Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದಿನಿಂದ ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ಆರಂಭಗೊಂಡಿದೆ. ಇಲ್ಲಿದ ನಿಗದಿ ಪಡಿಸಿರುವಂತ ದುಡ್ಡಿಗಿಂತ ಹೆಲಿಕಾಪ್ಟರ್ ವರ್ಸಸ್ ವಿಮಾನ ಪ್ರಯಾಣದ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ನಡೆಯುತ್ತಿದೆ. ಹಾಗಾದ್ರೇ ಇವೆರಡಕ್ಕೂ ವ್ಯತ್ಯಾಸವೇನು ಅನ್ನೋ ಬಗ್ಗೆ ಮಾಹಿತಿ ಮುಂದೆ ಓದಿ.. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಹೆಲಿ ಟೂರಿಸಂ ಆರಂಭಗೊಂಡಿದೆ. ಬೆಂಗಳೂರಿನಿಂದ ಬಂದಿರುವಂತ ಹೆಲಿಕಾಪ್ಟರ್ ಮೂಲಕ ಸಾಗರ ನಗರ ಪ್ರದಕ್ಷಿಣೆಯನ್ನು ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಮಾಡಿಸಲಾಗುತ್ತಿದೆ. ಇದಲ್ಲದೇ ಸಿಗಂದೂರು ಸೇತುವೆ, ಜೋಗದ ಜಲಪಾತ ವೀಕ್ಷಿಸುವಂತ ಅತ್ಯಂತ ಸಮಧುರ ಕ್ಷಣದ ಅವಕಾಶವನ್ನು ಕೂಡ ಆಯೋಜಕರಾದಂತ ಕಿರಣ್ ದೊಡ್ಮನಿ ಕಲ್ಪಿಸಿದ್ದಾರೆ. ವಿಮಾನ ಪ್ರಯಾಣವೇ ಬೆಟರ್ ಅಂತೀರಾ? ಶಿವಮೊಗ್ಗದಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಗಿಂತ ವಿಮಾನದಲ್ಲೇ ಪ್ರಯಾಣಿಸಬಹುದು ಅನ್ನೋದು ಹಲವರ ಮಾತು. ಈಗ ಬಹುತೇಕ ಚರ್ಚೆಗೊಳ್ಳುತ್ತಿರುವ ವಿಚಾರ ಕೂಡ. ಆದರೇ ವಿಮಾನದಲ್ಲಿ ಆ ಸಣ್ಣ ಕಿಟಕಿ ಮೂಲಕ, ಸಾವಿರಾರು ಅಡಿ ಎತ್ತರದಲ್ಲಿ ಭೂ ದೃಶ್ಯವನ್ನು ನೋಡುವುದಕ್ಕೂ,…
ನವದೆಹಲಿ: 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಹರ್ಷಿತ್ ರಾಣಾ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ಗಾಯದಿಂದಾಗಿ ಹೊರಗುಳಿದಿದ್ದಾರೆ, ಅವರ ಬದಲಿಗೆ ಭಾರತ ತಂಡ ಹಿರಿಯ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಹೆಸರಿಸಿದೆ. ಫೆಬ್ರವರಿ 4, 2026 ರಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ಗಾಯಕ್ಕೆ ಒಳಗಾದ ನಂತರ ಟೀಮ್ ಇಂಡಿಯಾ ವೇಗಿ ಹರ್ಷಿತ್ ರಾಣಾ ಅವರನ್ನು ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರಿಂದ ಹೊರಗಿಡಲಾಗಿದೆ. ತಜ್ಞರೊಂದಿಗೆ ಸಮಾಲೋಚನೆ ಮತ್ತು ನಂತರದ ಸ್ಕ್ಯಾನ್ಗಳ ನಂತರ, ಬಿಸಿಸಿಐ ವೈದ್ಯಕೀಯ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಲು ಅವರು ಅನರ್ಹರು ಎಂದು ಪರಿಗಣಿಸಿತು. ತಂಡದ ಆಡಳಿತ ಮಂಡಳಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತದೆ. ಮೊಹಮ್ಮದ್ ಸಿರಾಜ್ ತಂಡದಲ್ಲಿ ಹರ್ಷಿತ್ ಅವರ ಬದಲಿಯಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರ ಅಮೆರಿಕ ವಿರುದ್ಧದ ಭಾರತದ ಮೊದಲ ಪಂದ್ಯದೊಂದಿಗೆ ಆರಂಭವಾಗಲಿರುವ ಈ ಟೂರ್ನಿಗೆ ಮುಖ್ಯ ಕೋಚ್ ಗೌತಮ್…
ಮಂಡ್ಯ : ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ದೇಶದ ಋಷಿಮುನಿಗಳೇ ಭಾರತದ ವಿಜ್ಞಾನಿಗಳಾಗಿದ್ದರು ಎಂದು ಇಸ್ರೋ ಸಂಸ್ಥೆಯ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ ಹೇಳಿದರು. ಮದ್ದೂರು ನಗರದ ಶಿವಪುರದ ಪೂರ್ಣಪ್ರಜ್ಞಾ ಕಾನ್ವೆಂಟ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ, 2024-25 ನೇ ಸಾಲಿನ ಸಂಸ್ಥೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಹಾಗೂ ವೈದ್ಯಕಿಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾಭಾರತದ ಕಾಲದಲ್ಲಿಯೇ ಗ್ರಹಗತಿಗಳು ಹೇಗೆ ಸಂಭವಿಸುತ್ತವೆ. ಪಂಚಾಂಗದಿಂದ ಯಾವಾಗ ಒಳ್ಳೆದು, ಕೆಟ್ಟದ್ದು ಆಗುತ್ತವೆ ಎಂಬುದನ್ನು ತಪಸ್ಸು ಮತ್ತು ಜ್ಞಾನವೇ ಇಂದು ವಿಜ್ಞಾನ ಮತ್ತು ತಂತ್ರಜ್ಞಾನವಾಗಿದೆ ಎಂದರು. 1972 ರಲ್ಲಿ ದೇಶದಲ್ಲಿ ಇಸ್ರೋ ಸಂಸ್ಥೆ ಸ್ಥಾಪನೆಯಾಯಿತು. ಕೇವಲ 3 ವರ್ಷಗಳಲ್ಲೆ ಆರ್ಯಭಟ ಎಂಬ ಸ್ಯಾಟಲೈಟ್ ಅನ್ನು ಪ್ರಪಥಮ ಭಾರಿಗೆ ನಮ್ಮ ದೇಶ ಅತ್ಯಂತ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 30 ವರ್ಷಗಳ ಮುಂಚೆಯೇ ಅಮೇರಿಕಾ ದೇಶ ಚಂದ್ರಯಾನಕ್ಕೆ ಹೋಗಿತ್ತು. ಆದರೆ, ಚಂದ್ರಯಾನದಲ್ಲಿ ನೀರಿದೆ ಅಂತ…
ಬೆಂಗಳೂರು: ಮಂಡ್ಯದಲ್ಲಿ ಚಾಲಕನೊಬ್ಬ ರೀಲ್ಸ್ ನೋಡುತ್ತಲೇ ಸಾರಿಗೆ ಬಸ್ ಚಾಲನೆ ಮಾಡಿದ್ದರ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಮಂಡ್ಯದಲ್ಲಿ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಲೇ ಬಸ್ ಓಡಿಸಿದ ‘KSRTC’ ಚಾಲಕ! ಎಂಬುದಾಗಿ ಸುದ್ದಿ ಪ್ರಕಟಿಸಿದ್ದನ್ನು ಗಮನಿಸಿದಂತ ನಿಗಮವು, ಚಾಲಕನನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೀಲ್ಸ್ ನೋಡಿಕೊಂಡು ಬಸ್ ಚಾಲನೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸೂಕ್ತ ಶಿಸ್ತಿನ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದರು. ಅದರಂತೆ ಚಾಲಕ ಮಹೇಶ್.ವಿ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದೆ. ಘಟನೆ: ಮಳವಳ್ಳಿ ಯಿಂದ ಮೈಸೂರಿಗೆ ಹೋಗುತ್ತಿದ್ದ ಮಾರ್ಗ ಸಂಖ್ಯೆ 79 ರಲ್ಲಿ ಬಸ್ ಚಲಾಯಿಸುತ್ತಿದ್ದ ಮಹೇಶ್ ವಿ, ಚಾಲಕ-ಕಂ-ನಿರ್ವಾಹಕ , ಬಿಲ್ಲೆ ಸಂಖ್ಯೆ 699, ಮಳವಳ್ಳಿ ಘಟಕ, ಮಂಡ್ಯ ವಿಭಾಗರವರು ಬಸ್ ಚಾಲನೆ ಮಾಡುವಾಗ ರೀಲ್ಸ್ ವೀಕ್ಷಣೆ ಮಾಡುತ್ತಿರುವ ದೃಶ್ಯ ಸಾಮಾಜಿಕ…
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ ಪೂರ್ಣಗೊಳಿಸುವಂತೆ ಇಂಧನ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಸರ್ವಜ್ಞನಗರ ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲನೆ ನಡೆಸಿದ ಇಂಧನ ಸಚಿವರು, “ಹೆಚ್.ಬಿ.ಆರ್. ಲೇಔಟ್ನ 5ನೇ ಬ್ಲಾಕ್ನ ಕೆಪಿಟಿಸಿಎಲ್ ಸ್ಟೇಷನ್ ಬಳಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಗೂ ಭೇಟಿ ನೀಡಿದರಲ್ಲದೆ, ಗುಣಮಟ್ಟದ ಕಾಮಗಾರಿ ನಡೆಸುವುದರ ಜತೆಗೆ ತ್ವರಿತವಾಗಿ ಕೆಲಸ ಮುಗಿಸಬೇಕು. ಸಮಾಜಕ್ಕೆ ಹಸಿರಿನ ಮಹತ್ವ ತಿಳಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿರುವ ಈ ಥೀಮ್ ಪಾರ್ಕ್ ಕ್ಷೇತ್ರಕ್ಕೆ ಮಾತ್ರವಲ್ಲ, ರಾಜ್ಯದಲ್ಲೂ ಮಾದರಿಯಾಗಿರಬೇಕು,” ಎಂದರು. “ಕೆಪಿಟಿಸಿಎಲ್ ನ ಜನಪರ ಬದ್ಧತೆಯನ್ನು ಸಾರುವ ಉದ್ದೇಶದಿಂದ ಈ ಥೀಮ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಇಲ್ಲಿ ತರಬೇತಿ ಕೇಂದ್ರ, ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ಕೇಂದ್ರ, ಬಯಲು ರಂಗಮಂದಿರ, ವಾಕಿಂಗ್ ಪಾಥ್ ಹಾಗೂ ಓಪನ್ ಜಿಮ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ವ್ಯವಸ್ಥೆ,…
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ/ ನೌಕರರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ವಿಸ್ತರಿಸಲು ಕೋರಿ ಮುಖ್ಯಮಂತ್ರಿಗಳಿಗೆ ಪಾಲಿಕೆಗಳ ನೌಕರರ ಪರವಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (KASS) ಯನ್ನು ಅನುಷ್ಠಾನಗೊಳಿಸಿ ಸರ್ಕಾರವು ಆದೇಶಿಸಿರುತ್ತದೆ. ಆದರೆ ಸದರಿ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳ ನೌಕರರನ್ನು ಸದರಿ ಯೋಜನೆಗೆ ಒಳಪಡುವುದಿಲ್ಲವೆಂದು ತಿಳಿಸಿ ಹೊರಗಿಡಲಾಗಿರುತ್ತದೆ. ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು (ಕಚೇರಿ ಸಿಬ್ಬಂದಿ, ಪೌರ ಕಾರ್ಮಿಕರು ನೀರು ಸರಬರಾಜು ಸಿಬ್ಬಂದಿ) ಸಕ್ಷಮ ಪ್ರಾಧಿಕಾರಗಳಿಂದ (ಕೆಪಿಎಸ್ಸಿ, ಪೌರಾಡಳಿತ ನಿರ್ದೇಶಕರು, ಜಿಲ್ಲಾಧಿಕಾರಿಗಳು) ನೇಮಕಾತಿ ಹೊಂದಿ ಪ್ರತಿನಿತ್ಯ ಸಾರ್ವಜನಿಕರ ಒಟ್ಟಿಗೆ ಒಡನಾಟವಿಟ್ಟುಕೊಂಡು, ತೆರಿಗೆ ವಸೂಲಾತಿ, ಸ್ವಚ್ಛತಾ ಕಾರ್ಯ, ಕುಡಿಯುವ ನೀರು ಪೂರ್ರೈಕೆ ನಗರ ಅಭಿವೃದ್ಧಿ ಕಾಮಗಾರಿಗಳು, ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕೆಲಸ, ಚುನಾವಣಾ ಕೆಲಸ,…
ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತದೆ. ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗುತ್ತದೆ.. ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ…
ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್ನ ಓಲೈಕೆಗಾಗಿ ಸುಳ್ಳು ಮಾಹಿತಿ ನೀಡುವುದನ್ನು ಬಿಟ್ಟು, ಜನರ ಹಿತಕ್ಕಾಗಿ ಈಗಲಾದರೂ ತಮ್ಮದೇ ಪ್ರಧಾನಿಗಳ ಬಳಿ ಧ್ವನಿಯೆತ್ತಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿವಿಮಾತು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಗಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ ಎಂದಿದ್ದಾರೆ. ಸತ್ಯ ಸಂಗತಿ ಏನೆಂದರೆ ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರ ಸರ್ಕಾರದ ವಸತಿ…
ವೈಭವ್ ಸೂರ್ಯವಂಶಿ ಅವರ ಅಮೋಘ 175 ರನ್ಗಳ ನೆರವಿನಿಂದ, ಭಾರತ ತಂಡವು ಶುಕ್ರವಾರ (ಫೆಬ್ರವರಿ 6) ಹರಾರೆಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ದಾಖಲೆಯ ಆರನೇ ಬಾರಿಗೆ ಅಂಡರ್ -19 ಐಸಿಸಿ ವಿಶ್ವಕಪ್ ಅನ್ನು ಗೆದ್ದುಕೊಂಡಿತು. ಬ್ಯಾಟಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯವಂಶಿ, U-19 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಪ್ರಬಲ ಶತಕ ಬಾರಿಸಿದರು. ಶುಕ್ರವಾರ ಹರಾರೆಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು 9 ವಿಕೆಟ್ಗೆ 411 ರನ್ ಗಳಿಸುವ ಮೂಲಕ 80 ಎಸೆತಗಳಲ್ಲಿ 175 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ, ಇಂಗ್ಲೆಂಡ್ ಎಂದಿಗೂ ಗುರಿ ಬೆನ್ನಟ್ಟಲಿಲ್ಲ ಮತ್ತು 311 ರನ್ಗಳಿಗೆ ಆಲೌಟ್ ಆಯಿತು. ಸೂರ್ಯವಂಶಿ ತಮ್ಮ ಅದ್ಭುತ ಶತಕದ ಮೂಲಕ ಹಲವಾರು ದಾಖಲೆಗಳನ್ನು ಮುರಿದರು. 14 ವರ್ಷದ ಆಟಗಾರ ಕೇವಲ 55 ಎಸೆತಗಳಲ್ಲಿ ಮೂರು ಅಂಕಗಳನ್ನು ಗಳಿಸಿ ಈ ಟೂರ್ನಿಗಳಲ್ಲಿ ಎರಡನೇ ಅತಿ ವೇಗದ ಶತಕ…
ಶಿವಮೊಗ್ಗ : ಜಿಲ್ಲೆಯ ಸಾಗರದ ಸುಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು ಮೂರನೇ ದಿನವಾಗಿದ್ದು, ಶ್ರೀ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಪಾನಕವನ್ನು ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ಸಂಚಾಲಕ ಎಂ.ಡಿ.ಆನಂದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬೆ ದರ್ಶನಕ್ಕೆ ಆಗಮಿಸಿದ್ದಂತ ಭಕ್ತರಿಗೆ ಪಾನಕ ವಿತರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಬಾರಿ ಮಾರಿಕಾಂಬಾ ದೇವಿ ದರ್ಶನಕ್ಕೆ ಅತಿಹೆಚ್ಚು ಭಕ್ತರು ಆಗಮಿಸಿದ್ದಾರೆ. ಶುಕ್ರವಾರ ಮತ್ತು ಭಾನುವಾರ ಅತಿಹೆಚ್ಚಿನ ಭಕ್ತರು ಪಾಲ್ಗೊಳ್ಳುತ್ತಾರೆ. ಬಿಸಿಲಿನ ಬೇಗೆಯಿಂದ ಭಕ್ತರು ಬಳಲ ಬಾರದು ಎಂದು ಪಾನಕ ವ್ಯವಸ್ಥೆ ಮಾಡಿದೆ. ಈ ವರ್ಷ ಅಮ್ಮನವರ ದರ್ಶನಕ್ಕೆ ಸಣ್ಣಪುಟ್ಟ ಸಮಸ್ಯೆ ಆಗಿರುವುದು ಕಂಡು ಬಂದಿದೆ. ಮುಂದಿನ ಬಾರಿ ನಮ್ಮ ಸಮಿತಿ ಆಡಳಿತಕ್ಕೆ ಬಂದರೆ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹೇಳಿದರು. https://youtu.be/LTXUBW2p_I4 ಸಮಿತಿಯ ಪ್ರಮುಖರಾದ ಶ್ರೀನಿವಾಸ್ ಮೇಸ್ತ್ರೀ ಮಾತನಾಡಿ, ಮಾರಿಕಾಂಬಾ ದೇವಿ ಜಾತ್ರೆಯು ನಾಲ್ಕನೇ ದಿನ…














