Author: kannadanewsnow09

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಡಿಸೆಂಬರ್ ಅಧಿವೇಶನಕ್ಕಾಗಿ ಯುಜಿಸಿ ನೆಟ್ ಉತ್ತರ ಕೀ 2024 ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ugcnet.nta.ac.in ಅಧಿಕೃತ ವೆಬ್ಸೈಟ್ನಿಂದ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಬಹುದು. ಅಭ್ಯರ್ಥಿಗಳು ಪರಿಶೀಲಿಸಲು ರೆಕಾರ್ಡ್ ಮಾಡಿದ ಪ್ರತಿಕ್ರಿಯೆಗಳೊಂದಿಗೆ ಪ್ರಶ್ನೆ ಪತ್ರಿಕೆಯನ್ನು ಏಜೆನ್ಸಿ ಲಭ್ಯವಾಗುವಂತೆ ಮಾಡಿದೆ. ಈ ರೀತಿ ಕೀ ಉತ್ತರ ಡೌನ್ ಲೋಡ್ ಮಾಡಿಕೊಳ್ಳಿ -ಯುಜಿಸಿ ನೆಟ್ ಪರೀಕ್ಷೆ 2024 ಬರೆದಂತವರು ugcnet.nta.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. -ಈ ಮೇಲ್ಕಂಡ ವೆಬ್ ಸೈಟ್ ನಲ್ಲಿ ಯುಜಿಸಿ ನೆಟ್ ಸರಿ ಉತ್ತರ ಎನ್ನುವ ಸ್ಕ್ರೋಲ್ ಮೇಲೆ ಕ್ಲಿಕ್ ಮಾಡಿ. -ನಿಮ್ಮ ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಅನುಸಾರ ಯುಜಿಸಿ ನೆಟ್ ಪರೀಕ್ಷೆಯ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ. https://kannadanewsnow.com/kannada/breaking-court-allows-darshan-to-stay-in-mysuru-till-feb-10/ https://kannadanewsnow.com/kannada/yellamma-devi-to-be-re-installed-at-sagar-on-feb-3-4-and-5-new-temple-to-be-inaugurated/

Read More

ಶಿವಮೊಗ್ಗ: ಸಾಗರದ ಸೊರಬ ರಸ್ತೆಯಲ್ಲಿರುವಂತ ಯಲ್ಲಮ್ಮ ದೇವಿಯ ಗುಡಿಯನ್ನು ಸುಮಾರು 2 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗಿದೆ. ಈ ಗುಡಿಯಲ್ಲಿ ಯಲ್ಲಮ್ಮ ದೇವಿ ಪುನರ್ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನ ಉದ್ಘಾಟನೆಯನ್ನು ಫೆಬ್ರವರಿ 3, 4 ಮತ್ತು 5ರಂದು ನಡೆಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಯಲ್ಲಮಮ ದೇವಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಸ್.ಬಿ ರಘುನಾಥ್ ಅವರು, ನೂರಾರು ವರ್ಷಗಳ ಹಳೆಯ ಯಲ್ಲಮ್ಮ ದೇವಿಯ ದೇವಸ್ಥಾನವನ್ನು ಪುನರ್ ನಿರ್ಮಾಣ ಕಾರ್ಯಕ್ಕೆ 2010ರ ಫೆಬ್ರವರಿಯಲ್ಲಿ ಟ್ರಸ್ಟ್ ಸ್ಥಾಪಿಸಿ ಶುರು ಮಾಡಲಾಗಿತ್ತು. ಕೋವಿಡ್ ವೇಳೆಯಲ್ಲಿ ಇದಕ್ಕೆ ಕೊಂಚ ಸಮಸ್ಯೆಯಾಗಿತ್ತು. ಆ ನಂತ್ರ ಮುಂದುವರೆಸಿ, ಈಗ ಸಂಪೂರ್ಣವಾಗಿ ಹೊಸ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದರು. ನಾವು ಆರಂಭದಲ್ಲಿ ಯಲ್ಲಮ್ಮ ದೇವಿ ದೇವಸ್ಥಾನ, ದೇವಿಯ ಪುನರ್ ಪ್ರತಿಷ್ಠಾಪನೆಗೆ 1.50 ಕೋಟಿ ಖರ್ಚು ಆಗಬಹುದು ಎಂಬ ನಿರೀಕ್ಷೆ ಮಾಡಲಾಗಿತ್ತು. ಆದರೇ ಅದು ಅಂತಿಮ ಮುಕ್ತಾಯದ ವೇಳೆಯಲ್ಲಿ 2.50 ಕೋಟಿ…

Read More

ಚಿತ್ರದುರ್ಗ: ಕಳೆದ ಡಿ.14 ರಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 11 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು. ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟಿçಯ ಲೋಕ ಅದಾಲತ್ ಆಯೋಜನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಇದುವರೆಗೂ ಬಾಕಿ ಇದ್ದ 98,452 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 44,632 ಪ್ರಕರಣಗಳು ಬಾಕಿಯಿವೆ. ಮುಂಬರುವ ಮಾರ್ಚ್ 8 ರಂದು ರಾಷ್ಟಿçಯ ಲೋಕ ಅದಲಾತ್ ಜರುಗಲಿದ್ದು, ಈಗಾಗಲೇ 3707 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಗುರುತಿಸಲಾಗಿದೆ. 15 ಪ್ರಕರಣಗಳಲ್ಲಿ ಪಕ್ಷಗಾರರ ಮನ ಒಲಿಸಿ ರಾಜಿ ಸಂಧಾನಕ್ಕೆ ಒಪ್ಪಿಸಲಾಗಿದೆ. ಕಳೆದ ಅದಾಲತ್‌ಗಿಂತಲೂ ಹೆಚ್ಚಿನ ಪ್ರಕರಣಗಳನ್ನು ಈ…

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ ರೂ.2,000/- ಪ್ರೋತ್ಸಾಹ ಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು, ಅದರಂತೆ ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025ರ ಮಾರ್ಚ್ 09 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿಗಳನ್ನು 2025ರ ಫೆಬ್ರವರಿ 10 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸತಕ್ಕದ್ದು. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ನೇರವಾಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಚಿತ್ರದುರ್ಗ ಜಿಲ್ಲೆಯ ಇತರೆ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಅಲ್ಲಿಯ ಸಿವಿಲ್ ನ್ಯಾಯಾಧೀಶರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹತೆಗಳು: ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ದಿನಾಂಕ:01-06-2023 ರಿಂದ 31-05-2024 ರವರೆಗಿನ ಅವಧಿಯಲ್ಲಿ…

Read More

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ,…

Read More

ಮಡಿಕೇರಿ : ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಅನ್ನು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಮ್ಮ ಅಮೃತ ಹಸ್ತದಿಂದ ಶುಕ್ರವಾರ ಬಿಡುಗಡೆ ಮಾಡಿದರು. ಈ ವೆಬ್‍ಸೈಟ್‍ನಲ್ಲಿ ಕೊಡಗಿನ ಸುಂದರ ಪ್ರವಾಸಿ ತಾಣಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಲು ಮೀಸಲಾಗಿರುವ ಸಮಗ್ರ ಆನ್‍ಲೈನ್ ವೇದಿಕೆಯಾಗಿದೆ ಎಂದು ಘೋಷಿಸಲು ಹೆಮ್ಮೆ ಸಂಗತಿಯಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ, ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ವೆಬ್‍ಸೈಟ್‍ನಲ್ಲಿ ಅಧಿಕೃತವಾಗಿ ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು, ಪ್ರವಾಸಿ ಮಾರ್ಗದರ್ಶಿಗಳು, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧೀಕೃತ ಕಾರ್ಯ ಕ್ರಮಗಳನ್ನು ಮಾತ್ರ ಪಟ್ಟಿ ಮಾಡಲಾಗಿರುತ್ತದೆ. ವೆಬ್‍ಸೈಟ್‍ನಲ್ಲಿ ಪ್ರಮುಖ ಲಕ್ಷಣಗಳು: ಜಿಲ್ಲೆಯ ನೋಂದಾಯಿತ…

Read More

ಧಾರವಾಡ: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ ಆಪ್‍ನಲ್ಲಿ ದಾಖಲಿಸಿದ್ದು, ಸದರಿ ಮಾಹಿತಿಯು ಬೆಳೆ ವಿಮೆ, ಬೆಳೆ ನಷ್ಟ, ಪರಿಹಾರ ಬೆಂಬಲ ಬೆಲೆ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಆರ್‍ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಈಗಾಗಲೇ ಮಾಡಿರುವ ಬೆಳೆ ಸಮೀಕ್ಷೆ ಕುರಿತು ಏನಾದರೂ ಅಕ್ಷಪಣೆಗಳಿದ್ದಲ್ಲಿ ರೈತರು ಬೆಳೆ ದರ್ಶಕ ಮೊಬೈಲ್ ಆಪ್ (ಒobiಟe ಂಠಿಠಿ) ಮೂಲಕ ಫೆಬ್ರವರಿ 15, 2025 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದು. ತಮ್ಮ ಗ್ರಾಮಗಳ ಪಿಆರ್‍ಗಳನ್ನು ಅಥವಾ ಸಮೀಪದ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಹಾಯ ಪಡೆದು ಆಕ್ಷೇಪಣೆ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/microfinance-harassment-helpline-launched-in-dharwad/ https://kannadanewsnow.com/kannada/tomorrows-kmf-employees-strike-postponed-no-disruption-in-supply-of-nandini-products/

Read More

ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್‍ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.…

Read More

ಶಿವಮೊಗ್ಗ : ನಗರದ ಗಾಂಧಿಬಜಾರ್‌ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.3ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆ.3ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಭರಮಪ್ಪನಗರ, ಉಪ್ಪಾರಕೇರಿ, ಹರಳೆಣ್ಣೆಕೇರಿ, ಕಸ್ತೂರಿ ಬಾ ರಸ್ತೆ. ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ, ಸಾವರ್ಕರ್‌ನಗರ, ಎಲೆರೇವಣ್ಣಕೇರಿ, ಮೀನು ಮಾರುಕಟ್ಟೆ, ಯಾಲಕಪ್ಪಕೇರಿ, ಲಷ್ಕರ್ ಮೊಹಲ್ಲಾ, ಆನವೇರಪ್ಪಕೇರಿ, ಧರ್ಮರಾಯನಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಫೆ.03 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. https://kannadanewsnow.com/kannada/good-news-for-shimul-milk-producers-milk-procurement-price-hiked-by-rs-2/ https://kannadanewsnow.com/kannada/breaking-court-allows-darshan-to-stay-in-mysuru-till-feb-10/

Read More