Author: kannadanewsnow09

ಶಿವಮೊಗ್ಗ: ದೂರುದಾರರಾದ ಚೇತನ್ ತಾವು ಕೊಂಡ ಮೊಬೈಲ್‌ನಲ್ಲಿ ದೋಷವಿದ್ದು ರಿಪೇರಿ ಮಾಡದೇ ಸೇವಾ ನ್ಯೂನ್ಯತೆವೆಸಗಿದ ಎದುರುದಾರ ಒನ್ ಪ್ಲಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಅಶೋಕ ನಗರ, ಬೆಂಗಳೂರು ಅರ್ಬನ್, ಫಿಲ್ಮ್ ಸೆಂಟರ್ ಎಲೆಕ್ಟ್ರಾನಿಕ್ಸ್, ಶಿವಮೊಗ್ಗ ಹಾಗೂ ಮೊಬೈಲ್ ಕೇರ್. ಶಿವಮೊಗ್ಗ ಇವರ ವಿರುದ್ದ ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪರಿಹಾರ ನೀಡಲು ಆದೇಶಿಸಿದೆ. ದೂರುದಾರರಾದ ಚೇತನ್ ಇವರು ಎದುರುದಾರರಾದ ಒನ್ ಪ್ಲಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಅಶೋಕ ನಗರ, ಬೆಂಗಳೂರು ಅರ್ಬನ್ 1ನೇ ಎದುರುದಾರರು, ಫಿಲ್ಮ್ ಸೆಂಟರ್ ಎಲೆಕ್ಟ್ರಾನಿಕ್ಸ್, ಶಿವಮೊಗ್ಗ 2ನೇ ಎದುರುದಾರರು ಮತ್ತು ಮೊಬೈಲ್ ಕೇರ್ ಶಿವಮೊಗ್ಗ, 3ನೇ ಎದುರುದಾರರು ಇವರ ವಿರುದ್ದ ದೂರನ್ನು ಸಲ್ಲಿಸಿ ತಾವು ಫಿಲ್ಮ್ ಸೆಂಟರ್ ಎಲೆಕ್ಟ್ರಾನಿಕ್ಸ್, ಶಿವಮೊಗ್ಗ ಇವರಿಂದ ಕೊಂಡ ಮೊಬೈಲ್‌ನಲ್ಲಿ ಖರೀದಿಸಿದ ದಿನಾಂಕದಿಂದಲೂ ದೋಷ ಕಂಡುಬಂದಿದ್ದು, ಹಲವಾರು ಬಾರಿ ಎದುರುದಾರರಲ್ಲಿ ರಿಪೇರಿ ಮಾಡಿಕೊಡಲು ವಿನಂತಿಸಿದ್ದು, ಎದುರುದಾರರು ಒಮ್ಮೆ ಮೊಬೈಲ್ ರಿಪೇರಿ ಮಾಡಿಕೊಟ್ಟಿದ್ದರು. ನಂತರವೂ ಮೊಬೈಲ್‌ನಲ್ಲಿ ದೋಷ ಕಂಡುಬಂದಿದ್ದು, ಎದುರುದಾರರಲ್ಲಿ…

Read More

ಮೈಸೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದರು. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ…

Read More

ಬೆಂಗಳೂರು: ಪಾರ್ಕ್ ನಲ್ಲಿ ಪೋಟೋ ತೆಗೆಯುತ್ತಿದ್ದಾಗ ಅಡ್ಡ ಬಂದ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮತ್ತೊಬ್ಬ ವ್ಯಕ್ತಿ ರಕ್ತ ಬರುವಂತೆ ಹಲ್ಲೆ ನಡೆಸಿರುವಂತ ಬೆಚ್ಚಿ ಬೀಳಿಸೋ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಸೆ.29ರಂದು ಮಧ್ಯಾಹ್ನ 3.30ಕ್ಕೆ ಹೆಚ್ ಎಎಲ್ ನ ಡಿಫೆನ್ಸ್ ವಿಭಾಗದಲ್ಲಿ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ರವಿಕಿರಣ್ ಎಂಬುವರು ಕಬ್ಬನ್ ಪಾರ್ಕ್ ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಾರ್ಕ್ ನಲ್ಲಿ ನಡೆದು ಹೋಗುತ್ತಿದ್ದಂತ ವೇಳೆಯಲ್ಲೇ ಉತ್ತರ ಭಾರತ ಮೂಲಕ ವ್ಯಕ್ತಿಯೊಬ್ಬ ಪೋಟೋ ತೆಗೆದುಕೊಳ್ಳುತ್ತಿದ್ದರು. ರವಿಕಿರಣ್ ಅದೇ ಸಂದರ್ಭದಲ್ಲಿ ಸಾಗಿದಾಗ, ಪೋಟೋ ತೆಗೆಯುತ್ತಿದ್ದಾಗ ಅಡ್ಡ ಬರ್ತೀಯ ಎಂಬುದಾಗಿ ಗಲಾಟೆ ಶುರುವಾಗಿದೆ. ಕಬ್ಬನ್ ಪಾರ್ಕ್ ಏನು ನಿಮ್ಮಪ್ಪಂದ ಎಂಬುದಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ರಕ್ತ ಬರುವಂತೆ ರವಿಕಿರಣ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಾಯಗೊಂಡಂತ ರವಿಕಿರಣ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ…

Read More

ಮೈಸೂರು: ಜಾತಿಗಣತಿ ವರದಿ ಸಿಎಂ ಸಿದ್ಧರಾಮಯ್ಯ ಆಫೀಸಲ್ಲೇ ಕುಳಿತು ಮಾಡಿದ ವರದಿ ಎಂಬುದಾಗಿ ಕಾಂಗ್ರೆಸ್ ನವರೇ ಹೇಳಿದ್ದಾರೆ. ಇಂತಹ ಹತ್ತು ವರ್ಷಗಳ ಹಿಂದೆ ಮಾಡಿದಂತ ಜಾತಿಗಣತಿ ವರದಿಯನ್ನು ಇಟ್ಟುಕೊಂಡು ಏನು ಮಾಡ್ತೀರಿ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಆಯುಧ ಪೂಜೆ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು 14 ತಿಂಗಳ ಸಿಎಂ ಆಗಿದ್ದೆ. ಅವರು ಬಂದು 14 ತಿಂಗಳಾಗಿದೆ. ಆದರೇ ಯಾಕೆ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸಿದ್ಧರಾಮಯ್ಯ ಅವರು ಪ್ರತಿನಿತ್ಯ ಹೊಟ್ಟೆ ಉರಿ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. ಸಿದ್ಧರಾಮಯ್ಯ ಕುರಿ ಕಾದಿದ್ದರೇ, ಮೋದಿ ಟೀ ಮಾರಿಲ್ವ.? ನಾವು ಅಸೂಯೆ ಪಟ್ರೆ ಆಗುತ್ತಾ.? ಜನರು ತೀರ್ಮಾನ ಮಾಡಬೇಕು. ಹತ್ತು ವರ್ಷಗಳ ಹಿಂದಿನ ಜಾತಿ ಗಣತಿ ವರದಿ ಇಟ್ಟುಕೊಂಡು ಏನು ಮಾಡ್ತೀರಿ ಎಂದು ಕೇಳಿದರು. https://kannadanewsnow.com/kannada/man-arrested-for-allegedly-molesting-woman-on-delhi-chennai-indigo-flight/ https://kannadanewsnow.com/kannada/dussehra-celebrations-mother-gives-bike-to-her-son-with-grihalakshmi-yojana-money/

Read More

ನವದೆಹಲಿ: ದೆಹಲಿ-ಚೆನ್ನೈ ಇಂಡಿಗೊ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 9 ರಂದು ಆರೋಪಿ ರಾಕೇಶ್ ಶರ್ಮಾ ಮತ್ತು ಮಹಿಳಾ ಪ್ರಯಾಣಿಕರು ಚೆನ್ನೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನದೊಳಗೆ ಮಹಿಳೆ ಕಿಟಕಿಯ ಸೀಟಿನಲ್ಲಿ ಕುಳಿತಿದ್ದರು ಎಂದು ಚೆನ್ನೈ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಆಕೆಯ ಹಿಂದೆ ಕುಳಿತಿದ್ದ ಶರ್ಮಾ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ಪುರುಷನ ನಡವಳಿಕೆಯನ್ನು ವಿಮಾನ ಪರಿಚಾರಕರಿಗೆ ವರದಿ ಮಾಡಿದಳು. ವಿಮಾನವು ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ, ಮಹಿಳೆ ಪೊಲೀಸರಿಗೆ ನೀಡಿದ ದೂರಿನ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಶರ್ಮಾ ಟೈಲ್ ಕಂಪನಿಯ ಉದ್ಯೋಗಿಯಾಗಿದ್ದು, ವ್ಯವಹಾರದ ಉದ್ದೇಶಕ್ಕಾಗಿ ಜೈಪುರಕ್ಕೆ ಹೋಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಇಂಡಿಗೊ ಏರ್ಲೈನ್ಸ್ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. https://kannadanewsnow.com/kannada/dussehra-celebrations-mother-gives-bike-to-her-son-with-grihalakshmi-yojana-money/ https://kannadanewsnow.com/kannada/dk-shivakumar-warns-pro-kannada-organisations-of-legal-action-if-they-threaten-to-celebrate-kannada-rajyotsava/

Read More

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸಿದ್ದಾರೆ. ಶುಕ್ರವಾರ ಆಯುಧ ಪೂಜೆ ದಿನದಂದು ಶೋ ರೂಮಿನಿಂದ ಬೈಕ್ ಖರೀದಿಸಿ, ಪೂಜೆ ಮಾಡಿ ಸಂಭ್ರಮಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸುವ ದುಡಿಮೆಗೆ ಹೋಗಲು ನೆರವಾಗಿದ್ದಾರೆ. ಗೃಹಲಕ್ಷ್ಮೀ ಹಣದಿಂದ ಬೈಕ್ ಕೊಡಿಸಿದ ತಮ್ಮ ತವರು ಜಿಲ್ಲೆ ಕೌಜಲಗಿಯ ತಾಯಿ -ಮಗನಿಗೆ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದಾರೆ. ಕುಟುಂಬದ…

Read More

ಬೆಂಗಳೂರು: ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಪರ ಸಂಘಟನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, “ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು” ಎಂದು ತಿಳಿಸಿದರು. “ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದು…

Read More

ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆ ಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಮಂದಿ ರಾಜ್ಯದ ಹೊರಗಿನವರು. ಅವರುಗಳು ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕಿದೆ. ಈ ದೃಷ್ಟಿಯಿಂದ ವಿಜಯದಶಮಿ ದಿನದಂದು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ ಎಂದರು. “ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ…

Read More

ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ ಭಾರತ ರಾಜ್ಯಗಳಿಗೆ ಒಟ್ಟಾರೆ 28,152 ಕೋಟಿ ರೂಪಾಯಿ ತೆರಿಗೆ ಪಾಲು ಕೊಡಲಾಗಿದೆ. ಆದರೆ ಉತ್ತರ ಪ್ರದೇಶ ರಾಜ್ಯವೊಂದಕ್ಕೆ 31,962 ಕೋಟಿ ರೂಪಾಯಿ ನೀಡಲಾಗಿದೆ. ನಮಗೆ ಈಗಾಗಲೇ ಆಗಿರುವ ಅನ್ಯಾಯವನ್ನಾದರೂ ಕನಿಷ್ಠ ಪಕ್ಷ ಸರಿದೂಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬಹುದಿತ್ತು. 2022 ರ ಕೇಂದ್ರ ಬಜೆಟ್ ಸಂದರ್ಭದಲ್ಲಿಯೇ ರಾಜ್ಯಗಳ ತೆರಿಗೆ ಪಾಲಿನ ತಾರತಮ್ಯದ…

Read More

ನವದೆಹಲಿ: 30 ಲಕ್ಷ ಕೋಟಿ ರೂ.ಗಳ ಟಾಟಾ ಗ್ರೂಪ್ ಸಾಮ್ರಾಜ್ಯದ ಆಡಳಿತದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಟಾಟಾ ಟ್ರಸ್ಟ್ ನ ಹೊಸ ಅಧ್ಯಕ್ಷರಾಗಿ ರತನ್ ಟಾಟಾ ಅವರ ಸೋದರ ನೋಯೆಲ್ ಟಾಟಾ ಅವರನ್ನು ನೇಮಿಸಲಾಗಿದೆ. ಮುಂಬೈನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಗುಂಪು ನೋಯೆಲ್ ಅವರನ್ನು ಹೊಸ ಮುಖ್ಯಸ್ಥರಾಗಿ ಸರ್ವಾನುಮತದಿಂದ ಹೆಸರಿಸಿತು. ಹಾಗಾದ್ರೇ ನೋಯೆಲ್ ಟಾಟಾ ಯಾರು.? ಹಿನ್ನಲೆ ಏನು.? ಪುಲ್ ಡಿಟೆಲ್ಸ್ ಮುಂದೆ ಓದಿ. 86 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದ ಟಾಟಾ ಗ್ರೂಪ್ನ ಅಧ್ಯಕ್ಷ ರತನ್ ಟಾಟಾ ಅವರ ಉತ್ತರಾಧಿಕಾರಿಯಾಗಿ ನೋಯೆಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನೋಯೆಲ್ ಟಾಟಾ ನಾಲ್ಕು ದಶಕಗಳಿಂದ ಟಾಟಾ ಗ್ರೂಪ್ನಲ್ಲಿ ನಾಯಕತ್ವದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸಮೂಹದ ವಿವಿಧ ವಿಭಾಗಗಳನ್ನು ಮುನ್ನಡೆಸುವ ಮೂಲಕ ಅನುಕರಣೀಯ ವ್ಯವಹಾರ ಚತುರತೆಯನ್ನು ಪ್ರದರ್ಶಿಸಿದ್ದಾರೆ. ಅವರ ನಾಯಕತ್ವದಲ್ಲಿ, ವಿದೇಶದಲ್ಲಿ ಉತ್ಪನ್ನಗಳು ಮತ್ತು ಸೇವೆಗಳಿಗಾಗಿ ಟಾಟಾ ಗ್ರೂಪ್ನ ಅಂಗವಾದ ಟಾಟಾ ಇಂಟರ್ನ್ಯಾಷನಲ್ ಮತ್ತು ಸಮೂಹದ ಚಿಲ್ಲರೆ ವಿಭಾಗವಾದ ಟ್ರೆಂಟ್ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿವೆ. ಅವರು ಟಾಟಾ…

Read More