Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು. ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ. ವರ್ಷಾಂತ್ಯಕ್ಕೆ ಉತ್ಸವ…
ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಟೆಂಡರ್ ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದನ್ನು “ಅಲ್ಪಸಂಖ್ಯಾತ ತುಷ್ಟೀಕರಣ” ಮತ್ತು “ಸಾಂವಿಧಾನಿಕ ದುಷ್ಕೃತ್ಯ” ಎಂದು ವಿರೋಧಿಸುತ್ತಿರುವ ಬಿಜೆಪಿ, ಕರ್ನಾಟಕ ಸರ್ಕಾರದ ಮಸೂದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ. ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಪ್ರವರ್ಗ -2 ಬಿ ಅಡಿಯಲ್ಲಿ ವರ್ಗೀಕರಿಸಲಾದ ಮುಸ್ಲಿಮರಿಗೆ 4% ಕೋಟಾದೊಂದಿಗೆ ಮೀಸಲಾತಿ ನೀಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಮಸೂದೆಗೆ ಕಳೆದ ವಾರ ಸಚಿವ ಸಂಪುಟ ಅನುಮೋದನೆ ನೀಡಿತು. ಪ್ರಸ್ತುತ, ಕರ್ನಾಟಕವು ಎಸ್ಸಿ / ಎಸ್ಟಿಗಳಿಗೆ ನಿರ್ಮಾಣ ಕಾರ್ಯಗಳ ಗುತ್ತಿಗೆಗಳಲ್ಲಿ 24% ಮೀಸಲಾತಿಯನ್ನು ಹೊಂದಿದೆ – ಪರಿಶಿಷ್ಟ ಜಾತಿಗಳಿಗೆ 17.15% ಮತ್ತು ಪರಿಶಿಷ್ಟ ಪಂಗಡಗಳಿಗೆ 6.95%. ಸರಕು ಮತ್ತು ಸೇವೆಗಳ ಖರೀದಿಗಾಗಿ, ಪ್ರಸ್ತುತ ಎಸ್ಸಿ / ಎಸ್ಟಿ (24%) ಮತ್ತು ವರ್ಗ -1 (4%) ಮತ್ತು ವರ್ಗ -2 ಎ (15%) ಗೆ ಸೇರಿದ ಒಬಿಸಿಗಳಿಗೆ ಗುತ್ತಿಗೆಗಳನ್ನು ಕಾಯ್ದಿರಿಸಲಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ವಯೋ ವೃದ್ಧರನ್ನು ಆಸ್ಪತ್ರೆಗೆ ಸೇರಿಸಿ ಬಿಟ್ಟು ಹೋಗುವ ಮಕ್ಕಳಿಗೆ ಬಿಸಿ ಮುಟ್ಟಿಸಲು ಸರ್ಕಾರ ನಿರ್ಧರಿಸಿದೆ. ಇನ್ಮುಂದೆ ಪೋಷಕರನ್ನು ಆರೈಕೆ ಮಾಡದ ಮಕ್ಕಳಿಗೆ ಆಸ್ತಿ ವರ್ಗಾವಣೆ ರದ್ದುಗೊಳಿಸಲು ಅಗತ್ಯ ಕ್ರಮವಹಿಸಲಾಗಿದೆ. ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾನಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ ಇವರು ತಿಳಿಸಿದ್ದಾರೆ. https://twitter.com/KarnatakaVarthe/status/1901868512596967532 https://kannadanewsnow.com/kannada/good-news-for-milk-producers-state-govt-hikes-incentive-by-rs-2/ https://kannadanewsnow.com/kannada/87-92-kg-gold-biscuits-11-expensive-watches-seized-by-dri-officials-in-ahmedabad/
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರಾದ ಬೈರತಿ ಸುರೇಶರವರು ಕೋಲಾರ ಹಾಲು ಒಕ್ಕೂಟ ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಗಾಗಿ ಕೋಲಾರ ಜಿಲ್ಲಾ ಒಕ್ಕೂಟ ಈ ತೀರ್ಮಾನ ತೆಗೆದುಕೊಂಡಿದ್ದು, ಇದೆ ಮಾರ್ಚ್ 20 ರಿಂದ 2 ರೂಪಾಯಿ ಪ್ರೋತ್ಸಾಹ ಧನವನ್ನು ನೀಡುತ್ತೇವೆ ಎಂದು ತಿಳಿಸಿದರು. ಪ್ರಸ್ತುತ 6.64 ಲಕ್ಷ ಲೀಟರ್ ಹಾಲನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಿಂದ ಶೇಖರಣೆಯಾಗುತ್ತಿದ್ದು, 2025-26ನೇ ಸಾಲಿಗೆ 7.50 ಲಕ್ಷ ಲೀಟರ್ ಹಾಲು ಶೇಖರಣೆ ಗುರಿಯನ್ನು ಒಕ್ಕೂಟವು ಹೊಂದಿದೆ. ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಗೂ ಹಾಲು ಉತ್ಪಾದನ ವೆಚ್ಚ ಅಧಿಕವಾಗಿರುವುದನ್ನು…
ಅಹಮದಾಬಾದ್: ಮಾರ್ಚ್ 17 ರಂದು ಅಹಮದಾಬಾದ್ನ ಪಾಲ್ಡಿ ಫ್ಲಾಟ್ನಲ್ಲಿ ನಡೆದ ದಾಳಿಯಲ್ಲಿ ಡಿಆರ್ಐ ಮತ್ತು ಗುಜರಾತ್ ಎಟಿಎಸ್ 80 ಕೋಟಿ ರೂ. ಮೌಲ್ಯದ 87.92 ಕೆಜಿ ಕಳ್ಳಸಾಗಣೆ ಮಾಡಿದ ಚಿನ್ನದ ಗಟ್ಟಿಗಳನ್ನು ಪತ್ತೆಹಚ್ಚಿದ್ದು, ಅವುಗಳಲ್ಲಿ ಹಲವು ವಿದೇಶಿ ಗುರುತುಗಳನ್ನು ಹೊಂದಿವೆ. ವಜ್ರ-ಖಚಿತ ಪಾಟೆಕ್ ಫಿಲಿಪ್, ಜಾಕೋಬ್ & ಕಂಪನಿಯ ಫ್ರಾಂಕ್ ಮುಲ್ಲರ್ ಸೇರಿದಂತೆ 11 ಐಷಾರಾಮಿ ಕೈಗಡಿಯಾರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ 19.66 ಕೆಜಿ ವಜ್ರ ಮತ್ತು ರತ್ನ-ಖಚಿತ ಆಭರಣಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆಭರಣಗಳ ಮೌಲ್ಯಮಾಪನ ಇನ್ನೂ ನಡೆಯುತ್ತಿದೆ. 1.37 ಕೋಟಿ ರೂ. ನಗದು ಸಹ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಕಳ್ಳಸಾಗಣೆ ಜಾಲಗಳಿಗೆ ಗಂಭೀರ ಹೊಡೆತ ನೀಡಿದ್ದು, ಆರ್ಥಿಕ ಅಪರಾಧಗಳನ್ನು ಎದುರಿಸಲು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಡಿಆರ್ಐನ ಧ್ಯೇಯವನ್ನು ಬಲಪಡಿಸಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಅಮೆಜಾನ್ನಲ್ಲಿ ಸಾಗಿಸಲಾದ ಹಣವನ್ನು ತೂಕ ಮಾಡಲು ಅಧಿಕಾರಿಗಳು ತಕ್ಕಡಿಗಳನ್ನು ತರಬೇಕಾಯಿತು. ನಗದು ಎಣಿಕೆ ಪ್ರಕ್ರಿಯೆಯು ತಡರಾತ್ರಿಯವರೆಗೂ ಮುಂದುವರೆಯಿತು. ಫ್ಲಾಟ್ ಅನ್ನು ಬಾಡಿಗೆಗೆ ಪಡೆದ ಮಹೇಂದ್ರ ಶಾ…
ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ಇಲಾಖೆಗಳ ವಿರುದ್ಧ ಕ್ರಮ ವಹಿಸಿ: ಶಿಕ್ಷಣ ಇಲಾಖೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ
ಬೆಂಗಳೂರು: ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಅಂತಹ ಕೆಲವು ಶಾಲೆಗಳ ಪಟ್ಟಿಯನ್ನು ಒದಗಿಸಿದೆ. ಇಲಾಖಾಧಿಕಾರಿಗಳು ತನಿಖೆ ಮಾಡಿದರೆ ಸತ್ಯ ತಿಳಿಯುತ್ತದೆ ಎಂದು ಹೇಳಿದ್ದಾರೆ. ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕನ್ನಡ ಭಾಷೆಯ ಬಗ್ಗೆ ಇಲಾಖೆ ತೋರುವ ಅಗೌರವವಷ್ಟೇ ಅಲ್ಲ ನೆಲದ ಕಾನೂನಿನ ಉಲ್ಲಂಘನೆಯೂ ಆಗಿರುತ್ತದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ. ಶಿಕ್ಷಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ 2020ರಲ್ಲಿ ರಚನೆಯಾಗಿರುವ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ. https://kannadanewsnow.com/kannada/i-have-never-invaded-in-my-life-hd-kumaraswamy/ https://kannadanewsnow.com/kannada/law-and-order-situation-in-the-state-will-deteriorate-and-goonda-raj-will-be-created-r-ashoka/
ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾತನಾಡಿದಂತ ಅವರು, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು. ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ…
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ ಎಂದರು. ಸ್ವಾತಿ ಲವ್ ಜಿಹಾದ್ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಲವ್ ಜಿಹಾದ್ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು…
ಇಸ್ರೇಲ್: ಕದನ ವಿರಾಮದ ನಂತರ ತನ್ನ ಅತ್ಯಂತ ತೀವ್ರವಾದ ದಾಳಿಗಳನ್ನು ಪ್ರಾರಂಭಿಸಿದ್ದರಿಂದ ಎಲ್ಲಾ ಒತ್ತೆಯಾಳುಗಳು ಮರಳುವವರೆಗೂ ಗಾಝಾದಲ್ಲಿ ಹೋರಾಟವನ್ನು ಮುಂದುವರಿಸುವುದಾಗಿ ಇಸ್ರೇಲ್ ಮಂಗಳವಾರ ಪ್ರತಿಜ್ಞೆ ಮಾಡಿದೆ. ಹಮಾಸ್ ಆಡಳಿತದ ಪ್ರದೇಶದ ಆರೋಗ್ಯ ಸಚಿವಾಲಯವು 330ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಕದನ ವಿರಾಮವನ್ನು ವಿಸ್ತರಿಸುವ ಬಿಕ್ಕಟ್ಟಿನ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ಯುದ್ಧವನ್ನು ಪುನರಾರಂಭಿಸಲು” ನಿರ್ಧರಿಸಿದ್ದಾರೆ ಎಂದು ಹಮಾಸ್ ಆರೋಪಿಸಿದೆ. ಯುದ್ಧಕ್ಕೆ ಮರಳುವುದು ಗಾಝಾದಲ್ಲಿ ಇನ್ನೂ ಜೀವಂತವಾಗಿರುವ ಒತ್ತೆಯಾಳುಗಳಿಗೆ “ಮರಣದಂಡನೆ” ಆಗಬಹುದು ಎಂದು ಎಚ್ಚರಿಸಿದೆ. ದಾಳಿಯ ಅಲೆಯನ್ನು ಪ್ರಾರಂಭಿಸುವ ಮೊದಲು ಇಸ್ರೇಲ್ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವನ್ನು ಸಂಪರ್ಕಿಸಿದೆ ಎಂದು ಶ್ವೇತಭವನ ದೃಢಪಡಿಸಿದೆ. ಇದು ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳನ್ನು ಕೊಂದಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಪದೇ ಪದೇ ನಿರಾಕರಿಸಿದ ನಂತರ ಮತ್ತು ಯುಎಸ್ ಅಧ್ಯಕ್ಷೀಯ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಮಧ್ಯಸ್ಥಗಾರರಿಂದ ಸ್ವೀಕರಿಸಿದ ಎಲ್ಲಾ ಪ್ರಸ್ತಾಪಗಳನ್ನು…
ಬೆಂಗಳೂರು: ಈ ತಿಂಗಳಿನಿಂದಲೇ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ನೀಡಲಾಗುತ್ತಿದ್ದಂತ ಹಣದ ಬದಲಾಗಿ ಅಕ್ಕಿ ಕೊಡೋದಾಗಿ ಸರ್ಕಾರ ಹೇಳಿತ್ತು. ಆದರೇ ಈ ತಿಂಗಳು ಇಲ್ಲ. ಏಪ್ರಿಲ್ ನಿಂದ ಕೊಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳುವ ಮೂಲಕ, ಶಾಕ್ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ ಬಳಿ ಅಕ್ಕಿ ಇದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ಸಿದ್ಧವಿದೆ. ಆದರೇ ಈ ತಿಂಗಳ ಬದಲಾಗಿ ಏಪ್ರಿಲ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದರು. ಕಳೆದ ತಿಂಗಳಿನಿಂದ ನಮ್ಮ ಬಳಿ ಅಕ್ಕಿ ಇದೆ. ನಾವು ನಿರ್ಣಯ ಮಾಡಿದಂತೆ ಹೆಚ್ಚುವರಿ ಅಕ್ಕಿಗೆ ಅಕ್ಕಿ ಕೊರತೆಯ ಕಾರಣ ಹಣ ನೀಡಲಾಗಿತ್ತು. ಈಗ ಅಕ್ಕಿ ನಮ್ಮ ಬಳಿಯಿದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡೋದಕ್ಕೆ ಸಿದ್ಧವಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ ನಿಂದ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದರು. https://kannadanewsnow.com/kannada/anganwadi-ration-found-in-cowshed/ https://kannadanewsnow.com/kannada/legal-battle-against-state-govts-conspiracy-hd-kumaraswamy/













