Author: kannadanewsnow09

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು. ರಾಮನ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರಕಾರ ಎಂದು ಟೀಕಿಸಿದರು. ಶ್ರೀರಾಮಚಂದ್ರನೇ ಕಾಲ್ಪನಿಕ ಎನ್ನುವ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ದೇವಾಲಯದ ಮಾತನಾಡುತ್ತಾರೆ. ಶ್ರೀರಾಮಚಂದ್ರನೇ ಕಾಲ್ಪನಿಕ ಎಂದಾದರೆ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಲು ನಿಮಗೇನು ಹಕ್ಕಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮೋದಿಜೀ ಅವರು ಅಯೋಧ್ಯೆ ವಿಮಾನನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ ಎಂದು ತಿಳಿಸಿದರು. ಶ್ರೀರಾಮಮಂದಿರ ನಿರ್ಮಾಣದ ಕುರಿತು ಸಂತಸ ಸೂಚಿಸಿ ದೇಶದ 125 ಕೋಟಿ…

Read More

ಬೆಂಗಳೂರು: ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇವಲ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧಿಸುವುದಲ್ಲ. 92ರ ಕರಸೇವೆಯಲ್ಲಿ ನಾನೂ ಭಾಗವಹಿಸಿದ್ದೆ. ಕರಸೇವಕರನ್ನು ಬಂಧನ ಮಾಡುವ ಮೂಲಕ ಹಿಂದುತ್ವ ವಿಚಾರವನ್ನು ಹತ್ತಿಕ್ಕಬಹುದೆಂಬ ಯೋಚನೆಯನ್ನು ಬಿಟ್ಟು ಬಿಡಿ. ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ಎಲ್ಲ ರಾಮಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಆಗ್ರಹಿಸಿದರು. ಇನ್ನೂ ಕಾಲ ಮಿಂಚಿಲ್ಲ; ಆಹ್ವಾನ ಕೊಟ್ಟಿಲ್ಲ; ನೋಡೋಣ ಬರೋಣ ಎಂಬ ಮಾತನ್ನು ಬಿಟ್ಟು ಬಿಡಿ. ಯಾವುದೋ ಸ್ನೇಹಿತರ, ಕುಟುಂಬಸ್ಥರ ಮದುವೆಗೆ ಆಹ್ವಾನ ಕೊಟ್ಟಿಲ್ಲ ಎಂದಾಗ ಪಿಳ್ಳೆನೆವವನ್ನು ಕೆಲವರು ಮುಂದಿಡುತ್ತಾರೆ. ರಾಷ್ಟ್ರಮಟ್ಟದ ಈ ಕಾರ್ಯಕ್ರಮಕ್ಕೆ ಯಾವ ಆಹ್ವಾನವೂ…

Read More

ಬೆಂಗಳೂರು: ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದಲೇ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೂ ಮುನ್ನವೇ 2,000 ಬರ ಪರಿಹಾರವನ್ನು ನೀಡಲಾಗುತ್ತಿದೆ. ಈ ಹಣ ಪಡೆಯೋದಕ್ಕೆ ರೈತರು ಬಹುಮುಖ್ಯವಾಗಿ ಕೆಲಸವೊಂದನ್ನು ಮಾಡಬೇಕಿದೆ. ಒಂದು ವೇಳೆ ಆ ಕೆಲಸ ಮಾಡದೇ ಇದ್ರೆ ನಿಮ್ಮ ಖಾತೆಗೆ ಬರ ಪರಿಹಾರದ ಹಣ ಜಮಾ ಆಗೋದಿಲ್ಲ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ಕಾಂಗ್ರೆಸ್ ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು, 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ…

Read More

ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್…

Read More

ಹುಬ್ಬಳ್ಳಿ: ಪೊಲೀಸರಿಂದ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ. ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲಾಗಿದ್ದಾವೆ. ಇನ್ನೂ ಕಸಬಾ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಪೂಜಾರಿ ವಿರುದ್ಧ 3 ಕೇಸ್ ದಾಖಲಾಗಿದ್ರೇ, ಶಹರ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ. ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಠಾಣೆಯಲ್ಲಿ ದಾಖಲಾಗಿರುವಂತ 15 ಕೇಸ್ ಗಳಲ್ಲಿ 11 ಪ್ರಕರಣಗಳು ಅಕ್ರಮ ಸಾರಾಯಿ ಮಾರಾಟ ಕುರಿತು ದಾಖಲಾಗಿರುವಂತ ಪ್ರಕರಣಗಳಾಗಿದ್ದಾವೆ. https://kannadanewsnow.com/kannada/japan-airlines-plane-on-fire-after-possible-crash-with-coast-guard-aircraft-400-on-board-evacuated/ https://kannadanewsnow.com/kannada/they-are-plotting-to-kill-me-vidyadharanathasri/

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 18 ಗಂಟೆ ಈ ದೇಶಕ್ಕಾಗಿ ಕೆಲಸ ಮಾಡ್ತಿದ್ದಾರೆ ಎನ್ನುತ್ತಾರೆ. ಆದ್ರೇ ಕರ್ನಾಟಕ ಬರದಿಂದ ತತ್ತರಿಸುತ್ತಿದೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡೋದಕ್ಕೆ 18 ನಿಮಿಷ ಸಮಯ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲ ಅಂತ ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತಂತೆ ಇಂದು ಎಕ್ಸ್ ಮಾಡಿದ್ದು, ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು, 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೇ ಬಿಜೆಪಿ ? ಎಂದು ಪ್ರಶ್ನಿಸಿದೆ. ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಅಂತ ಕಿಡಿಕಾರಿದೆ. https://twitter.com/INCKarnataka/status/1742123588507853260 https://kannadanewsnow.com/kannada/supreme-court-seeks-details-on-safety-measures-to-prevent-train-accidents/ https://kannadanewsnow.com/kannada/japan-airlines-plane-on-fire-after-possible-crash-with-coast-guard-aircraft-400-on-board-evacuated/

Read More

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ’ ಎಂದಿದ್ದಾರೆ. ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು.…

Read More

ಬೆಂಗಳೂರು: ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕುತ್ತಿದ್ದಾರೆ. ನಮಗೂ ಅವರಿಗೂ ಯಾವುದೇ ದ್ವೇಷವಿಲ್ಲ. ಅಧಿಕಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಅಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದ ಬಳಿ ಇರುವಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀಯವರು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಬ್ಬರು ಸ್ವಾಮೀಜಿಗಳು ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕಿಸುತ್ತಿದ್ದಾರೆ. ಇದರ ಹಿಂದೆ ನಮಗೂ ಅವರಿಗೂ ಇರೋ ದ್ವೇಷ ಕಾರಣವಲ್ಲ. ಬದಲಾಗಿ ಅವರು ಅಧಿಕಾರ ಹಿಡಿಯೋದಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಎಂದರು. ನಾನು ಇದಕ್ಕೆಲ್ಲ ಹೆದರೋದಿಲ್ಲ. ಇಂತವರ ವಿರುದ್ಧ ಗಟ್ಟಿಯಾಗೇ ಹೋರಾಡುತ್ತೇನೆ. ಇನ್ನೂ ಈ ವಿಷಯ ಎಲ್ಲಿಗೆ ಹೋಗುತ್ತದೋ ಕಾದು ನೋಡಬೇಕು ಎಂಬುದಾಗಿ ತಿಳಿಸಿದರು. https://kannadanewsnow.com/kannada/supreme-court-seeks-details-on-safety-measures-to-prevent-train-accidents/ https://kannadanewsnow.com/kannada/japan-airlines-plane-on-fire-after-possible-crash-with-coast-guard-aircraft-400-on-board-evacuated/

Read More

ನವದೆಹಲಿ: ಜಾತಿ ಸಮೀಕ್ಷೆಯ ದತ್ತಾಂಶವನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಅದನ್ನು ಬಹಿರಂಗಪಡಿಸದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಸಮೀಕ್ಷೆಯನ್ನು ಎತ್ತಿಹಿಡಿದ ಪಾಟ್ನಾ ಹೈಕೋರ್ಟ್ನ 2023 ರ ನಿರ್ಧಾರಕ್ಕೆ ಸವಾಲುಗಳಿಗೆ ಸಂಬಂಧಿಸಿದಂತೆ ಜನವರಿ 29 ಕ್ಕೆ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ. ಜಾತಿ ಸಮೀಕ್ಷೆಯ ದತ್ತಾಂಶವನ್ನು ಸಾರ್ವಜನಿಕ ಡೊಮೇನ್ ನಲ್ಲಿ ಇಡುವಂತೆ ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ಸೂಚಿಸಿದೆ. ಬಿಹಾರ ಜಾತಿ ಸಮೀಕ್ಷೆಯಲ್ಲಿನ ದತ್ತಾಂಶಗಳು ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ, ಏಕೆಂದರೆ ಯಾರಾದರೂ ನಿರ್ದಿಷ್ಟ ತೀರ್ಮಾನವನ್ನು ತೆಗೆದುಕೊಳ್ಳಲು ಸಿದ್ಧರಿದ್ದರೆ ಅವರು ಆ ಡೇಟಾವನ್ನು ಹೊಂದಲು ಸಾಧ್ಯವಾಗುತ್ತದೆ. ಜಾತಿ ಆಧಾರಿತ ಸಮೀಕ್ಷೆಯನ್ನು ಕೈಗೊಳ್ಳುವ ಬಿಹಾರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ 2023 ರ ಆಗಸ್ಟ್ 2 ರ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 29 ಕ್ಕೆ ಮುಂದೂಡಿದೆ. https://twitter.com/ANI/status/1742144399218446417 https://kannadanewsnow.com/kannada/japan-airlines-plane-on-fire-after-possible-crash-with-coast-guard-aircraft-400-on-board-evacuated/ https://kannadanewsnow.com/kannada/supreme-court-seeks-details-on-safety-measures-to-prevent-train-accidents/

Read More