Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅವರಿಗೆ ಯಾವುದೇ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಗಂಭೀರ ಆರೋಪ ಮಾಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಬೃಹತ್ ಕೈಗಾರಿಕಾ ಸಚಿವರಾಗಿ ರಾಜ್ಯದಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿದ್ದಾರೆ. ಆದರೆ, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೀಗಾದರೆ ಕೈಗಾರಿಕೆಗಳನ್ನು ತರಲು ಎಲ್ಲಿ ಸಾಧ್ಯ ಎಂದು ಪ್ರಶ್ನಿಸಿದರು. ಮಂಡ್ಯ ಜಿಲ್ಲೆಯ ಜನತೆಯ ಆಶೀರ್ವಾದದಿಂದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ತಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಮುಂದಾಗಿರುವ ಕುಮಾರಸ್ವಾಮಿ ಅವರು ಒಂದೇ ಬಾರಿಗೆ ರಾಜ್ಯಕ್ಕೆ 4500 ವಿದ್ಯುತ್ ಚಾಲಿತ ಬಸ್ ಗಳನ್ನು ನೀಡಿದರು. ಆದರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ಅಭಿನಂದನೆ ಸಲ್ಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಬೇರೆ ರಾಜ್ಯಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ…
ನವದೆಹಲಿ: ಶನಿವಾರ (ನವೆಂಬರ್ 15) ಎಲ್ಲಾ 10 ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League – IPL) ತಂಡಗಳು ಡಿಸೆಂಬರ್ 2025 ರಲ್ಲಿ ನಡೆಯಲಿರುವ ಐಪಿಎಲ್ 2026 ಹರಾಜಿಗೆ ಮುಂಚಿತವಾಗಿ ಬಿಡುಗಡೆ ಮಾಡುತ್ತಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. ಒಟ್ಟು 73 ಆಟಗಾರರನ್ನು ಅವರ ಐಪಿಎಲ್ 2025 ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ ಮತ್ತು ಐಪಿಎಲ್ 2026 ಹರಾಜಿಗೆ ಮುಂಚಿತವಾಗಿ 10 ಆಟಗಾರರನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಐಪಿಎಲ್ 2026 ಹರಾಜಿಗೆ ಮುಂಚಿತವಾಗಿ 10 ಐಪಿಎಲ್ ತಂಡಗಳು ಬಿಡುಗಡೆ ಮಾಡಿದ ಆಟಗಾರರ ಪೂರ್ಣ ಪಟ್ಟಿ ಚೆನ್ನೈ ಸೂಪರ್ ಕಿಂಗ್ಸ್ ಭಾರತೀಯರು (7): ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವಿಜಯ್ ಶಂಕರ್, ಕಮಲೇಶ್ ನಾಗರಕೋಟಿ, ಆಂಡ್ರೆ ಸಿದ್ದಾರ್ಥ್, ಶೇಕ್ ರಶೀದ್, ವಂಶ್ ಬೇಡಿ (WK) ಸಾಗರೋತ್ತರ (3): ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಮಥೀಶ ಪತಿರಾನ ವ್ಯಾಪಾರ (2): ರವೀಂದ್ರ ಜಡೇಜಾ (RR ಗೆ), ಸ್ಯಾಮ್ ಕುರಾನ್ (RR ಗೆ) ನಿವೃತ್ತ (1): ರವಿಚಂದ್ರನ್ ಅಶ್ವಿನ್…
ನವದೆಹಲಿ: ಐಪಿಎಲ್ 2026 ರ ಹರಾಜಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಜನನಿಬಿಡ ಫ್ರಾಂಚೈಸಿಯಾಗಿತ್ತು. ನವೆಂಬರ್ 15 ರಂದು ಉಳಿಸಿಕೊಳ್ಳುವ ಗಡುವು ಮುಗಿಯುವ ಮೊದಲೇ, ಐದು ಬಾರಿಯ ಚಾಂಪಿಯನ್ಗಳು ಸಂಜು ಸ್ಯಾಮ್ಸನ್ ಅವರನ್ನು ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಬದಲಿಗೆ ವಿನಿಮಯ ಮಾಡಿಕೊಂಡರು. ಸೂಪರ್ ಕಿಂಗ್ಸ್ 2026 ರ ಋತುವಿಗಾಗಿ ತಮ್ಮ ತಂಡವನ್ನು ನಿರ್ಮಿಸಲು ನೋಡುತ್ತಿರುವಾಗ 11 ಆಟಗಾರರನ್ನು ಬಿಡುಗಡೆ ಮಾಡಿದೆ, ಮುಖ್ಯವಾಗಿ ಕ್ಲೀನ್ ಸ್ಲೇಟ್ನಿಂದ. ಸ್ಯಾಮ್ಸನ್ ಅವರನ್ನು ಬದಲಾಯಿಸಿದ ನಂತರ, CSK ನಾಯಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಆಯ್ಕೆಗಳನ್ನು ಹೊಂದಬಹುದಿತ್ತು. ಏತನ್ಮಧ್ಯೆ, ಸೂಪರ್ ಕಿಂಗ್ಸ್ ಟೂರ್ನಮೆಂಟ್ನ ಮುಂದಿನ ಋತುವಿಗೆ ಮುಂಚಿತವಾಗಿ ರುತುರಾಜ್ ಗೈಕ್ವಾಡ್ ಅವರನ್ನು ತಮ್ಮ ನಾಯಕನನ್ನಾಗಿ ದೃಢಪಡಿಸಿದೆ. ಫ್ರಾಂಚೈಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಈ ಬೆಳವಣಿಗೆಯನ್ನು ದೃಢಪಡಿಸಿದೆ. “ದಾರಿ ತೋರಿಸಿ, ಕ್ಯಾಪ್ಟನ್ ರುತುರಾಜ್ ಗೈಕ್ವಾಡ್,” CSK X ನಲ್ಲಿ ಪೋಸ್ಟ್ನಲ್ಲಿ ಬರೆದಿದೆ. https://twitter.com/ChennaiIPL/status/1989668465331114464 ಏತನ್ಮಧ್ಯೆ, ಸಿಎಸ್ಕೆ ಸಿಇಒ ಕೆ.ಎಸ್. ವಿಶ್ವನಾಥನ್ ಅವರು ಸ್ಯಾಮ್ಸನ್, ಜಡೇಜಾ ಮತ್ತು…
ಬೆಂಗಳೂರು: ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್ ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು ಕ್ಷಿಪ್ರಗತಿಯಲ್ಲಿ ಇಷ್ಟೊಂದು ಅಗಾಧ ಬಂಡವಾಳ ಹೂಡಿ, ಈ ಆಧುನಿಕ ಕೇಂದ್ರವನ್ನು ಸ್ಥಾಪಿಸಿರುವುದು ಮಾದರಿಯಾಗಿದೆ ಎಂದಿದ್ದಾರೆ. ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ನಾವೀನ್ಯತೆ ಮತ್ತು ತಂತ್ರಜ್ಞಾನ ಆಧಾರಿತ ಉದ್ಯಮ ಕೇಂದ್ರವಾಗಿದೆ. ಇಲ್ಲಿ ಹೊಸಹೊಸ ಔದ್ಯಮಿಕ ಕಲ್ಪನೆಗಳು ಮತ್ತು ಸಂಶೋಧನೆ ಜೊತೆಗೂಡಲಿವೆ. ಅಂತಿಮವಾಗಿ ಇದು ಕೈಗಾರಿಕಾ ಅಭಿವೃದ್ಧಿಯ ಹೆದ್ದಾರಿಯನ್ನು ಸೃಷ್ಟಿಸಲಿವೆ ಎಂದು ಅವರು ಬಣ್ಣಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜಪಾನಿನ ಕಂಪನಿಯೊಂದು ಮಾಡಿರುವ ಬೃಹತ್ ಹೂಡಿಕೆ ಇದಾಗಿದೆ.…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರ ರಾಜ್ಯದಲ್ಲಿ ಎನ್ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಿನ್ನೆ ಬಿಹಾರ ರಾಜ್ಯದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ- ಜೆಡಿಯು ಒಳಗೊಂಡ ಎನ್ಡಿಎ ಕೂಟ ಪ್ರಚಂಡ ಜಯಭೇರಿ ಬಾರಿಸಿದೆ ಎಂದು ವಿಶ್ಲೇಷಿಸಿದರು. ನರೇಂದ್ರ ಮೋದಿಜೀ ಅವರ ಜನಪ್ರಿಯತೆ, ಬಿಹಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನೋಡಿ ಬಿಹಾರ ರಾಜ್ಯದ ಮತದಾರರು ಮತ್ತೊಮ್ಮೆ ಎನ್ಡಿಎ ಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು. ಚುನಾವಣಾ ಚಾಣಕ್ಯ ಅಮಿತ್ ಶಾ ಜೀ ಅವರ ಕಾರ್ಯತಂತ್ರ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೀ ಅವರ ನೇತೃತ್ವ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಪ್ರಯತ್ನ, ಎರಡೂ ಪಕ್ಷಗಳ ಕಾರ್ಯಕರ್ತರ ಪರಿಶ್ರಮ- ಇದೆಲ್ಲದರ ಪರಿಣಾಮವಾಗಿ ಒಂದು ಐತಿಹಾಸಿಕ ಗೆಲುವು ದಾಖಲಾಗಿದೆ ಎಂದು ವಿವರಿಸಿದರು. ರಾಹುಲ್ ಗಾಂಧಿಯವರು ಮತಗಳ್ಳತನದ ಕುರಿತು ಬಿಹಾರ ರಾಜ್ಯದ…
ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಇಂದಿಗೆ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ. ಈ ಸಂದರ್ಭದಲ್ಲಿ ಜಗನ್ನಾಥ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಗೌರವಿಸಿ ಶುಭಕೋರಲಾಯಿತು. ಬಿ.ವೈ. ವಿಜಯೇಂದ್ರ ಅವರು ತಮ್ಮ ಅಧ್ಯಕ್ಷತೆಯ ಜವಾಬ್ದಾರಿಯನ್ನು ಬೂತ್ ಅಧ್ಯಕ್ಷರ ಮನೆಗೆ ಭೇಟಿ ಪ್ರಾರಂಭಿಸಿದ್ದರು. ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕಳೆದ 2ವರ್ಷಗಳಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಈಗಾಗಲೇ ಭೇಟಿ ನೀಡಿರುತ್ತಾರೆ. ಅವರ ನೇತೃತ್ವದಲ್ಲಿ ಕೈಗೊಂಡ ಮೈಸೂರು ಮುಡಾ ಹಗರಣದ ಪಾದಯಾತ್ರೆ, ವಾಲ್ಮೀಕಿ ಹಗರಣ ಕುರಿತಾದ ಹೋರಾಟ, ಬೆಲೆ ಏರಿಕೆ ಖಂಡಿಸಿ ನಡೆಸಿದ ಅಹೋರಾತ್ರಿ ಧರಣಿ, ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಕೈಗೊಂಡ ಜನಾಕ್ರೋಶ ಯಾತ್ರೆ, ಕಬ್ಬು ಬೆಳೆಗಾರರ ಹೋರಾಟ, ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದ ದುರ್ಬಳಕೆಯ ವಿರುದ್ಧ ಹೋರಾಟ, ರಾಜ್ಯ ಸರ್ಕಾರದ ಶೂನ್ಯ ಅಭಿವೃದ್ಧಿಯ ವಿರುದ್ಧ ನಡೆಸಿದ ಹೋರಾಟಗಳ…
ನವದೆಹಲಿ: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನಲ್ಲಿ ಮೊದಲ ಬಾರಿ ಗೆದ್ದಿದ್ದ ತಮ್ಮ ತಂಡದ ಪ್ರಮುಖ ಆಟಗಾರರ ಪೈಕಿ ಹೆಚ್ಚಿನವರನ್ನು ಮಿನಿ ಹರಾಜಿನ ಮೊದಲು ಉಳಿಸಿಕೊಂಡಿದೆ. ಆರ್ಸಿಬಿ 17 ಆಟಗಾರರನ್ನು ಉಳಿಸಿಕೊಂಡಿದ್ದು, ನವೆಂಬರ್ 15 ರಂದು ಎಂಟು ಆಟಗಾರರನ್ನು ಉಳಿಸಿಕೊಂಡಿದೆ. 2025 ರ ಹರಾಜಿನಲ್ಲಿ 8.75 ಕೋಟಿ ರೂ.ಗೆ ಆಯ್ಕೆಯಾದ ಇಂಗ್ಲೆಂಡ್ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಮತ್ತು 1 ಕೋಟಿ ರೂ.ಗೆ ಆಯ್ಕೆಯಾದ ಲುಂಗಿ ಎನ್ಗಿಡಿ ಪ್ರಮುಖ ಆಟಗಾರರಾಗಿದ್ದಾರೆ. ಬಿಡುಗಡೆಯಾದ ಇತರ ಆಟಗಾರರು ಮಾಯಾಂಕ್ ಅಗರ್ವಾಲ್, ಸ್ವಸ್ತಿಕ್ ಚಿಕಾರ, ಟಿಮ್ ಸೀಫರ್ಟ್, ಮನೋಜ್ ಭಂಡಗೆ, ಬ್ಲೆಸ್ಸಿಂಗ್ ಮುಜರಬಾನಿ ಮತ್ತು ಮೋಹಿತ್ ರಾಥೀ. ಆರ್ಸಿಬಿ ಎಂಟು ಆಟಗಾರರನ್ನು ಬಿಡುಗಡೆ ಮಾಡಿದ್ದರೂ, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಮುಂತಾದ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿದೆ. ಹಾಲಿ ಚಾಂಪಿಯನ್ಗಳು ಹರಾಜಿನಲ್ಲಿ 16.4 ಕೋಟಿ ರೂ.ಗಳೊಂದಿಗೆ ಭಾಗವಹಿಸುತ್ತಾರೆ. RCB ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ಲಿಯಾಮ್ ಲಿವಿಂಗ್ಸ್ಟೋನ್, ಲುಂಗಿ…
ಮಂಡ್ಯ: ರಾಜ್ಯದಲ್ಲಿ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸುವಂತಿಲ್ಲ. ಬದಲಾಗಿ ಪರಿಸರ ಸ್ನೇಹಿಯಾದಂತ ವಸ್ತುಗಳನ್ನು ಬಳಕೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಆದರೇ ಸರ್ಕಾರದ ಆದೇಶಕ್ಕೆ ಅಧಿಕಾರಿಗಳು ಡೋಂಟ್ ಕೇರ್ ಎನ್ನುವಂತೆ ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಿರುವುದು ಕಂಡು ಬಂದಿದೆ. ಹೌದು ಮಂಡ್ಯದ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟೆಲ್ ಬಳಕೆ ಮಾಡಲಾಗಿದೆ. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆಯುತ್ತಿರುವ ಸಭೆ ಇದಾಗಿದೆ. ಮದ್ದೂರು ಶಾಸಕ ಕೆ.ಎಂ.ಉದಯ್ ಹಾಗೂ ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಅವರ ನೇತೃತ್ವದಲ್ಲಿ ನಡೆದಂತ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಲಾಗಿದೆ. ಸರ್ಕಾರಿ ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿರುವ ಸರ್ಕಾರ ಆದೇಶಿಸಿತ್ತು. ಇದೀಗ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಅಧಿಕಾರಿಗಳು ಸರ್ಕಾರಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಳಕೆ ಮಾಡಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/ https://kannadanewsnow.com/kannada/114-trees-will-be-planted-at-114-places-in-honor-of-the-tree-of-the-same-name-minister-ishwar-khandre/
ಬೆಂಗಳೂರು : 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು. ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು. https://kannadanewsnow.com/kannada/19-deer-die-in-belgaum-zoo-minister-ishwar-khandre-orders-investigation/…
ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/…














