Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ಈಕ್ವಿಟಿ ಸೂಚ್ಯಂಕಗಳು ದುರ್ಬಲ ಜಾಗತಿಕ ಮಾರುಕಟ್ಟೆಗಳನ್ನು ಬದಿಗಿಟ್ಟು ಸತತ ಐದನೇ ಅವಧಿಗೆ ತಮ್ಮ ಲಾಭವನ್ನು ವಿಸ್ತರಿಸಿದವು, ನಿಫ್ಟಿ ಇಂಟ್ರಾಡೇನಲ್ಲಿ 23,400 ಗಡಿಯನ್ನು ದಾಟಿದೆ. ಸೆನ್ಸೆಕ್ಸ್ 557.45 ಪಾಯಿಂಟ್ ಅಥವಾ ಶೇಕಡಾ 0.73 ರಷ್ಟು ಏರಿಕೆ ಕಂಡು 76,905.51 ಕ್ಕೆ ತಲುಪಿದ್ದರೆ, ನಿಫ್ಟಿ 159.75 ಪಾಯಿಂಟ್ ಅಥವಾ ಶೇಕಡಾ 0.69 ರಷ್ಟು ಏರಿಕೆ ಕಂಡು 23,350.40 ಕ್ಕೆ ತಲುಪಿದೆ. ಮಾರುಕಟ್ಟೆಯ ವಿಸ್ತಾರವು ಸಕಾರಾತ್ಮಕವಾಗಿತ್ತು, 2,684 ಷೇರುಗಳು ಮುಂದುವರಿದವು, 1,179 ಷೇರುಗಳು ಕುಸಿದವು ಮತ್ತು 118 ಷೇರುಗಳು ಬದಲಾಗದೆ ಉಳಿದವು. ವಾರದಲ್ಲಿ, ನಿಫ್ಟಿ 50 ಮತ್ತು ಸೆನ್ಸೆಕ್ಸ್ ಎರಡೂ ತಲಾ 4 ಪ್ರತಿಶತದಷ್ಟು ಏರಿಕೆಯಾಗಿದ್ದು, ನಾಲ್ಕು ವರ್ಷಗಳಲ್ಲಿ ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ನಿಫ್ಟಿಯಲ್ಲಿ ಬಿಪಿಸಿಎಲ್, ಒಎನ್ಜಿಸಿ, ಎಸ್ಬಿಐ ಲೈಫ್ ಇನ್ಶೂರೆನ್ಸ್, ಎನ್ಟಿಪಿಸಿ ಮತ್ತು ಬಜಾಜ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ಮತ್ತೊಂದೆಡೆ, ಹಿಂಡಾಲ್ಕೊ ಇಂಡಸ್ಟ್ರೀಸ್, ವಿಪ್ರೋ, ಟ್ರೆಂಟ್, ಇನ್ಫೋಸಿಸ್ ಮತ್ತು ಟಾಟಾ ಸ್ಟೀಲ್ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ. ಬಿಎಸ್ಇ…
ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ಗಮನಿಸಿದ್ದಂತ ಪೋಷಕರು, ಅಂಗನವಾಡಿ ಸಹಾಯಕಿಯ ವಿಕೃತಿ ವಿರುದ್ಧ ಪೊಲೀಸರಿಗೆ, ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಹಾರಾಜಕಟ್ಟೆ ಗ್ರಾಮ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ, ಪುಟ್ಟ ಮಗು ದೀಕ್ಷಿತ್ ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ…
ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಮಾ.23 ರಂದು ಬೆಳಿಗ್ಗೆ 10.00 ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್…
ಬೆಂಗಳೂರು: ಸಚಿವರಿಗೆ ಹನಿಟ್ರ್ಯಾಪ್ ಮಾಡೋದಕ್ಕೆ ಮುಂದಾದಂತ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಹನಿಟ್ರ್ಯಾಪ್ ಕೇಸ್ ಅನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ, ಸಚಿವರ ಹೆಸರು ತಂದಿದ್ದಾರೆ. ಇದರ ಜುಡಿಷಿಯಲ್ ತನಿಖೆ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರದ ನಾಯಕರ ಫೋನ್ ಬಂತೆಂದು ಇದನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಬಾರದು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ತಾವು ಮುಸ್ಲಿಮರಿಗೆ ಶೇ 4 ಮೀಸಲಾತಿ ಪರ ಇರುವುದಾಗಿ, ಹಲಾಲ್ ಬಜೆಟ್ ಪರ ಇದ್ದೇನೆ ಎಂಬುದಾಗಿ ಹಾಗೂ ಮುಸ್ಲಿಮರಿಗೆ ರಾಜ್ಯವನ್ನೇ ಮಾರಿ ಬಿಡುತ್ತೇನೆ ಎಂದಿದ್ದಾರೆ. ಟೋಪಿ ಹಾಕಿಲ್ಲ ಎಂಬುದು ಬಿಟ್ಟರೆ ಸಿದ್ದರಾಮಯ್ಯನವರು ಮುಸಲ್ಮಾನರ ಬಜೆಟ್ ಮಂಡಿಸಿದ್ದಾರೆ ಎಂದು ಟೀಕಿಸಿದರು. https://kannadanewsnow.com/kannada/bjp-jds-will-launch-mass-movement-against-reservation-for-muslims-by-vijayendra/ https://kannadanewsnow.com/kannada/breaking-high-level-investigation-into-honeytrap-cm-siddaramaiah-announces-honeytrap-cace/
ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು. ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ. ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು. ಇದೊಂದು ಗಂಭೀರ…
ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಮೊದಲ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಪ್ರಥಮ ಭಾಷೆಯ ವಿಷಯದ ಮೊದಲ ದಿನದ ಪರೀಕ್ಷೆಗೆ 8,22,658 ವಿದ್ಯಾರ್ಥಿಗಳು ಹಾಜರಿದ್ದರೇ, 16,313 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಶಾಲಾ ಪರೀಕ್ಷೆಗಳ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು ರಾಜ್ಯಾಧ್ಯಂತ ಪ್ರಥಮ ಭಾಷೆಯ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಯಶಸ್ವಿಯಾಗಿ ನಡೆದಿದೆ. ಈ ಪರೀಕ್ಷೆಗೆ 8,38,971 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,22,658 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂಬುದಾಗಿ ತಿಳಿಸಿದೆ. ಬೆಂಗಳೂರು ನಾರ್ಥ್ ನಲ್ಲಿ 47,073 ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 46,320 ಮಂದಿ ಹಾಜರಾಗಿದ್ದರೇ, 753 ವಿದ್ಯಾರ್ಥಿಗಳು ಗೈರಾಗಿದ್ದರು. ಕಲಬುರ್ಗಿಯಲ್ಲಿ 44,503 ನೋಂದಾಯಿತ ವಿದ್ಯಾರ್ಥಿಗಳಲ್ಲಿ 42,541 ಮಂದಿ ಹಾಜರಾಗಿದ್ದರೇ, 1,962 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಒಟ್ಟಾರೆ ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದೆ. 838971 ಮಂದಿಯಲ್ಲಿ 822658 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೇ, 16313 ಮಂದಿ…
ನವದೆಹಲಿ: ಅಗ್ನಿ ದುರಂತದ ನಂತರ ದೆಹಲಿ ಹೈಕೋರ್ಟ್ ನ್ಯಾಯಾಧೀಶರ ಅಧಿಕೃತ ನಿವಾಸದಿಂದ ಗಮನಾರ್ಹ ಪ್ರಮಾಣದ ಹಣವನ್ನು ವಶಪಡಿಸಿಕೊಂಡ ನಂತರ ಅವರ ವಿರುದ್ಧದ ಆರೋಪಗಳ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆಯನ್ನು ಪ್ರಾರಂಭಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಿಂದ ವರದಿ ಕೇಳಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸಿನ ಮೇರೆಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಇತ್ತೀಚೆಗೆ ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲಾಯಿತು. ಬೆಂಕಿ ಘಟನೆಯ ನಂತರ ಅವರ ಬಂಗಲೆಯಿಂದ ದೊಡ್ಡ ಪ್ರಮಾಣದ ಹಣವನ್ನು ವಶಪಡಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ತಜ್ಞರ ಪ್ರಕಾರ, ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದುರ್ನಡತೆಯ ಆರೋಪಗಳು ಬಂದಾಗ, ಆಯಾ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರು ವರದಿಯನ್ನು ಸಲ್ಲಿಸಬೇಕಾಗುತ್ತದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಆರೋಪಗಳು ಕೇಳಿಬಂದರೆ, ಭಾರತದ ಮುಖ್ಯ ನ್ಯಾಯಮೂರ್ತಿಗಳ ಉಪಕ್ರಮದ ಮೇರೆಗೆ ನೇರವಾಗಿ ಆಂತರಿಕ ಸಮಿತಿಯನ್ನು ರಚಿಸಲಾಗುತ್ತದೆ. ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶೇಖರ್ ಯಾದವ್ ಮತ್ತು ಕಲ್ಕತ್ತಾ ಹೈಕೋರ್ಟ್ನ…
ಕೊಡಗು : “ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ ಹಾಗೂ ಒತ್ತುವರಿ ಬಗ್ಗೆ ಕೇಳಿದಾಗ, “ಈ ನೆಲ,ಜಲ, ಇತಿಹಾಸ, ಪರಂಪರೆ ಉಳಿಸಲು ಏನು ಬೇಕೋ ಅದೆಲ್ಲವನ್ನು ನಾವು ಮಾಡುತ್ತೇವೆ. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೂ ಸ್ವೀಕರಿಸುತ್ತೇವೆ” ಎಂದು ಉತ್ತರಿಸಿದರು. ನೀರಿನ ಸದ್ಬಳಕೆ ಕುರಿತು ಅರಿವು; ಒಂದು ವಾರಗಳ ಕಾಲ ಅಭಿಯಾನ “ವಿಶ್ವ ಜಲದಿನದ ಅಂಗವಾಗಿ ಒಂದು ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ” ಎಂದು ತಿಳಿಸಿದರು. “ಕಳೆದ ವರ್ಷ ಉತ್ತಮ ಮಳೆಯಾದಂತೆ ಈ ವರ್ಷವೂ ಉತ್ತಮವಾಗಿ ಮಳೆಯಾಗಿ ಜನರ ಬದುಕು ಹಸನಾಗಲಿ ಎಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತ್ತಿದ್ದೇನೆ” ಎಂದರು. ಕಾವೇರಿ ಆರತಿಗೆ…
ಭಾಗಮಂಡಲ : “ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. 48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, “ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ” ಎಂದು ಕಾಲೆಳೆದರು. ಮಾಡಿದ್ದುಣ್ಣೋ ಮಹಾರಾಯ ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ,…
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಅದರ ಜೊತೆಗೆ ಅಲ್ಲಲ್ಲಿ ತೀವ್ರ ಬಿಸಿಲ ಝಳಕ್ಕೆ ಬಸವಳಿದು ಜನರು ಕುಸಿದು ಬಿದ್ದಿರುವುದಾಗಿಯೂ ವರದಿಯಾಗಿದೆ. ಹಾಗಾದ್ರೇ ಬಿಸಿಲಿನ ತಾಪಕ್ಕೆ ಜನರು ಕುಸಿದು ಬಿದ್ದಾಗ ಸಾರ್ವಜನಿಕರು ಏನು ಮಾಡಬೇಕು.? ಪ್ರಥಮ ಚಿಕಿತ್ಸೆ ಹೇಗೆ ನೀಡಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆಯ ಮಾಹಿತಿ ಮುಂದಿದೆ ಓದಿ. ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದಿದೆ. ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ…














