Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ 6 ತಿಂಗಳುಗಳ ಕಾಲ ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದರಿಂದ ಸದನದ ಭಾವಿಗೆ ಇಳಿದು ಬಿಜೆಪಿ-ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಹಿನ್ನಲೆಯಲ್ಲಿ ಕರ್ನಾಟಕ ವಿಧಾನಸಭೆಯ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿ ಸ್ಪೀಕರ್ ಆದೇಶಿಸಿದರು. ಬಿಜೆಪಿಯ ಸದಸ್ಯರ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮಧ್ಯಾಹ್ನದ ಕಲಾಪದ ನಂತ್ರ ಕೆಲ ವಿಧೇಯಕಗಳನ್ನು ಮಂಡಿಸೋದಕ್ಕೆ ಮುಂದಾಗಲಾಗಿತ್ತು. ಆದರೇ ಸಚಿವರಿಗೆ ಹನಿಟ್ರ್ಯಾಪ್ ವಿಚಾರ ಪ್ರತಿಧ್ವನಿಸಿತು. ಬಿಜೆಪಿ, ಜೆಡಿಎಸ್ ಸದಸ್ಯರು ತನಿಖೆಗೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಹೀಗಾಗಿ ಸದನದ ಗೌರವಕ್ಕೆ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದಂತ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತುಗೊಳಿಸಿ ಆದೇಶಿಸಿದರು. ಈ ಬೆನ್ನಲ್ಲೇ ಸಚಿವ ಹೆಚ್.ಕೆ ಪಾಟೀಲ್ ಅವರು ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಸ್ಪೀಕರ್ ಈ ವಿಧೇಯಕವನ್ನು ಸದನದ ಮತಕ್ಕೆ ಹಾಕಿದರು. ಆದರೇ ಬಿಜೆಪಿ ತೀವ್ರ ವಿರೋಧ, ಗದ್ದಲವನ್ನು ಏಳಿಸಲಾಯಿತು. ಈ ವಿರೋಧ, ಗದ್ದಲದ ನಡುವೆ ಅಂಗೀಕಾರ ನೀಡಲಾಯಿತು. ಸದನದ ಬಾವಿಗೆ…
ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025 ವಿಧೇಯಕವನ್ನು ಸಚಿವ ಹೆಚ್.ಕೆ ಪಾಟೀಲ್ ಅವರು ಮಂಡಿಸಲಾಯಿತು. ಈ ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆ ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ. https://kannadanewsnow.com/kannada/suspension-of-mlas-in-raj-bhavan-premises-meet-soon-after-house-adjourns/ https://kannadanewsnow.com/kannada/kas-mains-exam-scheduled-to-begin-from-march-28-postponed-kpsc/
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮಾರ್ಚ್.28ರಿಂದ ನಡೆಸಲು ನಿರ್ಧರಿಸಲಾಗಿತ್ತು. ಈಗ ಈ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕೆಪಿಎಸ್ಸಿ ಆದೇಶಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ದಿನಾಂಕ:13-02-2025ರಂದು ಪ್ರಕಟಿಸಲಾಗಿತ್ತು ಎಂದಿದೆ. ಮುಖ್ಯಪರೀಕ್ಷೆಯನ್ನು ದಿನಾಂಕ:28-03-2025, 29-03-2025, 01-04-2025 ಮತ್ತು. 02-04-2025ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಆಯೋಗದ ಅಂತರ್ಜಾಲದಲ್ಲಿ, ಶೀಘ್ರವಾಗಿ ದಿನಾಂಕವನ್ನು ಪ್ರಕಟಿಸಲಾಗುವುದು ಎಂಬುದಾಗಿ ತಿಳಿಸಿದೆ. https://kannadanewsnow.com/kannada/here-is-the-list-of-18-bjp-mlas-suspended-from-the-state-assembly/ https://kannadanewsnow.com/kannada/suspension-of-mlas-in-raj-bhavan-premises-meet-soon-after-house-adjourns/
ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದಂತ ಬಿಜೆಪಿ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂತಹ ಶಾಸಕರ ಅಮಾನತು ವಿಚಾರ ಈಗ ರಾಜಭವನದ ಅಂಗಳಕ್ಕೆ ತಲುಪಿದೆ. ಸದನ ಮುಂದೂಡಲ್ಪಟ್ಟ ಕೂಡಲೇ ರಾಜ್ಯಪಾಲರನ್ನು ಬಿಜೆಪಿ ಶಾಸಕರು ಭೇಟಿಯಾಗೋದಾಗಿ ತಿಳಿದು ಬಂದಿದೆ. ಇಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಕೋಲಾಹಲ ಉಂಟು ಮಾಡಿದರು. ಅಲ್ಲದೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ತೋರಲಾಯಿತು. ಈ ಹಿನ್ನಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಬಿಜೆಪಿಯ 18 ಶಾಸಕರಾದಂತ ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಮ್ ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರಿಶ್ ಬಿ ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದರು. ಈ ಬೆನ್ನಲ್ಲೇ ಬಿಜೆಪಿ ಶಾಸಕರು ರಾಜ್ಯಪಾಲ ಥಾವರ್ ಚಂದ್…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ ಉಮಾನಾಥ್ ಕೋಟ್ಯನ್ ಸುರೇಶ್ ಗೌಡ ಶೈಲೇಂದ್ರ ಬೆಲ್ದಾಳೆ ಶರಣು ಸಲಗಾರ್ ಸಿಕೆ ರಾಮಮೂರ್ತಿ ಯಶ್ಪಾಲ್ ಸುವರ್ಣ ಹರಿಶ್ ಬಿ ಪಿ ಭರತ್ ಶೆಟ್ಟಿ ಬಸವರಾಜ ಮತ್ತಿಮೂಡ್ ಧೀರಜ್ ಮುನಿರಾಜು…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವೀಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಕೋರ್ಟ್ ಆದೇಶ ನೀಡಿದ್ದು, ಸಮೀರ್ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್ ಕೋರ್ಟ್ ಆದೇಶದನ್ವಯ ಡಿಲೀಟ್ ಆಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ ಆರ್ ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು. ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಧಾನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆಗಳು…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಅಮಾನತುಗೊಂಡಂತ ಶಾಸಕರಿಗೆ ಟಿಎ, ಡಿಎಗೂ ಬ್ರೇಕ್ ಹಾಕಲಾಗಿದೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ ಉಮಾನಾಥ್ ಕೋಟ್ಯನ್ ಸುರೇಶ್ ಗೌಡ ಶೈಲೇಂದ್ರ ಬೆಲ್ದಾಳೆ ಶರಣು ಸಲಗಾರ್ ಸಿಕೆ ರಾಮಮೂರ್ತಿ ಯಶ್ಪಾಲ್ ಸುವರ್ಣ ಹರಿಶ್ ಬಿ ಪಿ…
ನವದೆಹಲಿ: ಭಾರತೀಯ ಈಕ್ವಿಟಿ ಸೂಚ್ಯಂಕಗಳು ದುರ್ಬಲ ಜಾಗತಿಕ ಮಾರುಕಟ್ಟೆಗಳನ್ನು ಬದಿಗಿಟ್ಟು ಸತತ ಐದನೇ ಅವಧಿಗೆ ತಮ್ಮ ಲಾಭವನ್ನು ವಿಸ್ತರಿಸಿದವು, ನಿಫ್ಟಿ ಇಂಟ್ರಾಡೇನಲ್ಲಿ 23,400 ಗಡಿಯನ್ನು ದಾಟಿದೆ. ಸೆನ್ಸೆಕ್ಸ್ 557.45 ಪಾಯಿಂಟ್ ಅಥವಾ ಶೇಕಡಾ 0.73 ರಷ್ಟು ಏರಿಕೆ ಕಂಡು 76,905.51 ಕ್ಕೆ ತಲುಪಿದ್ದರೆ, ನಿಫ್ಟಿ 159.75 ಪಾಯಿಂಟ್ ಅಥವಾ ಶೇಕಡಾ 0.69 ರಷ್ಟು ಏರಿಕೆ ಕಂಡು 23,350.40 ಕ್ಕೆ ತಲುಪಿದೆ. ಮಾರುಕಟ್ಟೆಯ ವಿಸ್ತಾರವು ಸಕಾರಾತ್ಮಕವಾಗಿತ್ತು, 2,684 ಷೇರುಗಳು ಮುಂದುವರಿದವು, 1,179 ಷೇರುಗಳು ಕುಸಿದವು ಮತ್ತು 118 ಷೇರುಗಳು ಬದಲಾಗದೆ ಉಳಿದವು. ವಾರದಲ್ಲಿ, ನಿಫ್ಟಿ 50 ಮತ್ತು ಸೆನ್ಸೆಕ್ಸ್ ಎರಡೂ ತಲಾ 4 ಪ್ರತಿಶತದಷ್ಟು ಏರಿಕೆಯಾಗಿದ್ದು, ನಾಲ್ಕು ವರ್ಷಗಳಲ್ಲಿ ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ನಿಫ್ಟಿಯಲ್ಲಿ ಬಿಪಿಸಿಎಲ್, ಒಎನ್ಜಿಸಿ, ಎಸ್ಬಿಐ ಲೈಫ್ ಇನ್ಶೂರೆನ್ಸ್, ಎನ್ಟಿಪಿಸಿ ಮತ್ತು ಬಜಾಜ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ಮತ್ತೊಂದೆಡೆ, ಹಿಂಡಾಲ್ಕೊ ಇಂಡಸ್ಟ್ರೀಸ್, ವಿಪ್ರೋ, ಟ್ರೆಂಟ್, ಇನ್ಫೋಸಿಸ್ ಮತ್ತು ಟಾಟಾ ಸ್ಟೀಲ್ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ. ಬಿಎಸ್ಇ…
ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ಗಮನಿಸಿದ್ದಂತ ಪೋಷಕರು, ಅಂಗನವಾಡಿ ಸಹಾಯಕಿಯ ವಿಕೃತಿ ವಿರುದ್ಧ ಪೊಲೀಸರಿಗೆ, ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಹಾರಾಜಕಟ್ಟೆ ಗ್ರಾಮ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ, ಪುಟ್ಟ ಮಗು ದೀಕ್ಷಿತ್ ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ…













