Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸಲ್ಮಾನ್ ರಶ್ದಿ ಅವರ ವಿವಾದಾತ್ಮಕ ಕಾದಂಬರಿ ದಿ ಸೈಟಾನಿಕ್ ವರ್ಸಸ್ ಮೇಲೆ 36 ವರ್ಷಗಳ ಹಿಂದಿನ ಆಮದು ನಿಷೇಧವನ್ನು ದೆಹಲಿ ಹೈಕೋರ್ಟ್ ತೆಗೆದುಹಾಕಿದೆ. ಅದರ ಆಮದನ್ನು ನಿಷೇಧಿಸುವ ಕಸ್ಟಮ್ಸ್ ಅಧಿಸೂಚನೆಯನ್ನು ಕಂಡುಹಿಡಿಯಲು ಸಾಧ್ಯವಾಗಲಿಲ್ಲ ಎಂದು ತೀರ್ಪು ನೀಡಿದೆ. 1988ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರ ಈ ಪುಸ್ತಕವನ್ನು ನಿಷೇಧಿಸಿತ್ತು. ನವೆಂಬರ್ 5 ರಂದು, ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯು ಅಧಿಸೂಚನೆಯನ್ನು ಇನ್ನು ಮುಂದೆ ಕಂಡುಹಿಡಿಯಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡ ನಂತರ ನಿಷೇಧದ ಸಿಂಧುತ್ವವನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತು. ಅಧಿಸೂಚನೆಯ ಅನುಪಸ್ಥಿತಿಯಲ್ಲಿ, ಅದು ಅಸ್ತಿತ್ವದಲ್ಲಿಲ್ಲ ಎಂದು ಭಾವಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ಆಯ್ಕೆಯಿಲ್ಲ ಎಂದು ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ರೇಖಾ ಪಲ್ಲಿ ಮತ್ತು ನ್ಯಾಯಮೂರ್ತಿ ಸೌರಭ್ ಬ್ಯಾನರ್ಜಿ ಘೋಷಿಸಿದರು. ಇದರ ಪರಿಣಾಮವಾಗಿ, 2019 ರಲ್ಲಿ ಸಾಂದೀಪನ್ ಖಾನ್ ಸಲ್ಲಿಸಿದ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು “ನಿಷ್ಪ್ರಯೋಜಕ” ಎಂದು ಪರಿಗಣಿಸಲಾಯಿತು. ದಿ ಸೈಟಾನಿಕ್ ವರ್ಸಸ್ ಮೇಲಿನ ಆಮದು ನಿಷೇಧವು ಪುಸ್ತಕದ…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಎಂಬಿಬಿಎಸ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವೇ ಮೊದಲ ವರ್ಷದ ಶುಲ್ಕವಾಗಿರುವಂತ 25 ಲಕ್ಷವನ್ನು ಭರಿಸಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ₹25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1854525226207641775 https://kannadanewsnow.com/kannada/save-your-life-from-heart-attack-keep-this-7-rupees-ram-kit/ https://kannadanewsnow.com/kannada/breaking-liquor-sale-to-be-closed-across-the-state-on-november-20-president-guruswamy/
ನಿತ್ಯವೂ ಇದನ್ನು ಮಾಡಿದರೆ ಸಾಕು, ಬಗೆಹರಿಯದ ದುಃಖಗಳನ್ನೆಲ್ಲ ಪರಿಹರಿಸುವ ಕುಲದೇವತೆ ಸದಾ ನಿಮ್ಮೊಂದಿಗೆ ಇರುತ್ತದೆ. ಎಷ್ಟೇ ಜನ ಮಗುವಿನ ಲಾಲನೆ ಪಾಲನೆ ಮಾಡಿದರೂ ತಾಯಿಯನ್ನು ನೋಡಿಕೊಂಡಂತೆ ಆಗುವುದಿಲ್ಲ ಎನ್ನುತ್ತಾರೆ. ಕುಟುಂಬ ದೇವತೆಯ ಆರಾಧನೆಯ ವಿಷಯವೂ ಇದೇ ಆಗಿದೆ. ನಾವು ಎಷ್ಟೇ ಸಾವಿರ ದೇವರನ್ನು ಪೂಜಿಸಿದರೂ ನಮಗೆ ಕಷ್ಟ ಬಂದಾಗ ಮೊದಲು ಬಂದು ಸಹಾಯ ಮಾಡುವವರು ನಮ್ಮ ಕುಲದೇವರು. ಕುಲದೇವತೆಯಲ್ಲಿ ಹೃದಯ ಕರಗಿ ನಿಂತರೆ ಇತರ ದೇವತೆಗಳು ಕೇಳಿ ಪಡೆಯದ ವರಗಳೂ ತಾನಾಗಿಯೇ ಆಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಒಂದು ಕಾರ್ಯವನ್ನು ಮಾಡಿದರೆ ಅಂತಹ ಶಕ್ತಿಶಾಲಿ ಕುಲದೇವತೆಯನ್ನು ನಮ್ಮ ಮನೆಯಲ್ಲಿ ಸದಾ ಇರಿಸಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಏನು ಮತ್ತು ಹೇಗೆ ಮಾಡಬೇಕೆಂದು ನೀವು ಕಂಡುಹಿಡಿಯಬಹುದು. ಆರಾಧನಾ ದೇವತೆಯ ಆರಾಧನೆಯು ನಮ್ಮೊಂದಿಗೆ ಮಾತ್ರ ಮಾಡಬಹುದಾದ ವಿಷಯವಲ್ಲ. ಇದು ನಮ್ಮ ಪೂರ್ವಜರು ಪೂಜಿಸಿದ ಮತ್ತು…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಹೆಸರಾಂತ ಡ್ಯಾನ್ಸ್ ಅಕಾಡೆಮಿಗಳಲ್ಲಿ ಸ್ಟೈಲ್ ಡ್ಯಾನ್ಸ್ ಅಕಾಡೆಮಿ ಕೂಡ ಒಂದಾಗಿದೆ. ಈ ಅಕಾಡೆಮಿಗೆ 16 ವಸಂತಕ್ಕೆ ಕಾಲಿಡುತ್ತಿರುವುದರಿಂದ ಇದರ ಅಂಗವಾಗಿ ನರ್ತನ ಎಂಬ ಹೆಸರಿನಲ್ಲಿ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಡ್ಯಾನ್ಸ್ ಸೂರಜ್ ಅವರು, ಸ್ಟೈಲ್ ಡ್ಯಾನ್ಸ್ ಅಕಾಡೆಮಿ ಆರಂಭಗೊಂಡು 16ನೇ ವರ್ಷಕ್ಕೆ ಕಾಲಿಡುತ್ತಿದೆ. ಇದರ ಸಲುವಾಗಿ ದಿನಾಂಕ 09-11-2024ರಂದು ವಾರ್ಷಿಕೋತ್ಸವವನ್ನು ನರ್ತನ 2ಕೆ24 ಎಂಬುದಾಗಿ ಆಚರಿಸಲಾಗುತ್ತಿದೆ ಎಂದರು. ಸಾಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್, ರಾಯಲ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮಾಲೀಕರಾದಂತ ಮಹೇಶ್, ಜಲೀಲ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಇನ್ನೂ ರಾಜ್ಯ ವನ್ನಿಕುಲ ಕ್ಷತ್ರಿಯ ಸಂಘದ ರಾಜ್ಯಾಧ್ಯಕ್ಷರಾದಂತ ಶ್ರೀನಿವಾಸ್ ಮೇಸ್ತ್ರಿ, ಶಿರವಾಳದ ಪುನರ್ವಿ ಟಿಂಬರ್ಸ್ ಮಾಲೀಕರಾದಂತ ಗುರುಮೂರ್ತಿ, ಸಾಗರದ ವಿನಾಯಕ…
ಬೆಂಗಳೂರು: ಕೆಎಎಸ್ ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್.16ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ವಾರ್ತಾ ಇಲಾಖೆ ಸೂಚಿಸಿದೆ. ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ. ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ಟರ್ಮಿನಲ್ 2 ನಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ನನ್ನು ಅನಾವರಣಗೊಳಿಸಿತು. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್ ಗಾರ್ಡನ್ನನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್ ಗಾರ್ಡನ್ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. ಪ್ಯಾಟ್ರಿಕ್ ಬ್ಲಾಂಕ್ ಅವರು ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವರ್ಟಿಕಲ್ ಗಾರ್ಡನ್ ನಿರ್ಮಿಸಿದ್ದು ಇದೇ ಮೊದಲು, ಮೂಲಭೂತ ಸೌಕರ್ಯಗಳೊಂದಿಗೆ ಪ್ರಕೃತಿಯನ್ನು ಸೆರೆ ಹಿಡಿದಂತ ಸುಂದರ ದೃಶ್ಯಾವಳಿಂದ ಈ ಗೋಡೆ ಉದ್ಯಾನ ಕಂಗೊಳಿಸಲಿದೆ. ಈ ಮೂಲಕ ಟಿ2 ನ ಅಡಿಪಾಯದ ಮೂಲತತ್ವವನ್ನು ಉದಾರಿಸಿದೆ. ‘ಟೈಗರ್ ವಿಂಗ್ಸ್’ ನ ಈ ವರ್ಟಿಕಲ್ ಗಾರ್ಡನ್ 153 ವಿವಿಧ ಜಾತಿಗಳ 15,000…
ನವದೆಹಲಿ: ಅಕ್ಟೋಬರ್ 31 ರಂದು ಬ್ಲಾಕ್ಬಸ್ಟರ್ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League – IPL) ಅನ್ನು ಉಳಿಸಿಕೊಂಡ ನಂತರ, ಮಹಿಳಾ ಪ್ರೀಮಿಯರ್ ಲೀಗ್ ತಂಡಗಳು ಗುರುವಾರ ತಮ್ಮ ಧಾರಣೆಗಳೊಂದಿಗೆ ಬಂದವು. ಡಬ್ಲ್ಯುಪಿಎಲ್ ನಿಯಮಗಳ ಪ್ರಕಾರ, ಒಂದು ತಂಡವು ಎಲ್ಲಾ 18 ಆಟಗಾರರನ್ನು ಉಳಿಸಿಕೊಳ್ಳಬಹುದು, ಗರಿಷ್ಠ ಆರು ವಿದೇಶಿ ತಾರೆಗಳೊಂದಿಗೆ, ಮತ್ತು ನಿರೀಕ್ಷಿತ ರೀತಿಯಲ್ಲಿ, ಎಲ್ಲಾ ಫ್ರಾಂಚೈಸಿಗಳು ಈ ಕ್ರಮವನ್ನು ಹೆಚ್ಚು ಬಳಸಿಕೊಂಡವು. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru – RCB) ಮತ್ತು ಮುಂಬೈ ಇಂಡಿಯನ್ಸ್ (Mumbai Indians – MI) ಯಾವುದೇ ಆಘಾತಕಾರಿ ಹೊರಗಿಡುವಿಕೆಯನ್ನು ಮಾಡಿಲ್ಲ ಮತ್ತು ಡಬ್ಲ್ಯುಪಿಎಲ್ 2025 ಋತುವಿಗೆ ಮುಂಚಿತವಾಗಿ ಪ್ರಮುಖ ಗುಂಪನ್ನು ಉಳಿಸಿಕೊಂಡಿವೆ. ಮೂರನೇ ಋತುವಿನ ಹರಾಜು ಮುಂದಿನ ತಿಂಗಳು ನಡೆಯಲಿದೆ. ಮುಂಬೈ ಇಂಡಿಯನ್ಸ್ ಮೊದಲ ಆವೃತ್ತಿಯನ್ನು ಗೆದ್ದರೆ, ಆರ್ಸಿಬಿ ಎರಡನೇ ಋತುವನ್ನು ಗೆದ್ದರೆ, ಡಿಸಿ ಪಂದ್ಯಾವಳಿಯ ಎರಡೂ ಆವೃತ್ತಿಗಳಲ್ಲಿ ಫೈನಲ್ ತಲುಪಿದೆ. 2025 ರ ಆವೃತ್ತಿಯ ಡಬ್ಲ್ಯುಪಿಎಲ್ ಹರಾಜು ಮೊತ್ತವನ್ನು…
ಬೆಂಗಳೂರು: ನೈಋತ್ಯ ರೈಲ್ವೆಯಿಂಜ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಕ್ಯಾಂಪೇನ್ 3.0 ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದು ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ಸಾಂಪ್ರದಾಯಿಕವಾಗಿ ಪಿಂಚಣಿದಾರರು ತಮ್ಮ ಪಿಂಚಣಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ನವೆಂಬರ್ನಲ್ಲಿ ವೈಯಕ್ತಿಕವಾಗಿ ಬ್ಯಾಂಕಿಗೆ ಭೇಟಿ ನೀಡಬೇಕಾಗಿತ್ತು. ಆದಾಗ್ಯೂ, ಈ ಹೊಸ ಅಭಿಯಾನವು ಆನ್ಲೈನ್ ಸಲ್ಲಿಕೆ ಆಯ್ಕೆಯನ್ನು ಅನುಮತಿಸುತ್ತದೆ. ಇದು ಸಮಯ ಮತ್ತು ಶ್ರಮವನ್ನು ಉಳಿಸುತ್ತದೆ. ಈ ಡಿಜಿಟಲ್ ಉಪಕ್ರಮವು ಭೌತಿಕ ಸಲ್ಲಿಕೆಗಳಿಗೆ ಸುರಕ್ಷಿತ, ಅನುಕೂಲಕರ ಮತ್ತು ಸಮಯ-ಪರಿಣಾಮಕಾರಿ ಪರ್ಯಾಯವನ್ನು ಒದಗಿಸುವ ಮೂಲಕ ಎಲ್ಲಾ ಪಿಂಚಣಿದಾರರಿಗೆ, ವಿಶೇಷವಾಗಿ ಹಿರಿಯ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಸುಲಭ ಡಿಜಿಟಲ್ ಪ್ರಕ್ರಿಯೆಯೊಂದಿಗೆ ಪಿಂಚಣಿದಾರರನ್ನು ಸಬಲೀಕರಣಗೊಳಿಸುವ ಮೂಲಕ, ನೈಋತ್ಯ ರೈಲ್ವೆ ತನ್ನ ವಲಯದಾದ್ಯಂತ ಜೀವನ ಪ್ರಮಾಣಪತ್ರಗಳ ಸಲ್ಲಿಕೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಅಭಿಯಾನದಲ್ಲಿ ಭಾಗವಹಿಸಲು, ಪಿಂಚಣಿದಾರರು ಅಥವಾ ಕುಟುಂಬ ಪಿಂಚಣಿದಾರರು ಈ ಹಂತಗಳನ್ನು ಅನುಸರಿಸಲು ಸೂಚಿಸಲಾಗಿದೆ: 1. ಗೂಗಲ್ ಪ್ಲೇ ಸ್ಟೋರ್ ನಿಂದ ಯುಐಡಿಎಐನ “ಆಧಾರ್ಫೇಸ್ ಆರ್ಡಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಕಲ್ಯಾಣ ವಿಭಾಗದಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ವಿಭಾಗದಡಿ ವಿವಿಧ ಯೋಜನೆಗಳಿಗೆ ವಾರದೊಳಗಾಗಿ ಅರ್ಜಿ ಆಹ್ವಾನಿಸಬೇಕು. ಈ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಲು ಸೂಚನೆ ನೀಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ಇ-ವೆಂಡಿಗ್ ವಾಹನ: ಮಾನ್ಯ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಇ-ವೆಂಡಿಗ್ ವಾಹನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಆ ಬಗ್ಗೆ ಚರ್ಚೆ ಮಾಡಿ ಅಭಿಪ್ರಾಯ ಪಡೆದ ಬಳಿಕ, ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು. ಅನಂತರ ಆಯ್ಕೆ ಮಾಡಿ ವಿವಿಧ ಬಗೆಯ ಇ–ವೆಂಡಿಂಗ್ ವಾಹನಗಳನ್ನು ವ್ಯಾಪಾರಿಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಸಿದ್ದಪಡಸಿ ವ್ಯಾಪಾರಿಗಳ ವಯಕ್ತಿಕ ಬಂಡವಾಳ ಹಾಗೂ ಬಿಬಿಎಂಪಿ ಅನುದಾನ ಸೇರಿ ಇ–ವೆಂಡಿಂಗ್…
ಬಳ್ಳಾರಿ : ಉಪಚುನಾವಣೆಯ ಪ್ರಚಾರ ಸಭೆಗಳಲ್ಲಿ ನಿರೀಕ್ಷೆಗೂ ಮೀರಿ ಜನರು ತಮ್ಮ ಬೆಂಬಲವನ್ನು ವ್ಯಕ್ತವಾಗುತ್ತಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಸಂಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಅವರದ್ದು ರಾಜಕೀಯ ಪ್ರತಿಭಟನೆ ವಿಜಯಪುರಕ್ಕೆ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಆಗಮಿಸಿರುವ ಬಗ್ಗೆ ಹಾಗೂ ಬಸವನಗೌಡ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಕ್ಫ್ ಬೋರ್ಡ್ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಯತ್ನಾಳ್ ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಂಟಿ ಸಂಸದೀಯ ಸಮಿತಿಯವರು ಭೇಟಿ ನೀಡಿದ್ದೂ ಕೂಡ ರಾಜಕೀಯವಾಗಿ. ಹಿಂದೆ ಯಾವಾಗ ಬಂದಿದ್ದರು ಎಂದು ಪ್ರಶ್ನಿಸಿದರು. ಸಮಸ್ಯೆ ಎಲ್ಲಿದೆ ಒಂದು ವೇಳೆ ಯಾರಿಗಾದರೂ ನೋಟೀಸು ನೀಡಲಾಗಿದ್ದರೆ ಅದನ್ನು ವಾಪಸು ಪಡೆಯುವುದಾಗಿ ಸ್ಪಷ್ಟವಾಗಿ ಈಗಾಗಲೇ ತಿಳಿಸಲಾಗಿದೆ. ಯಾರನ್ನೂ ನಾವು ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ದಾಖಲಾತಿಗಳು ತಿದ್ದುಪಡಿಯಾಗಿದ್ದರೆ ಅದನ್ನು ರದ್ದು ಮಾಡುತ್ತೇವೆ…