Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್ ಸ್ಟ್ರಾಂಗ್” ವಾಕಥಾನ್ನನ್ನು ಆಯೋಜಿಸಿತ್ತು. ಬೆಳಗ್ಗೆ 6 ಗಂಟೆಗೆ ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್ ಗೋಪಾಲನ್ ಮಾಲ್ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್ನಲ್ಲಿ ಸ್ತನಕ್ಯಾನ್ಸರ್ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ವಾಕಥಾನ್ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಇಂದು ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ, ಮೊದಲು ಸ್ತನ ಕ್ಯಾನ್ಸರ್ ರೋಗದ…
ಬೆಂಗಳೂರು: ರಾಜ್ಯ ಸರ್ಕಾರದಿದಂ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದಂತ ಕ್ರಮಗಳಿಗೆ ಕಾಲಮಿತಿಯನ್ನು ನಿಗದಿಗೊಳಿಸಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ನೌಕರರ ವಿರುದ್ಧದ ದೂರುಗಳಿಗೆ ಇಂತಿಷ್ಟು ಕಾಲ ಮಿತಿಯಲ್ಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೂ, ಇನ್ಮುಂದೆ ಸರ್ಕಾರಿ ನೌಕರರ ವಿರುದ್ಧ ಕ್ರಮ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ಕಲಬುರ್ಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರಿಂದ, ಜನಪ್ರತಿನಿಧಿಗಳಿಂದ ಅಥವಾ ಸಂಘ-ಸಂಸ್ಥೆಗಳಿಂದ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಲ್ಲೇಖಿತ ನಿಯಮಗಳಡಿಯಲ್ಲಿ ಸ್ಪಷ್ಟಪಡಿಸಲಾಗಿರುತ್ತದೆ. ಇಂತಹ ದೂರುಗಳು ಕೆಲವು ಸಂದರ್ಭಗಳಲ್ಲಿ ವೈಯುಕ್ತಿಕ ದ್ವೇಷ, ಅಸೂಯೆ ಅಥವಾ ಪೂರ್ವಾಗ್ರಹ ಪೀಡಿತವಾಗಿರುತ್ತವೆ. ಅಲ್ಲದೆ ದೂರುಗಳಿಗೆ ಪೂರಕವಾದ ಮಾಹಿತಿ/ ದಾಖಲೆಗಳನ್ನು ಸಾಮಾನ್ಯವಾಗಿ ಲಭ್ಯಪಡಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ ಅಧಿಕಾರಿ/ ನೌಕರರ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗುವುದಲ್ಲದೇ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗುತ್ತದೆ. ಸಂಬಂಧಿಸಿದ…
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಭಾಷೆಯಾಗಿರುತ್ತದೆ. ತಮ್ಮ ಕಛೇರಿ / ಸಂಸ್ಥೆ / ವಿಶ್ವವಿದ್ಯಾಲಯಗಳಲ್ಲಿ ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಆದೇಶದಲ್ಲಿ ತಿಳಿಸಿದೆ. ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲ ಭಾಷೆಯಲ್ಲಿ ಮೇಲ್ಮಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲು ನಾನು ನಿರ್ದೇಶಿತನಾಗಿದ್ದಾರೆ. ಇನ್ನೂ ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಎಲ್ಲಾ ವಲಯ ಜಂಟಿ ನಿರ್ದೇಶಕರಿಗೆ, ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಅಗತ್ಯ ಕ್ರಮವಹಿಸುವಂತೆ ಪರಿಚಲನಾದೇಶ ಮಾಡಿದ್ದಾರೆ.…
ಶಿವಮೊಗ್ಗ: ಗ್ರಾಮ ಸುಧಾರಣಾ ಸಮಿತಿ ಮತ್ತು ಕಾನು ರಕ್ಷಣಾ ಹೋರಾಟ ಸಮಿತಿಯಿಂದ ಬರದವಳ್ಳಿ ಗ್ರಾಮದಲ್ಲಿನ ಕಾನು ಉಳಿಸುವಂತೆ, ಕಂದಾಯ ಇಲಾಖೆಯಿಂದ ನ್ಯಾಯಾಲಯಕ್ಕೆ ಸೂಕ್ತ ದಾಖಲೆ ಒದಗಿಸುವಂತೆ ಆಗ್ರಹಿಸಿ ಅಕ್ಟೋಬರ್.9ರಂದು ಬೃಹತ್ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸುಧಾರಣಾ ಸಮಿತಿ ಹಾಗೂ ಕಾನು ರಕ್ಷಣಾ ಹೋರಾಟ ಸಮಿತಿಯ ಮುಖಂಡರು, ದಿನಾಂಕ : 09-10-2024ನೇ ಬುಧವಾರ ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಬರದವಳ್ಳಿ ರಾಮೇಶ್ವರ ದೇವಸ್ಥಾನದಿಂದ ಸಿರಿವಂತೆ ಗ್ರಾಮದ ಎನ್.ಹೆಚ್. 206 ಮಾರ್ಗವಾಗಿ ಸಾಗರ ತಾಲ್ಲೂಕು ಕಛೇರಿ ವರೆಗೆ ಶಾಂತಿಯುತವಾಗಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಪಾದಯಾತ್ರೆಯ ಉದ್ದೇಶವು ಬರದವಳ್ಳಿ ಗ್ರಾಮದ ‘ಸರ್ವೆ ನಂ. 275 & 285 ಸರ್ಕಾರಿ ಕಾನು ಸರ್ಕಾರಿ ಕಾನಾಗಿಯೇ ಆರ್.ಟಿ.ಸಿ.(ಪಾಣಿ)ಯಲ್ಲಿ ಸರ್ಕಾರಿ ಕಾನಾಗಿಯೇ ಮುಂದುವರಿಸಬೇಕು ಎಂದು ಮತ್ತು ಬರದವಳ್ಳಿ ಗ್ರಾಮದ ಕಾನು ನೂರಾರು ವರ್ಷದ ಇತಿಹಾಸ ಹೊಂದಿದ್ದು ಈ ಕಾನಿಗೂ ಬರದವಳ್ಳಿ ಗ್ರಾಮಕ್ಕೂ ಅವಿನೋಭಾವ…
ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಕಾರ್ಖಾನೆಯಿಂದ 1,814 ಕೋಟಿ ರೂ.ಮೌಲ್ಯದ ಎಂಡಿ ಡ್ರಗ್ ಮತ್ತು ಅದರ ಕಚ್ಚಾ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ ಭಾನುವಾರ ತಿಳಿಸಿದ್ದಾರೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ದೆಹಲಿಯ ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) ಜಂಟಿ ಕಾರ್ಯಾಚರಣೆಯನ್ನು ನಡೆಸಿವೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಭಾರಿ ಗೆಲುವು ಸಾಧಿಸಿದ ಗುಜರಾತ್ ಎಟಿಎಸ್ ಮತ್ತು ದೆಹಲಿಯ ಎನ್ಸಿಬಿ (ಒಪಿಎಸ್) ಗೆ ಅಭಿನಂದನೆಗಳು! ಇತ್ತೀಚೆಗೆ, ಅವರು ಭೋಪಾಲ್ನ ಕಾರ್ಖಾನೆಯ ಮೇಲೆ ದಾಳಿ ನಡೆಸಿ ಎಂಡಿ ತಯಾರಿಸಲು ಬಳಸುವ ಎಂಡಿ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 1814 ಕೋಟಿ ರೂ. ಈ ಸಾಧನೆಯು ಮಾದಕವಸ್ತು ಕಳ್ಳಸಾಗಣೆ ಮತ್ತು ದುರುಪಯೋಗವನ್ನು ಎದುರಿಸುವಲ್ಲಿ ನಮ್ಮ ಕಾನೂನು ಜಾರಿ ಸಂಸ್ಥೆಗಳ ದಣಿವರಿಯದ ಪ್ರಯತ್ನಗಳನ್ನು ತೋರಿಸುತ್ತದೆ. ನಮ್ಮ ಸಮಾಜದ ಆರೋಗ್ಯ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಅವರ…
ರಾಮನಗರ: ಒಂದೇ ವೃಷಣವಿದ್ದಂತ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂಬುದಾಗಿ ಆಸ್ಪತ್ರೆಯ ವೈದ್ಯರು ಸೂಚಿಸಿದ್ದಾರೆ. ಇದನ್ನೇ ನಂಬಿದಂತ ಪೋಷಕರು ಬಾಲಕನನ್ನು ಶಸ್ತ್ರಚಿಕಿತ್ಸೆಗೆ ದಾಖಲಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದಂತ ಕೆಲ ಹೊತ್ತಿನಲ್ಲೇ ವೈದ್ಯರ ಎಡವಟ್ಟಿನಿಂದ ಬಾಲಕ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಮನಗರದ ಶ್ರೀದೇವಿ ಮಿಷನ್ ಆಸ್ಪತ್ರೆಗೆ 6 ವರ್ಷದ ಬಾಲಕ ಆರ್ಯ ಎಂಬಾತನನ್ನು ಪೋಷಕರು ಕರೆತಂದಿದ್ದರು. ಒಂದೇ ವೃಷಣವಿದ್ದ ಕಾರಣ, ಸಮಸ್ಯೆ ಏನಾದ್ರೂ ಆಗಬಹುದಾ ಎಂಬುದಾಗಿ ಅವರ ಅನುಮಾನವಾಗಿತ್ತು. ಈ ಹಿಂದೆ ಹಲವು ಆಸ್ಪತ್ರೆಗಳ ವೈದ್ಯರ ಬಳಿಯಲ್ಲಿ ಪೋಷಕರು ಆರ್ಯನನ್ನು ತೋರಿಸಿದ್ದರು. ಅವರೆಲ್ಲರೂ ಒಂದೇ ವೃಷಣವಿದ್ದರೂ ಬದುಕಬಹುದು. ಏನಾ ಆಗೋದಿಲ್ಲ ಎಂಬುದಾಗಿಯೇ ಸಲಹೆ ನೀಡಿದ್ದರು. ಇದರ ನಡುವೆ ರಾಮನಗರದ ಶ್ರೀದೇವಿ ಮಿಷನ್ ಆಸ್ಪತ್ರೆಯ ವೈದ್ಯರು ಮಾತ್ರ ಆಪರೇಷನ್ ಮಾಡಲೇ ಬೇಕು. ಹಾಗೆ, ಹೀಗೆ ಅಂತ ಪೋಷಕರಿಗೆ ತಿಳಿಸಿದ್ದಾರೆ. ಇದನ್ನು ನಂಬಿದಂತ ಪೋಷಕರು ನಿನ್ನೆ ಆಪರೇಷನ್ ಗಾಗಿ 6 ವರ್ಷದ ಆರ್ಯನನ್ನು ದಾಖಲಿಸಿದ್ದಾರೆ. ಬೆಳಿಗ್ಗೆ 11 ಗಂಟೆಗೆ…
ಇಸ್ರೇಲ್: ಗಾಝಾ ಪಟ್ಟಿಯ ನಿರಾಶ್ರಿತರಿಗೆ ಆಶ್ರಯ ನೀಡುತ್ತಿರುವ ಮಸೀದಿ ಮತ್ತು ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಮತ್ತು 93 ಮಂದಿ ಗಾಯಗೊಂಡಿದ್ದಾರೆ ಎಂದು ಹಮಾಸ್ ಆಡಳಿತದ ಗಾಝಾ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಇಸ್ರೇಲ್ ಮತ್ತು ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಯುದ್ಧವು ತನ್ನ ಮೊದಲ ವಾರ್ಷಿಕೋತ್ಸವವನ್ನು ಸಮೀಪಿಸುತ್ತಿರುವಾಗ ಕೇಂದ್ರ ಗಾಝಾ ಪಟ್ಟಿಯ ದೇರ್ ಅಲ್-ಬಾಲಾಹ್ನ ಅಲ್-ಅಕ್ಸಾ ಆಸ್ಪತ್ರೆಯ ಬಳಿ ಮಸೀದಿ ಮತ್ತು ಶಾಲೆಯ ಮೇಲೆ ದಾಳಿಗಳು ನಡೆದಿವೆ. ಇಬ್ನ್ ರಶ್ದ್ ಶಾಲೆ ಮತ್ತು ದೇರ್ ಅಲ್ ಬಾಲಾಹ್ ಪ್ರದೇಶದ ಶುಹಾದಾ ಅಲ್-ಅಕ್ಸಾ ಮಸೀದಿಯಲ್ಲಿ ಹುದುಗಿರುವ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ನಿಖರ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಮಿಲಿಟರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 2023 ರ ಅಕ್ಟೋಬರ್ 7 ರಂದು ಹಮಾಸ್ ದಕ್ಷಿಣ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ಜನರನ್ನು ಕೊಂದು ಸುಮಾರು…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಅತಿಯಾದ ಆಲ್ಕೊಹಾಲ್ ಸೇವನೆಯು ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ರೆ, ಮಿತವಾಗಿ ಕುಡಿಯುವುದರಿಂದ ಆರೋಗ್ಯಕ್ಕೆ ಒಂದಿಷ್ಟು ಒಳ್ಳೆಯದಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಪ್ರತಿದಿನ ಸೀಮಿತ ಪ್ರಮಾಣದ ಬಿಯರ್ ಸೇವನೆಯು ಪುರುಷರಲ್ಲಿ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನ ಕಡಿಮೆ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ತೋರಿಸಿವೆ. ಇನ್ನು ಬಿಯರ್ ಬಿ12 ಮತ್ತು ಫೋಲಿಕ್ ಆಮ್ಲವನ್ನ ಹೊಂದಿರುತ್ತದೆ. ಕುಡಿಯದವರಿಗಿಂತ ಬಿಯರ್ ಕುಡಿಯುವವರಲ್ಲಿ ಇದು ಹೆಚ್ಚು ಸಾಮಾನ್ಯವಾಗಿದೆ. ಬಿಯರ್ ಸಿಲಿಕಾನ್’ನಲ್ಲಿ ಸಮೃದ್ಧವಾಗಿದ್ದು, ಆದ್ದರಿಂದ ಮೂಳೆ ಸಾಂದ್ರತೆಯನ್ನ ಹೆಚ್ಚಿಸುತ್ತದೆ. ಇದು ಮೂಳೆಗಳನ್ನ ಸಹ ಬಲವಾಗಿ ಇಡುತ್ತದೆ. ಆದ್ರೆ, ಬಿಯರ್ ಡೋಸ್ ಮೀರಿದ್ರೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇತ್ತೀಚಿನ ಅಧ್ಯಯನವು ಬಿಯರ್ನಲ್ಲಿ ಕಂಡುಬರುವ ಹಾಪ್ ಹೂವಿನ ಸಾರಗಳು ಬುದ್ಧಿಮಾಂದ್ಯತೆಯ ಸಾಮಾನ್ಯ ರೂಪವಾದ ಆಲ್ಝೈಮರ್’ನ್ನ ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಎಂದು ಸೂಚಿಸುತ್ತದೆ. ಹಾಪ್ಸ್ ಸಾಮಾನ್ಯವಾಗಿ ಎಲ್ಲಾ ಬಿಯರ್ಗಳಲ್ಲಿ ಸ್ಥಿರಗೊಳಿಸುವ ಏಜೆಂಟ್ಗಳಾಗಿ ಕಾರ್ಯನಿರ್ವಹಿಸುತ್ತದೆ. ತಮ್ಮ ಅಧ್ಯಯನದಲ್ಲಿ, ಮಿಲಾನೊ-ಬಿಕೊಕಾ ವಿಶ್ವವಿದ್ಯಾಲಯದ ಸಂಶೋಧಕರು ನಾಲ್ಕು ಸಾಮಾನ್ಯ ವಿಧದ ಹಾಪ್ ಹೂವಿನ…
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಆಲ್ಕೋಹಾಲ್ ಸೇವಿಸಿದ ಬಳಿಕ ವಿಷಕಾರಿ ಮೆಟಾಬಾಲೈಟ್ ಗಳನ್ನು ತೆಗೆದುಹಾಕಲು ವಾಂತಿ ಮಾಡುವುದು ದೇಹದ ಉತ್ತಮ ಪ್ರತಿಕ್ರಿಯೆಯಾಗಿದೆ.ಆದಾಗ್ಯೂ, ಅತಿಯಾದ ವಾಂತಿ ನಿರ್ಜಲೀಕರಣಕ್ಕೆ ಕಾರಣವಾಗಬಹುದು, ಇದು ತಕ್ಷಣವೇ ಸರಿದೂಗಿಸದಿದ್ದರೆ ಗಂಭೀರ ತೊಡಕುಗಳಿಗೆ ಕಾರಣವಾಗಬಹುದು. ಮದ್ಯ ಸೇವಿಸಿದ ನಂತರ ವಾಂತಿ ಮಾಡಿಕೊಳ್ಳುವುದನ್ನು ನೀವು ಅನೇಕ ಬಾರಿ ನೋಡಿರಬೇಕು. ವಾಂತಿಯು ಮಾದಕತೆಗೆ ಕಾರಣವಾಗುತ್ತದೆ ಎಂದು ನೀವು ಕೇಳಿರಬೇಕು. ಆದರೆ ಮದ್ಯ ಸೇವಿಸಿದ ನಂತರ ವಾಂತಿ ಮಾಡಿಕೊಳ್ಳಲು ಕಾರಣವೇನು ಗೊತ್ತಾ? ವಾಂತಿ ನಿಜವಾಗಿಯೂ ಆಲ್ಕೊಹಾಲ್ ಮಾದಕತೆಯನ್ನು ಕಡಿಮೆ ಮಾಡುತ್ತದೆಯೇ? ಈ ವಿಷಯಗಳಲ್ಲಿ ಎಷ್ಟು ಸತ್ಯವಿದೆ ಎಂದು ತಿಳಿಯೋಣ. ಕುಡಿದ ನಂತರ ವಾಂತಿಯಾಗಲು ಕಾರಣವೇನು? ವಾಂತಿ ಮಾಡುವುದು ಹಾನಿಕಾರಕ ಪದಾರ್ಥಗಳನ್ನು ತೊಡೆದುಹಾಕಲು ದೇಹದ ನೈಸರ್ಗಿಕ ಮಾರ್ಗವಾಗಿದೆ. ಆಲ್ಕೋಹಾಲ್ ದೇಹವನ್ನು ಪ್ರವೇಶಿಸಿದಾಗ, ಅದು ಯಕೃತ್ತಿನಿಂದ ಅಸಿಟಾಲ್ಡಿಹೈಡ್, ಟಾಕ್ಸಿನ್ ಆಗಿ ಪರಿವರ್ತನೆಗೊಳ್ಳುತ್ತದೆ. ಅಸಿಟಾಲ್ಡಿಹೈಡ್ ಅನ್ನು ನಂತರ ಅಸಿಟೇಟ್ ಆಗಿ ಪರಿವರ್ತಿಸಲಾಗುತ್ತದೆ.ಅತಿಯಾಗಿ ತಿನ್ನುವುದು, ಆಗಾಗ್ಗೆ ಕುಡಿಯುವುದು ಅಥವಾ ಖಾಲಿ ಹೊಟ್ಟೆಯಲ್ಲಿ ಮದ್ಯಪಾನ ಮಾಡಿದ ನಂತರ ವಾಂತಿ ಹೆಚ್ಚಾಗಿ ಸಂಭವಿಸುತ್ತದೆ.…
ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಗ್ಗಲ್ಲ, ಬಗ್ಗಲ್ಲ ಎನ್ನುತ್ತಿದ್ದವರು ಆತ್ಮಸಾಕ್ಷಿಯ ಬಗ್ಗೆ ಮಾತನಾಡುತ್ತಿದ್ದು, ಅವರ ಕುರ್ಚಿ ಅಲುಗಾಡುತ್ತಿರುವುದನ್ನು ಅದು ತೋರಿಸುತ್ತದೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದರು. ಈ ಕುರಿತು ಪತ್ರಿಕಾಪ್ರಕಟಣೆ ಹೊರಡಿಸಿರುವ ಅವರು ರಾಜ್ಯದ ಅಭಿವೃದ್ಧಿ ಬಗ್ಗೆ ಒತ್ತು ಕೊಡಬೇಕಾದ ಸಚಿವರು ತಮ್ಮ ನಾಯಕರ ಭೇಟಿ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಡಾ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ ಅವರು ಕುರ್ಚಿ ಮೇಲೆ ಟವೆಲ್ ಹಾಕಲು ಪ್ರಯತ್ನ ಮಾಡುತ್ತಿರುವುದು, ಇವೆಲ್ಲವೂ ಕಾಂಗ್ರೆಸ್ಸಿನಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವ ಬದಲಾವಣೆ ಬೇಕಿದ್ದರೂ ಆಗಬಹುದು ಎಂಬುದರ ಸೂಚನೆ ಎಂದು ತಿಳಿಸಿದರು. ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿ ಹೋಗಿರುವುದು ಈ ರಾಜ್ಯದ ಜನರ ದುರದೃಷ್ಟ. ಸಚಿವರು ತಮ್ಮ ಆಕಾಂಕ್ಷೆ ವ್ಯಕ್ತಪಡಿಸುವುದರಲ್ಲಿ, ಅದಕ್ಕೆ ಒಳಸಂಚು ರೂಪಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಲ್ಲ…