Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಹೊಸ ಅಂತರರಾಷ್ಟ್ರೀಯ ಪ್ಯಾಕ್ಗಳನ್ನು ಘೋಷಿಸಿದೆ. ನಿರ್ದಿಷ್ಟ ದೇಶಗಳಿಗೆ ಅನ್ವಯಿಸುವಂತೆ ₹39 ರಿಂದ ಆರಂಭವಾಗುವ ಪ್ರೀ-ಪೇಯ್ಡ್ ಮತ್ತು ಪೋಸ್ಟ್-ಪೇಯ್ಡ್ನ ಹೊಸ ಐಎಸ್ಡಿ ಪ್ಯಾಕ್ಗಳನ್ನು ನೀಡಿದೆ. ಈ ಎಲ್ಲಾ ಯೋಜನೆಗಳು 7 ದಿನಗಳ ವ್ಯಾಲಿಡಿಟಿ ಹೊಂದಿರಲಿವೆ. ಯುಎಸ್ಎ ಮತ್ತು ಕೆನಡಾ ದೇಶಗಳಿಗೆ ₹39 ದರದ ಐಎಸ್ಡಿ 7 ದಿನಗಳ ವ್ಯಾಲಿಡಿಟಿಯ ಪ್ಲಾನ್ ನೀಡಿದೆ. ಈ ಪ್ಲಾನ್ನಲ್ಲಿ ಗ್ರಾಹಕರು 30 ನಿಮಿಷಗಳ ಕರೆ ಸೌಲಭ್ಯ ಇರಲಿದೆ. ಅದೇ ರೀತಿ ಯುಎಇ, ಸೌದಿ ಅರೇಬಿಯಾ, ಕುವೈತ್, ಟರ್ಕಿ ಮತ್ತು ಬಹ್ರೇನ್ ದೇಶಗಳಿಗೆ ₹99ರ ಪ್ಲಾನ್ನಲ್ಲಿ 10 ನಿಮಿಷಗಳ ಕರೆ ಸೌಲಭ್ಯ ಲಭ್ಯ. ಸಿಂಗಪುರ, ಥಾಯ್ಲೆಂಡ್, ಮಲೇಷ್ಯಾ ಮತ್ತು ಹಾಂಗ್ಕಾಂಗ್ಗೆ ಕರೆ ಮಾಡುವವರಿಗೆ 15 ನಿಮಿಷಗಳ ಕರೆ ಸೌಲಭ್ಯ ಇರುವ ₹59 ರ ಯೋಜನೆ ನೀಡಲಾಗಿದೆ. ಚೀನಾ, ಜಪಾನ್, ಬೂತಾನ್ಗೆ 15 ನಿಮಿಷಗಳ ಕರೆ ಸೌಲಭ್ಯದ ₹89ರ ಪ್ಲಾನ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಗೆ ₹69 ರ ಬೆಲೆಯ 15 ನಿಮಿಷಗಳ…
ಸೂರತ್: ಟಾಟಾ ಸಮೂಹದ ದೊರೆ ರತನ್ ಟಾಟಾ ಇನ್ನಿಲ್ಲವಾಗಿದ್ದಾರೆ. ಅವರ ಮಾತು, ಚಿಂತನೆ, ಸರಳ ನಡೆಯ ವೀಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದಾವೆ. ಈ ನಡುವೆ 11,000 ವಜ್ರಗಳನ್ನು ಬಳಸಿ ರತನ್ ಟಾಟಾ ಅವರ ಭಾವಚಿತ್ರವನ್ನು ನಿರ್ಮಿಸಿದಂತ ಕುಶಲ ಕಲೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೂರತ್ ನ ಉದ್ಯಮಿಯೊಬ್ಬರು ಟಾಟಾ ಸನ್ಸ್ ನ ದಿವಂಗತ ಅಧ್ಯಕ್ಷ ರತನ್ ಟಾಟಾ ಅವರ ಭಾವಚಿತ್ರವನ್ನು ರಚಿಸಿದ್ದಾರೆ. ಸ್ಥಳೀಯ ವ್ಯಾಪಾರಿಯೊಬ್ಬರು 11,000 ಅಮೆರಿಕನ್ ವಜ್ರಗಳನ್ನು ಬಳಸಿಕೊಂಡು ಪೂಜ್ಯ ನಾಯಕನ ಸಂಕೀರ್ಣ ಭಾವಚಿತ್ರವನ್ನು ರಚಿಸಿದರು. ಭಾರತೀಯ ಕಾರ್ಪೊರೇಟ್ ಭೂದೃಶ್ಯವನ್ನು ರೂಪಿಸಿದ ಮತ್ತು ದೇಶದ ಅಭಿವೃದ್ಧಿಯ ಮೇಲೆ ಶಾಶ್ವತ ಛಾಪು ಮೂಡಿಸಿದ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷರಾಗಿ ಟಾಟಾ ಅವರ ಪರಂಪರೆಯನ್ನು ಈ ಭಾವಚಿತ್ರವು ಗೌರವಿಸುತ್ತದೆ. https://twitter.com/T_Investor_/status/1845143329693929730 ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾದ ರತನ್ ಟಾಟಾ ಅವರ ನಿಧನಕ್ಕೆ ರಾಷ್ಟ್ರವು ಶೋಕಿಸುತ್ತಿರುವ ಸಮಯದಲ್ಲಿ ಈ ಗೌರವ ಬಂದಿದೆ. ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ನಾಳೆಗೆ ಕಾಯ್ದಿರಿಸಿತ್ತು. ಇದೀಗ ನಾಳೆ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ನಾಳೆಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಇದಲ್ಲದೇ ಎ.1 ಆರೋಪಿ ಪವಿತ್ರಾ ಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಅರ್ಜಿಯನ್ನು ಕೂಡ ನಾಳೆ ನ್ಯಾಯಾಲಯ ನಡೆಸಲಿದೆ. ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯದೇ ಇದ್ದರೇ, ಹೈಕೋರ್ಟ್ ಮೊರೆ ಹೋಗುವಂತ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಾಳೆ…
ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯ ಹೆಚ್ಚಾಗಿದೆ. ಬಿಜೆಪಿಯವರು ಇಂದು, ನಾಳೆ, ದಸರಾ ಮುಗಿದ ನಂತ್ರ, ಅಧಿವೇಶನ ನಡೆಯೋ ಮೊದಲೇ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿಯುತ್ತಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ಭವಿಷ್ಯದ ಮುಂದಿನ ಮುಖ್ಯಮಂತ್ರಿಗಳು ಎಂಬುದಾಗಿ ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಸಿಎಂ ಸಿದ್ಧರಾಮಯ್ಯ ಅವರು ಬೆಳಗಾವಿ ಭೇಟಿಯ ಸಂದರ್ಭದಲ್ಲೇ ಬೆಳಗಾವಿಯ ರಸ್ತೆಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭವಿಷ್ಯದ ಮುಂದಿನ ಮುಖ್ಯಮಂತ್ರಿ ಎನ್ನುವಂತ ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸಿ, ಕುತೂಹಲ ಕೆರಳಿಸಿದವು. ಒಂದೆಡೆ ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂಬುದಾಗಿಯೇ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. ಮತ್ತೊಂದೆಡೆ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಅವರೇ ಮುಖ್ಯಮಂತ್ರಿ ಎಂಬ ಫ್ಲೆಕ್ಸ್, ಬ್ಯಾನರ್ ರಾರಾಜಿಸಿದ್ದು ಹಲವು ಕುತೂಹಲ, ಅನುಮಾನಗಳಿಗೂ ಕಾರಣವಾಗಿದೆ. ಇವುಗಳ್ನು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಮುಖಂಡರು ಕಟ್ಟಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/mahela-jayawardene-reappointed-head-coach-of-mumbai-indians/ https://kannadanewsnow.com/kannada/baba-siddique-murder-case-one-suspect-remanded-to-police-custody-other-to-undergo-age-test/ https://kannadanewsnow.com/kannada/savadatti-development-season-begins-minister-lakshmi-hebbalkar/
ಬೆಳಗಾವಿ : ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ. ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, ಕಾಯಕವೇ ಕೈಲಾಸ ಎನ್ನುವ ತತ್ವ ಅಳವಡಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಕಳೆದ 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲದೆ ರಾಜ್ಯದ ಸೇವೆ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು. ನಮ್ಮ ಸರಕಾರ ಕೊಟ್ಟ ಭಾಷೆಯಂತೆ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಆರೋಪಗಳು ಅಪ್ರಸ್ತುತ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವರು ಈಗಾಗಲೇ ಸಂಕಲ್ಪ ಮಾಡಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಭಕ್ತರಿಗೆ…
ಬೆಳಗಾವಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ವತಿಯಿಂದ 25 ಕೋಟಿ ರೂಪಾಯಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಪ್ರಥಮ ಸಭೆಯಲ್ಲಿ ಮಾತನಾಡಿದ ಸಚಿವರು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕೆಂದು ಹೇಳಿದರು. ಭಕ್ತಾಧಿಗಳು ಪಡ್ಡಲಗಿ ತುಂಬಿಸಿ ಜೋಗತಿಯರಿಗೆ ನೈವೇದ್ಯ ಸಮರ್ಪಿಸುತ್ತಾರೆ. ಜನಸಂದಣಿ ಹೆಚ್ಚಾಗಿರುವಾಗ ದರ್ಶನ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ್, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ್ ಪಾಟೀಲ, ಆಸಿಫ್(ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹುಬ್ಬಳ್ಳಿಯ ಗಲಬೆ ಕೇಸ್ ಹಿಂಪಡೆದಂತ ವಿಚಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಇಳಿದಿದೆ. ಈ ಹೊತ್ತಿನಲ್ಲೇ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಐದು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತಂತೆ ರಮೇಶ್ ಬಾಬು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ವಿಧಾನ ಮಂಡಲದ ಅವಳಿ ಜವಳಿ ವಿರೋಧ ಪಕ್ಷದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಮೇಲೆ ಅನೇಕ ಪ್ರಶ್ನೆಗಳನ್ನು ಎತ್ತಿದ್ದಾರೆ. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರದಂತ ಆರ್.ಅಶೋಕ್ ಮತ್ತು ವಿಧಾನ ಪರಿಷತ್ತಿನ ನಾಯಕರಾದಂತ ಛಲವಾದಿ ನಾರಾಯಣಸ್ವಾಮಿ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು 5 ಪ್ರಶ್ನೆಗಳನ್ನು ಇಡಲು ಬಯಸುತ್ತೇನೆ ಎಂದಿದ್ದಾರೆ. ಈ ಇಬ್ಬರು ನಾಯಕರು ಸೈದಾಂತಿಕವಾಗಿ ತಮ್ಮ ವೈಫಲ್ಯವನ್ನು ಕಂಡಿದ್ದು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಮೇಲೆ,…
ನವದೆಹಲಿ: ಐಪಿಎಲ್ 2025 ಕ್ಕೆ ಮುಂಚಿತವಾಗಿ ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ ಬದಲಿಗೆ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ಕೋಚಿಂಗ್ ಸಿಬ್ಬಂದಿಯ ಚುಕ್ಕಾಣಿಗೆ ಮರಳಿ ಕರೆತರಲಾಗಿದೆ. ಬೌಷರ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ 2024ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಜಯವರ್ಧನೆ ಈ ಹಿಂದೆ 2017 ರಿಂದ 2022 ರವರೆಗೆ ಮುಂಬೈ ಇಂಡಿಯನ್ಸ್ನಲ್ಲಿ ಮುಖ್ಯ ಕೋಚ್ ಪಾತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. “ಎಂಐ ಕುಟುಂಬದೊಳಗಿನ ನನ್ನ ಪ್ರಯಾಣವು ಯಾವಾಗಲೂ ವಿಕಸನದಿಂದ ಕೂಡಿದೆ. 2017 ರಲ್ಲಿ, ಅತ್ಯುತ್ತಮ ಕ್ರಿಕೆಟ್ ಆಡಲು ಪ್ರತಿಭಾವಂತ ವ್ಯಕ್ತಿಗಳ ಗುಂಪನ್ನು ಒಟ್ಟುಗೂಡಿಸುವತ್ತ ಗಮನ ಹರಿಸಲಾಯಿತು ಮತ್ತು ನಾವು ಉತ್ತಮವಾಗಿ ಆಡಿದ್ದೇವೆ”ಎಂದು ಜಯವರ್ಧನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗ ಇತಿಹಾಸದ ಅದೇ ಕ್ಷಣದಲ್ಲಿ, ನಾವು ಭವಿಷ್ಯವನ್ನು ಎದುರು ನೋಡುತ್ತಿದ್ದೇವೆ ಮತ್ತು ಎಂಐನ ಪ್ರೀತಿಯನ್ನು ಮತ್ತಷ್ಟು ಬಲಪಡಿಸಲು, ಮಾಲೀಕರ ದೃಷ್ಟಿಕೋನವನ್ನು ನಿರ್ಮಿಸಲು ಮತ್ತು ಮುಂಬೈ ಇಂಡಿಯನ್ಸ್ ಇತಿಹಾಸಕ್ಕೆ ಸೇರಿಸುವುದನ್ನು ಮುಂದುವರಿಸುವ ಅವಕಾಶವನ್ನು…
ಮುಂಬೈ: ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಇಬ್ಬರು ಶಂಕಿತ ಆರೋಪಿಗಳನ್ನು ಇಂದು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಒಬ್ಬ ಶಂಕಿತ ಗುರ್ಮೈಲ್ ಸಿಂಗ್ ನನ್ನು ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದರೆ. ಇನ್ನೊಬ್ಬ ಆರೋಪಿ ಧರ್ಮರಾಜ್ ಕಶ್ಯಪ್ ನನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಕಳುಹಿಸಲಿಲ್ಲ. ಕಶ್ಯಪ್ ಅವರ ವಯಸ್ಸನ್ನು ನಿರ್ಧರಿಸಲು ಆಸಿಫಿಕೇಶನ್ ಪರೀಕ್ಷೆಯ ನಂತರ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶಿಸಿತು. https://kannadanewsnow.com/kannada/did-the-bjp-government-not-withdraw-cases-against-activists-rss-bajrang-dal/ https://kannadanewsnow.com/kannada/good-news-for-muzrai-department-temple-priests-from-state-government/
ಮೈಸೂರು: “ಬಿಜೆಪಿ ಸರ್ಕಾರ ಈ ಹಿಂದೆ ತನ್ನ ಪಕ್ಷದ ಕಾರ್ಯಕರ್ತರು, ಆರ್ ಎಸ್ ಎಸ್, ಭಜರಂಗದಳದವರ ಮೇಲಿದ್ದ ಅನೇಕ ಪ್ರಕರಣಗಳನ್ನು ವಾಪಾಸ್ ಪಡೆದಿತ್ತು. ರಾಜಕೀಯ ಕಾರಣಕ್ಕೆ ಹಳೇ ಹುಬ್ಬಳ್ಳಿ ಪ್ರಕರಣದ ಕುರಿತು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಾಸ್ ಪಡೆದಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದ ಅವರು “ಬಿಜೆಪಿ ಕಾಲದಲ್ಲಿ ಎಷ್ಟು ಕೇಸ್ ಗಳನ್ನು ವಾಪಾಸ್ ಪಡೆಯಲಾಗಿತ್ತು ಎನ್ನುವ ಬಗ್ಗೆ ತಿಳಿದಿದೆಯೇ? ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ” ಎಂದು ಹೇಳಿದರು. ತನಿಖೆ ನಡೆಸಿದ್ದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಇದು ಸುಳ್ಳೇ ಎಂದು ಕೇಳಿದಾಗ “ರಾಜಕೀಯ ಒತ್ತಡಗಳಿಗೆ ಈ ರೀತಿ ಆಗಿರುತ್ತದೆ. ಪ್ರಕರಣ ದಾಖಲಾಗಿದ್ದವರದ್ದು ಯಾವುದೇ ತಪ್ಪಿಲ್ಲ ಎಂದು ಸಾಬೀತಾಗಿದೆ. ನಾವು ನ್ಯಾಯವನ್ನು ಒದಗಿಸಿಕೊಡುವ ಕೆಲಸ ಮಾಡುತ್ತಿದ್ದೇವೆ. ಇತರೇ ವಿಚಾರಗಳ ಬಗ್ಗೆ ಆನಂತರ ಮಾತನಾಡೋಣ” ಎಂದರು. ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಕ್ಷ ಎನ್ನುವ…