Author: kannadanewsnow09

ಬೆಂಗಳೂರು : ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆರೋಗ್ಯ ಇಲಾಖೆಯು, ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಪಡೆದೇ ಇರುವ ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದ್ದು ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಸೂಚಿಸಿದೆ. ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ(ಹೆಟೆರೊಲಾಗಸ್)ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿರುತ್ತದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ…

Read More

ಶಿವಮೊಗ್ಗ : ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು. ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ…

Read More

ನವದೆಹಲಿ: ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್ಕಾಯಿನ್ ಮಂಗಳವಾರ 45,000 ಡಾಲರ್ಗಿಂತ ಹೆಚ್ಚಾಗಿದೆ. ಇದು ಏಪ್ರಿಲ್ 2022 ರ ನಂತರದ ಗರಿಷ್ಠ ಮಟ್ಟವನ್ನು ಸೂಚಿಸುತ್ತದೆ. ಎಕ್ಸ್ಚೇಂಜ್-ಟ್ರೇಡೆಡ್ ಸ್ಪಾಟ್ ಬಿಟ್ಕಾಯಿನ್ ಫಂಡ್ಗಳ ಸಂಭಾವ್ಯ ಅನುಮೋದನೆಯ ಸುತ್ತಲಿನ ಆಶಾವಾದದಿಂದ ಉನ್ನತ ಕ್ರಿಪ್ಟೋಕರೆನ್ಸಿಯ ಕಾರ್ಯಕ್ಷಮತೆಯು ಉತ್ತೇಜಿಸಲ್ಪಟ್ಟಿದೆ. ಬಿಟ್ಕಾಯಿನ್ 21 ತಿಂಗಳ ಗರಿಷ್ಠ ಮಟ್ಟವನ್ನು 45,488 ಡಾಲರ್ಗೆ ತಲುಪಿತು, ಹಿಂದಿನ ವರ್ಷದಲ್ಲಿ ಶೇಕಡಾ 154 ರಷ್ಟು ಲಾಭವನ್ನು ತೋರಿಸಿದೆ – ಇದು 2020 ರ ನಂತರದ ಪ್ರಬಲ ಕಾರ್ಯಕ್ಷಮತೆಯಾಗಿದೆ. ಇತ್ತೀಚಿನ ನವೀಕರಣದ ಪ್ರಕಾರ, ಇದು 45,344 ಡಾಲರ್ಗೆ ವಹಿವಾಟು ನಡೆಸುತ್ತಿದೆ, ಇದು ಶೇಕಡಾ 2.6 ರಷ್ಟು ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ. ಆದಾಗ್ಯೂ, ಇದು ನವೆಂಬರ್ 2021 ರಲ್ಲಿ ದಾಖಲಾದ ಸಾರ್ವಕಾಲಿಕ ಗರಿಷ್ಠ 69,000 ಡಾಲರ್ಗಿಂತ ಹಿಂದುಳಿದಿದೆ. ಎಥೆರಿಯಮ್ ಬ್ಲಾಕ್ಚೈನ್ ನೆಟ್ವರ್ಕ್ಗೆ ಸಂಬಂಧಿಸಿದ ಕ್ರಿಪ್ಟೋಕರೆನ್ಸಿ ಈಥರ್ ಕೂಡ ಸಕಾರಾತ್ಮಕ ಚಲನೆಯನ್ನು ಅನುಭವಿಸಿತು, ಮಂಗಳವಾರ ಶೇಕಡಾ 1 ರಷ್ಟು ಏರಿಕೆಯಾಗಿ 2,376 ಡಾಲರ್ಗೆ ತಲುಪಿದೆ. ಬಿಟ್ ಕಾಯಿನ್ ಹಠಾತ್…

Read More

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆ ( Yuvanidhi Scheme ) ಜಾರಿಗೊಳಿಸಲಾಗಿದೆ. ಡಿ.26ರಿಂದಲೇ ನೋಂದಣಿ ಆರಂಭಗೊಂಡಿದೆ. ಹೀಗೆ ಯೋಜನೆಗೆ ನೋಂದಾಯಿಸಿಕೊಂಡಂತ ಡಿಪ್ಲೋಮಾ, ಪದವೀಧರರಿಗೆ ಇನ್ನೆರಡೇ ವಾರದಲ್ಲಿ ಖಾತೆಗೆ ಹಣ ಜಮಾ ಆಗಲಿದೆ. ಆದ್ರೇ ನೀವು ಸುಳ್ಳು ಮಾಹಿತಿ ನೀಡಿದ್ರೇ ನಿಮಗೆ ನೀಡಲಾಗಿರೋ ಹಣ ವಾಪಾಸ್ ಪಡೆಯಲಾಗುತ್ತೆ. ಜೊತೆಗೆ ನಿಮ್ಮ ವಿರುದ್ಧ ಕೇಸ್ ಕೂಡ ಹಾಕಲಾಗುತ್ತದೆ. ಹೌದು.. ಯುವನಿಧಿ ಯೋಜನೆಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. 2022-23ನೇ ಸಾಲಿನಲ್ಲಿ ಡಿಪ್ಲೋಮಾ, ಪದವಿ ಮುಗಿಸಿದ ನಂತ್ರ, ಉದ್ಯೋಗಕ್ಕೆ ಸೇರದೆ ಇರೋರು ಮಾತ್ರವೇ ಈ ಯೋಜನೆಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶವಿದೆ. ಒಂದು ವೇಳೆ ನೀವು ಡಿಪ್ಲೋಮಾ, ಪದವಿ ಮುಗಿಸುತ್ತಲೇ ಕೆಲಸಕ್ಕೆ ಸೇರಿದ್ರೂ, ನಿರುದ್ಯೋಗಿಗಳು ಅಂತ ಯುವನಿಧಿ ಯೋಜನೆಯ ಅಡಿಯಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿ, ಪಡೆದ್ರೇ, ಆ ಬಳಿಕ ವಿಷ್ಯ ಗೊತ್ತಾದ್ರೇ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ರಾಜ್ಯ ಸರ್ಕಾರ ಎಚ್ಚರಿಕೆ…

Read More