Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರ ಕೋವಿಡ್ ಹಗರಣ ಬಟಾಬಯಲಾಗಿದೆ ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರ ಕೋವಿಡ್ ಹಗರಣ ಬಟಾಬಯಲಾಗಿದೆ!ಪಿಪಿಪಿ ಕಿಟ್ಗಳ ಹತ್ತಾರು ಪಟ್ಟು ಹೆಚ್ಚು ದರಕ್ಕೆ ಚೀನಾ/ಖಾಸಗಿಯಿಂದ ಖರೀದಿಸಿ ಧೋಖ ಮಾಡಿ ಜನರ ಪ್ರಾಣ ದೊಂದಿಗೆ ಆಟವಾಡಿದ್ದಾರೆ ಸರ್ಕಾರ ವರದಿ ಮೇಲೆ ಕ್ರಿಮಿನಲ್ ಕೇಸು ಧಾಖಲಿಸಿ ಜನರಿಗೆ ನ್ಯಾಯ ನೀಡಲಿ ಕೊಳ್ಳೆ ಹಣ ವಸೂಲಿ ಮಾಡಲಿ ಎಂದಿದ್ದಾರೆ. https://twitter.com/RameshBabuKPCC/status/1855143868812984696 ಕೋವಿಡ್ ಹಗರಣ: ಬಿಎಸ್ವೈ, ಶ್ರೀರಾಮುಲು ತನಿಖೆಗೆ ಆಯೋಗ ಶಿಫಾರಸು ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಂತಿಮವಾಗಿ, ಅದು ಸಂಭವಿಸಿದೆ! ಗ್ಲೋಬಲ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್ಗಳಲ್ಲಿ ಮಾರುತಿ ಸುಜುಕಿ ಕಾರು ಐದು ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಗಳಿಸಿದೆ. ಈ ಸಾಧನೆಯನ್ನು ಸಾಧಿಸುವ ಮಾದರಿ ಮುಂಬರುವ ಡಿಜೈರ್ ಆಗಿದೆ. ಮಾರುತಿ ಸುಜುಕಿ ಕಾರುಗಳು ಯಾವಾಗಲೂ ಭಾರತದಲ್ಲಿ ಅನ್ವಯವಾಗುವ ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಿದ್ದರೂ, ಗ್ಲೋಬಲ್ ಎನ್ಸಿಎಪಿ ನಡೆಸಿದ ಸುರಕ್ಷತಾ ಮೌಲ್ಯಮಾಪನ ಪರೀಕ್ಷೆಗಳಲ್ಲಿ ಅವು ಕಳಪೆ ಪ್ರದರ್ಶನ ನೀಡಿವೆ. ನವೆಂಬರ್ 11 ರಂದು ಭಾರತದಲ್ಲಿ ಬಿಡುಗಡೆಯಾಗಲಿರುವ ನಾಲ್ಕನೇ ತಲೆಮಾರಿನ ಮಾರುತಿ ಸುಜುಕಿ ಡಿಜೈರ್, ಗ್ಲೋಬಲ್ ಎನ್ಸಿಎಪಿಯಲ್ಲಿ ವಯಸ್ಕ ಪ್ರಯಾಣಿಕರ ರಕ್ಷಣೆ ವಿಭಾಗದಲ್ಲಿ ಐದು ಸ್ಟಾರ್ಗಳನ್ನು ಮತ್ತು ಮಕ್ಕಳ ಪ್ರಯಾಣಿಕರ ರಕ್ಷಣೆ ವಿಭಾಗದಲ್ಲಿ ನಾಲ್ಕು ಸ್ಟಾರ್ಗಳನ್ನು ಗಳಿಸಿದೆ. ಹೊಸ ಮಾರುತಿ ಸುಜುಕಿ ಡಿಜೈರ್ ವಯಸ್ಕರ ಸುರಕ್ಷತೆಯಲ್ಲಿ 34 ರಲ್ಲಿ 31.24 ಮತ್ತು ಮಕ್ಕಳ ಸುರಕ್ಷತೆಯಲ್ಲಿ 49 ರಲ್ಲಿ 39.20 ಅಂಕಗಳನ್ನು ಪಡೆದಿದೆ. ಮಾರುತಿ ಸುಜುಕಿ ಡಿಜೈರ್ 2024 ಅನ್ನು ಸ್ವಯಂಪ್ರೇರಿತ ಪರೀಕ್ಷೆಗಾಗಿ ಗ್ಲೋಬಲ್ ಎನ್ಸಿಎಪಿಗೆ ಸಲ್ಲಿಸಿದೆ. ಮಾರುತಿ ಸುಜುಕಿ…
ಬೆಂಗಳೂರು: ನಾಡಿನ ಮಹಿಳೆಯರ ಬಗ್ಗೆ ಸ್ವಲ್ಪವಾದರೂ ಗೌರವವಿದ್ದರೆ, ಸಾರ್ವಜನಿಕ ಲಜ್ಜೆಯನ್ನು ಮೈಗೂಡಿಸಿಕೊಂಡಿದ್ದರೆ ಬಿಜೆಪಿ ಪೊಕ್ಸೋದಂತಹ ಗಂಭೀರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸದೆ ತನ್ನ ನೈತಿಕತೆ ಪ್ರದರ್ಶಿಸಲಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅತ್ಯಾಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ. ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ. ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ ಎಂದಿದ್ದಾರೆ. ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹೂ ಹಾರ ಹಾಕಿ ಸನ್ಮಾನಿಸಿದ್ದರು, ಉತ್ತರ ಪದೇಶ, ಕಾಶ್ಮೀರದಲ್ಲಿ ಅತ್ಯಾಚಾರಿಗಳ ಮೆರವಣಿಗೆಯನ್ನೇ ನಡೆಸಿದ್ದರು. ಈಗ “ಯುಪಿ ಮಾಡೆಲ್“ನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಪಾಲನೆ ಮಾಡುತ್ತಿದೆ, ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೊಕ್ಸೋ ಪ್ರಕರಣ ದಾಖಲಾಗಿ, ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಮಾನ್ಯ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ…
ಮಂಡ್ಯ: ನಾನು ಯಾವಾಗಲೂ ನಟ ದರ್ಶನ್ ಪರವಾಗಿಯೇ ಇದ್ದೇನೆ ಎಂದು ಹೇಳಿದ್ದಾರೆ. ನನ್ನ ಜೀವ ಇರೋವರೆಗೂ ದರ್ಶನ್ ನನ್ನ ಮನಗೇ ಎಂದು ಹೇಳಿದ್ದಾರೆ. ನಾನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಅವರಿಂದ ದರ್ಶನ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ದರ್ಶನ್ ಮುಂದೆ ಈಗ ಹಲವು ಸವಾಲುಗಳು ಇದ್ದಾವೆ. ಸದ್ಯ ಅವರಿಗೆ ಚಿಕಿತ್ಸೆ ಬೇಕು. ಆರೋಗ್ಯ ಸರಿಯಾಗಬೇಕು ಎಂದರು. ನಟ ದರ್ಶನ್ ಬೇಲ್ ಬಗ್ಗೆ ಲೀಗಲ್ ಛಾಲೆಂಜ್ ಇದೆ. ಅದನ್ನೆಲ್ಲ ದರ್ಶನ್ ಸರಿ ಮಾಡಿಕೊಂಡು ಹೊರಗೆ ಬರುತ್ತಾರೆ ಎಂಬ ಆಸೆ ಇದೆ. ನನ್ನ ನಿಲುವು ಏನು ಎಂಬುದನ್ನು ಈಗಾಗಲೇ ಸ್ಪಷ್ಟವಾಗೇ ತಿಳಿಸಿದ್ದೇನೆ. ನಮ್ಮ ಸಂಬಂಧ ಇನ್ಮುಂದೆಯೂ ಹೀಗೆ ಇರಲಿದೆ. ನನ್ನ ಲೈಫ್ ಇರೋವರೆಗೂ ದರ್ಶನ್ ನನ್ನ ಮಗನೇ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/karnatakas-pride-ksrtc-conferred-with-national-corporate-leadership-chanakya-award/ https://kannadanewsnow.com/kannada/sagar-town-police-arrest-two-cow-thieves-seize-car/
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆಯ ಸರಣಿ ಮುಂದುವರೆದಿದೆ. ಇದೀಗ ಕೆ ಎಸ್ ಆರ್ ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಹಂಚಿಕೊಂಡಿದ್ದು, ನಿಗಮಕ್ಕೆ, ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18ನೇ ವಿಶ್ಚ ಸಂವಹನ ಸಮ್ಮೇಳನ 2024 ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಯು ಲಭಿಸಿದೆ. ಕೆ ಎಸ್ ಆರ್ ಟಿ ಸಿ ಯ ಕಾರ್ಮಿಕ ಸ್ನೇಹಿ, ಪ್ರಯಾಣಿಕ ಸ್ನೇಹಿ ಉಪಕ್ರಮಗಳಿಗೆ ಹಾಗೂ ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್ ಕಾರ್ಯಕ್ಕೆ ಸದರಿ ಪ್ರಶಸ್ತಿಯು ಲಭಿಸಿರುತ್ತದೆ ಎಂದಿದೆ. ಶ್ರೀಪಾದ್ ಯೆಸ್ಸೋ ನಾಯ್ಕ್, ರಾಜ್ಯ ಸಚಿವರು, ಭಾರತ ಸರ್ಕಾರ, ಇಂಧನ, ನವೀನ ಮತ್ತು ನವೀಕರಿಸಿದ ಇಂಧನ ಸಚಿವಾಲಯ, ಮತ್ತು 2024ನೇ ವರ್ಷದ ಮಿಸ್ ಗ್ಲೋಬಲ್ ಇಂಡಿಯಾ ಸ್ವೀಸೆಲ್ ಮರಿಯಾ ಫುರ್ಥಾಡೋ, PRCI ರಾಷ್ಟ್ರೀಯ ಅಧ್ಯಕ್ಷೆ ಗೀತಾ ಶಂಕರ್ ಅವರು ಮಂಗಳೂರು…
ಮಂಡ್ಯ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಇದಕ್ಕಾಗಿ ಹೆಲ್ಪ್ ಲೈನ್ ನಂಬರ್ ಆರಂಭಿಸಿದೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಿಲ್ಲೆಯಾಧ್ಯಂತ ಕಾನೂನು ಬಾಹಿರವಾಗಿ ಇಸ್ಪಿಟ್, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟ ಮತ್ತು ಮದ್ಯ ಮಾರಾಟ ಮಾಡುವವರ ಮಾಹಿತಿಗಳನ್ನು ಸಾರ್ವಜನಿಕರು ನೀಡಲು ಹೆಲ್ಪ್ ಲೈನ್ ನಂಬರ್ ಆರಂಭಿಸಿರುವುದಾಗಿ ತಿಳಿಸಿದೆ. ಸಾರ್ವಜನಿಕರು ಜಿಲ್ಲಾ ಪೊಲೀಸ್ ಕಚೇರಿಯ 08232-227100 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸುವಂತೆ ಕೋರಿದ್ದಾರೆ. ಮಾಹಿತಿ ನೀಡುವವರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು ಎಂಬುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/whatever-the-problem-that-cannot-be-solved-clear-the-problem-if-the-field-keeper-tells-koragajja-the-problem/ https://kannadanewsnow.com/kannada/sagar-town-police-arrest-two-cow-thieves-seize-car/
ಜೀವನದಲ್ಲಿ ಔದ್ಯೋಗಿಕ ಶತ್ರುಗಳ ಸಮಸ್ಯೆ, ಆಸ್ತಿ ಪ್ರಕರಣ ಬಹಳ ದಿನಗಳಿಂದ ನಡೆಯುತ್ತಿರುವುದು, ಪತಿ-ಪತ್ನಿಯರ ನಡುವೆ ಒಗ್ಗಟ್ಟು ಇಲ್ಲದ ಪರಿಸ್ಥಿತಿ ಉಂಟಾಗುವುದು ಅಥವಾ ಕುಟುಂಬದಲ್ಲಿ ಇರಬಹುದಾದ ಇತರ ಬಂಧುಗಳಿಂದ ಸಮಸ್ಯೆಗಳು ಉಂಟಾಗುವುದು. ಅನೇಕ ಜನರು ತಮ್ಮ ಸಮಸ್ಯೆಗಳನ್ನು ಅನೇಕ ರೀತಿಯಲ್ಲಿ ಪೇರಿಸುತ್ತಾ ಹೋಗುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಸಮಸ್ಯೆಯನ್ನು ಪರಿಹರಿಸಲು, ನಾವು 18 ನೇ ಹಂತದಲ್ಲಿರುವ ಕಪ್ಪು ಮನುಷ್ಯನನ್ನು ಪೂಜಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸಂಡೂರು ಕ್ಷೇತ್ರದಲ್ಲಿ ಇಂದು ರೋಡ್ ಷೋದಲ್ಲಿ ಭಾಗವಹಿಸಿದ್ದ ಅವರು, ಸಿದ್ದರಾಮಯ್ಯನವರು ಮತ್ತು ಅವರ ಪತ್ನಿ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ ಎಂದು ವಿವರಿಸಿದರು. ಮೈಸೂರು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ಒತ್ತಾಯಿಸಿದ್ದೇವೆ. ಸಿಬಿಐ ತನಿಖೆಗೆ ವಹಿಸಿದ 24 ಗಂಟೆಗಳಲ್ಲಿ ಮುಖ್ಯಮಂತ್ರಿಯನ್ನು ಬಂಧನ ಮಾಡಿ ಜೈಲಿಗೆ ಕಳುಹಿಸುವುದು ನಿಶ್ಚಿತ ಎಂದು ಹೇಳಿದರು. ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಸಿದ್ದರಾಮಯ್ಯನವರೇ, ಇವತ್ತು ಜನ ಜಾಗೃತರಾಗಿದ್ದಾರೆ. ನಿಮ್ಮ ಮೋಸಕ್ಕೆ ಬಲಿ ಆಗುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ 3ಕ್ಕೆ 3 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರು ಹನುಮಂತು ಅವರ ಚಿಹ್ನೆ ಕಮಲದ ಹೂವಿನ ಗುರುತಿಗೆ ಮತ…
ಬೆಂಗಳೂರು: ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ಆರು ಟ್ರಿಪ್ಗಳಿಗೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07313/07314 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು (6 ಟ್ರಿಪ್ಗಳು) ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 9 ರಿಂದ 15, 2024 ರವರೆಗೆ (ನವೆಂಬರ್ 13 ಹೊರತುಪಡಿಸಿ) ಪ್ರತಿದಿನ ಸಂಜೆ 7:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 4:30 ಕ್ಕೆ ಪಂಢರಪುರವನ್ನು ತಲುಪಲಿದೆ. ವಾಪಸು ರೈಲು ಸಂಖ್ಯೆ 07314 ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 10 ರಿಂದ 16, 2024 ರವರೆಗೆ (ನವೆಂಬರ್ 14 ಹೊರತುಪಡಿಸಿ) ಪ್ರತಿದಿನ ಬೆಳಿಗ್ಗೆ 6:00 ಗಂಟೆಗೆ ಪಂಢರಪುರದಿಂದ ಹೊರಟು ಅದೇ ದಿನ ಸಂಜೆ 4:30…
ಶಿವಮೊಗ್ಗ: ಸಾಗರ ಟೌನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಈ ಕೃತ್ಯಕ್ಕೆ ಉಪಯೋಗಿಸಿದ 10,00,000/ರೂ ಮೌಲ್ಯದ ಟೊಯೋಟಾ ಫಾರ್ಚುನರ್ ಕಾರ್ ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ದಿನಾಂಕಃ-27/05/2024 ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣ ವರದಿಯಾಗಿರುತ್ತದೆ ಎಂದಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷರಾದಂತ ಅನಿಲ್ ಕುಮಾರ್ ಭೂಮ್ ರೆಡ್ಡಿ, ಕಾರಿಯಪ್ಪ ಸೂಚನೆಯ ಮೇರೆಗೆ ದನ ಕಳ್ಳತನ ಪ್ರಕರಣದ ಪತ್ತೆಗೆ ಇಳಿಯಲಾಗಿತ್ತು ಎಂದು ಹೇಳಿದ್ದಾರೆ. ಸಾಗರ ಡಿವೈಎಸ್ಪಿ ಗೋಪಾಲ ಕೃಷ್ಣ ಟಿ ನಾಯಕ್ ಮಾರ್ಗದರ್ಶನದಲ್ಲಿ, ಕಾರ್ಗಲ್ ವೃತ್ತ ಪೊಲೀಸ್ ಇಸ್ ಪೆಕ್ಟರ್ ಸಂತೋಷ್ ಶೆಟ್ಟಿ, ಪಿಎಸ್ಐ ಯಲ್ಲಪ್ಪ ಟಿ ಹಿರೇಗಣ್ಣನ್ನನವರ್, ನಾಗರಾಜ ಟಿ ಎಂ…