸೈಟು ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಎ4 ಆರೋಪಿಯಾಗಿರುವಂತ ಭೂ ಮಾಲೀಕ ದೇವರಾಜು ನಿವಾಸದ ಮೇಲೆ 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವಂತ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮಾಡುತ್ತಿದ್ದರೇ, ಅತ್ತ ಮೈಸೂರಿನ ಮುಡಾ ಕಚೇರಿಯಲ್ಲೂ ಕೆಲ ಇಡಿ ಅಧಿಕಾರಿಗಳು ಮುಡಾ ಹಗರಣ ಸಂಬಂಧ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/man-arrested-for-sending-bomb-threat-e-mail-to-colleges-in-bengaluru/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/ https://kannadanewsnow.com/kannada/meta-launches-joint-initiative-with-centre-to-empower-indians-against-online-scams/
ಬೆಂಗಳೂರು: ನಗರದ ಹಲವು ಕಾಲೇಜುಗಳಿಗೆ ಬಾಂಬ್ ಇರಿಸಲಾಗಿದೆ ಎಂಬುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಆ ಬಳಿಕ ಕಾಲೇಜುಗಳಲ್ಲಿ ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:04/10/2024 ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್ಸ್ಟ್ಯೂಟ್ ಆಫ್ ಟೆಕ್ನಾಲಜಿ (ಬಿ.ಐ.ಟಿ) ಕಾಲೇಜಿನ ಪ್ರಾಂಶುಪಾಲರು ಹಾಜರಾಗಿ ಲಿಖಿತ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:04/10/2024 ರಂದು ಕಾಲೇಜಿನ ಆವರಣದಲ್ಲಿ ಹೈಡೋಜನ್ ಆಧಾರಿತ ಸುಧಾರಿತ ಐಇಡಿ ಗಳನ್ನು ಇಟ್ಟಿರುವುದಾಗಿ ಇ-ಮೇಲ್ ಐಡಿ s_ve sekr@hotmail.com ನಿಂದ ಬೆದರಿಕೆಯ ಇ ಮೇಲ್ ಸಂದೇಶವೊಂದು ಬಂದಿದ್ದು, ಈ ಕುರಿತು ಇ-ಮೇಲ್ ಕಳುಹಿಸಿರುವ ವ್ಯಕ್ತಿಯನ್ನು ಪತ್ತೆಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದಿದ್ದಾರೆ. ಇದೇ ಪ್ರಕಾರ ದಿನಾಂಕ:04/10/2024…
ಮೈಸೂರು: ಮುಡಾ ಹಗರಣದ ಬಳಿಕ, ಇಡಿ ಅಧಿಕಾರಿಗಳಿಗೆ ದೂರುದಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ದೂರು ಆಧರಿಸಿ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಇಂದು ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯ ಮೇಲೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಹುಡುಕಾಟ ನಡೆಸುತ್ತಿದ್ದಾರೆ. ಅಂದಹಾಗೇ ಮುಡಾ ಹಗರಣ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ನಂತ್ರ ಕೇಸ್ ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮುಡಾ ಕಚೇರಿಯ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/ccb-arrests-drugs-worth-rs-21-17-crore-in-bengaluru/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/
ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಭೇಟೆಯಾಡಿದ್ದಾರೆ. ವಿವಿಧ ದೇಶಗಳಿಂದ ಇಂಡಿಯನ್ ಪೋಸ್ಟ್ ಮುಖಾಂತರ ತರಿಸಿಕೊಂಡಿದ್ದ 21,17,34,000 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದ ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಆರೋಪಿಗಳನ್ನು ದಸ್ತಗಿರಿ ಮಾಡಿ ವಿವಿಧ ರೀತಿಯ ನಿಷೇಧಿತ ಮಾಧಕ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿರುತ್ತಾರೆ ಎಂದಿದೆ. ಸೆಪ್ಟೆಂಬರ್ ಮಾಹೆಯಲ್ಲಿ ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಇಂತಹದೇ 2 ಪ್ರಕರಣಗಳು ಮತ್ತು ಸಿಸಿಬಿ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ಈ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಿ…
ಶಿವಮೊಗ್ಗ ; ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್ಸ್ಸಿ/ಎಸ್ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ. 05 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. https://kannadanewsnow.com/kannada/former-underworld-don-muthappa-rais-property-dispute-resolved-do-you-know-how-much-assets-his-second-wife-got/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆಸ್ತಿ ಹಂಚಿಕೆ ವಿಚಾರವಾಗಿ ಎದ್ದಿದ್ದಂತ ವಿವಾದ, ಈಗ ಸುಖಾಂತ್ಯ ಕಂಡಿದೆ. ಬೆಂಗಳೂರಿನ 19ನೇ ಸಿಸಿಹೆಚ್ ನ್ಯಾಯಾಲಯ ಹಾಗೂ ಸೆಷನ್ಸ್ ಕೋರ್ಟ್ ಆಸ್ತಿ ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ಸಂಬಂಧ ಲೋಕ ಅದಾಲತ್ ನಲ್ಲಿ ಬಾಗಿಯಾಗಿದ್ದಂತ ಮುತ್ತಪ್ಪ ರೈ ಇಬ್ಬರು ಪತ್ನಿಯರನ್ನು ಸಂಧಾನ ಮಾಡಿ, ಆಸ್ತಿ ವಿವಾದವನ್ನು ಬಗೆ ಹರಿಸುವಲ್ಲಿ ಕೋರ್ಟ್ ಯಶಸ್ವಿಯಾಗಿದೆ. ಅಂದಹಾಗೇ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ರೈ ಅವರು ಆಸ್ತಿ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿವಾದವನ್ನು ಸಂಧಾನದ ಮೂಲದ ನ್ಯಾಯಾಲಯವು ಇತ್ಯರ್ಥ ಪಡಿಸುವಲ್ಲಿ ಯಶಸ್ವಿಯಾಗಿದೆ. ಮುತ್ತಪ್ಪ ರೈ ಅವರು ಮೃತಪಡುವ ಒಂದು ವರ್ಷದ ಹಿಂದೆ ಅಂದ್ರೆ 2019ರಲ್ಲಿ ತಮ್ಮ ಆಸ್ತಿಯ ಕುರಿತಂತೆ ವಿಲ್ ಮಾಡಿದ್ದರು. ಸುಮಾರು 41 ಪುಟಗಳ ವಿಲ್ ನಲ್ಲಿ ತಮ್ಮ ಪುತ್ರರಾದ ರಾಕಿ ರೈ, ರಿಕ್ಕಿ ರೈ, ಸಹೋದರನ ಪುತ್ರ ಅಶ್ವಿನಿ ರೈ, ತಮ್ಮ ಎರಡನೇ ಪತ್ನಿ ಅನುರಾಧಾ ರೈ ಸೇರಿದಂತೆ ಮನೆ…
ಶ್ರೀನಗರ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕ್ಯಾಬಿನೆಟ್ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕರೆ ನೀಡುವ ನಿರ್ಣಯವನ್ನು ಅಂಗೀಕರಿಸಿದೆ. ಅಬ್ದುಲ್ಲಾ ಅವರು ಸಿದ್ಧಪಡಿಸಿದ ನಿರ್ಣಯವು ಜಮ್ಮು ಮತ್ತು ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಹೊಸದಾಗಿ ಆಯ್ಕೆಯಾದ ಸಿಎಂ ಅಬ್ದುಲ್ಲಾ ಮುಂಬರುವ ದಿನಗಳಲ್ಲಿ ದೆಹಲಿಗೆ ಪ್ರಯಾಣಿಸಲಿದ್ದು, ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕವಾಗಿ ಪ್ರಸ್ತುತಪಡಿಸಲಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ, ಸಚಿವರಾದ ಸಕೀನಾ ಇಟೂ, ಜಾವೇದ್ ಅಹ್ಮದ್ ರಾಣಾ, ಜಾವೇದ್ ಅಹ್ಮದ್ ದಾರ್ ಮತ್ತು ಸತೀಶ್ ಶರ್ಮಾ ಭಾಗವಹಿಸಿದ್ದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ (ಯುಟಿ) ಕೆಳದರ್ಜೆಗೆ ಇಳಿಸಿದಾಗ ಅದರ ಮರುಸಂಘಟನೆಯ ನಂತರ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ದೀರ್ಘಕಾಲದ ಬೇಡಿಕೆಯಾಗಿದೆ. ಎನ್ಸಿಯ ಮೈತ್ರಿ ಪಾಲುದಾರ ಕಾಂಗ್ರೆಸ್ ಅಬ್ದುಲ್ಲಾ ಅವರ ಕ್ಯಾಬಿನೆಟ್ಗೆ…
ಚಿತ್ರದುರ್ಗ: ನಗರದ ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿನಿ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಸಾವನ್ನಪ್ಪಿದ್ದಾರೆ. ಪ್ರೇಮಾ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-shock-for-jewellery-lovers-gold-crop-hits-record-high-again/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/ https://kannadanewsnow.com/kannada/meta-launches-joint-initiative-with-centre-to-empower-indians-against-online-scams/
ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿಂದ ಜಾಮೀನು ನೀಡಲಾಗಿತ್ತು. ಈ ಜಾಮೀನು ನೀಡಿರುವುದನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಲು ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಎಸ್ಐಟಿಯಿಂದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಸಂಬಂಧ ಭವಾನಿ ರೇವಣ್ಣಗೆ ನೀಡಲಾಗಿದ್ದಂತ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಈಗಾಗಲೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಾಜಕೀಯ ಕುಟುಂಬ ಅಂತ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಾಗಿ ಅಭಿಪ್ರಾಯ ಪಟ್ಟಿತು. ಜಾಮೀನು ರದ್ದು ಮಾಡಲು ನಕಾರ ವ್ಯಕ್ತ ಪಡಿಸಿದೆ. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ಯಾ…
ನವದೆಹಲಿ: ಸಕಾರಾತ್ಮಕ ಜಾಗತಿಕ ಸೂಚನೆಗಳು ಮತ್ತು ದೇಶೀಯ ಸ್ಪಾಟ್ ಮಾರುಕಟ್ಟೆಗಳಿಂದ ಆರೋಗ್ಯಕರ ಬೇಡಿಕೆಯಿಂದಾಗಿ ಶುಕ್ರವಾರ ಬೆಳಿಗ್ಗೆ ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ದರಗಳು 10 ಗ್ರಾಂಗೆ 77,641 ರೂ.ಗೆ ಏರಿದೆ. ಎಂಸಿಎಕ್ಸ್ ಗೋಲ್ಡ್ ಡಿಸೆಂಬರ್ 5 ರಂದು ಬೆಳಿಗ್ಗೆ 9:40 ರ ಸುಮಾರಿಗೆ 10 ಗ್ರಾಂಗೆ ಶೇಕಡಾ 0.62 ರಷ್ಟು ಏರಿಕೆಯಾಗಿ 77,587 ರೂ.ಗೆ ವಹಿವಾಟು ನಡೆಸಿತು. ಸಕಾರಾತ್ಮಕ ಜಾಗತಿಕ ಸೂಚನೆಗಳು ಸ್ವದೇಶದಲ್ಲಿ ಭಾವನೆಗಳ ಮೇಲೆ ಪ್ರಭಾವ ಬೀರಿದವು. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ಚಿನ್ನದ ಬೆಲೆಗಳು ಈ ತಿಂಗಳು ಶೇಕಡಾ 1 ಕ್ಕಿಂತ ಹೆಚ್ಚಾಗಿದೆ. ಯುಎಸ್ ಚುನಾವಣೆ 2024 ರ ಫಲಿತಾಂಶದ ಸುತ್ತಲಿನ ಅನಿಶ್ಚಿತತೆ, ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಮತ್ತಷ್ಟು ವಿತ್ತೀಯ ಸರಾಗಗೊಳಿಸುವ ನಿರೀಕ್ಷೆಗಳಿಂದಾಗಿ ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟದಲ್ಲಿ ವಹಿವಾಟು ನಡೆಸಿತು. ಸ್ಪಾಟ್ ಚಿನ್ನವು ಗುರುವಾರ ದಾಖಲೆಯ ಗರಿಷ್ಠ 2,696.59 ಡಾಲರ್ಗೆ ತಲುಪಿದೆ. ಎಲ್ಲೆಲ್ಲಿ ಎಷ್ಟು ಚಿನ್ನದ ಬೆಲೆ ಇದೆ..? ಇಲ್ಲಿದೆ ಡೀಟೆಲ್ಸ್ ದೆಹಲಿ 22 ಕ್ಯಾರೇಟ್ 10 ಗ್ರಾಂ…